Homeಮುಖಪುಟಉನ್ನಾವೊದಲ್ಲಿ ಇಬ್ಬರು ದಲಿತ ಬಾಲಕಿಯರ ಶವ ಪತ್ತೆ: ಮತ್ತೊಬ್ಬಳ ಸ್ಥಿತಿ ಗಂಭೀರ

ಉನ್ನಾವೊದಲ್ಲಿ ಇಬ್ಬರು ದಲಿತ ಬಾಲಕಿಯರ ಶವ ಪತ್ತೆ: ಮತ್ತೊಬ್ಬಳ ಸ್ಥಿತಿ ಗಂಭೀರ

- Advertisement -
- Advertisement -

13 ಮತ್ತು 16 ವರ್ಷ ವಯಸ್ಸಿನ ಇಬ್ಬರು ದಲಿತ ಬಾಲಕಿಯರ ಶವಗಳು ಬುಧವಾರ ಸಂಜೆ ಉತ್ತರಪ್ರದೇಶದ ಉನ್ನಾವೊ ಜಿಲ್ಲೆಯ ಗ್ರಾಮದ ಕುಟುಂಬವೊಂದರ ಜಮೀನಿನಲ್ಲಿ ಪತ್ತೆಯಾಗಿವೆ. ಮತ್ತೊಬ್ಬ 17 ವರ್ಷದ ಬಾಲಕಿಯ ಸ್ಥಿತಿ ಗಂಭೀರ ವಾಗಿದೆ. ಹಿರಿಯ ಹುಡುಗಿಯರು ಸಹೋದರಿಯರಾಗಿದ್ದರು, 13 ವರ್ಷದ ಹುಡುಗಿ ಅವರ ಸೋದರಸಂಬಂಧಿ ಎಂದು ಇಂಡಿಯನ್‌ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

ಪೊಲೀಸರು ಇದು ವಿಷಪ್ರಾಶನದ ಪ್ರಕರಣ ಎಂದು ಶಂಕಿಸಿದ್ದಾರೆ, ಸ್ಥಳದಲ್ಲಿ ಯಾವುದೇ ಹೋರಾಟದ ಲಕ್ಷಣಗಳಿಲ್ಲ ಮತ್ತು ಯಾವುದೇ ಗಾಯದ ಗುರುತುಗಳು ಕಂಡುಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಆದರೆ ಬಾಲಕಿಯರ ಸಹೋದರ, ತನ್ನ ಸಹೋದರಿಯರ ಕೈ-ಕಾಲುಗಳನ್ನು ಕಟ್ಟಿ ಹಾಕಲಾಗಿತ್ತು ಎಂದು ಆರೋಪಿಸಿದ್ದಾರೆ.. ಆಸ್ಪತ್ರೆಗೆ ಬಂದಾಗ ಕಿರಿಯ ಬಾಲಕಿಯರನ್ನು ಮೃತರೆಂದು ಘೋಷಿಸಲಾಗಿದ್ದರೆ, 17 ವರ್ಷದ ಯುವತಿಯು ಸ್ಥಿತಿ ಗಂಭೀರವಾಗಿದೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಹೋದರ, “ಅವರು ಹುಲ್ಲು ಕೊಯ್ಯಲು ಜಮೀನಿಗೆ ಹೋಗಿದ್ದರು. ಇಂದು, ಅವರು ತಡವಾದರೂ ಹಿಂತಿರುಗದೇ ಇದ್ದಾಗ, ನಾವು ಅವರನ್ನು ಹುಡುಕಲು ಹೋದೆವು. ಅವರ ಕೈಕಾಲುಗಳನ್ನು ಬಟ್ಟೆಗಳಿಂದ ಕಟ್ಟಿ ಹಾಕಿದ್ದನ್ನು ಕಂಡೆವು’ ಎಂದಿದ್ದಾರೆ.

ಲಕ್ನೋ ವಲಯದ ಐಜಿ ಲಕ್ಷ್ಮಿ ಸಿಂಗ್, ಹುಡುಗಿಯರನ್ನು ಕಟ್ಟಿಹಾಕಲಾಗಿತ್ತೆ ಎಂಬುದು ಇನ್ನೂ ದೃಢಪಟ್ಟಿಲ್ಲ. ಮೃತರ ಸಹೋದರ ಈ ಹೇಳಿಕೆಯನ್ನು ನೀಡಿದ್ದಾನೆ, ಆದರೆ ಪೊಲೀಸರು ಸ್ಥಳ ತಲುಪುವ ಮೊದಲು ಶವಗಳನ್ನು ಆ ಜಾಗದಿಂದ ತೆಗೆದಿದ್ದರಿಂದ ನಾವು ಈಗ ಏನನ್ನೂ ಹೇಳಲಾಗುವುದಿಲ್ಲ” ಎಂದು ಹೇಳಿದ್ದಾರೆ.

