Homeಮುಖಪುಟಉತ್ತರ ಪ್ರದೇಶದಲ್ಲಿ ನಿಲ್ಲದ ಅತ್ಯಾಚಾರ, ಪತಿ ಮುಂದೆಯೇ ಪತ್ನಿಯ ಸಾಮೂಹಿಕ ಅತ್ಯಾಚಾರ

ಉತ್ತರ ಪ್ರದೇಶದಲ್ಲಿ ನಿಲ್ಲದ ಅತ್ಯಾಚಾರ, ಪತಿ ಮುಂದೆಯೇ ಪತ್ನಿಯ ಸಾಮೂಹಿಕ ಅತ್ಯಾಚಾರ

`ಸೀರಿಯಲ್ ಕ್ರಿಮಿನಲ್ ಮತ್ತು ರೌಡಿ ಶೀಟರ್‌ ಒಬ್ಬ ರಾಜ್ಯದ ಮುಖ್ಯಮಂತ್ರಿಯಾದಾಗ ಹೀಗಾಗುತ್ತದೆ. ಇದು ಯುಪಿಯ ಯೋಗಿ ಜಿ ಅವರ ರಾಮ ಸಾಮ್ರಾಜ್ಯ!' ಎಂದು ವಕೀಲ ಪ್ರಶಾಂತ್ ಭೂಷಣ್ ವ್ಯಂಗ್ಯವಾಡಿದ್ದಾರೆ.

- Advertisement -
- Advertisement -

ಬಿಜೆಪಿ ಆಡಳಿತದಲ್ಲಿರುವ ಉತ್ತರ ಪ್ರದೇಶದಲ್ಲಿ ಪ್ರತಿದಿನ ಮಹಿಳೆಯರ ಮೇಲೆ ಅತ್ಯಾಚಾರ, ದೌರ್ಜನ್ಯ ಪ್ರಕರಣಗಳು ನಡೆಯುತ್ತಲೇ ಇವೆ. ಆದರೆ, ಪಂಚರಾಜ್ಯ ಚುನಾವಣಾ ಪ್ರಚಾರದಲ್ಲಿ ನಿರತರಾಗಿರುವ ಯೋಗಿ ಆದಿತ್ಯನಾಥ್ ಅವರು ಉತ್ತರ ಪ್ರದೇಶದ ಅಭಿವೃದ್ಧಿ ಮತ್ತು ಸುರಕ್ಷತೆ ಬಗ್ಗೆ ದೊಡ್ಡ ದೊಡ್ಡ ಮಾತುಗಳನ್ನು ಆಡುತ್ತಿದ್ದಾರೆ.

ಸೋಮವಾರ ಸಂಜೆ ಆಗ್ರಾ-ಕಾನ್ಪುರ ಹೆದ್ದಾರಿಯಲ್ಲಿರುವ ಜಲಪಾತದ ನಲಾ ಕಾಡಿನಲ್ಲಿ ಗಂಡನ ಮುಂದೆಯೇ ಮಹಿಳೆಯೊಬ್ಬರು ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿರುವ ಘಟನೆ ನಡೆದಿದೆ. ಅತ್ಯಾಚಾರ ನಡೆಸಿದ ಆರೋಪಿಗಳು ವಿಡಿಯೊ ಚಿತ್ರಿಕರಿಸಿ, ಹಣ- ಒಡವೆ ದೋಚಿಕೊಂಡು ಪರಾರಿಯಾಗಿದ್ದಾರೆ.

