Homeಮುಖಪುಟಉತ್ತರ ಪ್ರದೇಶ: ಈ ಗ್ರಾಮಕ್ಕೆ ರೈತ ಹೋರಾಟ ಬೆಂಬಲಿಸದ ರಾಜಕಾರಣಿಗಳಿಗೆ ಪ್ರವೇಶವಿಲ್ಲ!

ಉತ್ತರ ಪ್ರದೇಶ: ಈ ಗ್ರಾಮಕ್ಕೆ ರೈತ ಹೋರಾಟ ಬೆಂಬಲಿಸದ ರಾಜಕಾರಣಿಗಳಿಗೆ ಪ್ರವೇಶವಿಲ್ಲ!

ಆಂದೋಲನಕ್ಕೆ ಬೆಂಬಲವಾಗಿ ಜಾತಿ ಬೇಧವಿಲ್ಲದೆ ಎಲ್ಲಾ ಕುಟುಂಬಗಳೂ ದೇಣಿಗೆ & ದವಸ ಧಾನ್ಯಗಳನ್ನು ನೀಡಬಹುದು ಎಂದು ನಿರ್ಧರಿಸಿದ್ದು ಇದುವರೆಗೂ ನಾಲ್ಕೂವರೆ ಲಕ್ಷ ರೂ ಸಂಗ್ರಹವಾಗಿದೆ.

- Advertisement -
- Advertisement -

ಪಶ್ಚಿಮ ಉತ್ತರ ಪ್ರದೇಶದ ಬಾಗ್ಪತ್ ಜಿಲ್ಲೆಯ ಸರೂರ್ಪುರ ಕಲಾ ಗ್ರಾಮಸ್ಥರು ಮೂರು ವಿವಾದಾತ್ಮಕ ಕೃಷಿ ಕಾನೂನುಗಳ ವಿರುದ್ಧ ನಡೆಯುತ್ತಿರುವ ರೈತರ ಆಂದೋಲನವನ್ನು ಬೆಂಬಲಿಸದ ರಾಜಕಾರಣಿಗಳಿಗೆ ತಮ್ಮ ಗ್ರಾಮಕ್ಕೆ ಪ್ರವೇಶವಿಲ್ಲ ಎಂದು ಘೋಷಿಸಿದ್ದಾರೆ. ಸುಮಾರು 25 ಸಾವಿರ ಜನಸಂಖ್ಯೆ ಇರುವ ಗ್ರಾಮದ 36 ಜಾತಿ ಗುಂಪುಗಳ ಪಂಚಾಯತ್ ಬುಧವಾರ ಈ ನಿರ್ಧಾರ ಕೈಗೊಂಡಿದೆ.

ಈ ನಿರ್ಧಾರ ತೆಗೆದುಕೊಂಡ ಪಂಚಾಯಿತಿಯಲ್ಲಿ ಹಾಜರಿದ್ದ ರೈತ ಸುಭಾಷ್ ನೈನ್ “ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೇಶಾದ್ಯಂತ ನಡೆಯುತ್ತಿರುವ ಆಂದೋಲನಕ್ಕೆ ತಮ್ಮ ಬೆಂಬಲವನ್ನು ನೀಡದ ನಾಯಕರನ್ನು (ರಾಜಕೀಯ ಪಕ್ಷಗಳ ಅಥವಾ ರೈತ ಸಂಘಟನೆಗಳ) ಇಡೀ ಪಂಚಾಯತ್ ಸರ್ವಾನುಮತದಿಂದ ಖಂಡಿಸಿತು ಮತ್ತು ಗ್ರಾಮಕ್ಕೆ ಅವರ ಪ್ರವೇಶವನ್ನು ನಿಷೇಧಿಸಲು ಸರ್ವಾನುಮತದಿಂದ ನಿರ್ಧರಿಸಿತು” ಹೇಳಿರುವುದಾಗಿ ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ.

ಅಲ್ಲದೆ ಜನವರಿ 16 ರಂದು ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರಿಗೆ ಪಡಿತರ ಮತ್ತು ಇತರ ಅಗತ್ಯ ವಸ್ತುಗಳನ್ನು ಒದಗಿಸಲು ಪಂಚಾಯಿತಿ ನಿರ್ಧರಿಸಿದೆ. ಆಂದೋಲನಕ್ಕೆ ಬೆಂಬಲವಾಗಿ ಗ್ರಾಮದ ಪ್ರತಿಯೊಂದು ಕುಟುಂಬಗಳು ಜಾತಿ, ಸಮುದಾಯ ಬೇಧವಿಲ್ಲದೆ ದೇಣಿಗೆ ಮತ್ತು ದವಸ ಧಾನ್ಯಗಳನ್ನು ನೀಡಬಹುದು ಎಂದು ಪಂಚಾಯಿತಿ ನಿರ್ಧರಿಸಿದೆ.

