Homeಮುಖಪುಟಉತ್ತರ ಪ್ರದೇಶ: ಗೋಧಿ ಕದ್ದ ಆರೋಪದಲ್ಲಿ ಮೂವರು ದಲಿತ ಬಾಲಕರಿಗೆ ಥಳಿತ, ತಲೆ ಬೋಳಿಸಿ ಗ್ರಾಮದಲ್ಲಿ...

ಉತ್ತರ ಪ್ರದೇಶ: ಗೋಧಿ ಕದ್ದ ಆರೋಪದಲ್ಲಿ ಮೂವರು ದಲಿತ ಬಾಲಕರಿಗೆ ಥಳಿತ, ತಲೆ ಬೋಳಿಸಿ ಗ್ರಾಮದಲ್ಲಿ ಮೆರವಣಿಗೆ

- Advertisement -
- Advertisement -

5 ಕೆಜಿ ಗೋಧಿ ಕದ್ದಿದ್ದಾರೆ ಎಂದು ಶಂಕಿಸಿದ ಕೋಳಿ ಫಾರಂ ಮಾಲೀಕರು, ಮೂವರು ದಲಿತ ಬಾಲಕರನ್ನು ಥಳಿಸಿದ್ದಾರೆ. ಸಾಲದ್ದಕ್ಕೆ, ಸಂತ್ರಸ್ತರ ತಲೆ ಬೋಳಿಸಿ, ಅವರ ಮುಖಕ್ಕೆ ಕಪ್ಪುಬಣ್ಣ ಬಳಿದು ಗ್ರಾಮದಲ್ಲಿ ಮೆರವಣಿಗೆ ಮಾಡಿರುವ ಘಟನೆ ಉತ್ತರ ಪ್ರದೇಶದ ಹಳ್ಳಿಯೊಂದರಲ್ಲಿ ನಡೆದಿದೆ ಎಂದು ಪೊಲೀಸರ ಮಾಹಿತಿಯನ್ನು ಉಲ್ಲೇಖಿಸಿ ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.

ಕೋಳಿ ಫಾರಂಗೆ ಕೆಲಸಕ್ಕೆ ಹಾಜರಾಗದ ಕಾರಣ ಇಬ್ಬರೂ ಹುಡುಗರಿಗೆ ಚಿತ್ರಹಿಂಸೆ ನೀಡಿದ್ದಾರೆ ಎಂದು ಸಂತ್ರಸ್ತರ ಕುಟುಂಬಗಳು ಆರೋಪಿಸಿದ್ದಾರೆ. ಉತ್ತರ ಪ್ರದೇಶದ ಬಹ್ರೈಚ್ ಜಿಲ್ಲೆಯ ನಾನ್‌ಪಾರಾ ಪೊಲೀಸ್ ಠಾಣೆ ವ್ಯಾಪ್ತಿಯ ತಾಜ್‌ಪುರ ಟೆಡಿಯಾ ಗ್ರಾಮದಲ್ಲಿ ಮಂಗಳವಾರ ಈ ಘಟನೆ ವರದಿಯಾಗಿದೆ. 12-14 ವರ್ಷ ವಯೋಮಾನದ ಮೂವರು ಬಾಲಕರನ್ನು ಥಳಿಸಿ, ತಲೆ ಬೋಳಿಸಿ, ಅವರ ಮುಖಕ್ಕೆ ಕಪ್ಪುಮಸಿ ಬಳಿದು ಮೆರವಣಿಗೆ ಮಾಡಿದ್ದಾರೆ.

“ಬಾಲಕರ ಮುಂಗೈಗೆ ‘ಕಳ್ಳ’ ಎಂದು ಬರೆಸಿ, ಕೈ ಕಟ್ಟಿ ಗ್ರಾಮದಲ್ಲಿ ಮೆರವಣಿಗೆ ಮಾಡಿದ್ದಾರೆ” ಎಂದು ಪೊಲೀಸರು ತಿಳಿಸಿದ್ದಾರೆ.

