Homeಮುಖಪುಟಉತ್ತರ ಪ್ರದೇಶ: ಈ ಗ್ರಾಮಕ್ಕೆ ರೈತ ಹೋರಾಟ ಬೆಂಬಲಿಸದ ರಾಜಕಾರಣಿಗಳಿಗೆ ಪ್ರವೇಶವಿಲ್ಲ!

ಉತ್ತರ ಪ್ರದೇಶ: ಈ ಗ್ರಾಮಕ್ಕೆ ರೈತ ಹೋರಾಟ ಬೆಂಬಲಿಸದ ರಾಜಕಾರಣಿಗಳಿಗೆ ಪ್ರವೇಶವಿಲ್ಲ!

ಆಂದೋಲನಕ್ಕೆ ಬೆಂಬಲವಾಗಿ ಜಾತಿ ಬೇಧವಿಲ್ಲದೆ ಎಲ್ಲಾ ಕುಟುಂಬಗಳೂ ದೇಣಿಗೆ & ದವಸ ಧಾನ್ಯಗಳನ್ನು ನೀಡಬಹುದು ಎಂದು ನಿರ್ಧರಿಸಿದ್ದು ಇದುವರೆಗೂ ನಾಲ್ಕೂವರೆ ಲಕ್ಷ ರೂ ಸಂಗ್ರಹವಾಗಿದೆ.

- Advertisement -
- Advertisement -

ಪಶ್ಚಿಮ ಉತ್ತರ ಪ್ರದೇಶದ ಬಾಗ್ಪತ್ ಜಿಲ್ಲೆಯ ಸರೂರ್ಪುರ ಕಲಾ ಗ್ರಾಮಸ್ಥರು ಮೂರು ವಿವಾದಾತ್ಮಕ ಕೃಷಿ ಕಾನೂನುಗಳ ವಿರುದ್ಧ ನಡೆಯುತ್ತಿರುವ ರೈತರ ಆಂದೋಲನವನ್ನು ಬೆಂಬಲಿಸದ ರಾಜಕಾರಣಿಗಳಿಗೆ ತಮ್ಮ ಗ್ರಾಮಕ್ಕೆ ಪ್ರವೇಶವಿಲ್ಲ ಎಂದು ಘೋಷಿಸಿದ್ದಾರೆ. ಸುಮಾರು 25 ಸಾವಿರ ಜನಸಂಖ್ಯೆ ಇರುವ ಗ್ರಾಮದ 36 ಜಾತಿ ಗುಂಪುಗಳ ಪಂಚಾಯತ್ ಬುಧವಾರ ಈ ನಿರ್ಧಾರ ಕೈಗೊಂಡಿದೆ.

ಈ ನಿರ್ಧಾರ ತೆಗೆದುಕೊಂಡ ಪಂಚಾಯಿತಿಯಲ್ಲಿ ಹಾಜರಿದ್ದ ರೈತ ಸುಭಾಷ್ ನೈನ್ “ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೇಶಾದ್ಯಂತ ನಡೆಯುತ್ತಿರುವ ಆಂದೋಲನಕ್ಕೆ ತಮ್ಮ ಬೆಂಬಲವನ್ನು ನೀಡದ ನಾಯಕರನ್ನು (ರಾಜಕೀಯ ಪಕ್ಷಗಳ ಅಥವಾ ರೈತ ಸಂಘಟನೆಗಳ) ಇಡೀ ಪಂಚಾಯತ್ ಸರ್ವಾನುಮತದಿಂದ ಖಂಡಿಸಿತು ಮತ್ತು ಗ್ರಾಮಕ್ಕೆ ಅವರ ಪ್ರವೇಶವನ್ನು ನಿಷೇಧಿಸಲು ಸರ್ವಾನುಮತದಿಂದ ನಿರ್ಧರಿಸಿತು” ಹೇಳಿರುವುದಾಗಿ ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ.

ಅಲ್ಲದೆ ಜನವರಿ 16 ರಂದು ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರಿಗೆ ಪಡಿತರ ಮತ್ತು ಇತರ ಅಗತ್ಯ ವಸ್ತುಗಳನ್ನು ಒದಗಿಸಲು ಪಂಚಾಯಿತಿ ನಿರ್ಧರಿಸಿದೆ. ಆಂದೋಲನಕ್ಕೆ ಬೆಂಬಲವಾಗಿ ಗ್ರಾಮದ ಪ್ರತಿಯೊಂದು ಕುಟುಂಬಗಳು ಜಾತಿ, ಸಮುದಾಯ ಬೇಧವಿಲ್ಲದೆ ದೇಣಿಗೆ ಮತ್ತು ದವಸ ಧಾನ್ಯಗಳನ್ನು ನೀಡಬಹುದು ಎಂದು ಪಂಚಾಯಿತಿ ನಿರ್ಧರಿಸಿದೆ.