“ಗ್ರಾಮಸ್ಥರು ಇಲ್ಲಿಯವರೆಗೆ 4.5 ಲಕ್ಷ ರೂ ದೇಣಿಗೆ ನೀಡಿದ್ದಾರೆ ಮತ್ತು ಪಡಿತರ ಮತ್ತು ಇತರ ಸರಕುಗಳನ್ನು (ಮುಖ್ಯವಾಗಿ ಕಟ್ಟಿಗೆಗಳು – ಚಳಿಯಿಂದ ರಕ್ಷಿಸಿಕೊಳ್ಳಲು) ಕೊಂಡ್ಯೊಯ್ಯಲು ಕನಿಷ್ಠ ಒಂಬತ್ತು ಟ್ರಾಕ್ಟರುಗಳನ್ನು ನೀಡಿದ್ದಾರೆ. ಗ್ರಾಮ ಪ್ರಧಾನ್ ಜೀತ್ ಸಿಂಗ್ ಅವರು 21,000 ರೂಗಳ ದೇಣಿಗೆ ಮತ್ತು ದೆಹಲಿಗೆ ತೆರಳಲು ತಮ್ಮ ಟ್ರ್ಯಾಕ್ಟರ್ ನೀಡಿದ್ದಾರೆ” ಎಂದು ವರದಿಯಾಗಿದೆ.

ಮಾಜಿ ಪ್ರಧಾನ್ ತೇಜ್ವೀರ್ ಸಿಂಗ್ ಮತ್ತು ಜಗ್ವೀರ್ ಸಿಂಗ್ ಕ್ರಮವಾಗಿ 5,000 ಮತ್ತು 2,100 ರೂಗಳ ದೇಣಿಗೆ ನೀಡಿದ್ದಾರೆ. ಪ್ರತಿಭಟನಾ ನಿರತ ರೈತರಿಗೆ ಬೆಂಬಲವಾಗಿ ಇತರ ಗ್ರಾಮಸ್ಥರು ಸಹ ದೇಣಿಗೆ ನೀಡಿದ್ದಾರೆ ಎಂದು ನೈನ್ ತಿಳಿಸಿದ್ದಾರೆ. ಅಲ್ಲದೇ ಗ್ರಾಮಸ್ಥರು ನಮಗೂ ರಾಜಕೀಯ ಪಕ್ಷಗಳಿಗೂ ಸಂಬಂಧವಿಲ್ಲ. ಆದರೆ ನ್ಯಾಯಯುತ ಬೇಡಿಕೆಗಳನ್ನು ಇಟ್ಟು ಹೋರಾಟ ನಡೆಸುತ್ತಿರುವ ರೈತರ ಮಾತು ಕೇಳದ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ಉತ್ತರ ಪ್ರದೇಶ ಹಲವೆಡೆ ಕೇಂದ್ರದ ಕಾನೂನುಗಳ ವಿರುದ್ಧ ಅನಿರ್ದಿಷ್ಟಾವಧಿ ಧರಣಿಗಳು ನಡೆಯುತ್ತಿವೆ. ಜನವರಿ 26 ರಂದು ಗಣರಾಜ್ಯೋತ್ಸವದ ದಿನದ ಹೋರಾಟಕ್ಕೆ ಅವರೆಲ್ಲರೂ ಬೆಂಬಲ ನೀಡುವುದಾಗಿ ತಿಳಿಸಿವೆ.

ದೆಹಲಿಯಲ್ಲಿ ನಡೆಯುತ್ತಿರುವ ರೈತ ಹೋರಾಟ 50 ನೇ ದಿನಕ್ಕೆ ಕಾಲಿಟ್ಟಿದೆ. ನಾಳೆ ಕೇಂದ್ರ ಸರ್ಕಾರದೊಂದಿಗೆ 9 ನೇ ಸುತ್ತಿನ ಮಾತುಕತೆ ನಡೆಯಲಿದೆ.


ಇದನ್ನೂ ಓದಿ: ರೈತರ ಪ್ರತಿರೋಧದ ಹಿನ್ನೆಲೆ: ಸುಪ್ರೀಂ ಸಮಿತಿಯಿಂದ ಸ್ವಯಂ ಹೊರನಡೆದ ಭೂಪಿಂದರ್‌ ಮನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...