Homeದಲಿತ್ ಫೈಲ್ಸ್ಉತ್ತರ ಪ್ರದೇಶ: ದಲಿತ ಬಾಲಕಿಯರನ್ನು ಶಾಲಾ ಸಮವಸ್ತ್ರ ತೆಗೆಯುವಂತೆ ಒತ್ತಾಯಿಸಿದ ಶಿಕ್ಷಕರು

ಉತ್ತರ ಪ್ರದೇಶ: ದಲಿತ ಬಾಲಕಿಯರನ್ನು ಶಾಲಾ ಸಮವಸ್ತ್ರ ತೆಗೆಯುವಂತೆ ಒತ್ತಾಯಿಸಿದ ಶಿಕ್ಷಕರು

- Advertisement -
- Advertisement -

ಉತ್ತರ ಪ್ರದೇಶದ ಹಾಪುರ್‌ನಲ್ಲಿರುವ ಸರ್ಕಾರಿ ಪ್ರಾಥಮಿಕ ಶಾಲೆಯ ಇಬ್ಬರು ದಲಿತ ವಿದ್ಯಾರ್ಥಿನಿಯರ ಸಮವಸ್ತ್ರವನ್ನು ತೆಗೆಯುವಂತೆ ಒತ್ತಾಯಿಸಿದ ಇಬ್ಬರು ಶಿಕ್ಷಕರ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಮಾಡಿದೆ. ಜುಲೈ 11 ರಂದು ಶಾಲಾ ಸಮವಸ್ತ್ರದಲ್ಲಿರುವ ವಿದ್ಯಾರ್ಥಿಗಳ ಛಾಯಾಚಿತ್ರಗಳನ್ನು ಶಿಕ್ಷಕರು ಕ್ಲಿಕ್ಕಿಸುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ.

“ಸಾಮಾನ್ಯ ಬಟ್ಟೆಯಲ್ಲಿ ಛಾಯಾಚಿತ್ರಕ್ಕಾಗಿ ಬಂದ ಇತರ ಇಬ್ಬರು ಹುಡುಗಿಯರಿಗೆ ನೀಡಲು ಶಿಕ್ಷಕರು ತಮ್ಮ ಸಮವಸ್ತ್ರವನ್ನು ತೆಗೆದುಹಾಕಲು ಹುಡುಗಿಯರನ್ನು ಒತ್ತಾಯಿಸಿದ್ದಾರೆ. ಹುಡುಗಿಯರು ಇದಕ್ಕೆ ನಿರಾಕರಿಸಿದಾಗ, ಅವರನ್ನು ಥಳಿಸಿದ್ದಾರೆ. ಅಲ್ಲದೆ ಶಿಕ್ಷಕರು ಬಲವಂತವಾಗಿ ಅವರ ಸಮವಸ್ತ್ರವನ್ನು ತೆಗೆದುಹಾಕಿದ್ದಾರೆ. ಅವರ ಜಾತಿಯ ಕಾರಣದಿಂದ ಅವರ ವಿರುದ್ಧ ತಾರತಮ್ಯ ಮಾಡಿದ್ದಾರೆ” ಎಂದು ಬಾಲಕಿಯರ ಪೋಷಕರು ಆರೋಪಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಶಿಕ್ಷಕರು ಶಾಲಾ ಸಮವಸ್ತ್ರದಲ್ಲಿರುವ ವಿದ್ಯಾರ್ಥಿಗಳ ಫೋಟೋಗಳನ್ನು ಕ್ಲಿಕ್ಕಿಸುತ್ತಿದ್ದರು. ನನ್ನ ಮಗಳ ಸಮವಸ್ತ್ರವನ್ನು ತೆಗೆದು ಬೇರೆ ಹುಡುಗಿಗೆ ಕೊಡುವಂತೆ ಕೇಳಲಾಯಿತು. ನನ್ನ ಮಗಳು ಅದನ್ನು ನಿರಾಕರಿಸಿದಾಗ, ಅವರು ಅವಳನ್ನು ಹೊಡೆದು ಬಲವಂತವಾಗಿ ಅವಳ ಸಮವಸ್ತ್ರವನ್ನು ತೆಗೆದುಹಾಕಿದರು. ಈ ಬಗ್ಗೆ ನಾನು ಶಾಲೆಗೆ ದೂರು ನೀಡಿದರೂ, ಯಾಕೆ ಹೀಗೆ ಮಾಡಲಾಗಿದೆ ಎಂದು ನನಗೆ ಉತ್ತರ ಸಿಗಲಿಲ್ಲ” ಎಂದು ಬಾಲಕಿಯರೊಬ್ಬರ ತಾಯಿ ಇಂಡಿಯನ್ ಎಕ್ಸ್‌ಪ್ರೆಸ್‌ ತಿಳಿಸಿದ್ದಾಗಿ ವರದಿ ಹೇಳಿದೆ.

ಮತ್ತೊಬ್ಬ ಬಾಲಕಿಯ ತಂದೆ ಜಾತಿ ವಿರೋಧಿ ಸಂಘಟನೆ ಶೋಷಿತ್ ಕ್ರಾಂತಿ ದಳದೊಂದಿಗೆ ವಿಷಯ ಪ್ರಸ್ತಾಪಿಸಿದಾಗ, ಅದರ ಅಧ್ಯಕ್ಷ ರವಿಕಾಂತ್ ಅವರು ಹಾಪುರ್‌ನ ಮೂಲಭೂತ ಶಿಕ್ಷಾ ಅಧಿಕಾರಿಯೊಂದಿಗೆ ಘಟನೆಯ ಬಗ್ಗೆ ದೂರು ನೀಡಿದ್ದಾರೆ.

