Homeಮುಖಪುಟಉತ್ತರ ಪ್ರದೇಶ: ಈ ಗ್ರಾಮಕ್ಕೆ ರೈತ ಹೋರಾಟ ಬೆಂಬಲಿಸದ ರಾಜಕಾರಣಿಗಳಿಗೆ ಪ್ರವೇಶವಿಲ್ಲ!

ಉತ್ತರ ಪ್ರದೇಶ: ಈ ಗ್ರಾಮಕ್ಕೆ ರೈತ ಹೋರಾಟ ಬೆಂಬಲಿಸದ ರಾಜಕಾರಣಿಗಳಿಗೆ ಪ್ರವೇಶವಿಲ್ಲ!

ಆಂದೋಲನಕ್ಕೆ ಬೆಂಬಲವಾಗಿ ಜಾತಿ ಬೇಧವಿಲ್ಲದೆ ಎಲ್ಲಾ ಕುಟುಂಬಗಳೂ ದೇಣಿಗೆ & ದವಸ ಧಾನ್ಯಗಳನ್ನು ನೀಡಬಹುದು ಎಂದು ನಿರ್ಧರಿಸಿದ್ದು ಇದುವರೆಗೂ ನಾಲ್ಕೂವರೆ ಲಕ್ಷ ರೂ ಸಂಗ್ರಹವಾಗಿದೆ.

- Advertisement -
- Advertisement -

ಪಶ್ಚಿಮ ಉತ್ತರ ಪ್ರದೇಶದ ಬಾಗ್ಪತ್ ಜಿಲ್ಲೆಯ ಸರೂರ್ಪುರ ಕಲಾ ಗ್ರಾಮಸ್ಥರು ಮೂರು ವಿವಾದಾತ್ಮಕ ಕೃಷಿ ಕಾನೂನುಗಳ ವಿರುದ್ಧ ನಡೆಯುತ್ತಿರುವ ರೈತರ ಆಂದೋಲನವನ್ನು ಬೆಂಬಲಿಸದ ರಾಜಕಾರಣಿಗಳಿಗೆ ತಮ್ಮ ಗ್ರಾಮಕ್ಕೆ ಪ್ರವೇಶವಿಲ್ಲ ಎಂದು ಘೋಷಿಸಿದ್ದಾರೆ. ಸುಮಾರು 25 ಸಾವಿರ ಜನಸಂಖ್ಯೆ ಇರುವ ಗ್ರಾಮದ 36 ಜಾತಿ ಗುಂಪುಗಳ ಪಂಚಾಯತ್ ಬುಧವಾರ ಈ ನಿರ್ಧಾರ ಕೈಗೊಂಡಿದೆ.

ಈ ನಿರ್ಧಾರ ತೆಗೆದುಕೊಂಡ ಪಂಚಾಯಿತಿಯಲ್ಲಿ ಹಾಜರಿದ್ದ ರೈತ ಸುಭಾಷ್ ನೈನ್ “ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೇಶಾದ್ಯಂತ ನಡೆಯುತ್ತಿರುವ ಆಂದೋಲನಕ್ಕೆ ತಮ್ಮ ಬೆಂಬಲವನ್ನು ನೀಡದ ನಾಯಕರನ್ನು (ರಾಜಕೀಯ ಪಕ್ಷಗಳ ಅಥವಾ ರೈತ ಸಂಘಟನೆಗಳ) ಇಡೀ ಪಂಚಾಯತ್ ಸರ್ವಾನುಮತದಿಂದ ಖಂಡಿಸಿತು ಮತ್ತು ಗ್ರಾಮಕ್ಕೆ ಅವರ ಪ್ರವೇಶವನ್ನು ನಿಷೇಧಿಸಲು ಸರ್ವಾನುಮತದಿಂದ ನಿರ್ಧರಿಸಿತು” ಹೇಳಿರುವುದಾಗಿ ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ.

ಅಲ್ಲದೆ ಜನವರಿ 16 ರಂದು ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರಿಗೆ ಪಡಿತರ ಮತ್ತು ಇತರ ಅಗತ್ಯ ವಸ್ತುಗಳನ್ನು ಒದಗಿಸಲು ಪಂಚಾಯಿತಿ ನಿರ್ಧರಿಸಿದೆ. ಆಂದೋಲನಕ್ಕೆ ಬೆಂಬಲವಾಗಿ ಗ್ರಾಮದ ಪ್ರತಿಯೊಂದು ಕುಟುಂಬಗಳು ಜಾತಿ, ಸಮುದಾಯ ಬೇಧವಿಲ್ಲದೆ ದೇಣಿಗೆ ಮತ್ತು ದವಸ ಧಾನ್ಯಗಳನ್ನು ನೀಡಬಹುದು ಎಂದು ಪಂಚಾಯಿತಿ ನಿರ್ಧರಿಸಿದೆ.

