Homeದಲಿತ್ ಫೈಲ್ಸ್ಉತ್ತರ ಪ್ರದೇಶ: ದಲಿತ ಬಾಲಕಿಯರನ್ನು ಶಾಲಾ ಸಮವಸ್ತ್ರ ತೆಗೆಯುವಂತೆ ಒತ್ತಾಯಿಸಿದ ಶಿಕ್ಷಕರು

ಉತ್ತರ ಪ್ರದೇಶ: ದಲಿತ ಬಾಲಕಿಯರನ್ನು ಶಾಲಾ ಸಮವಸ್ತ್ರ ತೆಗೆಯುವಂತೆ ಒತ್ತಾಯಿಸಿದ ಶಿಕ್ಷಕರು

- Advertisement -
- Advertisement -

ಉತ್ತರ ಪ್ರದೇಶದ ಹಾಪುರ್‌ನಲ್ಲಿರುವ ಸರ್ಕಾರಿ ಪ್ರಾಥಮಿಕ ಶಾಲೆಯ ಇಬ್ಬರು ದಲಿತ ವಿದ್ಯಾರ್ಥಿನಿಯರ ಸಮವಸ್ತ್ರವನ್ನು ತೆಗೆಯುವಂತೆ ಒತ್ತಾಯಿಸಿದ ಇಬ್ಬರು ಶಿಕ್ಷಕರ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಮಾಡಿದೆ. ಜುಲೈ 11 ರಂದು ಶಾಲಾ ಸಮವಸ್ತ್ರದಲ್ಲಿರುವ ವಿದ್ಯಾರ್ಥಿಗಳ ಛಾಯಾಚಿತ್ರಗಳನ್ನು ಶಿಕ್ಷಕರು ಕ್ಲಿಕ್ಕಿಸುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ.

“ಸಾಮಾನ್ಯ ಬಟ್ಟೆಯಲ್ಲಿ ಛಾಯಾಚಿತ್ರಕ್ಕಾಗಿ ಬಂದ ಇತರ ಇಬ್ಬರು ಹುಡುಗಿಯರಿಗೆ ನೀಡಲು ಶಿಕ್ಷಕರು ತಮ್ಮ ಸಮವಸ್ತ್ರವನ್ನು ತೆಗೆದುಹಾಕಲು ಹುಡುಗಿಯರನ್ನು ಒತ್ತಾಯಿಸಿದ್ದಾರೆ. ಹುಡುಗಿಯರು ಇದಕ್ಕೆ ನಿರಾಕರಿಸಿದಾಗ, ಅವರನ್ನು ಥಳಿಸಿದ್ದಾರೆ. ಅಲ್ಲದೆ ಶಿಕ್ಷಕರು ಬಲವಂತವಾಗಿ ಅವರ ಸಮವಸ್ತ್ರವನ್ನು ತೆಗೆದುಹಾಕಿದ್ದಾರೆ. ಅವರ ಜಾತಿಯ ಕಾರಣದಿಂದ ಅವರ ವಿರುದ್ಧ ತಾರತಮ್ಯ ಮಾಡಿದ್ದಾರೆ” ಎಂದು ಬಾಲಕಿಯರ ಪೋಷಕರು ಆರೋಪಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಶಿಕ್ಷಕರು ಶಾಲಾ ಸಮವಸ್ತ್ರದಲ್ಲಿರುವ ವಿದ್ಯಾರ್ಥಿಗಳ ಫೋಟೋಗಳನ್ನು ಕ್ಲಿಕ್ಕಿಸುತ್ತಿದ್ದರು. ನನ್ನ ಮಗಳ ಸಮವಸ್ತ್ರವನ್ನು ತೆಗೆದು ಬೇರೆ ಹುಡುಗಿಗೆ ಕೊಡುವಂತೆ ಕೇಳಲಾಯಿತು. ನನ್ನ ಮಗಳು ಅದನ್ನು ನಿರಾಕರಿಸಿದಾಗ, ಅವರು ಅವಳನ್ನು ಹೊಡೆದು ಬಲವಂತವಾಗಿ ಅವಳ ಸಮವಸ್ತ್ರವನ್ನು ತೆಗೆದುಹಾಕಿದರು. ಈ ಬಗ್ಗೆ ನಾನು ಶಾಲೆಗೆ ದೂರು ನೀಡಿದರೂ, ಯಾಕೆ ಹೀಗೆ ಮಾಡಲಾಗಿದೆ ಎಂದು ನನಗೆ ಉತ್ತರ ಸಿಗಲಿಲ್ಲ” ಎಂದು ಬಾಲಕಿಯರೊಬ್ಬರ ತಾಯಿ ಇಂಡಿಯನ್ ಎಕ್ಸ್‌ಪ್ರೆಸ್‌ ತಿಳಿಸಿದ್ದಾಗಿ ವರದಿ ಹೇಳಿದೆ.

