Homeದಲಿತ್ ಫೈಲ್ಸ್ಉತ್ತರ ಪ್ರದೇಶ: ದಲಿತ ಬಾಲಕಿಯರನ್ನು ಶಾಲಾ ಸಮವಸ್ತ್ರ ತೆಗೆಯುವಂತೆ ಒತ್ತಾಯಿಸಿದ ಶಿಕ್ಷಕರು

ಉತ್ತರ ಪ್ರದೇಶ: ದಲಿತ ಬಾಲಕಿಯರನ್ನು ಶಾಲಾ ಸಮವಸ್ತ್ರ ತೆಗೆಯುವಂತೆ ಒತ್ತಾಯಿಸಿದ ಶಿಕ್ಷಕರು

- Advertisement -
- Advertisement -

ಉತ್ತರ ಪ್ರದೇಶದ ಹಾಪುರ್‌ನಲ್ಲಿರುವ ಸರ್ಕಾರಿ ಪ್ರಾಥಮಿಕ ಶಾಲೆಯ ಇಬ್ಬರು ದಲಿತ ವಿದ್ಯಾರ್ಥಿನಿಯರ ಸಮವಸ್ತ್ರವನ್ನು ತೆಗೆಯುವಂತೆ ಒತ್ತಾಯಿಸಿದ ಇಬ್ಬರು ಶಿಕ್ಷಕರ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಮಾಡಿದೆ. ಜುಲೈ 11 ರಂದು ಶಾಲಾ ಸಮವಸ್ತ್ರದಲ್ಲಿರುವ ವಿದ್ಯಾರ್ಥಿಗಳ ಛಾಯಾಚಿತ್ರಗಳನ್ನು ಶಿಕ್ಷಕರು ಕ್ಲಿಕ್ಕಿಸುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ.

“ಸಾಮಾನ್ಯ ಬಟ್ಟೆಯಲ್ಲಿ ಛಾಯಾಚಿತ್ರಕ್ಕಾಗಿ ಬಂದ ಇತರ ಇಬ್ಬರು ಹುಡುಗಿಯರಿಗೆ ನೀಡಲು ಶಿಕ್ಷಕರು ತಮ್ಮ ಸಮವಸ್ತ್ರವನ್ನು ತೆಗೆದುಹಾಕಲು ಹುಡುಗಿಯರನ್ನು ಒತ್ತಾಯಿಸಿದ್ದಾರೆ. ಹುಡುಗಿಯರು ಇದಕ್ಕೆ ನಿರಾಕರಿಸಿದಾಗ, ಅವರನ್ನು ಥಳಿಸಿದ್ದಾರೆ. ಅಲ್ಲದೆ ಶಿಕ್ಷಕರು ಬಲವಂತವಾಗಿ ಅವರ ಸಮವಸ್ತ್ರವನ್ನು ತೆಗೆದುಹಾಕಿದ್ದಾರೆ. ಅವರ ಜಾತಿಯ ಕಾರಣದಿಂದ ಅವರ ವಿರುದ್ಧ ತಾರತಮ್ಯ ಮಾಡಿದ್ದಾರೆ” ಎಂದು ಬಾಲಕಿಯರ ಪೋಷಕರು ಆರೋಪಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಶಿಕ್ಷಕರು ಶಾಲಾ ಸಮವಸ್ತ್ರದಲ್ಲಿರುವ ವಿದ್ಯಾರ್ಥಿಗಳ ಫೋಟೋಗಳನ್ನು ಕ್ಲಿಕ್ಕಿಸುತ್ತಿದ್ದರು. ನನ್ನ ಮಗಳ ಸಮವಸ್ತ್ರವನ್ನು ತೆಗೆದು ಬೇರೆ ಹುಡುಗಿಗೆ ಕೊಡುವಂತೆ ಕೇಳಲಾಯಿತು. ನನ್ನ ಮಗಳು ಅದನ್ನು ನಿರಾಕರಿಸಿದಾಗ, ಅವರು ಅವಳನ್ನು ಹೊಡೆದು ಬಲವಂತವಾಗಿ ಅವಳ ಸಮವಸ್ತ್ರವನ್ನು ತೆಗೆದುಹಾಕಿದರು. ಈ ಬಗ್ಗೆ ನಾನು ಶಾಲೆಗೆ ದೂರು ನೀಡಿದರೂ, ಯಾಕೆ ಹೀಗೆ ಮಾಡಲಾಗಿದೆ ಎಂದು ನನಗೆ ಉತ್ತರ ಸಿಗಲಿಲ್ಲ” ಎಂದು ಬಾಲಕಿಯರೊಬ್ಬರ ತಾಯಿ ಇಂಡಿಯನ್ ಎಕ್ಸ್‌ಪ್ರೆಸ್‌ ತಿಳಿಸಿದ್ದಾಗಿ ವರದಿ ಹೇಳಿದೆ.

ಮತ್ತೊಬ್ಬ ಬಾಲಕಿಯ ತಂದೆ ಜಾತಿ ವಿರೋಧಿ ಸಂಘಟನೆ ಶೋಷಿತ್ ಕ್ರಾಂತಿ ದಳದೊಂದಿಗೆ ವಿಷಯ ಪ್ರಸ್ತಾಪಿಸಿದಾಗ, ಅದರ ಅಧ್ಯಕ್ಷ ರವಿಕಾಂತ್ ಅವರು ಹಾಪುರ್‌ನ ಮೂಲಭೂತ ಶಿಕ್ಷಾ ಅಧಿಕಾರಿಯೊಂದಿಗೆ ಘಟನೆಯ ಬಗ್ಗೆ ದೂರು ನೀಡಿದ್ದಾರೆ.