“ಗ್ರಾಮಸ್ಥರು ಇಲ್ಲಿಯವರೆಗೆ 4.5 ಲಕ್ಷ ರೂ ದೇಣಿಗೆ ನೀಡಿದ್ದಾರೆ ಮತ್ತು ಪಡಿತರ ಮತ್ತು ಇತರ ಸರಕುಗಳನ್ನು (ಮುಖ್ಯವಾಗಿ ಕಟ್ಟಿಗೆಗಳು – ಚಳಿಯಿಂದ ರಕ್ಷಿಸಿಕೊಳ್ಳಲು) ಕೊಂಡ್ಯೊಯ್ಯಲು ಕನಿಷ್ಠ ಒಂಬತ್ತು ಟ್ರಾಕ್ಟರುಗಳನ್ನು ನೀಡಿದ್ದಾರೆ. ಗ್ರಾಮ ಪ್ರಧಾನ್ ಜೀತ್ ಸಿಂಗ್ ಅವರು 21,000 ರೂಗಳ ದೇಣಿಗೆ ಮತ್ತು ದೆಹಲಿಗೆ ತೆರಳಲು ತಮ್ಮ ಟ್ರ್ಯಾಕ್ಟರ್ ನೀಡಿದ್ದಾರೆ” ಎಂದು ವರದಿಯಾಗಿದೆ.

ಮಾಜಿ ಪ್ರಧಾನ್ ತೇಜ್ವೀರ್ ಸಿಂಗ್ ಮತ್ತು ಜಗ್ವೀರ್ ಸಿಂಗ್ ಕ್ರಮವಾಗಿ 5,000 ಮತ್ತು 2,100 ರೂಗಳ ದೇಣಿಗೆ ನೀಡಿದ್ದಾರೆ. ಪ್ರತಿಭಟನಾ ನಿರತ ರೈತರಿಗೆ ಬೆಂಬಲವಾಗಿ ಇತರ ಗ್ರಾಮಸ್ಥರು ಸಹ ದೇಣಿಗೆ ನೀಡಿದ್ದಾರೆ ಎಂದು ನೈನ್ ತಿಳಿಸಿದ್ದಾರೆ. ಅಲ್ಲದೇ ಗ್ರಾಮಸ್ಥರು ನಮಗೂ ರಾಜಕೀಯ ಪಕ್ಷಗಳಿಗೂ ಸಂಬಂಧವಿಲ್ಲ. ಆದರೆ ನ್ಯಾಯಯುತ ಬೇಡಿಕೆಗಳನ್ನು ಇಟ್ಟು ಹೋರಾಟ ನಡೆಸುತ್ತಿರುವ ರೈತರ ಮಾತು ಕೇಳದ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ಉತ್ತರ ಪ್ರದೇಶ ಹಲವೆಡೆ ಕೇಂದ್ರದ ಕಾನೂನುಗಳ ವಿರುದ್ಧ ಅನಿರ್ದಿಷ್ಟಾವಧಿ ಧರಣಿಗಳು ನಡೆಯುತ್ತಿವೆ. ಜನವರಿ 26 ರಂದು ಗಣರಾಜ್ಯೋತ್ಸವದ ದಿನದ ಹೋರಾಟಕ್ಕೆ ಅವರೆಲ್ಲರೂ ಬೆಂಬಲ ನೀಡುವುದಾಗಿ ತಿಳಿಸಿವೆ.

ದೆಹಲಿಯಲ್ಲಿ ನಡೆಯುತ್ತಿರುವ ರೈತ ಹೋರಾಟ 50 ನೇ ದಿನಕ್ಕೆ ಕಾಲಿಟ್ಟಿದೆ. ನಾಳೆ ಕೇಂದ್ರ ಸರ್ಕಾರದೊಂದಿಗೆ 9 ನೇ ಸುತ್ತಿನ ಮಾತುಕತೆ ನಡೆಯಲಿದೆ.


ಇದನ್ನೂ ಓದಿ: ರೈತರ ಪ್ರತಿರೋಧದ ಹಿನ್ನೆಲೆ: ಸುಪ್ರೀಂ ಸಮಿತಿಯಿಂದ ಸ್ವಯಂ ಹೊರನಡೆದ ಭೂಪಿಂದರ್‌ ಮನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...