Homeಮುಖಪುಟಉತ್ತರ ಪ್ರದೇಶ - ಗಂಟಲು ಸೀಳಿ, ಜನನಾಂಗ ವಿರೂಪಗೊಳಿಸಿ ಯುವಕನ ಕೊಲೆ

ಉತ್ತರ ಪ್ರದೇಶ – ಗಂಟಲು ಸೀಳಿ, ಜನನಾಂಗ ವಿರೂಪಗೊಳಿಸಿ ಯುವಕನ ಕೊಲೆ

- Advertisement -
- Advertisement -

ಉತ್ತರ ಪ್ರದೇಶದ ಪಿಲಿಭಿತ್ ಜಿಲ್ಲೆಯ ಬಿಸಾಲ್ಪುರ ಪಟ್ಟಣದ 28 ವರ್ಷದ ಯುವಕನ ಮೃತದೇಹವು ಕುತ್ತಿಗೆ ಸೀಳಿ, ಜನನಾಂಗ ಕತ್ತರಿಸಲ್ಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ. ಪ್ರೇಮ ಸಂಬಂಧದ ಕಾರಣಕ್ಕಾಗಿ ಯುವಕನನ್ನು ಕೊಲೆ ಮಾಡಲಾಗಿದೆ ಎಂದು ಪೊಲೀಸರು ಪ್ರತಿಪಾದಿಸಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ ಎಂದು ವರದಿಯಾಗಿದೆ. ಉತ್ತರ ಪ್ರದೇಶ

ಕೊಲೆಗೀಡಾದ ಯುವಕನನ್ನು ಮುಜಮ್ಮಿಲ್ ಎಂದು ಗುರುತಿಸಲಾಗಿದ್ದು, ಬುಧವಾರ ಬರೇಲಿ ಜಿಲ್ಲೆಯ ಇಜ್ಜತ್‌ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಬರ್ಕಾಪುರ ಪ್ರದೇಶದ ಕಾಲುವೆಯ ಬಳಿ ಅವರ ಶವವನ್ನು ಕಟ್ಟಿ ಎಸೆದ ಸ್ಥಿತಿಯಲ್ಲಿ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

“ಬಿಸಾಲ್ಪುರದಲ್ಲಿ ನಾಪತ್ತೆಯಾಗಿದ್ದ ಮುಜಮ್ಮಿಲ್ ಅವರ ಶವವನ್ನು ಬಿಸಾಲ್ಪುರ ಮತ್ತು ಇಜ್ಜತ್‌ನಗರ ಪೊಲೀಸರ ಜಂಟಿ ಕಾರ್ಯಾಚರಣೆಯ ನಂತರ ಪತ್ತೆ ಮಾಡಲಾಗಿದೆ. ಬಿಸಾಲ್ಪುರದಲ್ಲಿ ದಾಖಲಾಗಿದ್ದ ನಾಪತ್ತೆ ಪ್ರಕರಣವನ್ನು ಕೊಲೆ ಪ್ರಕರಣವನ್ನಾಗಿ ಪರಿವರ್ತಿಸಲಾಗಿದ್ದು, ಬಿಸಾಲ್ಪುರ ಪೊಲೀಸರು ಹೆಚ್ಚಿನ ತನಿಖೆ ನಡೆಸಲಿದ್ದಾರೆ” ಎಂದು ಬರೇಲಿ ವೃತ್ತ ಅಧಿಕಾರಿ (ಮೂರನೇ) ದೇವೇಂದ್ರ ಕುಮಾರ್ ಗುರುವಾರ ಸುದ್ದಿಗಾರರಿಗೆ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಬುಧವಾರ, ಇಜ್ಜತ್‌ನಗರ ಸ್ಟೇಷನ್ ಹೌಸ್ ಆಫೀಸರ್ (SHO) ವಿಜೇಂದ್ರ ಸಿಂಗ್ ಅವರು ಬರ್ಕಾಪುರ ಗ್ರಾಮದ ಕಾಲುವೆಯ ಬಳಿ ಶವವೊಂದರ ಬಗ್ಗೆ ಮಾಹಿತಿ ಪಡೆದರು. ನಮ್ಮ ತಂಡವು ಕಾಲುವೆಯ ಬಳಿಯ ಪೊದೆಗಳಿಂದ ಯುವಕನ ಛಿದ್ರಗೊಂಡ ದೇಹವನ್ನು ವಶಪಡಿಸಿಕೊಂಡಿದೆ. ಮುಜಮ್ಮಿಲ್ ಅವರನ್ನು ಗಂಟಲು ಸೀಳಿ ಕೊಲ್ಲಲಾಗಿದೆ ಎಂದು ಮರಣೋತ್ತರ ಪರೀಕ್ಷೆಯಲ್ಲಿ ದೃಢಪಟ್ಟಿದೆ. ಅವರ ಜನನಾಂಗಗಳನ್ನು ಸಹ ಛಿದ್ರಗೊಳಿಸಲಾಗಿದೆ” ಎಂದು ಎಸ್‌ಎಚ್‌ಒ ಸಿಂಗ್ ಹೇಳಿದ್ದಾರೆ.

