Homeಮುಖಪುಟಉತ್ತರ ಪ್ರದೇಶದಲ್ಲಿ ನಿಲ್ಲದ ಅತ್ಯಾಚಾರ, ಪತಿ ಮುಂದೆಯೇ ಪತ್ನಿಯ ಸಾಮೂಹಿಕ ಅತ್ಯಾಚಾರ

ಉತ್ತರ ಪ್ರದೇಶದಲ್ಲಿ ನಿಲ್ಲದ ಅತ್ಯಾಚಾರ, ಪತಿ ಮುಂದೆಯೇ ಪತ್ನಿಯ ಸಾಮೂಹಿಕ ಅತ್ಯಾಚಾರ

`ಸೀರಿಯಲ್ ಕ್ರಿಮಿನಲ್ ಮತ್ತು ರೌಡಿ ಶೀಟರ್‌ ಒಬ್ಬ ರಾಜ್ಯದ ಮುಖ್ಯಮಂತ್ರಿಯಾದಾಗ ಹೀಗಾಗುತ್ತದೆ. ಇದು ಯುಪಿಯ ಯೋಗಿ ಜಿ ಅವರ ರಾಮ ಸಾಮ್ರಾಜ್ಯ!' ಎಂದು ವಕೀಲ ಪ್ರಶಾಂತ್ ಭೂಷಣ್ ವ್ಯಂಗ್ಯವಾಡಿದ್ದಾರೆ.

- Advertisement -
- Advertisement -

ಬಿಜೆಪಿ ಆಡಳಿತದಲ್ಲಿರುವ ಉತ್ತರ ಪ್ರದೇಶದಲ್ಲಿ ಪ್ರತಿದಿನ ಮಹಿಳೆಯರ ಮೇಲೆ ಅತ್ಯಾಚಾರ, ದೌರ್ಜನ್ಯ ಪ್ರಕರಣಗಳು ನಡೆಯುತ್ತಲೇ ಇವೆ. ಆದರೆ, ಪಂಚರಾಜ್ಯ ಚುನಾವಣಾ ಪ್ರಚಾರದಲ್ಲಿ ನಿರತರಾಗಿರುವ ಯೋಗಿ ಆದಿತ್ಯನಾಥ್ ಅವರು ಉತ್ತರ ಪ್ರದೇಶದ ಅಭಿವೃದ್ಧಿ ಮತ್ತು ಸುರಕ್ಷತೆ ಬಗ್ಗೆ ದೊಡ್ಡ ದೊಡ್ಡ ಮಾತುಗಳನ್ನು ಆಡುತ್ತಿದ್ದಾರೆ.

ಸೋಮವಾರ ಸಂಜೆ ಆಗ್ರಾ-ಕಾನ್ಪುರ ಹೆದ್ದಾರಿಯಲ್ಲಿರುವ ಜಲಪಾತದ ನಲಾ ಕಾಡಿನಲ್ಲಿ ಗಂಡನ ಮುಂದೆಯೇ ಮಹಿಳೆಯೊಬ್ಬರು ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿರುವ ಘಟನೆ ನಡೆದಿದೆ. ಅತ್ಯಾಚಾರ ನಡೆಸಿದ ಆರೋಪಿಗಳು ವಿಡಿಯೊ ಚಿತ್ರಿಕರಿಸಿ, ಹಣ- ಒಡವೆ ದೋಚಿಕೊಂಡು ಪರಾರಿಯಾಗಿದ್ದಾರೆ.

ಸೋಮವಾರ ಸಂತ್ರಸ್ತೆ ತನ್ನ ಪತಿಯೊಂದಿಗೆ ಶಹದಾರಾಗೆ ಬೈಕ್‌ನಲ್ಲಿ ಹೋಗುತ್ತಿದ್ದಾಗ ಘಟನೆ ನಡೆದಿದೆ. ಆಗ್ರಾ-ಕಾನ್ಪುರ ಹೆದ್ದಾರಿಯಲ್ಲಿ ಮೂವರು ಯುವಕರು ಬಲವಂತವಾಗಿ ಇವರ ಬೈಕ್ ನಿಲ್ಲಿಸಿ, ಇಬ್ಬರನ್ನೂ ಕಾಡಿನ ಕಡೆಗೆ ಎಳೆದುಕೊಂಡು ಹೋಗಿ ಗಂಡನ ಮುಂದೆ ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ. ಘಟನೆ ಬಗ್ಗೆ ಪೊಲೀಸರಿಗೆ ತಿಳಿಸಿದರೇ ವಿಡಿಯೋ ಹರಿ ಬಿಡುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ವರದಿಯಾಗಿದೆ.

