Homeಕರ್ನಾಟಕಉತ್ತರ ಪ್ರದೇಶ: ಪತ್ರಕರ್ತ ಜುಬೇರ್‌‌ ವಿರುದ್ಧ ತನಿಖೆಗೆ ಎಸ್‌ಐಟಿ ರಚನೆ

ಉತ್ತರ ಪ್ರದೇಶ: ಪತ್ರಕರ್ತ ಜುಬೇರ್‌‌ ವಿರುದ್ಧ ತನಿಖೆಗೆ ಎಸ್‌ಐಟಿ ರಚನೆ

- Advertisement -
- Advertisement -

ಆಲ್ಟ್ ನ್ಯೂಸ್ ಸಹ-ಸಂಸ್ಥಾಪಕ, ಖ್ಯಾತ ಪತ್ರಕರ್ತ ಮೊಹಮ್ಮದ್ ಜುಬೇರ್ ವಿರುದ್ಧದ ಪ್ರಕರಣಗಳನ್ನು ಪರಿಶೀಲಿಸಲು ಉತ್ತರ ಪ್ರದೇಶ ಸರ್ಕಾರ ಮಂಗಳವಾರ ವಿಶೇಷ ತನಿಖಾ ತಂಡವನ್ನು (ಎಸ್‌ಐಟಿ) ರಚಿಸಿದೆ.

ಗುಂಪುಗಳ ನಡುವೆ ದ್ವೇಷವನ್ನು ಪ್ರಚೋದಿಸುವ ಮತ್ತು ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದ ಮೇಲೆ ಜುಬೇರ್‌ ಅವರನ್ನು ಪ್ರಸ್ತುತ ಸೀತಾಪುರ ಜೈಲಿನಲ್ಲಿ ಇರಿಸಲಾಗಿದೆ.

ಮೂಲಗಳ ಪ್ರಕಾರ, ಇಬ್ಬರು ಸದಸ್ಯರ ಎಸ್‌ಐಟಿಗೆ ಪೊಲೀಸ್ ಇನ್ಸ್‌ಪೆಕ್ಟರ್ ಜನರಲ್ (ಐಜಿ) ಪ್ರೀತೀಂದರ್ ಸಿಂಗ್ ನೇತೃತ್ವ ವಹಿಸಲಿದ್ದು, ಡೆಪ್ಯುಟಿ ಇನ್‌ಸ್ಪೆಕ್ಟರ್ ಜನರಲ್ ಆಫ್ ಪೊಲೀಸ್ ಅಮಿತ್ ಕುಮಾರ್ ವರ್ಮಾ ತಂಡದ ಸದಸ್ಯರಾಗಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಜುಬೇರ್ ವಿರುದ್ಧ ಉತ್ತರ ಪ್ರದೇಶದ ಸೀತಾಪುರ, ಲಖಿಂಪುರ ಖೇರಿ, ಹತ್ರಾಸ್ ಮತ್ತು ಮುಜಾಫರ್‌ನಗರ ಜಿಲ್ಲೆಗಳಲ್ಲಿ ಪ್ರಕರಣಗಳು ದಾಖಲಾಗಿವೆ. ಸೀತಾಪುರದಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಂಗಳವಾರ ಮಧ್ಯಂತರ ಜಾಮೀನು ನೀಡಿದ್ದರೂ, ಕಳೆದ ವರ್ಷ ಇದೇ ಜಿಲ್ಲೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಲಖಿಂಪುರ ಖೇರಿ ಜಿಲ್ಲಾ ನ್ಯಾಯಾಲಯ ಸೋಮವಾರ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದ್ದರಿಂದ ಜುಬೇರ್‌‌ ಜೈಲಿನಲ್ಲಿಯೇ ಇರುವಂತಾಗಿದೆ.

ಜುಬೇರ್ ಅವರ ಜಾಮೀನು ಅರ್ಜಿಯನ್ನು ಜಿಲ್ಲಾ ನ್ಯಾಯಾಲಯವು ಬುಧವಾರ ವಿಚಾರಣೆ ನಡೆಸಲಿದೆ. ಜುಬೈರ್ ವಿರುದ್ಧ ಹಲವು ಸ್ಥಳಗಳಲ್ಲಿ ಪ್ರಕರಣಗಳು ದಾಖಲಾಗಿರುವುದರಿಂದ ಎಸ್‌ಐಟಿ ರಚನೆಗೆ ನಿರ್ಧರಿಸಲಾಗಿದೆ ಮತ್ತು ಈ ವಿಷಯದಲ್ಲಿ “ಸಂಪೂರ್ಣ ತನಿಖೆ” ಅತ್ಯಗತ್ಯ ಎಂದು ಮೂಲಗಳು ತಿಳಿಸಿವೆ.