ಸೋಮವಾರ ಸಂತ್ರಸ್ತೆ ತನ್ನ ಪತಿಯೊಂದಿಗೆ ಶಹದಾರಾಗೆ ಬೈಕ್‌ನಲ್ಲಿ ಹೋಗುತ್ತಿದ್ದಾಗ ಘಟನೆ ನಡೆದಿದೆ. ಆಗ್ರಾ-ಕಾನ್ಪುರ ಹೆದ್ದಾರಿಯಲ್ಲಿ ಮೂವರು ಯುವಕರು ಬಲವಂತವಾಗಿ ಇವರ ಬೈಕ್ ನಿಲ್ಲಿಸಿ, ಇಬ್ಬರನ್ನೂ ಕಾಡಿನ ಕಡೆಗೆ ಎಳೆದುಕೊಂಡು ಹೋಗಿ ಗಂಡನ ಮುಂದೆ ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ. ಘಟನೆ ಬಗ್ಗೆ ಪೊಲೀಸರಿಗೆ ತಿಳಿಸಿದರೇ ವಿಡಿಯೋ ಹರಿ ಬಿಡುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ವರದಿಯಾಗಿದೆ.

ಇದನ್ನೂ ಓದಿ: ಪ್ರಪಾತಕ್ಕಿಳಿದ ಉತ್ತರ ಪ್ರದೇಶ ಪರಿಸ್ಥಿತಿ: ಮಗಳ ತಲೆ ಕಡಿದು ರಸ್ತೆಯಲ್ಲಿ ಪ್ರದರ್ಶಿಸಿದ ಕ್ರೂರ ತಂದೆ

ಈ ಘಟನೆಯ ಬಗ್ಗೆ ದುಃಖ ವ್ಯಕ್ತಪಡಿಸಿರುವ ಪತ್ರಕರ್ತೆ ರೋಹಿಣಿ ಸಿಂಗ್ ಅವರು ಟ್ವೀಟ್ ಮಾಡುವ ಮೂಲಕ ಯೋಗಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಕಾನ್ಪುರ ಹೆದ್ದಾರಿಯಲ್ಲಿನ ಜಲಪಾತದ ಬಳಿ ನಡೆದ ಘಟನೆ ಕೇಳಿದ ನಂತರ ನಿಮ್ಮ ಹೃದಯ ವಿಚಲಿತಗೊಳ್ಳುತ್ತದೆ. ಗಂಡನೊಂದಿಗೆ ಬೈಕ್‌ನಲ್ಲಿ ತೆರಳುತ್ತಿದ್ದ ಮಹಿಳೆಯನ್ನು ನಿಲ್ಲಿಸಿ, ಇಬ್ಬರನ್ನೂ ಬಲವಂತವಾಗಿ ಕಾಡಿನ ಕಡೆಗೆ ಕರೆದೊಯ್ಯಲಾಯಿತು. ಮಹಿಳೆಯ ಮೇಲೆ ಗಂಡನ ಮುಂದೆ ಅತ್ಯಾಚಾರ ನಡೆಸಿ ವಿಡಿಯೋ ಮಾಡಲಾಗಿದೆ. ಉತ್ತರಪ್ರದೇಶದಲ್ಲಿ ಅಪರಾಧಿಗಳು ‘ಭಯ ಮುಕ್ತ’ರಾಗಿದ್ದಾರೆ” ಎಂದು ಟ್ವೀಟ್ ಮಾಡಿದ್ದಾರೆ.

ಪತ್ರಕರ್ತೆ ರೋಹಿಣಿ ಸಿಂಗ್ ಅವರ ಟ್ವೀಟ್ ರಿಟ್ವೀಟ್ ಮಾಡಿರುವ ಹಿರಿಯ ವಕೀಲ ಪ್ರಶಾಂತ್ ಭೂಷಣ್ ಅವರು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಮೇಲೆ ನೇರವಾಗಿ ವಾಗ್ದಾಳಿ ನಡೆಸಿದ್ದಾರೆ.

“ಸೀರಿಯಲ್ ಕ್ರಿಮಿನಲ್ ಮತ್ತು ರೌಡಿ ಶೀಟರ್‌ ಒಬ್ಬ ರಾಜ್ಯದ ಮುಖ್ಯಮಂತ್ರಿಯಾದಾಗ ಹೀಗಾಗುತ್ತದೆ. ಇದು ಯುಪಿಯ ಯೋಗಿ ಜಿ ಅವರ ರಾಮ ಸಾಮ್ರಾಜ್ಯ!” ಎಂದು ವ್ಯಂಗ್ಯವಾಡಿದ್ದಾರೆ.

