Homeಮುಖಪುಟಉತ್ತರ ಪ್ರದೇಶ: ಬಾಲಕಿಗೆ ಕಿರುಕುಳ ನೀಡಿ, ಟೆರೇಸ್‌ನಿಂದ ದೂಡಿದ ದುರ್ಷ್ಕಮಿಗಳು

ಉತ್ತರ ಪ್ರದೇಶ: ಬಾಲಕಿಗೆ ಕಿರುಕುಳ ನೀಡಿ, ಟೆರೇಸ್‌ನಿಂದ ದೂಡಿದ ದುರ್ಷ್ಕಮಿಗಳು

ಉತ್ತರಪ್ರದೇಶದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿವೆ. ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರ ಮಹಿಳೆಯರಿಗೆ ಸುರಕ್ಷತೆ ನೀಡುವಲ್ಲಿ ವಿಫಲವಾಗಿದೆ ಎಂದು ಪ್ರತಿಪಕ್ಷಗಳು ಆರೋಪಿಸಿವೆ.

- Advertisement -
- Advertisement -

ಉತ್ತರ ಪ್ರದೇಶದ ಲಖನೌದಿಂದ 300 ಕಿ.ಮೀ ದೂರದಲ್ಲಿರುವ ಮೌ ಜಿಲ್ಲೆಯ 15 ವರ್ಷದ ಬಾಲಕಿಯೊಬ್ಬಳ ಮೇಲೆ ಆಕೆಯ ನೆರೆಹೊರೆಯ ಮೂರು ಜನ ಸೇರಿ ಆಕೆಗೆ ಕಿರುಕುಳ ನೀಡಿ, ಹಲ್ಲೆ ನಡೆಸಿ, ಕಟ್ಟಡದ ಟೆರೇಸ್‌ನಿಂದ ದೂಡಿರುವ ದಾರುಣ ಘಟನೆ ನಡೆದಿದೆ.

ಬಾಲಕಿಗೆ ಗಂಭೀರ ಗಾಯಗಳಾಗಿದ್ದು, ಚಿಕಿತ್ಸೆಗಾಗಿ ಅಝಮ್‌ಘರ್‌ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಸಂತ್ರಸ್ತೆಯ ಸ್ಥಿತಿ ಗಂಭೀರವಾಗಿದೆ. ಪ್ರಕರಣದ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

15 ವರ್ಷದ ಬಾಲಕಿ ಮೇಲೆ ಆಕೆ ಮನೆಗೆ ಹಿಂತಿರುಗಿದ ಸಂದರ್ಭದಲ್ಲಿ ಅಕ್ಕ-ಪಕ್ಕದ ಮೂವರು ಮಂದಿ ದಾಳಿ ನಡೆಸಿದ್ದಾರೆ. ಈ ಘಟನೆಯ ಕುರಿತು ಅಕ್ಟೋಬರ್ 23 ರಂದು ಪೊಲೀಸರಿಗೆ ದೂರು ನೀಡಲಾಗಿದೆ.

ಬಾಲಕಿಯ ಕುಟುಂಬ ಸಲ್ಲಿಸಿದ ದೂರಿನ ಪ್ರಕಾರ, ಮೂವರು ಆರೋಪಿಗಳು ಆಕೆಯನ್ನು ಕಟ್ಟಡದ ಟೆರೇಸ್‌ಗೆ ಎಳೆದೊಯ್ದಿದ್ದಾರೆ. ಆರೋಪಿಗಳು ಆಕೆಯ ಮೇಲೆ ಹಲ್ಲೆ ನಡೆಸಿದ್ದಾರೆ. ಅಲ್ಲಿ ಜಗಳ ನಡೆದ ನಂತರ ಆಕೆಯನ್ನು ಮೇಲ್ಛಾವಣಿಯಿಂದ ಎಸೆದಿದ್ದಾರೆ. ಬಾಲಕಿ ಕೂಡ ಆರೋಪಿಗಳು ಹಲ್ಲೆ ನಡೆಸಿರುವುದನ್ನು ಹೇಳಿದ್ದಾರೆ ಎಂದು  ಪೊಲೀಸ್ ಅಧಿಕಾರಿ ಸುಶೀಲ್ ಧುಲೆ ಹೇಳಿದ್ದಾರೆ.