ಟ್ವೀಟ್ ಮೂಲಕ ಧಾರ್ಮಿಕ ಭಾವನೆಗಳನ್ನು ಕೆರಳಿಸಿದ ಆರೋಪದ ಮೇಲೆ ಜೂನ್ 27 ರಂದು ದೆಹಲಿ ಪೊಲೀಸರು ಜುಬೈರ್ ಅವರನ್ನು ಬಂಧಿಸಿದ್ದರು. ಮುಸ್ಲಿಮ್ ಮಹಿಳೆಯರನ್ನು ರೇಪ್‌ ಮಾಡುವುದಾಗಿ ಹೇಳಿಕೆ ನೀಡಿರುವ ಹಿಂದುತ್ವ ಧರ್ಮಗುರು ಬಜರಂಗ ಮುನಿಯನ್ನು ‘ಹೇಟ್‌ ಮಾಂಗರ್‌‌’ (ಅಲ್ಪಸಂಖ್ಯಾತರ ಮೇಲೆ ದ್ವೇಷ ಹರಡುವವನು) ಎಂದು ಕರೆದಿದ್ದಕ್ಕೆ ಸೀತಾಪುರದಲ್ಲಿ ಜುಬೇರ್‌‌ ವಿರುದ್ಧ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಜಾಮೀನು ನೀಡಿದೆ.

ಜುಬೇರ್ ವಿರುದ್ಧ ಲಖಿಂಪುರ ಖೇರಿಯಲ್ಲಿ ಕಳೆದ ವರ್ಷ ಪ್ರಕರಣ ದಾಖಲಾಗಿತ್ತು. ಖಾಸಗಿ ಟಿವಿ ಸುದ್ದಿ ವಾಹಿನಿಯೊಂದರಲ್ಲಿ ಕೆಲಸ ಮಾಡುವುದಾಗಿ ಹೇಳಿಕೊಂಡಿದ್ದ ಆಶಿಶ್ ಕುಮಾರ್ ಕಟಿಯಾರ್ ಎಂಬ ಸ್ಥಳೀಯ ವರದಿಗಾರ ಜುಬೈರ್ ವಿರುದ್ಧ ಜಿಲ್ಲೆಯ ಮೊಹಮ್ಮದಿ ಕೊತ್ವಾಲಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದನು.

ಕಟಿಯಾರ್ ತಮ್ಮ ದೂರಿನಲ್ಲಿ, “ಜುಬೈರ್ ಅವರು ಧಾರ್ಮಿಕ ಭಾವನೆಗಳನ್ನು ಪ್ರಚೋದಿಸುವ ವೀಡಿಯೊವನ್ನು “ಎಡಿಟ್” ಮಾಡಿದ್ದಾರೆ. ಅಲ್ಲದೆ ತಮ್ಮ ಆಲ್ಟ್ ನ್ಯೂಸ್ ವೆಬ್‌ಸೈಟ್‌ನಲ್ಲಿ ಅದನ್ನು ಪೋಸ್ಟ್ ಮಾಡಿದ್ದಾರೆ” ಎಂದಿದ್ದರು. ಜಿಲ್ಲಾ ಪೊಲೀಸರು ಕೆಲ ದಿನಗಳ ಹಿಂದೆ ಜುಬೈರ್ ವಿರುದ್ಧ ಬಂಧನ ವಾರಂಟ್ ಪಡೆದು ಜುಬೇರ್‌ ಅವರನ್ನು ಬಂಧಿಸಿ ಸೀತಾಪುರ ಜಿಲ್ಲಾ ಕಾರಾಗೃಹಕ್ಕೆ ಕಳುಹಿಸಿದ್ದಾರೆ.

ಜುಬೇರ್‌ ಅವರ ಟ್ವೀಟನ್ನು ಉಲ್ಲೇಖಿಸಿ ದೆಹಲಿ ಪೊಲೀಸರಿಗೆ ದೂರು ನೀಡಿದ್ದ, ‘ಹನುಮಾನ್ ಭಕ್ತ್ @balajikijaiin’ ಎಂಬ ಹೆಸರಿನ ಟ್ವಿಟರ್‌ ಅಕೌಂಟ್ ಇದೀಗ ಡಿಲೀಟ್ ಮಾಡಲಾಗಿದೆ. ಈ ವಿಚಾರವನ್ನು ಸಾಮಾಜಿಕ ಹೋರಾಟಗಾರ, ಟಿಎಂಸಿ ನಾಯಕ ಸಾಕೇತ್‌ ಗೋಖಲೆ ಅವರು ಬಹಿರಂಗಪಡಿಸಿದ್ದಾರೆ.

