Homeದಲಿತ್ ಫೈಲ್ಸ್ಉತ್ತರ ಪ್ರದೇಶ: ದಲಿತ ಬಾಲಕಿಯರನ್ನು ಶಾಲಾ ಸಮವಸ್ತ್ರ ತೆಗೆಯುವಂತೆ ಒತ್ತಾಯಿಸಿದ ಶಿಕ್ಷಕರು

ಉತ್ತರ ಪ್ರದೇಶ: ದಲಿತ ಬಾಲಕಿಯರನ್ನು ಶಾಲಾ ಸಮವಸ್ತ್ರ ತೆಗೆಯುವಂತೆ ಒತ್ತಾಯಿಸಿದ ಶಿಕ್ಷಕರು

- Advertisement -
- Advertisement -

ಉತ್ತರ ಪ್ರದೇಶದ ಹಾಪುರ್‌ನಲ್ಲಿರುವ ಸರ್ಕಾರಿ ಪ್ರಾಥಮಿಕ ಶಾಲೆಯ ಇಬ್ಬರು ದಲಿತ ವಿದ್ಯಾರ್ಥಿನಿಯರ ಸಮವಸ್ತ್ರವನ್ನು ತೆಗೆಯುವಂತೆ ಒತ್ತಾಯಿಸಿದ ಇಬ್ಬರು ಶಿಕ್ಷಕರ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಮಾಡಿದೆ. ಜುಲೈ 11 ರಂದು ಶಾಲಾ ಸಮವಸ್ತ್ರದಲ್ಲಿರುವ ವಿದ್ಯಾರ್ಥಿಗಳ ಛಾಯಾಚಿತ್ರಗಳನ್ನು ಶಿಕ್ಷಕರು ಕ್ಲಿಕ್ಕಿಸುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ.

“ಸಾಮಾನ್ಯ ಬಟ್ಟೆಯಲ್ಲಿ ಛಾಯಾಚಿತ್ರಕ್ಕಾಗಿ ಬಂದ ಇತರ ಇಬ್ಬರು ಹುಡುಗಿಯರಿಗೆ ನೀಡಲು ಶಿಕ್ಷಕರು ತಮ್ಮ ಸಮವಸ್ತ್ರವನ್ನು ತೆಗೆದುಹಾಕಲು ಹುಡುಗಿಯರನ್ನು ಒತ್ತಾಯಿಸಿದ್ದಾರೆ. ಹುಡುಗಿಯರು ಇದಕ್ಕೆ ನಿರಾಕರಿಸಿದಾಗ, ಅವರನ್ನು ಥಳಿಸಿದ್ದಾರೆ. ಅಲ್ಲದೆ ಶಿಕ್ಷಕರು ಬಲವಂತವಾಗಿ ಅವರ ಸಮವಸ್ತ್ರವನ್ನು ತೆಗೆದುಹಾಕಿದ್ದಾರೆ. ಅವರ ಜಾತಿಯ ಕಾರಣದಿಂದ ಅವರ ವಿರುದ್ಧ ತಾರತಮ್ಯ ಮಾಡಿದ್ದಾರೆ” ಎಂದು ಬಾಲಕಿಯರ ಪೋಷಕರು ಆರೋಪಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಶಿಕ್ಷಕರು ಶಾಲಾ ಸಮವಸ್ತ್ರದಲ್ಲಿರುವ ವಿದ್ಯಾರ್ಥಿಗಳ ಫೋಟೋಗಳನ್ನು ಕ್ಲಿಕ್ಕಿಸುತ್ತಿದ್ದರು. ನನ್ನ ಮಗಳ ಸಮವಸ್ತ್ರವನ್ನು ತೆಗೆದು ಬೇರೆ ಹುಡುಗಿಗೆ ಕೊಡುವಂತೆ ಕೇಳಲಾಯಿತು. ನನ್ನ ಮಗಳು ಅದನ್ನು ನಿರಾಕರಿಸಿದಾಗ, ಅವರು ಅವಳನ್ನು ಹೊಡೆದು ಬಲವಂತವಾಗಿ ಅವಳ ಸಮವಸ್ತ್ರವನ್ನು ತೆಗೆದುಹಾಕಿದರು. ಈ ಬಗ್ಗೆ ನಾನು ಶಾಲೆಗೆ ದೂರು ನೀಡಿದರೂ, ಯಾಕೆ ಹೀಗೆ ಮಾಡಲಾಗಿದೆ ಎಂದು ನನಗೆ ಉತ್ತರ ಸಿಗಲಿಲ್ಲ” ಎಂದು ಬಾಲಕಿಯರೊಬ್ಬರ ತಾಯಿ ಇಂಡಿಯನ್ ಎಕ್ಸ್‌ಪ್ರೆಸ್‌ ತಿಳಿಸಿದ್ದಾಗಿ ವರದಿ ಹೇಳಿದೆ.

ಮತ್ತೊಬ್ಬ ಬಾಲಕಿಯ ತಂದೆ ಜಾತಿ ವಿರೋಧಿ ಸಂಘಟನೆ ಶೋಷಿತ್ ಕ್ರಾಂತಿ ದಳದೊಂದಿಗೆ ವಿಷಯ ಪ್ರಸ್ತಾಪಿಸಿದಾಗ, ಅದರ ಅಧ್ಯಕ್ಷ ರವಿಕಾಂತ್ ಅವರು ಹಾಪುರ್‌ನ ಮೂಲಭೂತ ಶಿಕ್ಷಾ ಅಧಿಕಾರಿಯೊಂದಿಗೆ ಘಟನೆಯ ಬಗ್ಗೆ ದೂರು ನೀಡಿದ್ದಾರೆ.