ಸಾಮೂಹಿಕ ಅತ್ಯಾಚಾರ ನಡೆಸಿದ ಮೂವರು ಯುವಕರು 10,000 ನಗದು ಮತ್ತು ಆಭರಣಗಳನ್ನು ದೋಚಿದ್ದಾರೆ ಎಂದು ಮಹಿಳೆ ತಿಳಿಸಿದ್ದಾರೆ.

ಸದ್ಯ ಸಂತ್ರಸ್ತೆ ಮೂವರು ಆರೋಪಿಗಳ ವಿರುದ್ಧ, ದರೋಡೆ ಮತ್ತು ಸಾಮೂಹಿಕ ಅತ್ಯಾಚಾರ ಪ್ರಕರಣಗಳ ಅಡಿಯಲ್ಲಿ ಎಟ್ಮಾದ್ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಮಹಿಳೆಯ ದೂರಿನ ಮೇಲೆ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಇಲ್ಲಿಯವರೆಗೂ ಯಾರನ್ನೂ ಬಂಧಿಸಿಲ್ಲ.


ಇದನ್ನೂ ಓದಿ: ಉತ್ತರ ಪ್ರದೇಶ- ಶಾಲೆಗೆ ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ನಾಪತ್ತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಜಾರಿ ಮಾಡದಿದ್ದರೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ವಿರುದ್ಧ ಮತ: ಮಾದಿಗ ಸಮುದಾಯದ ನಿರ್ಣಯ

ಮಾ.27 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆಯಲಿರುವ ವಿಶೇಷ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಮಾದಿಗ ಸಮುದಾಯಕ್ಕೆ ಸರ್ಕಾರಿ ನೇಮಕಾತಿಯಲ್ಲಿ ಶೇ.6 ಒಳಮೀಸಲಾತಿಯನ್ನು ಹಂಚಿಕೆ ಮಾಡದಿದ್ದರೆ ದಾವಣಗೆರೆ ಹಾಗೂ ಬಾಗಲಕೋಟೆ ಉಪ ಚುನಾವಣೆಯಲ್ಲಿ...

ಗುರುಗ್ರಾಮ ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣ: ಮೂವರು ಮಹಿಳಾ ಐಪಿಎಸ್ ಒಳಗೊಂಡ ವಿಶೇಷ ತನಿಖಾ ತಂಡ ರಚಿಸಿದ ಸುಪ್ರೀಂ

ಗುರುಗ್ರಾಮ ಅಪ್ರಾಪ್ತ ಬಾಲಕಿಯ ಮೇಲಿನ ಅತ್ಯಾಚಾರ ಪ್ರಕರಣದ ತನಿಖೆಗಾಗಿ ಸುಪ್ರೀಂ ಕೋರ್ಟ್ ಬುಧವಾರ ಮೂವರು ಮಹಿಳಾ ಐಪಿಎಸ್ ಅಧಿಕಾರಿಗಳನ್ನು ಒಳಗೊಂಡ ವಿಶೇಷ ತನಿಖಾ ತಂಡವನ್ನು ರಚಿಸಿದೆ.  ಸಿಜೆಐ ಸೂರ್ಯ ಕಾಂತ್ ನೇತೃತ್ವದ ಮೂವರು ನ್ಯಾಯಾಧೀಶರ...

ಗೋವಾ | 25 ರಿಂದ 30 ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪ : ಬಿಜೆಪಿ ಕೌನ್ಸಿಲರ್ ಮಗನ ಬಂಧನ

ಗೋವಾದ ಕುರ್ಚೋರೆಮ್ ಪುರಸಭೆಯ ಬಿಜೆಪಿ ಕೌನ್ಸಿಲರ್ ಸುಶಾಂತ್ ನಾಯ್ಕ್ ಅವರ ಮಗ ಸೋಹಮ್ ನಾಯ್ಕ್ (20) ಎಂಬಾತನನ್ನು ಸುಮಾರು 25ರಿಂದ 30 ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ದಕ್ಷಿಣ ಗೋವಾ ಪೊಲೀಸರು ಬಂಧಿಸಿದ್ದಾರೆ.  ಆರೋಪಿ...

