Homeದಲಿತ್ ಫೈಲ್ಸ್ಉತ್ತರ ಪ್ರದೇಶ: ದಲಿತ ಬಾಲಕಿಯರನ್ನು ಶಾಲಾ ಸಮವಸ್ತ್ರ ತೆಗೆಯುವಂತೆ ಒತ್ತಾಯಿಸಿದ ಶಿಕ್ಷಕರು

ಉತ್ತರ ಪ್ರದೇಶ: ದಲಿತ ಬಾಲಕಿಯರನ್ನು ಶಾಲಾ ಸಮವಸ್ತ್ರ ತೆಗೆಯುವಂತೆ ಒತ್ತಾಯಿಸಿದ ಶಿಕ್ಷಕರು

- Advertisement -
- Advertisement -

ಉತ್ತರ ಪ್ರದೇಶದ ಹಾಪುರ್‌ನಲ್ಲಿರುವ ಸರ್ಕಾರಿ ಪ್ರಾಥಮಿಕ ಶಾಲೆಯ ಇಬ್ಬರು ದಲಿತ ವಿದ್ಯಾರ್ಥಿನಿಯರ ಸಮವಸ್ತ್ರವನ್ನು ತೆಗೆಯುವಂತೆ ಒತ್ತಾಯಿಸಿದ ಇಬ್ಬರು ಶಿಕ್ಷಕರ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಮಾಡಿದೆ. ಜುಲೈ 11 ರಂದು ಶಾಲಾ ಸಮವಸ್ತ್ರದಲ್ಲಿರುವ ವಿದ್ಯಾರ್ಥಿಗಳ ಛಾಯಾಚಿತ್ರಗಳನ್ನು ಶಿಕ್ಷಕರು ಕ್ಲಿಕ್ಕಿಸುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ.

“ಸಾಮಾನ್ಯ ಬಟ್ಟೆಯಲ್ಲಿ ಛಾಯಾಚಿತ್ರಕ್ಕಾಗಿ ಬಂದ ಇತರ ಇಬ್ಬರು ಹುಡುಗಿಯರಿಗೆ ನೀಡಲು ಶಿಕ್ಷಕರು ತಮ್ಮ ಸಮವಸ್ತ್ರವನ್ನು ತೆಗೆದುಹಾಕಲು ಹುಡುಗಿಯರನ್ನು ಒತ್ತಾಯಿಸಿದ್ದಾರೆ. ಹುಡುಗಿಯರು ಇದಕ್ಕೆ ನಿರಾಕರಿಸಿದಾಗ, ಅವರನ್ನು ಥಳಿಸಿದ್ದಾರೆ. ಅಲ್ಲದೆ ಶಿಕ್ಷಕರು ಬಲವಂತವಾಗಿ ಅವರ ಸಮವಸ್ತ್ರವನ್ನು ತೆಗೆದುಹಾಕಿದ್ದಾರೆ. ಅವರ ಜಾತಿಯ ಕಾರಣದಿಂದ ಅವರ ವಿರುದ್ಧ ತಾರತಮ್ಯ ಮಾಡಿದ್ದಾರೆ” ಎಂದು ಬಾಲಕಿಯರ ಪೋಷಕರು ಆರೋಪಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಶಿಕ್ಷಕರು ಶಾಲಾ ಸಮವಸ್ತ್ರದಲ್ಲಿರುವ ವಿದ್ಯಾರ್ಥಿಗಳ ಫೋಟೋಗಳನ್ನು ಕ್ಲಿಕ್ಕಿಸುತ್ತಿದ್ದರು. ನನ್ನ ಮಗಳ ಸಮವಸ್ತ್ರವನ್ನು ತೆಗೆದು ಬೇರೆ ಹುಡುಗಿಗೆ ಕೊಡುವಂತೆ ಕೇಳಲಾಯಿತು. ನನ್ನ ಮಗಳು ಅದನ್ನು ನಿರಾಕರಿಸಿದಾಗ, ಅವರು ಅವಳನ್ನು ಹೊಡೆದು ಬಲವಂತವಾಗಿ ಅವಳ ಸಮವಸ್ತ್ರವನ್ನು ತೆಗೆದುಹಾಕಿದರು. ಈ ಬಗ್ಗೆ ನಾನು ಶಾಲೆಗೆ ದೂರು ನೀಡಿದರೂ, ಯಾಕೆ ಹೀಗೆ ಮಾಡಲಾಗಿದೆ ಎಂದು ನನಗೆ ಉತ್ತರ ಸಿಗಲಿಲ್ಲ” ಎಂದು ಬಾಲಕಿಯರೊಬ್ಬರ ತಾಯಿ ಇಂಡಿಯನ್ ಎಕ್ಸ್‌ಪ್ರೆಸ್‌ ತಿಳಿಸಿದ್ದಾಗಿ ವರದಿ ಹೇಳಿದೆ.

