Homeಮುಖಪುಟಉನ್ನಾವೊದಲ್ಲಿ ಇಬ್ಬರು ದಲಿತ ಬಾಲಕಿಯರ ಶವ ಪತ್ತೆ: ಮತ್ತೊಬ್ಬಳ ಸ್ಥಿತಿ ಗಂಭೀರ

ಉನ್ನಾವೊದಲ್ಲಿ ಇಬ್ಬರು ದಲಿತ ಬಾಲಕಿಯರ ಶವ ಪತ್ತೆ: ಮತ್ತೊಬ್ಬಳ ಸ್ಥಿತಿ ಗಂಭೀರ

- Advertisement -
- Advertisement -

13 ಮತ್ತು 16 ವರ್ಷ ವಯಸ್ಸಿನ ಇಬ್ಬರು ದಲಿತ ಬಾಲಕಿಯರ ಶವಗಳು ಬುಧವಾರ ಸಂಜೆ ಉತ್ತರಪ್ರದೇಶದ ಉನ್ನಾವೊ ಜಿಲ್ಲೆಯ ಗ್ರಾಮದ ಕುಟುಂಬವೊಂದರ ಜಮೀನಿನಲ್ಲಿ ಪತ್ತೆಯಾಗಿವೆ. ಮತ್ತೊಬ್ಬ 17 ವರ್ಷದ ಬಾಲಕಿಯ ಸ್ಥಿತಿ ಗಂಭೀರ ವಾಗಿದೆ. ಹಿರಿಯ ಹುಡುಗಿಯರು ಸಹೋದರಿಯರಾಗಿದ್ದರು, 13 ವರ್ಷದ ಹುಡುಗಿ ಅವರ ಸೋದರಸಂಬಂಧಿ ಎಂದು ಇಂಡಿಯನ್‌ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

ಪೊಲೀಸರು ಇದು ವಿಷಪ್ರಾಶನದ ಪ್ರಕರಣ ಎಂದು ಶಂಕಿಸಿದ್ದಾರೆ, ಸ್ಥಳದಲ್ಲಿ ಯಾವುದೇ ಹೋರಾಟದ ಲಕ್ಷಣಗಳಿಲ್ಲ ಮತ್ತು ಯಾವುದೇ ಗಾಯದ ಗುರುತುಗಳು ಕಂಡುಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಆದರೆ ಬಾಲಕಿಯರ ಸಹೋದರ, ತನ್ನ ಸಹೋದರಿಯರ ಕೈ-ಕಾಲುಗಳನ್ನು ಕಟ್ಟಿ ಹಾಕಲಾಗಿತ್ತು ಎಂದು ಆರೋಪಿಸಿದ್ದಾರೆ.. ಆಸ್ಪತ್ರೆಗೆ ಬಂದಾಗ ಕಿರಿಯ ಬಾಲಕಿಯರನ್ನು ಮೃತರೆಂದು ಘೋಷಿಸಲಾಗಿದ್ದರೆ, 17 ವರ್ಷದ ಯುವತಿಯು ಸ್ಥಿತಿ ಗಂಭೀರವಾಗಿದೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಹೋದರ, “ಅವರು ಹುಲ್ಲು ಕೊಯ್ಯಲು ಜಮೀನಿಗೆ ಹೋಗಿದ್ದರು. ಇಂದು, ಅವರು ತಡವಾದರೂ ಹಿಂತಿರುಗದೇ ಇದ್ದಾಗ, ನಾವು ಅವರನ್ನು ಹುಡುಕಲು ಹೋದೆವು. ಅವರ ಕೈಕಾಲುಗಳನ್ನು ಬಟ್ಟೆಗಳಿಂದ ಕಟ್ಟಿ ಹಾಕಿದ್ದನ್ನು ಕಂಡೆವು’ ಎಂದಿದ್ದಾರೆ.

ಲಕ್ನೋ ವಲಯದ ಐಜಿ ಲಕ್ಷ್ಮಿ ಸಿಂಗ್, ಹುಡುಗಿಯರನ್ನು ಕಟ್ಟಿಹಾಕಲಾಗಿತ್ತೆ ಎಂಬುದು ಇನ್ನೂ ದೃಢಪಟ್ಟಿಲ್ಲ. ಮೃತರ ಸಹೋದರ ಈ ಹೇಳಿಕೆಯನ್ನು ನೀಡಿದ್ದಾನೆ, ಆದರೆ ಪೊಲೀಸರು ಸ್ಥಳ ತಲುಪುವ ಮೊದಲು ಶವಗಳನ್ನು ಆ ಜಾಗದಿಂದ ತೆಗೆದಿದ್ದರಿಂದ ನಾವು ಈಗ ಏನನ್ನೂ ಹೇಳಲಾಗುವುದಿಲ್ಲ” ಎಂದು ಹೇಳಿದ್ದಾರೆ.