ಇದನ್ನೂ ಓದಿ: ‘ನೀನು ಕೂಲಿ ಕೆಲಸ ಮಾಡಬೇಕು, ಶಾಲೆಯಲ್ಲಿ ಅಡುಗೆಯನ್ನಲ್ಲ’: 6 ತಿಂಗಳಾದರೂ ದಲಿತ ಮಹಿಳೆಗೆ ನಿಲ್ಲದ ಕಿರುಕುಳ

“ಇಬ್ಬರು ಬಾಲಕಿಯರು ಪರಿಶಿಷ್ಟ ಜಾತಿಗೆ ಸೇರಿದವರಾಗಿರುವುದರಿಂದ ಶಿಕ್ಷಕರು ಅವರನ್ನು ಉದ್ದೇಶಪೂರ್ವವಾಗಿ ಹೀಗೆ ನಡೆಸಿಕೊಂಡಿದ್ದಾರೆ. ಅವರ ತಂದೆ ನನ್ನನ್ನು ಸಂಪರ್ಕಿಸಿದಾಗ, ನಾನು ಶಿಕ್ಷಣ ಇಲಾಖೆಯೊಂದಿಗೆ ವಿಷಯವನ್ನು ಪ್ರಸ್ತಾಪಿಸಿ, ಶಿಕ್ಷಕರನ್ನು ಅಮಾನತುಗೊಳಿಸುವಂತೆ ವಿನಂತಿಸಿದೆ” ಎಂದು ರವಿಕಾಂತ್ ಹೇಳಿದ್ದಾರೆ.

ವಿದ್ಯಾರ್ಥಿನಿಯರ ಮೇಲೆ ತಾರತಮ್ಯದ ನಡೆದಿದೆ ಎಂಬ ಆರೋಪವನ್ನು ಶಿಕ್ಷಕರೊಬ್ಬರು ನಿರಾಕರಿಸಿದ್ದು, ಪೋಷಕರು ಆರೋಪಿಸಿದಂತೆ ಹುಡುಗಿಯರನ್ನು ಥಳಿಸಲಿಲ್ಲ ಅಥವಾ ಬಲವಂತ ಮಾಡಲಿಲ್ಲ ಎಂದು ಹೇಳಿದ್ದಾರೆ.

“ವಿದ್ಯಾರ್ಥಿಗಳು ಸಂಪೂರ್ಣ ಶಾಲಾ ಸಮವಸ್ತ್ರವನ್ನು ಧರಿಸಿ ಶಾಲೆಗೆ ಬರಲು ಸೂಚಿಸಲಾಗಿತ್ತು. ಜುಲೈ 11 ರಂದು ವಿದ್ಯಾರ್ಥಿಗಳ ಛಾಯಾಚಿತ್ರಗಳನ್ನು ಕ್ಲಿಕ್ಕಿಸುತ್ತಿದ್ದಾಗ, ಸಮವಸ್ತ್ರದಲ್ಲಿ ಬರದ ಕೆಲವು ವಿದ್ಯಾರ್ಥಿಗಳು ತಮ್ಮ ಸಹವರ್ತಿ ವಿದ್ಯಾರ್ಥಿಗಳಿಗೆ ಛಾಯಾಚಿತ್ರಕ್ಕಾಗಿ ಸಮವಸ್ತ್ರವನ್ನು ಕೊಡುವಂತೆ ಕೇಳಿದರು. ವಾಸ್ತವವಾಗಿ, ಈ ರೀತಿ ನಡೆದಿರುವುದು ಕೂಡಾ ನನಗೆ ತಿಳಿದಿರಲಿಲ್ಲ. ಜುಲೈ 12 ರಂದು ಇಬ್ಬರು ಹುಡುಗಿಯರ ಪೋಷಕರು ಶಾಲೆಗೆ ಬಂದು ನಮ್ಮನ್ನು ಪ್ರಶ್ನಿಸಲು ಪ್ರಾರಂಭಿಸಿದಾಗ ಈ ಬಗ್ಗೆ ನನಗೆ ತಿಳಿದು ಬಂತು” ಎಂದು ಶಿಕ್ಷಕಿ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದಾರೆ.

ಇದನ್ನೂ ಓದಿ: ಮಾತು ಮರೆತ ಭಾರತ; ಚುಂಡೂರು ಫೈಲ್ಸ್: ಅಟ್ರಾಸಿಟಿ ಕಾಯ್ದೆಯ ಹೊಸ್ತಿಲಲ್ಲಿ ದಲಿತರ ನರಮೇಧ

ಭಾರತೀಯ ದಂಡ ಸಂಹಿತೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಶಿಕ್ಷಕರ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ. ಘಟನೆಯ ನಂತರ ಶಿಕ್ಷರನ್ನು ಅಮಾನತು ಮಾಡಿದರೂ ಅವರು ಶಾಲೆಗೆ ಬರುತ್ತಿದ್ದಾರೆ ಎಂದು ಪೋಷಕರು ಹೇಳಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಶಿಕ್ಷಕರೊಬ್ಬರು, ಶಿಕ್ಷಕಿಯಾಗಿ ಅವರನ್ನು ಜವಾಬ್ದಾರಿಯಿಂದ ಅಮಾನತುಗೊಳಿಸಿದ್ದರೂ, ಶಾಲೆಯ ಕೀಲಿಗಳ ಉಸ್ತುವಾರಿ ವಹಿಸಿದ್ದರಿಂದ ಶಾಲೆಗೆ ಬರುವಂತೆ ಹೇಳಲಾಗಿದೆ ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...