Homeಮುಖಪುಟಉತ್ತರ ಪ್ರದೇಶ: ಈ ಗ್ರಾಮಕ್ಕೆ ರೈತ ಹೋರಾಟ ಬೆಂಬಲಿಸದ ರಾಜಕಾರಣಿಗಳಿಗೆ ಪ್ರವೇಶವಿಲ್ಲ!

ಉತ್ತರ ಪ್ರದೇಶ: ಈ ಗ್ರಾಮಕ್ಕೆ ರೈತ ಹೋರಾಟ ಬೆಂಬಲಿಸದ ರಾಜಕಾರಣಿಗಳಿಗೆ ಪ್ರವೇಶವಿಲ್ಲ!

ಆಂದೋಲನಕ್ಕೆ ಬೆಂಬಲವಾಗಿ ಜಾತಿ ಬೇಧವಿಲ್ಲದೆ ಎಲ್ಲಾ ಕುಟುಂಬಗಳೂ ದೇಣಿಗೆ & ದವಸ ಧಾನ್ಯಗಳನ್ನು ನೀಡಬಹುದು ಎಂದು ನಿರ್ಧರಿಸಿದ್ದು ಇದುವರೆಗೂ ನಾಲ್ಕೂವರೆ ಲಕ್ಷ ರೂ ಸಂಗ್ರಹವಾಗಿದೆ.

- Advertisement -
- Advertisement -

ಪಶ್ಚಿಮ ಉತ್ತರ ಪ್ರದೇಶದ ಬಾಗ್ಪತ್ ಜಿಲ್ಲೆಯ ಸರೂರ್ಪುರ ಕಲಾ ಗ್ರಾಮಸ್ಥರು ಮೂರು ವಿವಾದಾತ್ಮಕ ಕೃಷಿ ಕಾನೂನುಗಳ ವಿರುದ್ಧ ನಡೆಯುತ್ತಿರುವ ರೈತರ ಆಂದೋಲನವನ್ನು ಬೆಂಬಲಿಸದ ರಾಜಕಾರಣಿಗಳಿಗೆ ತಮ್ಮ ಗ್ರಾಮಕ್ಕೆ ಪ್ರವೇಶವಿಲ್ಲ ಎಂದು ಘೋಷಿಸಿದ್ದಾರೆ. ಸುಮಾರು 25 ಸಾವಿರ ಜನಸಂಖ್ಯೆ ಇರುವ ಗ್ರಾಮದ 36 ಜಾತಿ ಗುಂಪುಗಳ ಪಂಚಾಯತ್ ಬುಧವಾರ ಈ ನಿರ್ಧಾರ ಕೈಗೊಂಡಿದೆ.

ಈ ನಿರ್ಧಾರ ತೆಗೆದುಕೊಂಡ ಪಂಚಾಯಿತಿಯಲ್ಲಿ ಹಾಜರಿದ್ದ ರೈತ ಸುಭಾಷ್ ನೈನ್ “ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೇಶಾದ್ಯಂತ ನಡೆಯುತ್ತಿರುವ ಆಂದೋಲನಕ್ಕೆ ತಮ್ಮ ಬೆಂಬಲವನ್ನು ನೀಡದ ನಾಯಕರನ್ನು (ರಾಜಕೀಯ ಪಕ್ಷಗಳ ಅಥವಾ ರೈತ ಸಂಘಟನೆಗಳ) ಇಡೀ ಪಂಚಾಯತ್ ಸರ್ವಾನುಮತದಿಂದ ಖಂಡಿಸಿತು ಮತ್ತು ಗ್ರಾಮಕ್ಕೆ ಅವರ ಪ್ರವೇಶವನ್ನು ನಿಷೇಧಿಸಲು ಸರ್ವಾನುಮತದಿಂದ ನಿರ್ಧರಿಸಿತು” ಹೇಳಿರುವುದಾಗಿ ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ.

ಅಲ್ಲದೆ ಜನವರಿ 16 ರಂದು ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರಿಗೆ ಪಡಿತರ ಮತ್ತು ಇತರ ಅಗತ್ಯ ವಸ್ತುಗಳನ್ನು ಒದಗಿಸಲು ಪಂಚಾಯಿತಿ ನಿರ್ಧರಿಸಿದೆ. ಆಂದೋಲನಕ್ಕೆ ಬೆಂಬಲವಾಗಿ ಗ್ರಾಮದ ಪ್ರತಿಯೊಂದು ಕುಟುಂಬಗಳು ಜಾತಿ, ಸಮುದಾಯ ಬೇಧವಿಲ್ಲದೆ ದೇಣಿಗೆ ಮತ್ತು ದವಸ ಧಾನ್ಯಗಳನ್ನು ನೀಡಬಹುದು ಎಂದು ಪಂಚಾಯಿತಿ ನಿರ್ಧರಿಸಿದೆ.