ಇದನ್ನೂ ಓದಿ: ‘ನೀನು ಕೂಲಿ ಕೆಲಸ ಮಾಡಬೇಕು, ಶಾಲೆಯಲ್ಲಿ ಅಡುಗೆಯನ್ನಲ್ಲ’: 6 ತಿಂಗಳಾದರೂ ದಲಿತ ಮಹಿಳೆಗೆ ನಿಲ್ಲದ ಕಿರುಕುಳ

“ಇಬ್ಬರು ಬಾಲಕಿಯರು ಪರಿಶಿಷ್ಟ ಜಾತಿಗೆ ಸೇರಿದವರಾಗಿರುವುದರಿಂದ ಶಿಕ್ಷಕರು ಅವರನ್ನು ಉದ್ದೇಶಪೂರ್ವವಾಗಿ ಹೀಗೆ ನಡೆಸಿಕೊಂಡಿದ್ದಾರೆ. ಅವರ ತಂದೆ ನನ್ನನ್ನು ಸಂಪರ್ಕಿಸಿದಾಗ, ನಾನು ಶಿಕ್ಷಣ ಇಲಾಖೆಯೊಂದಿಗೆ ವಿಷಯವನ್ನು ಪ್ರಸ್ತಾಪಿಸಿ, ಶಿಕ್ಷಕರನ್ನು ಅಮಾನತುಗೊಳಿಸುವಂತೆ ವಿನಂತಿಸಿದೆ” ಎಂದು ರವಿಕಾಂತ್ ಹೇಳಿದ್ದಾರೆ.

ವಿದ್ಯಾರ್ಥಿನಿಯರ ಮೇಲೆ ತಾರತಮ್ಯದ ನಡೆದಿದೆ ಎಂಬ ಆರೋಪವನ್ನು ಶಿಕ್ಷಕರೊಬ್ಬರು ನಿರಾಕರಿಸಿದ್ದು, ಪೋಷಕರು ಆರೋಪಿಸಿದಂತೆ ಹುಡುಗಿಯರನ್ನು ಥಳಿಸಲಿಲ್ಲ ಅಥವಾ ಬಲವಂತ ಮಾಡಲಿಲ್ಲ ಎಂದು ಹೇಳಿದ್ದಾರೆ.

“ವಿದ್ಯಾರ್ಥಿಗಳು ಸಂಪೂರ್ಣ ಶಾಲಾ ಸಮವಸ್ತ್ರವನ್ನು ಧರಿಸಿ ಶಾಲೆಗೆ ಬರಲು ಸೂಚಿಸಲಾಗಿತ್ತು. ಜುಲೈ 11 ರಂದು ವಿದ್ಯಾರ್ಥಿಗಳ ಛಾಯಾಚಿತ್ರಗಳನ್ನು ಕ್ಲಿಕ್ಕಿಸುತ್ತಿದ್ದಾಗ, ಸಮವಸ್ತ್ರದಲ್ಲಿ ಬರದ ಕೆಲವು ವಿದ್ಯಾರ್ಥಿಗಳು ತಮ್ಮ ಸಹವರ್ತಿ ವಿದ್ಯಾರ್ಥಿಗಳಿಗೆ ಛಾಯಾಚಿತ್ರಕ್ಕಾಗಿ ಸಮವಸ್ತ್ರವನ್ನು ಕೊಡುವಂತೆ ಕೇಳಿದರು. ವಾಸ್ತವವಾಗಿ, ಈ ರೀತಿ ನಡೆದಿರುವುದು ಕೂಡಾ ನನಗೆ ತಿಳಿದಿರಲಿಲ್ಲ. ಜುಲೈ 12 ರಂದು ಇಬ್ಬರು ಹುಡುಗಿಯರ ಪೋಷಕರು ಶಾಲೆಗೆ ಬಂದು ನಮ್ಮನ್ನು ಪ್ರಶ್ನಿಸಲು ಪ್ರಾರಂಭಿಸಿದಾಗ ಈ ಬಗ್ಗೆ ನನಗೆ ತಿಳಿದು ಬಂತು” ಎಂದು ಶಿಕ್ಷಕಿ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದಾರೆ.

ಇದನ್ನೂ ಓದಿ: ಮಾತು ಮರೆತ ಭಾರತ; ಚುಂಡೂರು ಫೈಲ್ಸ್: ಅಟ್ರಾಸಿಟಿ ಕಾಯ್ದೆಯ ಹೊಸ್ತಿಲಲ್ಲಿ ದಲಿತರ ನರಮೇಧ

ಭಾರತೀಯ ದಂಡ ಸಂಹಿತೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಶಿಕ್ಷಕರ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ. ಘಟನೆಯ ನಂತರ ಶಿಕ್ಷರನ್ನು ಅಮಾನತು ಮಾಡಿದರೂ ಅವರು ಶಾಲೆಗೆ ಬರುತ್ತಿದ್ದಾರೆ ಎಂದು ಪೋಷಕರು ಹೇಳಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಶಿಕ್ಷಕರೊಬ್ಬರು, ಶಿಕ್ಷಕಿಯಾಗಿ ಅವರನ್ನು ಜವಾಬ್ದಾರಿಯಿಂದ ಅಮಾನತುಗೊಳಿಸಿದ್ದರೂ, ಶಾಲೆಯ ಕೀಲಿಗಳ ಉಸ್ತುವಾರಿ ವಹಿಸಿದ್ದರಿಂದ ಶಾಲೆಗೆ ಬರುವಂತೆ ಹೇಳಲಾಗಿದೆ ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...