ಮತ್ತೊಬ್ಬ ಬಾಲಕಿಯ ತಂದೆ ಜಾತಿ ವಿರೋಧಿ ಸಂಘಟನೆ ಶೋಷಿತ್ ಕ್ರಾಂತಿ ದಳದೊಂದಿಗೆ ವಿಷಯ ಪ್ರಸ್ತಾಪಿಸಿದಾಗ, ಅದರ ಅಧ್ಯಕ್ಷ ರವಿಕಾಂತ್ ಅವರು ಹಾಪುರ್‌ನ ಮೂಲಭೂತ ಶಿಕ್ಷಾ ಅಧಿಕಾರಿಯೊಂದಿಗೆ ಘಟನೆಯ ಬಗ್ಗೆ ದೂರು ನೀಡಿದ್ದಾರೆ.

ಇದನ್ನೂ ಓದಿ: ‘ನೀನು ಕೂಲಿ ಕೆಲಸ ಮಾಡಬೇಕು, ಶಾಲೆಯಲ್ಲಿ ಅಡುಗೆಯನ್ನಲ್ಲ’: 6 ತಿಂಗಳಾದರೂ ದಲಿತ ಮಹಿಳೆಗೆ ನಿಲ್ಲದ ಕಿರುಕುಳ

“ಇಬ್ಬರು ಬಾಲಕಿಯರು ಪರಿಶಿಷ್ಟ ಜಾತಿಗೆ ಸೇರಿದವರಾಗಿರುವುದರಿಂದ ಶಿಕ್ಷಕರು ಅವರನ್ನು ಉದ್ದೇಶಪೂರ್ವವಾಗಿ ಹೀಗೆ ನಡೆಸಿಕೊಂಡಿದ್ದಾರೆ. ಅವರ ತಂದೆ ನನ್ನನ್ನು ಸಂಪರ್ಕಿಸಿದಾಗ, ನಾನು ಶಿಕ್ಷಣ ಇಲಾಖೆಯೊಂದಿಗೆ ವಿಷಯವನ್ನು ಪ್ರಸ್ತಾಪಿಸಿ, ಶಿಕ್ಷಕರನ್ನು ಅಮಾನತುಗೊಳಿಸುವಂತೆ ವಿನಂತಿಸಿದೆ” ಎಂದು ರವಿಕಾಂತ್ ಹೇಳಿದ್ದಾರೆ.

ವಿದ್ಯಾರ್ಥಿನಿಯರ ಮೇಲೆ ತಾರತಮ್ಯದ ನಡೆದಿದೆ ಎಂಬ ಆರೋಪವನ್ನು ಶಿಕ್ಷಕರೊಬ್ಬರು ನಿರಾಕರಿಸಿದ್ದು, ಪೋಷಕರು ಆರೋಪಿಸಿದಂತೆ ಹುಡುಗಿಯರನ್ನು ಥಳಿಸಲಿಲ್ಲ ಅಥವಾ ಬಲವಂತ ಮಾಡಲಿಲ್ಲ ಎಂದು ಹೇಳಿದ್ದಾರೆ.

“ವಿದ್ಯಾರ್ಥಿಗಳು ಸಂಪೂರ್ಣ ಶಾಲಾ ಸಮವಸ್ತ್ರವನ್ನು ಧರಿಸಿ ಶಾಲೆಗೆ ಬರಲು ಸೂಚಿಸಲಾಗಿತ್ತು. ಜುಲೈ 11 ರಂದು ವಿದ್ಯಾರ್ಥಿಗಳ ಛಾಯಾಚಿತ್ರಗಳನ್ನು ಕ್ಲಿಕ್ಕಿಸುತ್ತಿದ್ದಾಗ, ಸಮವಸ್ತ್ರದಲ್ಲಿ ಬರದ ಕೆಲವು ವಿದ್ಯಾರ್ಥಿಗಳು ತಮ್ಮ ಸಹವರ್ತಿ ವಿದ್ಯಾರ್ಥಿಗಳಿಗೆ ಛಾಯಾಚಿತ್ರಕ್ಕಾಗಿ ಸಮವಸ್ತ್ರವನ್ನು ಕೊಡುವಂತೆ ಕೇಳಿದರು. ವಾಸ್ತವವಾಗಿ, ಈ ರೀತಿ ನಡೆದಿರುವುದು ಕೂಡಾ ನನಗೆ ತಿಳಿದಿರಲಿಲ್ಲ. ಜುಲೈ 12 ರಂದು ಇಬ್ಬರು ಹುಡುಗಿಯರ ಪೋಷಕರು ಶಾಲೆಗೆ ಬಂದು ನಮ್ಮನ್ನು ಪ್ರಶ್ನಿಸಲು ಪ್ರಾರಂಭಿಸಿದಾಗ ಈ ಬಗ್ಗೆ ನನಗೆ ತಿಳಿದು ಬಂತು” ಎಂದು ಶಿಕ್ಷಕಿ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದಾರೆ.