ಇರಾನ್‌ ಕದನ ವಿರಾಮಕ್ಕೆ 15 ಅಂಶಗಳ ಪ್ರಸ್ತಾಪ ಮುಂದಿಟ್ಟ ಟ್ರಂಪ್

ಪಶ್ಚಿಮ ಏಷ್ಯಾ ಸಂಘರ್ಷ ಪ್ರಾರಂಭಗೊಂಡು ನಾಲ್ಕು ವಾರಗಳು ಪೂರ್ಣಗೊಳ್ಳುವಾಗ, ಈವರೆಗೆ ಸುಮಾರು 2000 ಜೀವಗಳನ್ನು ಬಲಿ ಪಡೆದ ಹಾಗೂ ಜಾಗತಿಕವಾಗಿ ಇಂಧನ ಸಮಸ್ಯೆಯನ್ನು ಹುಟ್ಟು ಹಾಕಿರುವ ಯುದ್ಧವನ್ನು ಕೊನೆಗೊಳಿಸಲು ಅಮೆರಿಕ ಇರಾನ್‌ ಮುಂದೆ...

ಗುಜರಾತ್: ತೀವ್ರ ವಿರೋಧದ ನಡುವೆಯೂ ಏಕರೂಪ ನಾಗರೀಕ ಸಂಹಿತೆ ಮಸೂದೆ ಅಂಗೀಕಾರ; ಇದು ‘ಮುಸ್ಲಿಂ ವಿರೋಧಿ’ ಎಂದ ಕಾಂಗ್ರೆಸ್

ಗುಜರಾತ್ ವಿಧಾನಸಭೆ ಮಂಗಳವಾರ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಮಸೂದೆಯನ್ನು ಅಂಗೀಕರಿಸಿದೆ. ಇದು ಧರ್ಮವನ್ನು ಲೆಕ್ಕಿಸದೆ ಮದುವೆ, ವಿಚ್ಛೇದನ, ಉತ್ತರಾಧಿಕಾರ ಮತ್ತು ಲಿವ್-ಇನ್ ಸಂಬಂಧಗಳನ್ನು ನಿಯಂತ್ರಿಸುವ ಸಾಮಾನ್ಯ ಕಾನೂನು ಚೌಕಟ್ಟನ್ನು ರಚಿಸುವ ಗುರಿಯನ್ನು...

ಅಜಿತ್ ಪವಾರ್ ಸಾವಿನ ಕುರಿತು ಹಲವು ಅನುಮಾನ : ಬೆಂಗಳೂರಿನಲ್ಲಿ ಎಫ್‌ಐಆರ್ ದಾಖಲು

ಮಹಾರಾಷ್ಟ್ರದ ಮಾಜಿ ಉಪಮುಖ್ಯಮಂತ್ರಿ ದಿವಂಗತ ಅಜಿತ್ ಪವಾರ್ ಅವರ ಸಾವಿನ ಕುರಿತು ಅನುಮಾನ ವ್ಯಕ್ತಪಡಿಸಿ, ಈ ಹಿಂದೆ ಸರಣಿ ಸುದ್ದಿಗೋಷ್ಠಿಗಳನ್ನು ನಡೆಸಿದ್ದ ಎನ್‌ಸಿಪಿ (ಎಸ್‌ಪಿ) ಶಾಸಕ ರೋಹಿತ್ ಪವಾರ್, ಮಂಗಳವಾರ (ಮಾ.24) ಬೆಂಗಳೂರಿನ...