“ಗ್ರಾಮಸ್ಥರು ಇಲ್ಲಿಯವರೆಗೆ 4.5 ಲಕ್ಷ ರೂ ದೇಣಿಗೆ ನೀಡಿದ್ದಾರೆ ಮತ್ತು ಪಡಿತರ ಮತ್ತು ಇತರ ಸರಕುಗಳನ್ನು (ಮುಖ್ಯವಾಗಿ ಕಟ್ಟಿಗೆಗಳು – ಚಳಿಯಿಂದ ರಕ್ಷಿಸಿಕೊಳ್ಳಲು) ಕೊಂಡ್ಯೊಯ್ಯಲು ಕನಿಷ್ಠ ಒಂಬತ್ತು ಟ್ರಾಕ್ಟರುಗಳನ್ನು ನೀಡಿದ್ದಾರೆ. ಗ್ರಾಮ ಪ್ರಧಾನ್ ಜೀತ್ ಸಿಂಗ್ ಅವರು 21,000 ರೂಗಳ ದೇಣಿಗೆ ಮತ್ತು ದೆಹಲಿಗೆ ತೆರಳಲು ತಮ್ಮ ಟ್ರ್ಯಾಕ್ಟರ್ ನೀಡಿದ್ದಾರೆ” ಎಂದು ವರದಿಯಾಗಿದೆ.

ಮಾಜಿ ಪ್ರಧಾನ್ ತೇಜ್ವೀರ್ ಸಿಂಗ್ ಮತ್ತು ಜಗ್ವೀರ್ ಸಿಂಗ್ ಕ್ರಮವಾಗಿ 5,000 ಮತ್ತು 2,100 ರೂಗಳ ದೇಣಿಗೆ ನೀಡಿದ್ದಾರೆ. ಪ್ರತಿಭಟನಾ ನಿರತ ರೈತರಿಗೆ ಬೆಂಬಲವಾಗಿ ಇತರ ಗ್ರಾಮಸ್ಥರು ಸಹ ದೇಣಿಗೆ ನೀಡಿದ್ದಾರೆ ಎಂದು ನೈನ್ ತಿಳಿಸಿದ್ದಾರೆ. ಅಲ್ಲದೇ ಗ್ರಾಮಸ್ಥರು ನಮಗೂ ರಾಜಕೀಯ ಪಕ್ಷಗಳಿಗೂ ಸಂಬಂಧವಿಲ್ಲ. ಆದರೆ ನ್ಯಾಯಯುತ ಬೇಡಿಕೆಗಳನ್ನು ಇಟ್ಟು ಹೋರಾಟ ನಡೆಸುತ್ತಿರುವ ರೈತರ ಮಾತು ಕೇಳದ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ಉತ್ತರ ಪ್ರದೇಶ ಹಲವೆಡೆ ಕೇಂದ್ರದ ಕಾನೂನುಗಳ ವಿರುದ್ಧ ಅನಿರ್ದಿಷ್ಟಾವಧಿ ಧರಣಿಗಳು ನಡೆಯುತ್ತಿವೆ. ಜನವರಿ 26 ರಂದು ಗಣರಾಜ್ಯೋತ್ಸವದ ದಿನದ ಹೋರಾಟಕ್ಕೆ ಅವರೆಲ್ಲರೂ ಬೆಂಬಲ ನೀಡುವುದಾಗಿ ತಿಳಿಸಿವೆ.

ದೆಹಲಿಯಲ್ಲಿ ನಡೆಯುತ್ತಿರುವ ರೈತ ಹೋರಾಟ 50 ನೇ ದಿನಕ್ಕೆ ಕಾಲಿಟ್ಟಿದೆ. ನಾಳೆ ಕೇಂದ್ರ ಸರ್ಕಾರದೊಂದಿಗೆ 9 ನೇ ಸುತ್ತಿನ ಮಾತುಕತೆ ನಡೆಯಲಿದೆ.


ಇದನ್ನೂ ಓದಿ: ರೈತರ ಪ್ರತಿರೋಧದ ಹಿನ್ನೆಲೆ: ಸುಪ್ರೀಂ ಸಮಿತಿಯಿಂದ ಸ್ವಯಂ ಹೊರನಡೆದ ಭೂಪಿಂದರ್‌ ಮನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...