ನಾನ್‌ಪಾರಾ ಎಸ್‌ಎಚ್‌ಒ ಪ್ರದೀಪ್ ಸಿಂಗ್ ಮಾತನಾಡಿ, “ಸಂತ್ರಸ್ತರ ಕುಟುಂಬ ಸದಸ್ಯರ ದೂರಿನ ಆಧಾರದ ಮೇಲೆ, ನಾಲ್ವರು ಆರೋಪಿಗಳಾದ ನಜೀಮ್ ಖಾನ್, ಖಾಸಿಮ್ ಖಾನ್, ಇನಾಯತ್ ಮತ್ತು ಸಾನು ವಿರುದ್ಧ ಬುಧವಾರ ಪ್ರಕರಣ ದಾಖಲಿಸಲಾಗಿದೆ. ಭಾರತೀಯ ನ್ಯಾಯ ಸಂಹಿತಾ ಮತ್ತು ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯ ಸಂಬಂಧಿತ ವಿಭಾಗಗಳಲ್ಲಿ ದೂರು ದಾಖಲಿಸಲಾಗಿದೆ” ಎಂದು ಮಾಹಿತಿ ನೀಡಿದ್ದಾರೆ.

ಗ್ರಾಮದ ಮಾಜಿ ಮುಖ್ಯಸ್ಥ ಸಾನು ತಲೆಮರೆಸಿಕೊಂಡಿದ್ದು, ಉಳಿದ ಮೂವರನ್ನು ಬಂಧಿಸಲಾಗಿದೆ ಎಂದು ಸಿಂಗ್ ಹೇಳಿದ್ದಾರೆ. ಗ್ರಾಮದಲ್ಲಿ ಕೋಳಿ ಫಾರಂ ನಡೆಸುತ್ತಿದ್ದ ನಾಝಿಮ್ ಮತ್ತು ಖಾಸಿಂ, 5 ಕೆಜಿ ಗೋಧಿ ಕಳ್ಳತನ ಮಾಡಿದ್ದಾರೆ ಎಂದು ಬಾಲಕರ ಮೇಲೆ ಆರೋಪ ಮಾಡಿದ್ದರು. ಇಬ್ಬರೂ ಬಾಲಕರಿಗೆ ಜಾತಿ ನಿಂದನೆ ಮಾಡಿ, ತಲೆ ಬೋಳಿಸಿದ್ದಾರೆ. ಅವರ ಮುಖಕ್ಕೆ ಕಪ್ಪುಮಸಿ ಬಳಿದು ಗ್ರಾಮದಲ್ಲಿ ಮೆರವಣಿಗೆ ಮಾಡುವ ಮುನ್ನ ವಿದ್ಯುತ್ ತಂತಿಯಿಂದ ಕತ್ತು ಹಿಸುಕಲು ಯತ್ನಿಸಿದರು. ನಮ್ಮ ಮುಂದೋಳಿನ ಮೇಲೆ ‘ಕಳ್ಳ’ ಎಂದು ಬರೆಯಲಾಗಿದೆ ಎಂದು ಸಂತ್ರಸ್ತರು ಸುದ್ದಿಗಾರರಿಗೆ ತಿಳಿಸಿದರು.

ಆರೋಪಿಗಳ ಜೊತೆಗೂಡಿ ಸಾನು ಮತ್ತು ಇನಾಯತ್ ಹುಡುಗರಿಗೆ ಬೆದರಿಕೆ ಹಾಕಿದರು ಎಂದು ಅವರು ಆರೋಪಿಸಿದ್ದಾರೆ.