ಇದನ್ನೂ ಓದಿ: ಮಾತು ಮರೆತ ಭಾರತ; ಚುಂಡೂರು ಫೈಲ್ಸ್: ಅಟ್ರಾಸಿಟಿ ಕಾಯ್ದೆಯ ಹೊಸ್ತಿಲಲ್ಲಿ ದಲಿತರ ನರಮೇಧ

ಭಾರತೀಯ ದಂಡ ಸಂಹಿತೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಶಿಕ್ಷಕರ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ. ಘಟನೆಯ ನಂತರ ಶಿಕ್ಷರನ್ನು ಅಮಾನತು ಮಾಡಿದರೂ ಅವರು ಶಾಲೆಗೆ ಬರುತ್ತಿದ್ದಾರೆ ಎಂದು ಪೋಷಕರು ಹೇಳಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಶಿಕ್ಷಕರೊಬ್ಬರು, ಶಿಕ್ಷಕಿಯಾಗಿ ಅವರನ್ನು ಜವಾಬ್ದಾರಿಯಿಂದ ಅಮಾನತುಗೊಳಿಸಿದ್ದರೂ, ಶಾಲೆಯ ಕೀಲಿಗಳ ಉಸ್ತುವಾರಿ ವಹಿಸಿದ್ದರಿಂದ ಶಾಲೆಗೆ ಬರುವಂತೆ ಹೇಳಲಾಗಿದೆ ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ ಸೋಲಿನ ಬಳಿಕ ‘ಇಂಡಿಯಾದ ಆಸರೆ’ ಬಯಸಿದ ಮಮತಾ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಸೋಲಿನ ನಂತರ ಮಮತಾ ಬ್ಯಾನರ್ಜಿ ಅವರು ಇದ್ದಕ್ಕಿದ್ದಂತೆ ‘ಇಂಡಿಯಾ’ (INDIA) ಒಕ್ಕೂಟ ಮತ್ತು ರಾಷ್ಟ್ರೀಯ ಮಟ್ಟದ ವಿರೋಧ ಪಕ್ಷಗಳ ಒಗ್ಗಟ್ಟಿಗೆ ಇಷ್ಟೊಂದು ಪ್ರಾಮುಖ್ಯತೆ ನೀಡುತ್ತಿರುವುದು ಏಕೆ? ದೀರ್ಘಕಾಲದವರೆಗೆ...

ಪಶ್ಚಿಮ ಬಂಗಾಳ| ಮತದಾರರ ಪಟ್ಟಿಯಿಂದ ಡಿಲೀಟ್‌ ಆದವರಿಗೆ ಪಡಿತರ ಪ್ರಯೋಜನಗಳಿಲ್ಲ

ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಯಿಂದಾಗಿ ಪಶ್ಚಿಮ ಬಂಗಾಳದ ಚುನಾವಣಾ ಪ್ರಕ್ರಿಯೆಯಿಂದ ಹೊರಗುಳಿದವರಿಗೆ ಈಗ ಎರಡು ಹೊಡೆತ ಎದುರಾಗಿದೆ. ರಾಜ್ಯ ಸರ್ಕಾರವು ಈಗ ಅವರ ಪಡಿತರ ಚೀಟಿಗಳನ್ನು ಸಹ ನಿಷ್ಕ್ರಿಯಗೊಳಿಸಲು...

ಇಂಡಿಯಾ ಮೈತ್ರಿಕೂಟದ ಸಭೆ: ಎಸ್‌ಐಆರ್, ಬೆಲೆ ಏರಿಕೆ, ನಿರುದ್ಯೋಗದ ಕುರಿತು ಖರ್ಗೆ ಕಳವಳ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ರಾಜಕೀಯ, ಆರ್ಥಿಕ, ಸಾಮಾಜಿಕ ಮತ್ತು ವಿದೇಶಾಂಗ ನೀತಿ ರಂಗಗಳಲ್ಲಿ ಮೋದಿ ಸರ್ಕಾರದ ವೈಫಲ್ಯಗಳನ್ನು ಎದುರಿಸಲು ತನ್ನ ಒಗ್ಗಟ್ಟನ್ನು ಬಲಪಡಿಸಿಕೊಳ್ಳುವಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸೋಮವಾರ (ಜೂ.8) ಇಂಡಿಯಾ ಮೈತ್ರಿಕೂಟಕ್ಕೆ ಕರೆ...