“ಗ್ರಾಮಸ್ಥರು ಇಲ್ಲಿಯವರೆಗೆ 4.5 ಲಕ್ಷ ರೂ ದೇಣಿಗೆ ನೀಡಿದ್ದಾರೆ ಮತ್ತು ಪಡಿತರ ಮತ್ತು ಇತರ ಸರಕುಗಳನ್ನು (ಮುಖ್ಯವಾಗಿ ಕಟ್ಟಿಗೆಗಳು – ಚಳಿಯಿಂದ ರಕ್ಷಿಸಿಕೊಳ್ಳಲು) ಕೊಂಡ್ಯೊಯ್ಯಲು ಕನಿಷ್ಠ ಒಂಬತ್ತು ಟ್ರಾಕ್ಟರುಗಳನ್ನು ನೀಡಿದ್ದಾರೆ. ಗ್ರಾಮ ಪ್ರಧಾನ್ ಜೀತ್ ಸಿಂಗ್ ಅವರು 21,000 ರೂಗಳ ದೇಣಿಗೆ ಮತ್ತು ದೆಹಲಿಗೆ ತೆರಳಲು ತಮ್ಮ ಟ್ರ್ಯಾಕ್ಟರ್ ನೀಡಿದ್ದಾರೆ” ಎಂದು ವರದಿಯಾಗಿದೆ.

ಮಾಜಿ ಪ್ರಧಾನ್ ತೇಜ್ವೀರ್ ಸಿಂಗ್ ಮತ್ತು ಜಗ್ವೀರ್ ಸಿಂಗ್ ಕ್ರಮವಾಗಿ 5,000 ಮತ್ತು 2,100 ರೂಗಳ ದೇಣಿಗೆ ನೀಡಿದ್ದಾರೆ. ಪ್ರತಿಭಟನಾ ನಿರತ ರೈತರಿಗೆ ಬೆಂಬಲವಾಗಿ ಇತರ ಗ್ರಾಮಸ್ಥರು ಸಹ ದೇಣಿಗೆ ನೀಡಿದ್ದಾರೆ ಎಂದು ನೈನ್ ತಿಳಿಸಿದ್ದಾರೆ. ಅಲ್ಲದೇ ಗ್ರಾಮಸ್ಥರು ನಮಗೂ ರಾಜಕೀಯ ಪಕ್ಷಗಳಿಗೂ ಸಂಬಂಧವಿಲ್ಲ. ಆದರೆ ನ್ಯಾಯಯುತ ಬೇಡಿಕೆಗಳನ್ನು ಇಟ್ಟು ಹೋರಾಟ ನಡೆಸುತ್ತಿರುವ ರೈತರ ಮಾತು ಕೇಳದ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ಉತ್ತರ ಪ್ರದೇಶ ಹಲವೆಡೆ ಕೇಂದ್ರದ ಕಾನೂನುಗಳ ವಿರುದ್ಧ ಅನಿರ್ದಿಷ್ಟಾವಧಿ ಧರಣಿಗಳು ನಡೆಯುತ್ತಿವೆ. ಜನವರಿ 26 ರಂದು ಗಣರಾಜ್ಯೋತ್ಸವದ ದಿನದ ಹೋರಾಟಕ್ಕೆ ಅವರೆಲ್ಲರೂ ಬೆಂಬಲ ನೀಡುವುದಾಗಿ ತಿಳಿಸಿವೆ.

ದೆಹಲಿಯಲ್ಲಿ ನಡೆಯುತ್ತಿರುವ ರೈತ ಹೋರಾಟ 50 ನೇ ದಿನಕ್ಕೆ ಕಾಲಿಟ್ಟಿದೆ. ನಾಳೆ ಕೇಂದ್ರ ಸರ್ಕಾರದೊಂದಿಗೆ 9 ನೇ ಸುತ್ತಿನ ಮಾತುಕತೆ ನಡೆಯಲಿದೆ.


ಇದನ್ನೂ ಓದಿ: ರೈತರ ಪ್ರತಿರೋಧದ ಹಿನ್ನೆಲೆ: ಸುಪ್ರೀಂ ಸಮಿತಿಯಿಂದ ಸ್ವಯಂ ಹೊರನಡೆದ ಭೂಪಿಂದರ್‌ ಮನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...