Homeಮುಖಪುಟಉತ್ತರ ಪ್ರದೇಶ: ಹಣ್ಣು ಕೀಳಲು ನಿರಾಕರಿಸಿದ ದಲಿತ ವಿದ್ಯಾರ್ಥಿಯನ್ನು ಥಳಿಸಿ, ತರಗತಿಯಲ್ಲಿ ಕೂಡಿಹಾಕಿದ ಶಿಕ್ಷಕಿ

ಉತ್ತರ ಪ್ರದೇಶ: ಹಣ್ಣು ಕೀಳಲು ನಿರಾಕರಿಸಿದ ದಲಿತ ವಿದ್ಯಾರ್ಥಿಯನ್ನು ಥಳಿಸಿ, ತರಗತಿಯಲ್ಲಿ ಕೂಡಿಹಾಕಿದ ಶಿಕ್ಷಕಿ

- Advertisement -
- Advertisement -

ತಾನು ಹೇಳಿದಾಗ ಹಣ್ಣುಗಳನ್ನು ಕೀಳಲು ನಿರಾಕರಿಸಿದ್ದಕ್ಕಾಗಿ ನಾಲ್ಕನೇ ತರಗತಿಯ ವಿದ್ಯಾರ್ಥಿಯನ್ನು ಆತನ ಪ್ರಾಥಮಿಕ ಶಾಲಾ ಶಿಕ್ಷಕಿಯೊಬ್ಬರು ಥಳಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಉತ್ತರ ಪ್ರದೇಶದ ಬರೇಲಿಯ ಕುಲಾಡಿಯಾದಲ್ಲಿ ಘಟನೆ ನಡೆದಿದ್ದು, “ತಮ್ಮ ಒಂಬತ್ತು ವರ್ಷದ ಮಗನನ್ನು ತರಗತಿಯಲ್ಲಿ ಬಂಧಿಸಿ, ಅವರ ಶಿಕ್ಷಕಿಯು ನಿಷ್ಕರುಣೆಯಿಂದ ಹೊಡೆದಿದ್ದಾರೆ” ಎಂದು ಪೋಷಕರು ಆರೋಪಿಸಿದ್ದಾರೆ.

ವಿವಾದದ ನಂತರ ಬರೇಲಿಯ ಶಿಕ್ಷಣ ಅಧಿಕಾರಿ (ಬಿಎಸ್‌ಎ) ಸೋಮವಾರ ಸಂಜೆ ಶಿಕ್ಷಕಿಯನ್ನು ಅಮಾನತುಗೊಳಿಸಿದ್ದಾರೆ. “ತನ್ನ ಮಗು ಶನಿವಾರ (ಜುಲೈ 20) ಭುಜದ ಮೇಲೆ ಮತ್ತು ಬೆನ್ನಿನಲ್ಲಿ ಹಲವಾರು ಗಾಯಗಳೊಂದಿಗೆ ಮನೆಗೆ ಮರಳಿದ” ಬಾಲಕನ ತಂದೆ ಪೋತಿರಾಮ್ ಪೊಲೀಸರಿಗೆ ತಿಳಿಸಿದ್ದಾರೆ.

“ನನ್ನ ಮಗ ಅಳುತ್ತಿದ್ದನು, ಏಕೆ ಎಂದು ಕೇಳಿದಾಗ, ಜಾಮೂನ್ ಮರ (ನೇರಳೆ) ಹತ್ತಿ ಹಣ್ಣುಗಳನ್ನು ಕೀಳುವಂತೆ ಆತನ ಶಿಕ್ಷಕಿ ರಾಣಿ ಗಂಗ್ವಾರ್ ಮಗನಿಗೆ ಬಲವಂತಪಡಿಸಿದ್ದಾರೆ. ಅವನು ನಿರಾಕರಿಸಿದಾಗ, ಆಕೆ ತರಗತಿಯೊಳಗೆ ಬಂಧಿಸಿ ಸುಮಾರು ಎರಡು ಗಂಟೆಗಳ ಕಾಲ ನಿರಂತರವಾಗಿ ಥಳಿಸಿದರು” ಎಂದು ಪೋಷಕರು ಹೇಳಿದರು.

“ನಾವು ಈ ಬಗ್ಗೆ ಪ್ರಶ್ನಿಸಿದಾಗ, ಗ್ರಾಮದ ಕೆಲವು ‘ಪ್ರಭಾವಿ’ ವ್ಯಕ್ತಿಗಳಿಂದ ರಾಜಿ ಮಾಡಿಕೊಳ್ಳುವಂತೆ ನಮ್ಮನ್ನು ಒತ್ತಾಯಿಸಿದರು. ಅದಕ್ಕೆ ನನ್ನ ಪತಿ ಒಪ್ಪಿದರು. ಆದರೆ, ನಾನು ಪೊಲೀಸರನ್ನು ಸಂಪರ್ಕಿಸಲು ನಿರ್ಧರಿಸಿದೆ. ವೈದ್ಯರು ನನ್ನ ಮಗನ ಮೇಲೆ ಗಾಯಗಳನ್ನು ದೃಢಪಡಿಸಿದ ನಂತರವೇ ಎಫ್ಐಆರ್ ದಾಖಲಿಸಲಾಗಿದೆ. ನನ್ನ ಮಗ ಇನ್ನೂ ಆಘಾತಕ್ಕೊಳಗಾಗಿದ್ದಾನೆ ಮತ್ತು ಶಾಲೆಗೆ ಹೋಗಲು ಹೆದರುತ್ತಾನೆ” ಎಂದು ಬಾಲಕನ ತಾಯಿ ಹೇಳಿದ್ದಾರೆ.

