Homeಮುಖಪುಟಉತ್ತರ ಪ್ರದೇಶ: ಪಾಸ್‌ಪೋರ್ಟ್‌ ವೆರಿಫಿಕೇಶ್‌ನ್‌ಗಾಗಿ ತೆರಳಿದ್ದ ಮಹಿಳೆ ತಲೆಗೆ ಗುಂಡು ಹಾರಿಸಿದ ಎಸ್‌ಐ!

ಉತ್ತರ ಪ್ರದೇಶ: ಪಾಸ್‌ಪೋರ್ಟ್‌ ವೆರಿಫಿಕೇಶ್‌ನ್‌ಗಾಗಿ ತೆರಳಿದ್ದ ಮಹಿಳೆ ತಲೆಗೆ ಗುಂಡು ಹಾರಿಸಿದ ಎಸ್‌ಐ!

- Advertisement -
- Advertisement -

ಉಮ್ರಾ ಯಾತ್ರೆ ಕೈಗೊಳ್ಳಲು ಪಾಸ್‌ಪೋರ್ಟ್‌ ಪರಿಶೀಲನೆಗಾಗಿ ಪೊಲೀಸ್ ಔಟ್‌ಪೋಸ್ಟ್‌ಗೆ ತೆರಳಿದ್ದ ಮಹಿಳೆಯೊಬ್ಬರ ತಲೆಗೆ ಸಬ್‌ ಇನ್ಸ್‌ಪೆಕ್ಟರ್ ಒಬ್ಬರು ಗುಂಡು ಹಾರಿಸಿರುವ ಘಟನೆ ಉತ್ತರ ಪ್ರದೇಶದ ಆಲಿಗಢ್ ಪೊಲೀಸ್ ಠಾಣೆಯಲ್ಲಿ ನಡೆದಿದೆ.

ಎರಡು ದಿನಗಳ ಹಿಂದೆ (ಡಿ.8) ನಡೆದಿರುವ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿರುವ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆಕೆಯ ಸ್ಥಿತಿ ಚಿಂತಾಜನಕವಾಗಿದೆ ಎನ್ನಲಾಗಿದೆ.

ಘಟನೆಯ ಸಿಸಿಟಿವಿ ದೃಶ್ಯಾವಳಿಗಳು ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಸಬ್ ಇನ್ಸ್‌ಪೆಕ್ಟರ್ ಒಬ್ಬರು ಮೇಜಿನ ಹಿಂದೆ ನಿಂತು ಇನ್ನೊಬ್ಬ ಪೊಲೀಸರಿಂದ ಪಿಸ್ತೂಲ್ ತೆಗೆದುಕೊಳ್ಳುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ಗನ್‌ನಿಂದ ಗುಂಡು ಹಾರಿಸುವ ಕೆಲವೇ ಕ್ಷಣಗಳ ಮೊದಲು ಎಸ್‌ಐ ಅದನ್ನು ಕಾಕ್ ಮಾಡಿದ್ದಾರೆ. ಟೇಬಲ್‌ ಮುಂದೆ ನಿಂತಿದ್ದ ಮಹಿಳೆ ತಲೆಗೆ ಇನ್ಸ್‌ಪೆಕ್ಟರ್ ಹಾರಿಸಿದ ಗುಂಡು ತಗುಲಿದ್ದು, ಸ್ಥಳದಲ್ಲೇ ಕುಸಿದುಬಿದ್ದಿದ್ದಾರೆ.

‘ತನ್ನ ತಾಯಿಯ ಕೆಲಸವನ್ನು ಆದಷ್ಟು ಬೇಗ ಮಾಡಿಕೊಂಡುವಂತೆ ಕೇಳಿದ್ದಕ್ಕೆ ಕೋಪಗೊಂಡಿದ್ದ ಎಸ್‌ಐ ಉದ್ದೇಶಪೂರ್ವಕವಾಗಿ ತನ್ನ ತಾಯಿಯ ಮೇಲೆ ಗುಂಡು ಹಾರಿಸಿದ್ದಾರೆ’ ಎಂದು ಘಟನೆ ಸಂದರ್ಭದಲ್ಲಿ ಆಕೆಯ ಜೊತೆಗಿದ್ದ ಪುತ್ರ ದೂರು ನೀಡಿದ್ದಾರೆ.