ಯುಪಿ ಎಡಿಜಿ (ಕಾನೂನು ಮತ್ತು ಸುವ್ಯವಸ್ಥೆ) ಪ್ರಶಾಂತ್ ಕುಮಾರ್, ಬಾಲಕಿಯರು ಬುಧವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ತಮ್ಮ ಮನೆಯಿಂದ ಹೊರಟು ಹೋಗಿದ್ದು, ಸಂಜೆ ಕುಟುಂಬ ಸದಸ್ಯರು ಇದನ್ನು ಪತ್ತೆ ಮಾಡಿದ್ದಾರೆ.

ಉನ್ನಾವೊ ಎಸ್ಪಿ ಸುರೇಶರಾವ್ ಎ ಕುಲಕರ್ಣಿ, “ಅಶೋಹಾ ಪೊಲೀಸ್ ಠಾಣೆ ಮಿತಿಯಲ್ಲಿ, ಮೂವರು ಬಾಲಕಿಯರು ತಮ್ಮ ಜಮೀನಿನಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಅವರನ್ನು ಆಸ್ಪತ್ರೆಗೆ ಕಳುಹಿಸಲಾಗಿದೆ. ಅವರು ಮೇವು/ಹುಲ್ಲು ತರಲು ಹೋಗಿದ್ದರು ಮತ್ತು ಕುಟುಂಬ ಸದಸ್ಯರು ಅವರನ್ನು ಹುಡುಕಲು ಹೋದಾಗ, ಅವರು ಹೊಲದಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿರುವುದನ್ನು ಕಂಡುಕೊಂಡರು. ಅವರ ಬಾಯಿಯಿಂದ ಬಿಳಿ ಪದಾರ್ಥ ಹೊರಬರುತ್ತಿತ್ತು, ಇದು ವಿಷಪ್ರಾಶನದ ಲಕ್ಷಣ ಎಂದು ವೈದ್ಯರು ತಕ್ಷಣಕ್ಕೆ ಅನುಮಾನಿಸಿದ್ದಾರೆ. ನಾವು ಸಂಬಂಧಪಟ್ಟ ಎಲ್ಲ ಜನರ ಹೇಳಿಕೆಗಳನ್ನು ದಾಖಲಿಸುತ್ತಿದ್ದೇವೆ ಮತ್ತು ಆಳವಾದ ತನಿಖೆ ನಡೆಸಲಾಗುತ್ತಿದೆ. ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ” ಎಂದಿದ್ದಾರೆ.

ಎಡಿಜಿ (ಲಕ್ನೋ ವಲಯ) ಎಸ್ ಎನ್ ಸಬತ್, ಅಪರಾಧದ ಸ್ಥಳದಲ್ಲಿ ಯಾವುದೇ ಹಿಂಸಾಚಾರ ಅಥವಾ ಹೋರಾಟದ ಲಕ್ಷಣಗಳಿಲ್ಲ ಎಂದು ಹೇಳಿದರು. “ನಮ್ಮ ತನಿಖೆ ನಡೆಯುತ್ತಿದೆ. ನಾವು ಸಾಧ್ಯವಿರುವ ಎಲ್ಲ ಕೋನಗಳಲ್ಲಿ ತನಿಖೆ ಮಾಡುತ್ತಿದ್ದೇವೆ” ಎಂದು ಎಡಿಜಿ ಹೇಳಿದ್ದಾರೆ.
ಹೆಚ್ಚಿನ ತನಿಖೆಗಾಗಿ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದಾರೆ ಎಂದು ಉನ್ನಾವ್ ಪೊಲೀಸರು ಹೇಳಿಕೆಯಲ್ಲಿ ತಿಳಿಸಿದ್ದಾರೆ.


ಇದನ್ನೂ ಓದಿ: ಮೋದಿಯವರ ಮೌನ – ನಮ್ಮ ಹೆಣ್ಣುಮಕ್ಕಳಿಗೆ ಅಪಾಯ: ಚಂದ್ರಶೇಖರ್ ಆಜಾದ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...