ಬಾಲಕನ ವೈದ್ಯಕೀಯ ಪರೀಕ್ಷೆಯ ನಂತರ ಎಸ್‌ಸಿ/ಎಸ್‌ಟಿ ಕಾಯಿದೆಯಡಿ ಪ್ರಕರಣ ದಾಖಲಿಸಲಾಗಿದೆ. “ವೈದ್ಯಕೀಯ ಪರೀಕ್ಷೆಯು ಮಗುವಿನ ಮೇಲೆ ಗಾಯಗಳನ್ನು ದೃಢಪಡಿಸಿದೆ ಮತ್ತು ನಾವು ಸಾಕ್ಷಿಗಳ ಹೇಳಿಕೆಯನ್ನು ದಾಖಲಿಸುತ್ತಿದ್ದೇವೆ. ನಾವು ಇತರ ಸಿಬ್ಬಂದಿಗಳೊಂದಿಗೆ ಮಾತನಾಡುತ್ತೇವೆ ಮತ್ತು ಕಾನೂನಿನ ಪ್ರಕಾರ ಅಗತ್ಯ ಕ್ರಮ ತೆಗೆದುಕೊಳ್ಳುತ್ತೇವೆ” ಎಂದು ಪೊಲೀಸರು ಹೇಳಿದ್ದಾರೆ. ಆದರೆ, ಆರೋಪಿತ ಶಿಕ್ಷಕಿ ರಾಣಿ ತಾನು ನಿರಪರಾಧಿ ಎಂದು ಹೇಳಿಕೊಂಡಿದ್ದಾರೆ.

ಇದನ್ನೂ ಓದಿ; ಶಂಭು ಗಡಿ ದಿಗ್ಬಂಧನ: ರೈತರು ಮತ್ತು ಸರ್ಕಾರದ ನಡುವೆ ವಿಶ್ವಾಸದ ಕೊರತೆಯಿದೆ ಎಂದ ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. These type of atrocities on sc/St s are routine in Buldozer Baba,s Government.
    Reported cases not even percent.99%
    Cases closed without anybody’s notice.officers themselves currupt and they are yeilding to local influenced gundas. Government will never take any serious action against culprits.

LEAVE A REPLY

Please enter your comment!
Please enter your name here

- Advertisment -

ಲೈಂಗಿಕ ದೌರ್ಜನ್ಯ: ಪಾಲಕ್ಕಾಡ್ ಶಾಸಕ ರಾಹುಲ್ ಮಾಂಕೂಟತ್ತಿಲ್ ವಿರುದ್ಧ ದೂರು ದಾಖಲು

ಪಾಲಕ್ಕಾಡ್ ಶಾಸಕ ರಾಹುಲ್ ಮಾಂಕೂಟತ್ತಿಲ್ ವಿರುದ್ಧ ಮಹಿಳೆಯೊಬ್ಬರು ಲೈಂಗಿಕ ದೌರ್ಜನ್ಯ ಎಸಗಿ ಗರ್ಭಪಾತ ಮಾಡಿಸಲು ಒತ್ತಾಯಿಸಿದ್ದಾರೆ ಎಂದು ಆರೋಪಿಸಿದ ನಂತರ ಕೇರಳ ಪೊಲೀಸರು ಶುಕ್ರವಾರ ಪ್ರಕರಣ ದಾಖಲಿಸಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ...

ಉತ್ತರ ಪ್ರದೇಶ-ಮಹಾರಾಷ್ಟ್ರದಲ್ಲಿ ಜನನ ಪ್ರಮಾಣಪತ್ರಕ್ಕೆ ಆಧಾರ್ ಮಾನ್ಯವಲ್ಲ: ಹೊಸ ಮಾರ್ಗಸೂಚಿ

ಜನನ ಪ್ರಮಾಣಪತ್ರಗಳನ್ನು ನೀಡಲು ಆಧಾರ್ ಕಾರ್ಡ್‌ಗಳನ್ನು ಇನ್ನು ಮುಂದೆ ಮಾನ್ಯ ಪುರಾವೆಯಾಗಿ ಅಥವಾ ಜನ್ಮ ದಿನಾಂಕದ ಪುರಾವೆಯಾಗಿ ಸ್ವೀಕರಿಸಲಾಗುವುದಿಲ್ಲ ಎಂದು ಉತ್ತರ ಪ್ರದೇಶ ಮತ್ತು ಮಹಾರಾಷ್ಟ್ರ ಘೋಷಿಸಿವೆ. ಈ ಉದ್ದೇಶಕ್ಕಾಗಿ ಆಧಾರ್ ಬಳಸುವುದನ್ನು...

ಉತ್ತರಾಖಂಡ| 150 ವರ್ಷಗಳ ಜಾತಿ ತಡೆಗೋಡೆ ಮುರಿದು ತಮ್ಮದೇ ಮುಖ್ಯಸ್ಥರ ಆಯ್ಕೆ ಮಾಡಿಕೊಂಡ ದಲಿತರು

ಉತ್ತರಾಖಂಡದ ದೂರದ ಜೌನ್ಸರ್-ಬವಾರ್ ಪ್ರದೇಶದ ಬಿಜ್ನು ಬಿಜ್ನಾಡ್ ಗ್ರಾಮದ ದಲಿತ ಸಮುದಾಯವು ಸುಮಾರು 150 ವರ್ಷಗಳಲ್ಲಿ ಮೊದಲ ಬಾರಿಗೆ ತನ್ನದೇ ಆದ 'ಸೈನಾ' (ಗ್ರಾಮದ ಮುಖ್ಯಸ್ಥ) ಆಯ್ಕೆ ಮಾಡುವ ಮೂಲಕ ಐತಿಹಾಸಿಕ ಹೆಜ್ಜೆ...

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....