ಆರೋಪಿಗಳು ತಮ್ಮ ಮೊಬೈಲ್‌ನಲ್ಲಿ ಕೃತ್ಯವನ್ನು ಚಿತ್ರೀಕರಿಸಿದ್ದಾರೆ. ಈ ಮಧ್ಯೆ, ಕೋಳಿ ಫಾರಂಗೆ ಕೆಲಸಕ್ಕೆ ಹಾಜರಾಗದ ಕಾರಣ ನಜೀಮ್ ಮತ್ತು ಖಾಸಿಮ್ ಮೂವರು ಬಾಲಕರಿಗೆ ಚಿತ್ರಹಿಂಸೆ ನೀಡಿದ್ದಾರೆ ಎಂದು ಸಂತ್ರಸ್ತ ಬಾಲಕರ ಕುಟುಂಬ ಸದಸ್ಯರು ಹೇಳಿದ್ದಾರೆ. ವಿಷಯದ ಸೂಕ್ಷ್ಮತೆಯನ್ನು ಪರಿಗಣಿಸಿ, ಮುಂಜಾಗ್ರತಾ ಕ್ರಮವಾಗಿ ಗ್ರಾಮದಲ್ಲಿ ಸಾಕಷ್ಟು ಪೊಲೀಸ್ ಪಡೆಗಳನ್ನು ನಿಯೋಜಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ; ಕೇಂದ್ರದ ‘ಒಂದು ರಾಷ್ಟ್ರ ಒಂದು ಚುನಾವಣೆ’ ಪ್ರಸ್ತಾವನೆ; ಸರ್ವಾನುಮತದಿಂದ ತಿರಸ್ಕರಿಸಿದ ಕೇರಳ ವಿಧಾನಸಭೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಥಳಾಂತರಗೊಂಡ ಅಕ್ಬರ್ ನಗರ ನಿವಾಸಿಗಳನ್ನು SIR ನಿಂದ ಹೊರಗಿಟ್ಟಿರುವ ಬಗ್ಗೆ ಪರಿಶೀಲಿಸಲು ಲಕ್ನೋ ಚುನಾವಣಾ ಅಧಿಕಾರಿಗೆ ಸುಪ್ರೀಂ ಸೂಚನೆ

ಉತ್ತರ ಪ್ರದೇಶದಲ್ಲಿ ತಮ್ಮ ಮನೆಗಳನ್ನು ನೆಲಸಮಗೊಳಿಸಿ, ಸ್ಥಳಾಂತರದ ನಂತರ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ನಿಂದ ತಮ್ಮನ್ನು ಹೊರಗಿಡಲಾಗಿದೆ ಎಂದು ಆರೋಪಿಸಿ ಅಕ್ಬರ್ ನಗರದ ಮಾಜಿ ನಿವಾಸಿಗಳು ಎತ್ತಿರುವ ದೂರುಗಳನ್ನು...

‘ವಯಸ್ಕರು ಒಟ್ಟಿಗೆ ವಾಸಿಸಲು ನಿರ್ಧರಿಸುವುದು ಅಪರಾಧವಲ್ಲ..’; ಅಂತರಧರ್ಮೀಯ ಜೋಡಿ ಕುರಿತು ಕೋರ್ಟ್ ಮಹತ್ವದ ತೀರ್ಪು

"ಅಂತರ್ಧರ್ಮೀಯರಾದ ಇಬ್ಬರು ವಯಸ್ಕ ವ್ಯಕ್ತಿಗಳು, ಅವರು ತಮ್ಮ ಸ್ವತಂತ್ರ ಇಚ್ಛೆಯಿಂದ ಒಟ್ಟಿಗೆ ವಾಸಿಸಲು ನಿರ್ಧರಿಸುತ್ತಾರೆ, ಉತ್ತರ ಪ್ರದೇಶದ ಮತಾಂತರ ವಿರೋಧಿ ಕಾನೂನು ಅವರನ್ನು ತಡೆಯಲು ಅಥವಾ ಅಂತರಧರ್ಮೀಯ ವಿವಾಹಗಳನ್ನು ನಿಷೇಧಿಸಲು ಸಾಧ್ಯವಿಲ್ಲ" ಎಂದು...