ಟೆಹ್ರಾನ್ ಮೇಲಿನ ದಾಳಿಗೆ ಪ್ರತೀಕಾರ: ಇಸ್ರೇಲ್ ಮೇಲೆ ಕ್ಷಿಪಣಿ ಹಾರಿಸಿದ ಇರಾನ್

ಟೆಹ್ರಾನ್, ತಬ್ರಿಜ್ ಮತ್ತು ಇಸ್ಫಹಾನ್‌ ಮೇಲಿನ ದಾಲಿಗಳಿಗೆ ಪ್ರತೀಕಾರವಾಗಿ, ಇರಾನ್ ಸೇನೆಯು ಇಸ್ರೇಲ್‌ ಮೇಲೆ ಎರಡನೇ ತರಂಗದ ಕ್ಷಿಪಣಿಗಳನ್ನು ಹಾರಿಸಿದೆ. ದೇಶಾದ್ಯಂತ ಸೈರನ್‌ಗಳು ಮೊಳಗುತ್ತಿವೆ ಎಂದು ಇಸ್ರೇಲ್ ಮಿಲಿಟರಿ ಹೇಳಿದೆ ಎಂದು ಅಂತರಾಷ್ಟ್ರೀಯ...

ಭಾರತದಲ್ಲಿ ಬೆಂಕಿ ದುರಂತ ‘ದಿನವೊಂದಕ್ಕೆ ಬಲಿಯಾಗುತ್ತಿವೆ 16 ಜೀವಗಳು’ NCRB ವರದಿ

ಇತ್ತೀಚೆಗೆ ದೆಹಲಿಯ ಮಾಳವೀಯ ನಗರದ ಹೋಟೆಲ್‌ ಒಂದರಲ್ಲಿ ನಡೆದ ಭೀಕರ ಬೆಂಕಿ ದುರಂತ (ಇದರಲ್ಲಿ 22 ಜನರು ಸಜೀವ ದಹನವಾಗಿದ್ದರು) ಇಡೀ ದೇಶವನ್ನೇ ನಡುಗಿಸಿದೆ. ಈ ದುರಂತದ ಬೆನ್ನಲ್ಲೇ ಕರ್ನಾಟಕದಲ್ಲೂ ವಾಣಿಜ್ಯ ಮತ್ತು...

ಈದ್ ಹಬ್ಬದ ವೇಳೆ ಮುಸ್ಲೀಮರನ್ನು ಗುರಿಯಾಗಿಸಿ 46 ದ್ವೇಷ ಅಪರಾಧಗಳು, ಮೂವರ ಹತ್ಯೆ: APCR ಆತಂಕಕಾರಿ ವರದಿ

ಇತ್ತೀಚಿನ ಬಕ್ರೀದ್ (ಈದ್ ಉಲ್-ಅಧಾ) ಹಬ್ಬದ ಆಚರಣೆಯ ಸಂದರ್ಭದಲ್ಲಿ ದೇಶದ ವಿವಿಧೆಡೆ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ನಡೆದ ಕೋಮು ಕಿರುಕುಳ, ದ್ವೇಷ ಭಾಷಣ ಹಾಗೂ ಹಿಂಸಾಚಾರದ ಘಟನೆಗಳ ಕುರಿತು 'ನಾಗರಿಕ ಹಕ್ಕುಗಳ ರಕ್ಷಣಾ ಸಂಘ'...

ಗ್ರೇಟ್ ನಿಕೋಬಾರ್ : ಕಾರ್ಪೊರೇಟ್ ಹಿತಾಸಕ್ತಿಗೆ ಬಲಿಯಾಗುತ್ತಿರುವ ಪರಿಸರ, ಆದಿವಾಸಿಗಳ ಅಸ್ತಿತ್ವ

ಬಂಗಾಳಕೊಲ್ಲಿಯಲ್ಲಿರುವ ಭಾರತದ ದಕ್ಷಿಣ ತುದಿಯ ದ್ವೀಪದ ಸಮಗ್ರ ಅಭಿವೃದ್ಧಿಯ ಹೆಸರಿನಲ್ಲಿ ಕೇಂದ್ರ ಸರ್ಕಾರ ಬರೋಬ್ಬರಿ 72 ಸಾವಿರದಿಂದ 81 ಸಾವಿರ ಕೋಟಿ ರೂಪಾಯಿ ವೆಚ್ಚದ ’ಗ್ರೇಟ್ ನಿಕೋಬಾರ್ ದ್ವೀಪ ಅಭಿವೃದ್ಧಿ ಯೋಜನೆ’ಯನ್ನು ರೂಪಿಸಿದೆ.ಈ...

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...