Homeಮುಖಪುಟಉತ್ತರ ಪ್ರದೇಶ SIR : ಮತದಾರರ ಪಟ್ಟಿಯಿಂದ 2.89 ಕೋಟಿ ಹೆಸರು ಡಿಲೀಟ್

ಉತ್ತರ ಪ್ರದೇಶ SIR : ಮತದಾರರ ಪಟ್ಟಿಯಿಂದ 2.89 ಕೋಟಿ ಹೆಸರು ಡಿಲೀಟ್

- Advertisement -
- Advertisement -

ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐರ್‌) ಬಳಿಕ ಸುಮಾರು 2.89 ಕೋಟಿ ಮತದಾರರ ಹೆಸರುಗಳನ್ನು ಪಟ್ಟಿಯಿಂದ ತೆಗೆದುಹಾಕಲಾಗಿದೆ ಎಂದು ಉತ್ತರ ಪ್ರದೇಶದ ಮುಖ್ಯ ಚುನಾವಣಾ ಅಧಿಕಾರಿ (ಸಿಇಒ) ನವದೀಪ್ ರಿನ್ವಾ ಮಂಗಳವಾರ (ಜ.6) ತಿಳಿಸಿದ್ದಾರೆ.

ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ರಿನ್ವಾ, ಚುನಾವಣಾ ಆಯೋಗವು ಸುಮಾರು 12.5 ಕೋಟಿ ಎಸ್‌ಐಆರ್‌ ಅರ್ಜಿಗಳನ್ನು ಜನರಿಂದ ಸ್ವೀಕರಿಸಿದೆ ಎಂದು ಹೇಳಿದ್ದಾರೆ.

ವರದಿಗಳ ಪ್ರಕಾರ, ಎಸ್‌ಐಆರ್‌ಗೂ ಮೊದಲು ಉತ್ತರ ಪ್ರದೇಶದ ಮತದಾರರ ಒಟ್ಟು ಸಂಖ್ಯೆ 15.44 ಕೋಟಿ ಇತ್ತು. ಎಸ್‌ಐಆರ್ ವೇಳೆ 46.23 ಲಕ್ಷ ಜನರು ಮೃತಪಟ್ಟಿದ್ದಾರೆ, 1.27 ಕೋಟಿ ಜನರು ಶಾಶ್ವತವಾಗಿ ಸ್ಥಳಾಂತರಗೊಂಡಿದ್ದಾರೆ, 25.47 ಲಕ್ಷ ಮಂದಿಯ ಹೆಸರು ಒಂದಕ್ಕಿಂತ ಹೆಚ್ಚು ಬಾರಿ ಇದೆ ಮತ್ತು ಪತ್ತೆಯಾಗದವರು ಹಾಗೂ ಇತರೆ ಕಾರಣಗಳನ್ನು ನೀಡಿ 2.89 ಕೋಟಿ ಹೆಸರುಗಳನ್ನು ಕೈ ಬಿಡಲಾಗಿದೆ. ಇದರಿಂದ ಎಸ್‌ಐಆರ್‌ ಬಳಿಕ ಪ್ರಕಟಿಸಿ ಕರಡು ಮತದಾರರ ಪಟ್ಟಿಯಲ್ಲಿ ಒಟ್ಟು ಮತದಾರರ ಸಂಖ್ಯೆ 12.5 ಕೋಟಿಗೆ ಕುಸಿತಗೊಂಡಿದೆ.

ಸಿಇಒ ಪ್ರಕಾರ, 15.44 ಕೋಟಿ ಮತದಾರರಲ್ಲಿ, 12.55 ಕೋಟಿ ಮತದಾರರ (ಶೇಕಡ 81.30) ಹೆಸರುಗಳನ್ನು ಎಸ್‌ಐಆರ್ ನಂತರ ಕರಡು ಮತದಾರರ ಪಟ್ಟಿಯಲ್ಲಿ ಉಳಿಸಿಕೊಳ್ಳಲಾಗಿದೆ.

ಎಸ್‌ಐಆರ್‌ ಪೂರ್ಣಗೊಂಡ ಬಳಿಕ ಅಂತಿಮ ಮತದಾರರ ಪಟ್ಟಿಯನ್ನು ಮಾರ್ಚ್ 6,2026 ರಂದು ಬಿಡುಗಡೆ ಮಾಡಲಾಗುವುದು ಎಂದು ರಿನ್ವಾ ಹೇಳಿದ್ದಾರೆ. ಈಗ ಕರಡು ಪಟ್ಟಿ ಬಿಡುಗಡೆಯಾಗಿರುವುದರಿಂದ ಮತದಾರರು ತಮ್ಮ ಎಪಿಕ್ ( EPIC)ಸಂಖ್ಯೆಯನ್ನು ವೆಬ್‌ಸೈಟ್‌ನಲ್ಲಿ ನಮೂದಿಸುವ ಮೂಲಕ ತಮ್ಮ ವಿವರಗಳನ್ನು ಪರಿಶೀಲಿಸಬೇಕು. ಒಂದು ವೇಳೆ ನಿಮ್ಮ ಹೆಸರು ಪಟ್ಟಿಯಲ್ಲಿ ಇಲ್ಲದಿದ್ದರೆ ಫಾರ್ಮ್ 6 ಭರ್ತಿ ಮಾಡುವ ಮೂಲಕ ಸೇರ್ಪಡೆಗೆ ಕೋರಬಹುದು ಎಂದಿದ್ದಾರೆ.

ಚುನಾವಣಾ ಆಯೋಗವು ಕರಡು ಮತದಾರರ ಪಟ್ಟಿಯ ಪ್ರಕಟಣೆಯನ್ನು ಒಂದು ವಾರ ವಿಸ್ತರಿಸಿ, ಎಸ್‌ಐಆರ್‌ನ ವೇಳಾಪಟ್ಟಿಯನ್ನು ಪರಿಷ್ಕರಿಸಿತ್ತು. ಹಾಗಾಗಿ, ಡಿಸೆಂಬರ್ 31ರ ಹಿಂದಿನ ಗಡುವಿನ ಬದಲು ಜನವರಿ 6ರಂದು ಕರಡು ಪಟ್ಟಿಯನ್ನು ಪ್ರಕಟಿಸಿದೆ.

ಪರಿಷ್ಕೃತ ಅವಧಿಯ ಪ್ರಕಾರ, ಜನರು ಹಕ್ಕು ಮತ್ತು ಆಕ್ಷೇಪಣೆಗಳನ್ನು ಸಲ್ಲಿಸುವ ಅವಧಿಯು ಜನವರಿ 6 ರಿಂದ ಫೆಬ್ರವರಿ 6, 2026 ರವರೆಗೆ ಇರುತ್ತದೆ. ಯುಪಿಯಲ್ಲಿ ಎಸ್‌ಐಆರ್ ಪ್ರಕ್ರಿಯೆಗೆ ಹಲವು ಗಡುವುಗಳು ವಿಸ್ತರಣೆಯಾಗಿವೆ. ಆರಂಭದಲ್ಲಿ ಡಿಸೆಂಬರ್ 4 ಕ್ಕೆ ಗಣತಿ ಗಡುವನ್ನು ನಿಗದಿಪಡಿಸಲಾಗಿತ್ತು, ನಂತರ ಎರಡು ಬಾರಿ ವಿಸ್ತರಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...