ಬಿಸಾಲ್ಪುರ ಸಿಒ ಡಾ. ಪ್ರತೀಕ್ ಅವರು ಬಲಿಪಶುವಿನ ದೇಹ ಮತ್ತು ಅಪರಾಧಕ್ಕೆ ಬಳಸಲಾದ ಕಾರನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಹೇಳಿದ್ದಾರೆ. “ಪಿಲಿಭಿತ್‌ನ ರಿಚೌಲಾ ಗ್ರಾಮದ ಅರ್ಹಾನ್ ಮತ್ತು ಅವರ ಸ್ನೇಹಿತ ಗುಡ್ಡು ಎಂಬ ಇಬ್ಬರು ಶಂಕಿತರನ್ನು ವಶಕ್ಕೆ ಪಡೆಯಲಾಗಿದೆ. ಕೊಲೆಗೀಡಾದ ಮುಜಮ್ಮಿಲ್ ಶಂಕಿತ ಆರೋಪಿಯ ಕುಟುಂಬದ ಮಹಿಳೆಯೊಂದಿಗೆ ಹೊಂದಿದ್ದ ಸಂಬಂಧದಿಂದ ಉಂಟಾದ ವೈಯಕ್ತಿಕ ದ್ವೇಷದ ಪರಿಣಾಮವಾಗಿ ಈ ಕೊಲೆ ನಡೆದಿದೆ” ಎಂದು ಅವರು ಹೇಳಿದ್ದಾರೆ.

ಮುಜಮ್ಮಿಲ್ ಅವರ ತಂದೆ ಶಂಸುದ್ದೀನ್ ಅವರ ಪ್ರಕಾರ, ಅವರ ಮಗ ಮೊಬೈಲ್ ಟವರ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದು, ಮಂಗಳವಾರ ಬೆಳಿಗ್ಗೆ ಮನೆಯಿಂದ ಹೊರಟಿದ್ದ ಅವರು ನಂತರ ನಾಪತ್ತೆಯಾಗಿದ್ದರು. ಉತ್ತರ ಪ್ರದೇಶ

“ನಾವು ಅವರಿಗೆ ಕರೆ ಮಾಡಲು ಪ್ರಯತ್ನಿಸಿದಾಗ, ಅವರ ಫೋನ್ ಸ್ವಿಚ್ ಆಫ್ ಆಗಿತ್ತು. ನಾವು ಬಿಸಾಲ್ಪುರ ಪೊಲೀಸ್ ಠಾಣೆಯಲ್ಲಿ ಕಾಣೆಯಾದ ಬಗ್ಗೆ ದೂರು ದಾಖಲಿಸಿದ್ದೇವೆ. ಮುಜಮ್ಮಿಲ್ ಕೆಲವು ವ್ಯಕ್ತಿಗಳೊಂದಿಗೆ ಘರ್ಷಣೆಯನ್ನು ಹೊಂದಿದ್ದರು ಮತ್ತು ಅವರ ಕೊಲೆಗೆ ಅವರೇ ಕಾರಣ ಎಂದು ನಾನು ಅನುಮಾನಿಸುತ್ತೇನೆ” ಎಂದು ಶಂಸುದ್ದೀನ್ ಆರೋಪಿಸಿದ್ದಾರೆ.