ಇದನ್ನೂ ಓದಿ: ‘ನೀನು ಕೂಲಿ ಕೆಲಸ ಮಾಡಬೇಕು, ಶಾಲೆಯಲ್ಲಿ ಅಡುಗೆಯನ್ನಲ್ಲ’: 6 ತಿಂಗಳಾದರೂ ದಲಿತ ಮಹಿಳೆಗೆ ನಿಲ್ಲದ ಕಿರುಕುಳ

“ಇಬ್ಬರು ಬಾಲಕಿಯರು ಪರಿಶಿಷ್ಟ ಜಾತಿಗೆ ಸೇರಿದವರಾಗಿರುವುದರಿಂದ ಶಿಕ್ಷಕರು ಅವರನ್ನು ಉದ್ದೇಶಪೂರ್ವವಾಗಿ ಹೀಗೆ ನಡೆಸಿಕೊಂಡಿದ್ದಾರೆ. ಅವರ ತಂದೆ ನನ್ನನ್ನು ಸಂಪರ್ಕಿಸಿದಾಗ, ನಾನು ಶಿಕ್ಷಣ ಇಲಾಖೆಯೊಂದಿಗೆ ವಿಷಯವನ್ನು ಪ್ರಸ್ತಾಪಿಸಿ, ಶಿಕ್ಷಕರನ್ನು ಅಮಾನತುಗೊಳಿಸುವಂತೆ ವಿನಂತಿಸಿದೆ” ಎಂದು ರವಿಕಾಂತ್ ಹೇಳಿದ್ದಾರೆ.

ವಿದ್ಯಾರ್ಥಿನಿಯರ ಮೇಲೆ ತಾರತಮ್ಯದ ನಡೆದಿದೆ ಎಂಬ ಆರೋಪವನ್ನು ಶಿಕ್ಷಕರೊಬ್ಬರು ನಿರಾಕರಿಸಿದ್ದು, ಪೋಷಕರು ಆರೋಪಿಸಿದಂತೆ ಹುಡುಗಿಯರನ್ನು ಥಳಿಸಲಿಲ್ಲ ಅಥವಾ ಬಲವಂತ ಮಾಡಲಿಲ್ಲ ಎಂದು ಹೇಳಿದ್ದಾರೆ.

“ವಿದ್ಯಾರ್ಥಿಗಳು ಸಂಪೂರ್ಣ ಶಾಲಾ ಸಮವಸ್ತ್ರವನ್ನು ಧರಿಸಿ ಶಾಲೆಗೆ ಬರಲು ಸೂಚಿಸಲಾಗಿತ್ತು. ಜುಲೈ 11 ರಂದು ವಿದ್ಯಾರ್ಥಿಗಳ ಛಾಯಾಚಿತ್ರಗಳನ್ನು ಕ್ಲಿಕ್ಕಿಸುತ್ತಿದ್ದಾಗ, ಸಮವಸ್ತ್ರದಲ್ಲಿ ಬರದ ಕೆಲವು ವಿದ್ಯಾರ್ಥಿಗಳು ತಮ್ಮ ಸಹವರ್ತಿ ವಿದ್ಯಾರ್ಥಿಗಳಿಗೆ ಛಾಯಾಚಿತ್ರಕ್ಕಾಗಿ ಸಮವಸ್ತ್ರವನ್ನು ಕೊಡುವಂತೆ ಕೇಳಿದರು. ವಾಸ್ತವವಾಗಿ, ಈ ರೀತಿ ನಡೆದಿರುವುದು ಕೂಡಾ ನನಗೆ ತಿಳಿದಿರಲಿಲ್ಲ. ಜುಲೈ 12 ರಂದು ಇಬ್ಬರು ಹುಡುಗಿಯರ ಪೋಷಕರು ಶಾಲೆಗೆ ಬಂದು ನಮ್ಮನ್ನು ಪ್ರಶ್ನಿಸಲು ಪ್ರಾರಂಭಿಸಿದಾಗ ಈ ಬಗ್ಗೆ ನನಗೆ ತಿಳಿದು ಬಂತು” ಎಂದು ಶಿಕ್ಷಕಿ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದಾರೆ.

ಇದನ್ನೂ ಓದಿ: ಮಾತು ಮರೆತ ಭಾರತ; ಚುಂಡೂರು ಫೈಲ್ಸ್: ಅಟ್ರಾಸಿಟಿ ಕಾಯ್ದೆಯ ಹೊಸ್ತಿಲಲ್ಲಿ ದಲಿತರ ನರಮೇಧ

ಭಾರತೀಯ ದಂಡ ಸಂಹಿತೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಶಿಕ್ಷಕರ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ. ಘಟನೆಯ ನಂತರ ಶಿಕ್ಷರನ್ನು ಅಮಾನತು ಮಾಡಿದರೂ ಅವರು ಶಾಲೆಗೆ ಬರುತ್ತಿದ್ದಾರೆ ಎಂದು ಪೋಷಕರು ಹೇಳಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಶಿಕ್ಷಕರೊಬ್ಬರು, ಶಿಕ್ಷಕಿಯಾಗಿ ಅವರನ್ನು ಜವಾಬ್ದಾರಿಯಿಂದ ಅಮಾನತುಗೊಳಿಸಿದ್ದರೂ, ಶಾಲೆಯ ಕೀಲಿಗಳ ಉಸ್ತುವಾರಿ ವಹಿಸಿದ್ದರಿಂದ ಶಾಲೆಗೆ ಬರುವಂತೆ ಹೇಳಲಾಗಿದೆ ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...