ಗೋರಖ್‌ಪುರದ ಏಮ್ಸ್‌ನಲ್ಲಿ ನಾಗಾಲ್ಯಾಂಡ್ ವೈದ್ಯೆಗೆ ಕಿರುಕುಳ; ಜನಾಂಗೀಯ ನಿಂದನೆ

ಉತ್ತರ ಪ್ರದೇಶದ ಗೋರಖ್‌ಪುರದ ಏಮ್ಸ್‌ನಲ್ಲಿ ನಿಯೋಜಿತರಾಗಿದ್ದ ನಾಗಾಲ್ಯಾಂಡ್‌ನ ಮೂರನೇ ವರ್ಷದ ನಿವಾಸಿ ವೈದ್ಯರ ಮೇಲೆ ಭಾನುವಾರ ಸಂಜೆ ಸಂಸ್ಥೆಯ ಆವರಣದ ಬಳಿ ಮೂವರು ಜನಾಂಗೀಯ ನಿಂದನೆ, ಕಿರುಕುಳ ಮತ್ತು ದೈಹಿಕ ಹಲ್ಲೆ ನಡೆಸಿದ್ದಾರೆ...

‘2026 ರಲ್ಲಿ ಸಮುದ್ರವನ್ನು ಪ್ರಾಬಲ್ಯಗೊಳಿಸುತ್ತೇವೆ’: ಪಹಲ್ಗಾಮ್ ದಾಳಿಯ ಮಾಸ್ಟರ್ ಮೈಂಡ್ ಸೈಫುಲ್ಲಾ ಕಸೂರಿಯಿಂದ ಭಾರತಕ್ಕೆ ಬಹಿರಂಗ ಬೆದರಿಕೆ

2008ರ ಮುಂಬೈ ದಾಳಿಯ ಭೀಕರತೆಯನ್ನು ಪ್ರತಿಧ್ವನಿಸುವ ಕಟು ಬೆದರಿಕೆಯಲ್ಲಿ, ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾ (LeT) ಭಾರತದಲ್ಲಿ ಮತ್ತೊಮ್ಮೆ ಸಮುದ್ರ ಮಾರ್ಗವನ್ನು ಬಳಸಿಕೊಂಡು 26/11 ಮಾದರಿಯ ದಾಳಿಯನ್ನು ನಡೆಸುವುದಾಗಿ ಬೆದರಿಕೆ ಹಾಕಿದೆ...

ಕೇರಳ ಹೆಸರು ಇನ್ನು ಮುಂದೆ ‘ಕೇರಳಂ’; ಕೇಂದ್ರ ಸಚಿವ ಸಂಪುಟ ಅನುಮೋದನೆ

ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹೊತ್ತಿನಲ್ಲಿ ಮಹತ್ವದ ಬೆಳವಣಿಗೆಯೊಂದರಲ್ಲಿ, ರಾಜ್ಯದ ಹೆಸರನ್ನು ಕೇರಳಂ ಎಂದು ಬದಲಾಯಿಸುವ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಮಂಗಳವಾರ ಅನುಮೋದನೆ ನೀಡಿದೆ. "ಕೇರಳವನ್ನು ಕೇರಳಂ ಎಂದು ಮರುನಾಮಕರಣ ಮಾಡಲು ಕೇಂದ್ರ...

ನಾಡೋಜ ಗೌರವ ತಿರಸ್ಕರಿಸಿದ ಹಿರಿಯ ಚಿಂತಕ ಡಾ ಜಿ. ರಾಮಕೃಷ್ಣ; ರಾಜ್ಯಪಾಲರಿಂದ ಗೌರವ ಸ್ವೀಕರಿಸದಿರಲು ನಿರ್ಧಾರ

ಹಿರಿಯ ಚಿಂತಕ ಡಾ.ಜಿ.ರಾಮಕೃಷ್ಣ ಅವರು ಹಂಪಿ ಕನ್ನಡ ವಿಶ್ವವಿದ್ಯಾಲಯ ಕೊಡಮಾಡುವ ನಾಡೋಜ ಪ್ರಶಸ್ತಿಯನ್ನು ರಾಜ್ಯಪಾಲರಿಂದ ಸ್ವೀಕರಿಸಲು ನಿರಾಕರಿಸಿದ್ದಾರೆ. ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿದ್ಯಾರಣ್ಯ ಕ್ಯಾಂಪಸ್‌ನ ‘ನವರಂಗ’ ಬಯಲು ರಂಗಮಂದಿರದಲ್ಲಿ ಮಂಗಳವಾರ ನಡೆಯುವ 34ನೇ ನುಡಿಹಬ್ಬದಲ್ಲಿ...