ಘಟನೆಯ ನಂತರ ಸ್ಥಳಕ್ಕಾಗಮಿಸಿದ ಅಲಿಗಢದ ಹಿರಿಯ ಪೊಲೀಸ್ ಅಧೀಕ್ಷಕ ಕಲಾನಿಧಿ ನೈತಾನಿ, ‘ಭೋಜ್‌ಪುರ ಪೊಲೀಸ್ ಔಟ್‌ಪೋಸ್ಟ್‌ನಲ್ಲಿ ಈ ಘಟನೆ ಸಂಭವಿಸಿದೆ, ಅಲ್ಲಿ ಇಶ್ರತ್ ನಿಗರ್ ತನ್ನ ಮಗನೊಂದಿಗೆ ಪಾಸ್‌ಪೋರ್ಟ್ ಪರಿಶೀಲನೆಗೆ ತೆರಳಿದ್ದರು. ಎಸ್‌ಐ ಮನೋಜ್ ಶರ್ಮಾ ಅವರ ಪಿಸ್ತೂಲ್‌ನಿಂದ ಹಾರಿದ ಬುಲೆಟ್ ಮಹಿಳೆಯ ತಲೆಗೆ ತಗುಲಿದೆ. ನಾವು ಘಟನೆಯ ಬಗ್ಗೆ ತನಿಖೆ ಪ್ರಾರಂಭಿಸಿದ್ದೇವೆ’ ಎಂದು ಹೇಳಿದ್ದಾರೆ.

‘ಮಹಿಳೆ ತಲೆಗೆ ಹೊಕ್ಕಿರುವ ಗುಂಡು ಇನ್ನೂ ಹಾಗೇ ಇದೆ. ಆಕೆಗೆ ಆಪರೇಷನ್ ಮಾಡಬೇಕೋ, ಬೇಡವೋ ಎಂಬ ಬಗ್ಗೆ ಇನ್ನೂ ಪರಿಶೀಲಿಸಲಾಗುತ್ತಿದೆ’ ಎಂದು ಮಹಿಳೆ ದಾಖಲಾಗಿರುವ ಜವಾಹರಲಾಲ್ ನೆಹರು ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲರಾದ ಡಾ. ಮಂಜೂರ್ ಹ್ಯಾರಿಸ್ ಖಾನ್ ಮಾಧ್ಯಮಗಳಿಗೆ ಹೇಳಿದ್ದಾರೆ.

ಹಣಕ್ಕೆ ಬೇಡಿಕೆ ಇಟ್ಟಿದ್ದರೇ ಸಬ್‌ ಇನ್ ಸ್ಪೆಕ್ಟರ್?

ಮೇಲ್ನೋಟಕ್ಕೆ ಇದು ‘ಮಿಸ್‌ ಫೈರ್’ ಎಂದು ಹೇಳಲಾಗುತ್ತಿದ್ದರೂ, ಅವರ ಪುತ್ರ ಉದ್ದೇಶಪೂರ್ವಕ ಎಂದು ಆರೋಪಿಸಿದ್ದಾರೆ. ಪಾಸ್‌ಪೋರ್ಟ್‌ ವೆರಿಫಿಕೇಶನ್‌ ಮಾಡಲು ಸಬ್‌ ಇನ್ಸ್‌ಪೆಕ್ಟರ್ ಶರ್ಮಾ ಹಣಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಘಟನೆ ಸಂಬಂಧ ಈಗಾಗಲೇ ಮನೋಜ್ ಶರ್ಮಾ ಅವರನ್ನು ಅಮಾನತುಗೊಳಿಸಲಾಗಿದೆ. ಕರ್ತವ್ಯ ಸಂದರ್ಭದಲ್ಲಿ ನಿರ್ಲಕ್ಷ್ಯದ ಕಾರಣಕ್ಕೆ ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗಿದೆ. ಘಟನೆ ನಂತರ ಮನೋಜ್ ನಾಪತ್ತೆಯಾಗಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ; ‘ದ್ವೇಷಪೂರಿತ’ ವೀಡಿಯೋ ಹಂಚಿಕೆ: 9 ಜನರ ಮೇಲೆ ಕೇಸ್ ದಾಖಲಿಸಿದ ಜಮ್ಮು-ಕಾಶ್ಮೀರ ಪೊಲೀಸ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...