ಯುಪಿ ಎಡಿಜಿ (ಕಾನೂನು ಮತ್ತು ಸುವ್ಯವಸ್ಥೆ) ಪ್ರಶಾಂತ್ ಕುಮಾರ್, ಬಾಲಕಿಯರು ಬುಧವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ತಮ್ಮ ಮನೆಯಿಂದ ಹೊರಟು ಹೋಗಿದ್ದು, ಸಂಜೆ ಕುಟುಂಬ ಸದಸ್ಯರು ಇದನ್ನು ಪತ್ತೆ ಮಾಡಿದ್ದಾರೆ.

ಉನ್ನಾವೊ ಎಸ್ಪಿ ಸುರೇಶರಾವ್ ಎ ಕುಲಕರ್ಣಿ, “ಅಶೋಹಾ ಪೊಲೀಸ್ ಠಾಣೆ ಮಿತಿಯಲ್ಲಿ, ಮೂವರು ಬಾಲಕಿಯರು ತಮ್ಮ ಜಮೀನಿನಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಅವರನ್ನು ಆಸ್ಪತ್ರೆಗೆ ಕಳುಹಿಸಲಾಗಿದೆ. ಅವರು ಮೇವು/ಹುಲ್ಲು ತರಲು ಹೋಗಿದ್ದರು ಮತ್ತು ಕುಟುಂಬ ಸದಸ್ಯರು ಅವರನ್ನು ಹುಡುಕಲು ಹೋದಾಗ, ಅವರು ಹೊಲದಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿರುವುದನ್ನು ಕಂಡುಕೊಂಡರು. ಅವರ ಬಾಯಿಯಿಂದ ಬಿಳಿ ಪದಾರ್ಥ ಹೊರಬರುತ್ತಿತ್ತು, ಇದು ವಿಷಪ್ರಾಶನದ ಲಕ್ಷಣ ಎಂದು ವೈದ್ಯರು ತಕ್ಷಣಕ್ಕೆ ಅನುಮಾನಿಸಿದ್ದಾರೆ. ನಾವು ಸಂಬಂಧಪಟ್ಟ ಎಲ್ಲ ಜನರ ಹೇಳಿಕೆಗಳನ್ನು ದಾಖಲಿಸುತ್ತಿದ್ದೇವೆ ಮತ್ತು ಆಳವಾದ ತನಿಖೆ ನಡೆಸಲಾಗುತ್ತಿದೆ. ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ” ಎಂದಿದ್ದಾರೆ.

ಎಡಿಜಿ (ಲಕ್ನೋ ವಲಯ) ಎಸ್ ಎನ್ ಸಬತ್, ಅಪರಾಧದ ಸ್ಥಳದಲ್ಲಿ ಯಾವುದೇ ಹಿಂಸಾಚಾರ ಅಥವಾ ಹೋರಾಟದ ಲಕ್ಷಣಗಳಿಲ್ಲ ಎಂದು ಹೇಳಿದರು. “ನಮ್ಮ ತನಿಖೆ ನಡೆಯುತ್ತಿದೆ. ನಾವು ಸಾಧ್ಯವಿರುವ ಎಲ್ಲ ಕೋನಗಳಲ್ಲಿ ತನಿಖೆ ಮಾಡುತ್ತಿದ್ದೇವೆ” ಎಂದು ಎಡಿಜಿ ಹೇಳಿದ್ದಾರೆ.
ಹೆಚ್ಚಿನ ತನಿಖೆಗಾಗಿ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದಾರೆ ಎಂದು ಉನ್ನಾವ್ ಪೊಲೀಸರು ಹೇಳಿಕೆಯಲ್ಲಿ ತಿಳಿಸಿದ್ದಾರೆ.


ಇದನ್ನೂ ಓದಿ: ಮೋದಿಯವರ ಮೌನ – ನಮ್ಮ ಹೆಣ್ಣುಮಕ್ಕಳಿಗೆ ಅಪಾಯ: ಚಂದ್ರಶೇಖರ್ ಆಜಾದ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...