Homeಮುಖಪುಟಉತ್ತರ ಪ್ರದೇಶ: ಪಾಸ್‌ಪೋರ್ಟ್‌ ವೆರಿಫಿಕೇಶ್‌ನ್‌ಗಾಗಿ ತೆರಳಿದ್ದ ಮಹಿಳೆ ತಲೆಗೆ ಗುಂಡು ಹಾರಿಸಿದ ಎಸ್‌ಐ!

ಉತ್ತರ ಪ್ರದೇಶ: ಪಾಸ್‌ಪೋರ್ಟ್‌ ವೆರಿಫಿಕೇಶ್‌ನ್‌ಗಾಗಿ ತೆರಳಿದ್ದ ಮಹಿಳೆ ತಲೆಗೆ ಗುಂಡು ಹಾರಿಸಿದ ಎಸ್‌ಐ!

- Advertisement -
- Advertisement -

ಉಮ್ರಾ ಯಾತ್ರೆ ಕೈಗೊಳ್ಳಲು ಪಾಸ್‌ಪೋರ್ಟ್‌ ಪರಿಶೀಲನೆಗಾಗಿ ಪೊಲೀಸ್ ಔಟ್‌ಪೋಸ್ಟ್‌ಗೆ ತೆರಳಿದ್ದ ಮಹಿಳೆಯೊಬ್ಬರ ತಲೆಗೆ ಸಬ್‌ ಇನ್ಸ್‌ಪೆಕ್ಟರ್ ಒಬ್ಬರು ಗುಂಡು ಹಾರಿಸಿರುವ ಘಟನೆ ಉತ್ತರ ಪ್ರದೇಶದ ಆಲಿಗಢ್ ಪೊಲೀಸ್ ಠಾಣೆಯಲ್ಲಿ ನಡೆದಿದೆ.

ಎರಡು ದಿನಗಳ ಹಿಂದೆ (ಡಿ.8) ನಡೆದಿರುವ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿರುವ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆಕೆಯ ಸ್ಥಿತಿ ಚಿಂತಾಜನಕವಾಗಿದೆ ಎನ್ನಲಾಗಿದೆ.

ಘಟನೆಯ ಸಿಸಿಟಿವಿ ದೃಶ್ಯಾವಳಿಗಳು ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಸಬ್ ಇನ್ಸ್‌ಪೆಕ್ಟರ್ ಒಬ್ಬರು ಮೇಜಿನ ಹಿಂದೆ ನಿಂತು ಇನ್ನೊಬ್ಬ ಪೊಲೀಸರಿಂದ ಪಿಸ್ತೂಲ್ ತೆಗೆದುಕೊಳ್ಳುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ಗನ್‌ನಿಂದ ಗುಂಡು ಹಾರಿಸುವ ಕೆಲವೇ ಕ್ಷಣಗಳ ಮೊದಲು ಎಸ್‌ಐ ಅದನ್ನು ಕಾಕ್ ಮಾಡಿದ್ದಾರೆ. ಟೇಬಲ್‌ ಮುಂದೆ ನಿಂತಿದ್ದ ಮಹಿಳೆ ತಲೆಗೆ ಇನ್ಸ್‌ಪೆಕ್ಟರ್ ಹಾರಿಸಿದ ಗುಂಡು ತಗುಲಿದ್ದು, ಸ್ಥಳದಲ್ಲೇ ಕುಸಿದುಬಿದ್ದಿದ್ದಾರೆ.

‘ತನ್ನ ತಾಯಿಯ ಕೆಲಸವನ್ನು ಆದಷ್ಟು ಬೇಗ ಮಾಡಿಕೊಂಡುವಂತೆ ಕೇಳಿದ್ದಕ್ಕೆ ಕೋಪಗೊಂಡಿದ್ದ ಎಸ್‌ಐ ಉದ್ದೇಶಪೂರ್ವಕವಾಗಿ ತನ್ನ ತಾಯಿಯ ಮೇಲೆ ಗುಂಡು ಹಾರಿಸಿದ್ದಾರೆ’ ಎಂದು ಘಟನೆ ಸಂದರ್ಭದಲ್ಲಿ ಆಕೆಯ ಜೊತೆಗಿದ್ದ ಪುತ್ರ ದೂರು ನೀಡಿದ್ದಾರೆ.

