Homeದಲಿತ್ ಫೈಲ್ಸ್ಉತ್ತರ ಪ್ರದೇಶ | ದಲಿತ ಪೊಲೀಸ್ ಅಧಿಕಾರಿಯ ಮೇಲೆ ಲೈಂಗಿಕ, ಜಾತಿ ಆಧಾರಿತ ಕಿರುಕುಳ

ಉತ್ತರ ಪ್ರದೇಶ | ದಲಿತ ಪೊಲೀಸ್ ಅಧಿಕಾರಿಯ ಮೇಲೆ ಲೈಂಗಿಕ, ಜಾತಿ ಆಧಾರಿತ ಕಿರುಕುಳ

- Advertisement -
- Advertisement -

ಜಿಲ್ಲಾ ಜೈಲು ಸೂಪರಿಂಟೆಂಡೆಂಟ್ ತನ್ನ ತಾಯಿಗೆ ಲೈಂಗಿಕ ಕಿರುಕುಳ ಮತ್ತು ಜಾತಿ ನಿಂದನೆ ಮಾಡಿದ್ದಾರೆ ಎಂದು ಆರೋಪಿಸಿ ಡೆಪ್ಯೂಟಿ ಜೈಲರ್ ಒಬ್ಬರ ಮಗಳು ದೂರು ದಾಖಲಿಸಿರುವ ಘಟನೆ ಉತ್ತರ ಪ್ರದೇಶದ ವಾರಣಾಸಿಯಲ್ಲಿ ನಡೆದಿದೆ. “ಒಂದು ದಿನದೊಳಗೆ ಹಿರಿಯ ಅಧಿಕಾರಿಗಳನ್ನು ಸಂಪರ್ಕಿಸಿ ಎಫ್‌ಐಆರ್ ದಾಖಲಿಸುವ ಬಗ್ಗೆ ನಿರ್ಧಾರ ತೆಗೆದುಕೊಳ್ಳುವುದಾಗಿ ಪೊಲೀಸರು ನನಗೆ ಭರವಸೆ ನೀಡಿದ್ದಾರೆ” ಎಂದು ಸಂತ್ತಸ್ತೆ ಜೈಲರ್ ಅವರ ಮಗಳು ಹೇಳಿದ್ದಾರೆ. ಉತ್ತರ ಪ್ರದೇಶ

ಆರೋಪಿಯನ್ನು ವಾರಣಾಸಿ ಜಿಲ್ಲಾ ಜೈಲು ಸೂಪರಿಂಟೆಂಡೆಂಟ್ ಉಮೇಶ್ ಕುಮಾರ್ ಸಿಂಗ್ ಎಂದು ಗುರುತಿಸಲಾಗಿದ್ದು, ಅವರ ವಿರುದ್ಧ ಡೆಪ್ಯೂಟಿ ಜೈಲರ್ ಮೀನಾ ಕನೋಜಿಯಾ ಅವರ ಪುತ್ರಿ ನೇಹಾ ಶಾ ಅವರು ಲಾಲ್‌ಪುರ ಪಾಂಡೆಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿರುವುದಾಗಿ ಹೇಳಿಕೊಂಡಿದ್ದಾರೆ.

ಅದಾಗ್ಯೂ, ಉಮೇಶ್ ಸಿಂಗ್ ಅವರನ್ನು ಸೋನ್‌ಭದ್ರ ಜಿಲ್ಲಾ ಜೈಲಿಗೆ ವರ್ಗಾಯಿಸಲಾಗಿದ್ದು, ಅವರ ಬದಲಿಗೆ ಸೌರಭ್ ಶ್ರೀವಾಸ್ತವ ಅವರನ್ನು ತಾತ್ಕಾಲಿಕವಾಗಿ ವಿಶೇಷ ಕರ್ತವ್ಯದ ಮೇಲೆ ವಾರಣಾಸಿಗೆ ಕಳುಹಿಸಲಾಗಿದೆ ಎಂದು ವರದಿಯಾಗಿದೆ. ಉತ್ತರ ಪ್ರದೇಶ