ಮತ್ತೊಬ್ಬ ಬಾಲಕಿಯ ತಂದೆ ಜಾತಿ ವಿರೋಧಿ ಸಂಘಟನೆ ಶೋಷಿತ್ ಕ್ರಾಂತಿ ದಳದೊಂದಿಗೆ ವಿಷಯ ಪ್ರಸ್ತಾಪಿಸಿದಾಗ, ಅದರ ಅಧ್ಯಕ್ಷ ರವಿಕಾಂತ್ ಅವರು ಹಾಪುರ್‌ನ ಮೂಲಭೂತ ಶಿಕ್ಷಾ ಅಧಿಕಾರಿಯೊಂದಿಗೆ ಘಟನೆಯ ಬಗ್ಗೆ ದೂರು ನೀಡಿದ್ದಾರೆ.

ಇದನ್ನೂ ಓದಿ: ‘ನೀನು ಕೂಲಿ ಕೆಲಸ ಮಾಡಬೇಕು, ಶಾಲೆಯಲ್ಲಿ ಅಡುಗೆಯನ್ನಲ್ಲ’: 6 ತಿಂಗಳಾದರೂ ದಲಿತ ಮಹಿಳೆಗೆ ನಿಲ್ಲದ ಕಿರುಕುಳ

“ಇಬ್ಬರು ಬಾಲಕಿಯರು ಪರಿಶಿಷ್ಟ ಜಾತಿಗೆ ಸೇರಿದವರಾಗಿರುವುದರಿಂದ ಶಿಕ್ಷಕರು ಅವರನ್ನು ಉದ್ದೇಶಪೂರ್ವವಾಗಿ ಹೀಗೆ ನಡೆಸಿಕೊಂಡಿದ್ದಾರೆ. ಅವರ ತಂದೆ ನನ್ನನ್ನು ಸಂಪರ್ಕಿಸಿದಾಗ, ನಾನು ಶಿಕ್ಷಣ ಇಲಾಖೆಯೊಂದಿಗೆ ವಿಷಯವನ್ನು ಪ್ರಸ್ತಾಪಿಸಿ, ಶಿಕ್ಷಕರನ್ನು ಅಮಾನತುಗೊಳಿಸುವಂತೆ ವಿನಂತಿಸಿದೆ” ಎಂದು ರವಿಕಾಂತ್ ಹೇಳಿದ್ದಾರೆ.

ವಿದ್ಯಾರ್ಥಿನಿಯರ ಮೇಲೆ ತಾರತಮ್ಯದ ನಡೆದಿದೆ ಎಂಬ ಆರೋಪವನ್ನು ಶಿಕ್ಷಕರೊಬ್ಬರು ನಿರಾಕರಿಸಿದ್ದು, ಪೋಷಕರು ಆರೋಪಿಸಿದಂತೆ ಹುಡುಗಿಯರನ್ನು ಥಳಿಸಲಿಲ್ಲ ಅಥವಾ ಬಲವಂತ ಮಾಡಲಿಲ್ಲ ಎಂದು ಹೇಳಿದ್ದಾರೆ.