ಇದನ್ನೂ ಓದಿ: ಪ್ರಪಾತಕ್ಕಿಳಿದ ಉತ್ತರ ಪ್ರದೇಶ ಪರಿಸ್ಥಿತಿ: ಮಗಳ ತಲೆ ಕಡಿದು ರಸ್ತೆಯಲ್ಲಿ ಪ್ರದರ್ಶಿಸಿದ ಕ್ರೂರ ತಂದೆ

ಈ ಘಟನೆಯ ಬಗ್ಗೆ ದುಃಖ ವ್ಯಕ್ತಪಡಿಸಿರುವ ಪತ್ರಕರ್ತೆ ರೋಹಿಣಿ ಸಿಂಗ್ ಅವರು ಟ್ವೀಟ್ ಮಾಡುವ ಮೂಲಕ ಯೋಗಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಕಾನ್ಪುರ ಹೆದ್ದಾರಿಯಲ್ಲಿನ ಜಲಪಾತದ ಬಳಿ ನಡೆದ ಘಟನೆ ಕೇಳಿದ ನಂತರ ನಿಮ್ಮ ಹೃದಯ ವಿಚಲಿತಗೊಳ್ಳುತ್ತದೆ. ಗಂಡನೊಂದಿಗೆ ಬೈಕ್‌ನಲ್ಲಿ ತೆರಳುತ್ತಿದ್ದ ಮಹಿಳೆಯನ್ನು ನಿಲ್ಲಿಸಿ, ಇಬ್ಬರನ್ನೂ ಬಲವಂತವಾಗಿ ಕಾಡಿನ ಕಡೆಗೆ ಕರೆದೊಯ್ಯಲಾಯಿತು. ಮಹಿಳೆಯ ಮೇಲೆ ಗಂಡನ ಮುಂದೆ ಅತ್ಯಾಚಾರ ನಡೆಸಿ ವಿಡಿಯೋ ಮಾಡಲಾಗಿದೆ. ಉತ್ತರಪ್ರದೇಶದಲ್ಲಿ ಅಪರಾಧಿಗಳು ‘ಭಯ ಮುಕ್ತ’ರಾಗಿದ್ದಾರೆ” ಎಂದು ಟ್ವೀಟ್ ಮಾಡಿದ್ದಾರೆ.

ಪತ್ರಕರ್ತೆ ರೋಹಿಣಿ ಸಿಂಗ್ ಅವರ ಟ್ವೀಟ್ ರಿಟ್ವೀಟ್ ಮಾಡಿರುವ ಹಿರಿಯ ವಕೀಲ ಪ್ರಶಾಂತ್ ಭೂಷಣ್ ಅವರು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಮೇಲೆ ನೇರವಾಗಿ ವಾಗ್ದಾಳಿ ನಡೆಸಿದ್ದಾರೆ.

“ಸೀರಿಯಲ್ ಕ್ರಿಮಿನಲ್ ಮತ್ತು ರೌಡಿ ಶೀಟರ್‌ ಒಬ್ಬ ರಾಜ್ಯದ ಮುಖ್ಯಮಂತ್ರಿಯಾದಾಗ ಹೀಗಾಗುತ್ತದೆ. ಇದು ಯುಪಿಯ ಯೋಗಿ ಜಿ ಅವರ ರಾಮ ಸಾಮ್ರಾಜ್ಯ!” ಎಂದು ವ್ಯಂಗ್ಯವಾಡಿದ್ದಾರೆ.

ಸಾಮೂಹಿಕ ಅತ್ಯಾಚಾರ ನಡೆಸಿದ ಮೂವರು ಯುವಕರು 10,000 ನಗದು ಮತ್ತು ಆಭರಣಗಳನ್ನು ದೋಚಿದ್ದಾರೆ ಎಂದು ಮಹಿಳೆ ತಿಳಿಸಿದ್ದಾರೆ.

ಸದ್ಯ ಸಂತ್ರಸ್ತೆ ಮೂವರು ಆರೋಪಿಗಳ ವಿರುದ್ಧ, ದರೋಡೆ ಮತ್ತು ಸಾಮೂಹಿಕ ಅತ್ಯಾಚಾರ ಪ್ರಕರಣಗಳ ಅಡಿಯಲ್ಲಿ ಎಟ್ಮಾದ್ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಮಹಿಳೆಯ ದೂರಿನ ಮೇಲೆ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಇಲ್ಲಿಯವರೆಗೂ ಯಾರನ್ನೂ ಬಂಧಿಸಿಲ್ಲ.


ಇದನ್ನೂ ಓದಿ: ಉತ್ತರ ಪ್ರದೇಶ- ಶಾಲೆಗೆ ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ನಾಪತ್ತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...