ಡೆಪ್ಯೂಟಿ ಜೈಲರ್ ಮೀನಾ ಕನೋಜಿಯಾ ಅವರು ಉಮೇಶ್ ಸಿಂಗ್ ವಿರುದ್ಧ ಕಿರುಕುಳ ಆರೋಪ ಮಾಡುತ್ತಿರುವ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡ ನಂತರ ಈ ವಿಷಯವು ಗಮನ ಸೆಳೆಯಿತು. ವಿಡಿಯೋ ಕಾಣಿಸಿಕೊಂಡ ನಂತರ, ಅವರನ್ನು ಕೂಡಾ ನೈನಿ ಜಿಲ್ಲಾ ಜೈಲಿಗೆ ವರ್ಗಾಯಿಸಲಾಯಿತು ಎಂದು ವರದಿಯಾಗಿದೆ.

ಮಾರ್ಚ್ 18 ರಂದು ಡೈರೆಕ್ಟರ್ ಜನರಲ್ (ಜೈಲು) ಪಿವಿ ರಾಮಶಾಸ್ತ್ರಿ ಹೊರಡಿಸಿದ ಆದೇಶದ ಪ್ರಕಾರ, ಉಮೇಶ್ ಸಿಂಗ್ ಅವರನ್ನು ಯಾವುದೇ ಹೆಚ್ಚುವರಿ ಸಂಬಳ ಅಥವಾ ಭತ್ಯೆಗಳಿಲ್ಲದೆ ಸೋನ್‌ಭದ್ರದಲ್ಲಿ ವಿಶೇಷ ಕರ್ತವ್ಯದಲ್ಲಿ ಇರಿಸಲಾಗಿದೆ. ನೇಮಕಾತಿ ತಾತ್ಕಾಲಿಕವಾಗಿದ್ದು, ಮುಂದಿನ ಸೂಚನೆ ಬರುವವರೆಗೆ ಜಾರಿಯಲ್ಲಿರುತ್ತದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ನೇಹಾ ಶಾ ಅವರ ತಾಯಿ, ಪರಿಶಿಷ್ಟ ಜಾತಿಯ ಅಧಿಕಾರಿಯಾಗಿದ್ದು, ಉಮೇಶ್ ಸಿಂಗ್ ಅವರಿಂದ ತಿಂಗಳುಗಟ್ಟಲೆ ನಿರಂತರ ಮಾನಸಿಕ ಮತ್ತು ದೈಹಿಕ ಕಿರುಕುಳ ಅನುಭವಿಸಿದ್ದಾರೆ ಎಂದು ನೇಹಾ ಶಾ ಅವರ ದೂರಿನಲ್ಲಿ ಆರೋಪಿಸಲಾಗಿದೆ.

“ಅವರು ನನ್ನ ತಾಯಿಯನ್ನು ಆಗಾಗ್ಗೆ ಅವಮಾನಿಸುತ್ತಿದ್ದರು, ಜಾತಿ ಆಧಾರಿತ ನಿಂದನೆಗಳನ್ನು ಬಳಸುತ್ತಿದ್ದರು ಮತ್ತು ಅವರ ಕಚೇರಿಯಲ್ಲಿ ಅವರ ಮೇಲೆ ಲೈಂಗಿಕ ಕಿರುಕುಳ ನೀಡುತ್ತಿದ್ದರು. ಉಮೇಶ್ ಸಿಂಗ್ ಅಶ್ಲೀಲ ಸನ್ನೆಗಳನ್ನು ಮಾಡುತ್ತಿದ್ದರು. ನನ್ನ ತಾಯಿಯನ್ನು ಅವರ ಕಚೇರಿ ಮತ್ತು ಮನೆಗೆ ಭೇಟಿ ನೀಡುವಂತೆ ಒತ್ತಡ ಹೇರಿದ್ದರು, ಜೊತೆಗೆ ಮಹಿಳಾ ಕೈದಿಗಳನ್ನು ಶೋಷಣೆಗೆ ಒಳಪಡಿಸುವಂತೆ ಒತ್ತಾಯಿಸಿದ್ದರು” ಎಂದು ನೇಹಾ ಅವರು ಆರೋಪಿಸಿದ್ದಾರೆ.