‘ಕೇರಳ ಸಂಪೂರ್ಣ ಸಾಮರಸ್ಯದಿಂದ ಬದುಕುತ್ತಿದೆ, ಸಿನಿಮಾದಲ್ಲಿ ತಪ್ಪು ಚಿತ್ರಣವಿದೆ’: ‘ದಿ ಕೇರಳ ಸ್ಟೋರಿ 2’ ಕುರಿತು ಕೇರಳ ಹೈಕೋರ್ಟ್

ವಿವಾದಾತ್ಮಕ 'ದಿ ಕೇರಳ ಸ್ಟೋರಿ 2 -ಗೋಸ್ ಬಿಯಾಂಡ್' ಸಿನಿಮಾಗೆ ಸರ್ಟಿಫಿಕೇಟ್ ನೀಡಿರುವ ಕುರಿತು ಕೇರಳ ಹೈಕೋರ್ಟ್ ಮಂಗಳವಾರ (ಫೆ.24) ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿಯನ್ನು (ಸಿಬಿಎಫ್‌ಸಿ) ಪ್ರಶ್ನಿಸಿದೆ ಎಂದು ಕಾನೂನು ಸುದ್ದಿ...

‘ಸರ್ವಾಧಿಕಾರಿ ಪ್ರವೃತ್ತಿ, ಹೇಡಿತನಕ್ಕೆ ಸಾಕ್ಷಿ’ : ಯುವ ಕಾಂಗ್ರೆಸ್‌ ನಾಯಕರ ಬಂಧನ ಖಂಡಿಸಿದ ರಾಹುಲ್ ಗಾಂಧಿ

ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಚಿಬ್ ಮತ್ತು ಪಕ್ಷದ ಇತರ ಸದಸ್ಯರ ಬಂಧನವನ್ನು ತೀವ್ರವಾಗಿ ಖಂಡಿಸಿರುವ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, "ಇದು ಸರ್ವಾಧಿಕಾರಿ ಪ್ರವೃತ್ತಿ ಮತ್ತು...

‘ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ’; ನ್ಯಾಯಮೂರ್ತಿ ಉಜ್ವಲ್  ಭೂಯಾನ್

ಹೊಸದಿಲ್ಲಿ: ಭಾರತದ ಸಂವಿಧಾನವು ಪ್ರತಿಯೊಬ್ಬರಿಗೂ ಸಮಾನತೆ ಮತ್ತು ಘನತೆಯ ಭರವಸೆ ನೀಡುತ್ತದೆ. ಆದರೆ ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ ಎಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ...

ಹೈದರಾಬಾದ್ ವಿಶ್ವವಿದ್ಯಾಲಯದಲ್ಲಿ ದಲಿತ ವಿದ್ಯಾರ್ಥಿಯ ಮೇಲೆ ಹಲ್ಲೆ ಆರೋಪ; ಎಎಸ್ಎ ಪ್ರತಿಭಟನೆ

ದಲಿತ ವಿದ್ಯಾರ್ಥಿಯ ಮೇಲೆ ಜಾತಿ ಆಧಾರಿತ ಹಲ್ಲೆ ನಡೆದಿದ್ದರೂ ಪ್ರಕರಣದಲ್ಲಿ ಹೈದರಾಬಾದ್ ವಿಶ್ವವಿದ್ಯಾಲಯದ (ಯುಒಎಚ್) ಆಡಳಿತಾತ್ಮಕ ನಿಷ್ಕ್ರಿಯತೆ ಇದೆ ಎಂದು ಆರೋಪಿಸಿ, ಅಂಬೇಡ್ಕರ್ ವಿದ್ಯಾರ್ಥಿ ಸಂಘ (ಎಎಸ್ಎ) ಸೋಮವಾರ (ಫೆ.23) ಪ್ರತಿಭಟನೆ ನಡೆಸಿತು...