“ವಿದ್ಯಾರ್ಥಿಗಳು ಸಂಪೂರ್ಣ ಶಾಲಾ ಸಮವಸ್ತ್ರವನ್ನು ಧರಿಸಿ ಶಾಲೆಗೆ ಬರಲು ಸೂಚಿಸಲಾಗಿತ್ತು. ಜುಲೈ 11 ರಂದು ವಿದ್ಯಾರ್ಥಿಗಳ ಛಾಯಾಚಿತ್ರಗಳನ್ನು ಕ್ಲಿಕ್ಕಿಸುತ್ತಿದ್ದಾಗ, ಸಮವಸ್ತ್ರದಲ್ಲಿ ಬರದ ಕೆಲವು ವಿದ್ಯಾರ್ಥಿಗಳು ತಮ್ಮ ಸಹವರ್ತಿ ವಿದ್ಯಾರ್ಥಿಗಳಿಗೆ ಛಾಯಾಚಿತ್ರಕ್ಕಾಗಿ ಸಮವಸ್ತ್ರವನ್ನು ಕೊಡುವಂತೆ ಕೇಳಿದರು. ವಾಸ್ತವವಾಗಿ, ಈ ರೀತಿ ನಡೆದಿರುವುದು ಕೂಡಾ ನನಗೆ ತಿಳಿದಿರಲಿಲ್ಲ. ಜುಲೈ 12 ರಂದು ಇಬ್ಬರು ಹುಡುಗಿಯರ ಪೋಷಕರು ಶಾಲೆಗೆ ಬಂದು ನಮ್ಮನ್ನು ಪ್ರಶ್ನಿಸಲು ಪ್ರಾರಂಭಿಸಿದಾಗ ಈ ಬಗ್ಗೆ ನನಗೆ ತಿಳಿದು ಬಂತು” ಎಂದು ಶಿಕ್ಷಕಿ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದಾರೆ.

ಇದನ್ನೂ ಓದಿ: ಮಾತು ಮರೆತ ಭಾರತ; ಚುಂಡೂರು ಫೈಲ್ಸ್: ಅಟ್ರಾಸಿಟಿ ಕಾಯ್ದೆಯ ಹೊಸ್ತಿಲಲ್ಲಿ ದಲಿತರ ನರಮೇಧ

ಭಾರತೀಯ ದಂಡ ಸಂಹಿತೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಶಿಕ್ಷಕರ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ. ಘಟನೆಯ ನಂತರ ಶಿಕ್ಷರನ್ನು ಅಮಾನತು ಮಾಡಿದರೂ ಅವರು ಶಾಲೆಗೆ ಬರುತ್ತಿದ್ದಾರೆ ಎಂದು ಪೋಷಕರು ಹೇಳಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಶಿಕ್ಷಕರೊಬ್ಬರು, ಶಿಕ್ಷಕಿಯಾಗಿ ಅವರನ್ನು ಜವಾಬ್ದಾರಿಯಿಂದ ಅಮಾನತುಗೊಳಿಸಿದ್ದರೂ, ಶಾಲೆಯ ಕೀಲಿಗಳ ಉಸ್ತುವಾರಿ ವಹಿಸಿದ್ದರಿಂದ ಶಾಲೆಗೆ ಬರುವಂತೆ ಹೇಳಲಾಗಿದೆ ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...

‘ರಾಮನಿಗೆ ಅವಮಾನಿಸಿದ್ದಕ್ಕೆ ಶಾಯಿ ಎರಚಿದೆ’: ಜಂತರ್ ಮಂತರ್‌ನಲ್ಲಿ ಅಭಿಜೀತ್ ದೀಪ್ಕೆ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡ ಬರ್ಖಾ ಟ್ರೆಹಾನ್

ನವದೆಹಲಿ: ದೇಶದ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಜುಲೈ 18 ರ ಶನಿವಾರದಂದು ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ‘ಜಿರಳೆ ಜನತಾ ಪಕ್ಷ’ದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಶಾಯಿ ಎರಚಿದ...