ಘಟನೆಯ ನಂತರ ಸ್ಥಳಕ್ಕಾಗಮಿಸಿದ ಅಲಿಗಢದ ಹಿರಿಯ ಪೊಲೀಸ್ ಅಧೀಕ್ಷಕ ಕಲಾನಿಧಿ ನೈತಾನಿ, ‘ಭೋಜ್‌ಪುರ ಪೊಲೀಸ್ ಔಟ್‌ಪೋಸ್ಟ್‌ನಲ್ಲಿ ಈ ಘಟನೆ ಸಂಭವಿಸಿದೆ, ಅಲ್ಲಿ ಇಶ್ರತ್ ನಿಗರ್ ತನ್ನ ಮಗನೊಂದಿಗೆ ಪಾಸ್‌ಪೋರ್ಟ್ ಪರಿಶೀಲನೆಗೆ ತೆರಳಿದ್ದರು. ಎಸ್‌ಐ ಮನೋಜ್ ಶರ್ಮಾ ಅವರ ಪಿಸ್ತೂಲ್‌ನಿಂದ ಹಾರಿದ ಬುಲೆಟ್ ಮಹಿಳೆಯ ತಲೆಗೆ ತಗುಲಿದೆ. ನಾವು ಘಟನೆಯ ಬಗ್ಗೆ ತನಿಖೆ ಪ್ರಾರಂಭಿಸಿದ್ದೇವೆ’ ಎಂದು ಹೇಳಿದ್ದಾರೆ.

‘ಮಹಿಳೆ ತಲೆಗೆ ಹೊಕ್ಕಿರುವ ಗುಂಡು ಇನ್ನೂ ಹಾಗೇ ಇದೆ. ಆಕೆಗೆ ಆಪರೇಷನ್ ಮಾಡಬೇಕೋ, ಬೇಡವೋ ಎಂಬ ಬಗ್ಗೆ ಇನ್ನೂ ಪರಿಶೀಲಿಸಲಾಗುತ್ತಿದೆ’ ಎಂದು ಮಹಿಳೆ ದಾಖಲಾಗಿರುವ ಜವಾಹರಲಾಲ್ ನೆಹರು ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲರಾದ ಡಾ. ಮಂಜೂರ್ ಹ್ಯಾರಿಸ್ ಖಾನ್ ಮಾಧ್ಯಮಗಳಿಗೆ ಹೇಳಿದ್ದಾರೆ.

ಹಣಕ್ಕೆ ಬೇಡಿಕೆ ಇಟ್ಟಿದ್ದರೇ ಸಬ್‌ ಇನ್ ಸ್ಪೆಕ್ಟರ್?

ಮೇಲ್ನೋಟಕ್ಕೆ ಇದು ‘ಮಿಸ್‌ ಫೈರ್’ ಎಂದು ಹೇಳಲಾಗುತ್ತಿದ್ದರೂ, ಅವರ ಪುತ್ರ ಉದ್ದೇಶಪೂರ್ವಕ ಎಂದು ಆರೋಪಿಸಿದ್ದಾರೆ. ಪಾಸ್‌ಪೋರ್ಟ್‌ ವೆರಿಫಿಕೇಶನ್‌ ಮಾಡಲು ಸಬ್‌ ಇನ್ಸ್‌ಪೆಕ್ಟರ್ ಶರ್ಮಾ ಹಣಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಘಟನೆ ಸಂಬಂಧ ಈಗಾಗಲೇ ಮನೋಜ್ ಶರ್ಮಾ ಅವರನ್ನು ಅಮಾನತುಗೊಳಿಸಲಾಗಿದೆ. ಕರ್ತವ್ಯ ಸಂದರ್ಭದಲ್ಲಿ ನಿರ್ಲಕ್ಷ್ಯದ ಕಾರಣಕ್ಕೆ ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗಿದೆ. ಘಟನೆ ನಂತರ ಮನೋಜ್ ನಾಪತ್ತೆಯಾಗಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ; ‘ದ್ವೇಷಪೂರಿತ’ ವೀಡಿಯೋ ಹಂಚಿಕೆ: 9 ಜನರ ಮೇಲೆ ಕೇಸ್ ದಾಖಲಿಸಿದ ಜಮ್ಮು-ಕಾಶ್ಮೀರ ಪೊಲೀಸ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...