ಬಿಸಾಲ್ಪುರ ಪೊಲೀಸ್ ಇನ್ಸ್‌ಪೆಕ್ಟರ್ (ಅಪರಾಧ) ವಿನೋದ್ ಕುಮಾರ್ ಶರ್ಮಾ, “ಅರ್ಹಾನ್ ಮತ್ತು ಗುಡ್ಡು ಕೊಲೆಗೆ ಒಪ್ಪಿಕೊಂಡಿದ್ದಾರೆ. ಮುಜಮ್ಮಿಲ್ ಅರ್ಹಾನ್ ಕುಟುಂಬದ ಮಹಿಳೆಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದರು. ಇದು ಅವರ ನಡುವೆ ಈ ಹಿಂದೆ ವಿವಾದಗಳಿಗೆ ಕಾರಣವಾಗಿತ್ತು” ಎಂದು ಹೇಳಿದ್ದಾರೆ.

ವಿಚಾರಣೆಯ ಸಮಯದಲ್ಲಿ ಆರೋಪಿಯು ಪೊಲೀಸರಿಗೆ ಮೃತನಿಗೆ ತನ್ನ ಸಹೋದರಿಯೊಂದಿಗೆ ಪ್ರೇಮ ಸಂಬಂಧವಿತ್ತು. ಅವಳನ್ನು ಭೇಟಿಯಾಗದಂತೆ ಹಲವಾರು ಬಾರಿ ಎಚ್ಚರಿಸಿದ ನಂತರವೂ ಅವನು ಕೇಳಲಿಲ್ಲ, ಇದರಿಂದಾಗಿ ಅವನನ್ನು ಕೊಂದಿದ್ದೇವೆ ಎಂದು ತಿಳಿಸಿದ್ದಾನೆ ಎಂದು ವರದಿಯಾಗಿದೆ. “ಪ್ರತಿಕಾರದಿಂದಾಗಿ ಶಂಕಿತರು ಬಿಸಾಲ್ಪುರ ಪ್ರದೇಶದಲ್ಲಿ ಮುಜಮ್ಮಿಲ್‌ನನ್ನು ಕೊಂದು, ಅವನ ದೇಹವನ್ನು ಕಟ್ಟಿ, ಕಾರಿನಲ್ಲಿ ಸಾಗಿಸಿ, ಬರೇಲಿಯಲ್ಲಿ ಎಸೆದಿದ್ದಾರೆ” ಎಂದು ಶರ್ಮಾ ಹೇಳಿದ್ದಾರೆ. ಪ್ರಕರಣದ ಕುರಿತು ಹೆಚ್ಚಿನ ಕಾನೂನು ಕ್ರಮಗಳು ಮತ್ತು ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂಓದಿ:  ಲಕ್ನೋದ ಐತಿಹಾಸಿಕ ಇಮಾಂಬರಾಗಳು ವಕ್ಫ್ ಭೂಮಿಯಲ್ಲಿ ನಿರ್ಮಿಸಲಾಗಿಲ್ಲ: ಉತ್ತರಪ್ರದೇಶ ಸರ್ಕಾರ

ಲಕ್ನೋದ ಐತಿಹಾಸಿಕ ಇಮಾಂಬರಾಗಳು ವಕ್ಫ್ ಭೂಮಿಯಲ್ಲಿ ನಿರ್ಮಿಸಲಾಗಿಲ್ಲ: ಉತ್ತರಪ್ರದೇಶ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...