ಇದನ್ನೂ ಓದಿ: ಬಿಹಾರ ಚುನಾವಣೆ ಬಾಯ್ಕಾಟ್ ಎಂದ 108 ಆದಿವಾಸಿ ಗ್ರಾಮಗಳು: ಯಾಕೆ? ಇಲ್ಲಿದೆ ವಿವರ

ಬಾಲಕಿಯ ಹೇಳಿಕೆಯ ಆಧಾರದ ಮೇಲೆ ಪೊಲೀಸರು, ಹಲ್ಲೆ ಮತ್ತು ಕಿರುಕುಳ ಪ್ರಕರಣವನ್ನು ದಾಖಲಿಸಿದ್ದಾರೆ. “ಬಾಲಕಿ ಮೂವರನ್ನು ಆರೋಪಿಗಳನ್ನು ಗುರುತಿಸಿದ್ದಾರೆ. ಬಾಲಕಿಯ ಕುಟುಂಬದ ದೂರಿನ ಆಧಾರದಲ್ಲಿ ನಾವು ಪ್ರಕರಣ ದಾಖಲಿಸಿದ್ದೇವೆ. ಪ್ರಕರಣದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ” ಎಂದು ಸುಶೀಲ್ ಧುಲೆ ಹೇಳಿದ್ದಾರೆ.

ಬಾಲಕಿಯ ವೈದ್ಯಕೀಯ ವರದಿಯ ಆಧಾರದ ಮೇಲೆ ಆರೋಪಿಗಳ ಮೇಲೆ ಹೆಚ್ಚಿನ ಪ್ರಕರಣಗಳನ್ನು ಸೇರಿಸಬಹುದು ಎಂದು ಪೊಲೀಸರು ಹೇಳಿದ್ದಾರೆ.

ಉತ್ತರಪ್ರದೇಶದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿವೆ. ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರ ಮಹಿಳೆಯರಿಗೆ ಸುರಕ್ಷತೆ ನೀಡುವಲ್ಲಿ ವಿಫಲವಾಗಿದೆ ಎಂದು ಪ್ರತಿಪಕ್ಷಗಳು ಆರೋಪ ಮಾಡಿವೆ. ದೇಶವ್ಯಾಪಿ ಪ್ರತಿಭಟನೆಗಳು ನಡೆಯುತ್ತಿರುವ ಸಂದರ್ಭದಲ್ಲೇ ಈ ಘಟನೆ ನಡೆದಿದೆ.

ಹತ್ರಾಸ್ ಜಿಲ್ಲೆಯಲ್ಲಿ 19 ವರ್ಷದ ದಲಿತ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಹಿನ್ನೆಲೆ ರಾಜ್ಯ ಸರ್ಕಾರ ವ್ಯಾಪಕವಾದ ಟೀಕೆ ಎದುರಿಸಬೇಕಾಗಿದೆ. ಈ ಪ್ರಕರಣವು ಭಾರಿ ಆಕ್ರೋಶಕ್ಕೆ ಕಾರಣವಾಗಿತ್ತು. ಪ್ರಕರಣದ ತನಿಖೆಯನ್ನು ಪ್ರಸ್ತುತ ಸಿಬಿಐ ನಡೆಸುತ್ತಿದೆ.

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳನ್ನು ತ್ವರಿತ ನ್ಯಾಯಾಲಯಗಳಲ್ಲಿ ವಿಚಾರಣೆ ನಡೆಸಬೇಕು ಮತ್ತು ಅಪ್ರಾಪ್ತ ವಯಸ್ಕರ ವಿರುದ್ಧದ ಅಪರಾಧಗಳನ್ನು ಫೋಕ್ಸೋ (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ) ಕಾಯ್ದೆಯಡಿ ವಿಚಾರಣೆಗೆ ಒಳಪಡಿಸಬೇಕು ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.


ಇದನ್ನೂ ಓದಿ: ಹತ್ರಾಸ್ ಕೇಸ್: ಅ.29ಕ್ಕೆ ದೇಶಾದ್ಯಂತ ಪ್ರತಿಭಟನೆಗೆ ಮಹಿಳಾ ಸಂಘಟನೆಗಳ ಕರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...