ಇಂಧನ ಕೊರತೆ ವದಂತಿ: ಆತಂಕದಿಂದ ಕುಕ್ಕರ್, ಹಾಲಿನ ಡಬ್ಬಿ, ನೀರಿನ ಬಕೆಟ್ ಗಳಲ್ಲಿ ಇಂಧನ ಸಂಗ್ರಹಣೆಗೆ ಮುಂದಾದ ಜನರು

ಇಂಧನ ಕೊರತೆಯ ವದಂತಿಗಳಿಂದಾಗಿ ದೇಶದ ವಿವಿಧ ಭಾಗಗಳಲ್ಲಿ ಜನರು ಕುಕ್ಕರ್, ಅಡುಗೆ ಪಾತ್ರೆ, ಹಾಲಿನ ಡಬ್ಬಿಗಳು, ನೀರಿನ ಟ್ಯಾಂಕರ್, ನೀರಿನ ಬಕೆಟ್ ಮತ್ತು ಬ್ಯಾರೆಲ್‌ಗಳಂತಹ ಅಡುಗೆ ಸಲಕರಣೆಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಅನ್ನು...

ಪಂಜಾಬ್: ಮಹಿಳೆಗೆ ಲೈಂಗಿಕ ಶೋಷಣೆ, ಬೆದರಿಕೆ ಆರೋಪ; ತಲೆಮರೆಸಿಕೊಂಡಿದ್ದ ಎಎಪಿ ಶಾಸಕ ಹರ್ಮೀತ್ ಸಿಂಗ್ ಪಠಾಣಮಜ್ರಾ ಬಂಧನ 

ಕಳೆದ ಸೆಪ್ಟೆಂಬರ್‌ನಿಂದ ಅತ್ಯಾಚಾರ ಪ್ರಕರಣವೊಂದರಲ್ಲಿ ತಲೆಮರೆಸಿಕೊಂಡಿದ್ದ ಎಎಪಿ ಶಾಸಕ ಹರ್ಮೀತ್ ಸಿಂಗ್ ಪಠಾಣಮಜ್ರಾ ಅವರನ್ನು ಪಂಜಾಬ್ ಪೊಲೀಸರು ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ಸನೂರ್‌ನಿಂದ ಮೊದಲ ಬಾರಿಗೆ ಶಾಸಕರಾಗಿರುವ ಪಠಣಮಜ್ರಾ...

ಆಸ್ತಿ ವಿವರ ಮುಚ್ಚಿಟ್ಟು ನಾಮಪತ್ರ ಸಲ್ಲಿಸಿದ ಬಿಜೆಪಿ ಕೇರಳ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ : ಕಾಂಗ್ರೆಸ್ ಆರೋಪ

ಬಿಜೆಪಿ ಕೇರಳ ರಾಜ್ಯ ಘಟಕದ ಅಧ್ಯಕ್ಷ ಹಾಗೂ ಮಾಜಿ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ತಮ್ಮ ಆಸ್ತಿ ವಿವರಗಳನ್ನು ಮುಚ್ಚಿಟ್ಟು ವಿಧಾನಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ. ತಿರುವನಂತಪುರಂ ಜಿಲ್ಲೆಯ ನೇಮಮ್...

2026ರ ಮೊದಲ 74 ದಿನಗಳಲ್ಲಿ 170 ಕಸ್ಟಡಿ ಸಾವುಗಳು ವರದಿ; ಸಂಸತ್ತಿಗೆ ಕೇಂದ್ರ ಸರ್ಕಾರ ಮಾಹಿತಿ 

2026 ರ ಮೊದಲ 74 ದಿನಗಳಲ್ಲಿ (ಜನವರಿ 1 ರಿಂದ ಮಾರ್ಚ್ 15 ರವರೆಗೆ) ಭಾರತದಾದ್ಯಂತ ಒಟ್ಟು 170 ಕಸ್ಟಡಿ ಸಾವಿನ ಪ್ರಕರಣಗಳು ವರದಿಯಾಗಿವೆ ಎಂದು ಕೇಂದ್ರ ಸರ್ಕಾರ ಮಂಗಳವಾರ ಸಂಸತ್ತಿಗೆ ತಿಳಿಸಿದೆ. ಗೃಹ...