“ಇದನ್ನು ನನ್ನ ತಾಯಿ ವಿರೋಧಿಸಿದಾಗ, ಅವರು ನನ್ನ ತಾಯಿಯ ವೃತ್ತಿಜೀವನವನ್ನು ಕೊನೆಗೊಳಿಸುವುದಾಗಿ, ನಮ್ಮ ಕುಟುಂಬಕ್ಕೆ ಹಾನಿ ಮಾಡುವುದಾಗಿ ಮತ್ತು ನಮ್ಮ ಜೀವವನ್ನು ಸಹ ತೆಗೆಯುವುದಾಗಿ ಬೆದರಿಕೆ ಹಾಕಿದರು” ಎಂದು ಅವರು ಆರೋಪಿಸಿದ್ದಾರೆ.

ಆರೋಪಿ ಉಮೇಶ್ ಸಿಂಗ್ ಈ ಹಿಂದೆ ಕೂಡಾ ದುಷ್ಕೃತ್ಯ ಎಸಗಿದ್ದಾರೆ ಎಂದು ನೇಹಾ ಅವರು ಹೇಳಿಕೊಂಡಿದ್ದಾರೆ. “ಅವರು ಮಾಜಿ ಉಪ ಜೈಲರ್ ರತನ್ ಪ್ರಿಯಾ ಅವರೊಂದಿಗೂ ಕೂಡಾ ಅದೇ ರೀತಿ ಮಾಡಿದ್ದರು. ಈ ಬಗ್ಗೆ ನೀವು ಅವರನ್ನು ಕೇಳಬಹುದು” ಎಂದು ಅವರು ತಮ್ಮ ದೂರಿನಲ್ಲಿ ಬರೆದಿದ್ದಾರೆ. ಅಷ್ಟೆ ಅಲ್ಲದೆ, ಉಮೇರ್ಶ ಸಿಂಗ್ ತನ್ನ ತಾಯಿಯನ್ನು ಆತ್ಮಹತ್ಯೆಗೆ ಪ್ರೇರೇಪಿಸಲು ಪ್ರಯತ್ನಿಸಿದ್ದು, ಅವರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳಲು ಸಾಧ್ಯವಿಲ್ಲ ಎಂದು ಅವರು ಹೆಮ್ಮೆಯಿಂದ ಹೇಳಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

“ತಾನು 2027 ರಲ್ಲಿ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ, ಜೈಲು ಸಚಿವರಾಗುವುದಾಗಿ ನನ್ನ ತಾಯಿಗೆ ಪಾಠ ಕಲಿಸುವುದಾಗಿ ಹೇಳಿದ್ದರು. ಉಮೇಶ್ ಸಿಂಗ್ ಜೈಲಿನೊಳಗೆ ದೊಡ್ಡ ಪ್ರಮಾಣದ ಭ್ರಷ್ಟಾಚಾರ ಮತ್ತು ಮಾದಕವಸ್ತು ಕಳ್ಳಸಾಗಣೆ ನಡೆಯಲು ಅವಕಾಶ ನೀಡಿದ್ದಾರೆ. ಇತ್ತೀಚೆಗೆ ವೈರಲ್ ಆದ ವೀಡಿಯೊದಲ್ಲಿ ಜೈಲಿನಲ್ಲಿ ಮಾದಕವಸ್ತು ಮಾರಾಟವಾಗುತ್ತಿರುವುದನ್ನು ಸ್ಪಷ್ಟವಾಗಿ ತೋರಿಸಲಾಗಿದೆ.” ಎಂದು ಅವರು ಆರೋಪಿಸಿದ್ದಾರೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಉತ್ತರಾಖಂಡ| ಕೇದಾರನಾಥದಲ್ಲಿ ಹಿಂದೂಯೇತರರನ್ನು ನಿಷೇಧಿಸಬೇಕು ಎಂದು ಬಿಜೆಪಿ ಶಾಸಕಿ ಒತ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...