ಟ್ವಿಟರ್‌‌ನಲ್ಲಿ ಕೇವಲ ಒಂದು ಸಂದೇಶವನ್ನು ಪೋಸ್ಟ್ ಮಾಡಿದ್ದ ಮತ್ತು ಕೇವಲ ಮೂರು ಅನುಯಾಯಿಗಳನ್ನು ಹೊಂದಿದ್ದ ಅನಾಮಧೇಯ ಟ್ವಿಟರ್ ಹ್ಯಾಂಡಲ್‌ನ ದೂರಿನ ಆಧಾರದ ಮೇಲೆ ಪತ್ರಕರ್ತ ಮೊಹಮ್ಮದ್ ಜುಬೇರ್‌ ಅವರನ್ನು ಮೊದಲಿಗೆ ದೆಹಲಿ ಪೊಲೀಸರು ಬಂಧಿಸಿದರು.

ಇದನ್ನೂ ಓದಿರಿ: ಜುಬೇರ್‌‌‌ ಬಂಧನದ ಐದು ದಿನದ ನಂತರ ದೂರುದಾರನನ್ನು ಹುಡುಕುತ್ತಿರುವ ದೆಹಲಿ ಪೊಲೀಸರು!

ಆದರೆ ಜುಬೇರ್‌ ಅವರನ್ನು ಬಂಧಿಸಲು ಕಾರಣವಾಗಿರುವ ಚಿತ್ರವೂ ಎಡಿಟ್ ಮಾಡಿರುವ ಚಿತ್ರವಲ್ಲ, ಬದಲಾಗಿ ಈ ಚಿತ್ರವು 1983ರ ಹಿಂದಿ ಚಲನಚಿತ್ರವಾದ ‘ಕಿಸ್ಸಿ ಸೆ ನಾ ಕೆಹನಾ’ ದೃಶ್ಯವಾಗಿದೆ. ‘ಕಿಸ್ಸಿ ಸೆ ನಾ ಕೆಹನಾ’ ಎಂದರೆ ಕನ್ನಡದಲ್ಲಿ ‘ಯಾರಿಗೂ ಹೇಳಬೇಡಿ’ ಎಂದರ್ಥವಿದೆ. ಈ ರೊಮ್ಯಾಂಟಿಕ್ ಹಾಸ್ಯ ಚಲನಚಿತ್ರವನ್ನು ಹೃಷಿಕೇಶ್ ಮುಖರ್ಜಿ ನಿರ್ದೇಶಿಸಿದ್ದು, ಚಲನಚಿತ್ರ ಮಂಡಳಿಯೂ ಅದಕ್ಕೆ ‘ಯು’ (ಎಲ್ಲರೂ ನೋಡಬಹುದಾದ) ಪ್ರಮಾಣಪತ್ರ ನೀಡಿದೆ. ಅಲ್ಲದೆ ಈ ಚಿತ್ರ ಮತ್ತು ದೃಶ್ಯ ಇನ್ನೂ ಯೂಟ್ಯೂಬ್‌ನಲ್ಲಿ ಲಭ್ಯವಿದೆ.

ಸಿನಿಮಾ ದೃಶ್ಯವೊಂದರ ಕಾರಣಕ್ಕೆ ಜುಬೇರ್‌ ಬಂಧನವಾದ ಬಳಿಕ ಬೇರೆ ಬೇರೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಅವರ ಮೇಲೆ ತನಿಖೆ ನಡೆಸಲಾಗುತ್ತಿದೆ. ಫ್ಯಾಕ್ಟ್‌ ಚೆಕ್ ಮೂಲಕ ಖ್ಯಾತರಾಗಿದ್ದ ಜುಬೇರ್‌ ಅವರು, ದ್ವೇಷ ಭಾಷಣಕಾರರನ್ನು ಅನೇಕ ಸಲ ಬಯಲಿಗೆಳೆದಿದ್ದಾರೆ. ದ್ವೇಷ ಭಾಷಣಗಳನ್ನು ಹೊರಗೆಳೆದು ಪೊಲೀಸರ ಗಮನಕ್ಕೆ ತರುವಲ್ಲಿ ಮುಂಚೂಣಿಯಲ್ಲಿದ್ದ ಜುಬೇರ್‌ ಅವರನ್ನು ಪೊಲೀಸರು ತೀವ್ರತರನಾಗಿ ತನಿಖೆಗೆ ಒಳಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...