Homeದಲಿತ್ ಫೈಲ್ಸ್ಉತ್ತರ ಪ್ರದೇಶ: ಪರೀಕ್ಷೆಯಲ್ಲಿ ತಪ್ಪು ಬರೆದಿದ್ದಕ್ಕೆ ದಲಿತ ಬಾಲಕನನ್ನು ಥಳಿಸಿ ಕೊಂದ ಸವರ್ಣೀಯ ಶಿಕ್ಷಕ; ಭುಗಿಲೆದ್ದ...

ಉತ್ತರ ಪ್ರದೇಶ: ಪರೀಕ್ಷೆಯಲ್ಲಿ ತಪ್ಪು ಬರೆದಿದ್ದಕ್ಕೆ ದಲಿತ ಬಾಲಕನನ್ನು ಥಳಿಸಿ ಕೊಂದ ಸವರ್ಣೀಯ ಶಿಕ್ಷಕ; ಭುಗಿಲೆದ್ದ ಹಿಂಸಾಚಾರ

- Advertisement -
- Advertisement -

ಸೆಪ್ಟೆಂಬರ್ 7 ರಂದು ನಡೆದ ಪರೀಕ್ಷೆಯೊಂದರಲ್ಲಿ ತಪ್ಪು ಉತ್ತರ ಬರೆದಿದ್ದಕ್ಕಾಗಿ ಸವರ್ಣೀಯ ಶಿಕ್ಷಕನಿಂದ ಥಳಿತಕ್ಕೊಳಗಾಗಿ 15 ವರ್ಷದ ದಲಿತ ಬಾಲಕ ಮೃತಪಟ್ಟಿದ್ದು ಉತ್ತರ ಪ್ರದೇಶದ ಔರೈಯಾ ಜಿಲ್ಲೆಯಲ್ಲಿ ಸೋಮವಾರ ವರದಿಯಾಗಿತ್ತು. ಥಳಿತಕ್ಕೊಳಗಾದ ಬಾಲಕನನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದರು. ಅವರ ಸಾವಿನ ನಂತರ ಜಿಲ್ಲೆಯಲ್ಲಿ ಹಿಂಸಾತ್ಮಕ ಪ್ರತಿಭಟನೆ ಭುಗಿಲೆದ್ದಿದ್ದು, ಎರಡು ಪೊಲೀಸ್ ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ.

ಪೊಲೀಸ್‌ ವಾಹನಕ್ಕೆ ಬೆಂಕಿ ಹಚ್ಚಿದ್ದು ಮಾತ್ರವಲ್ಲದೆ, ಇತರ ಎರಡು ವಾಹನಗಳಿಗೂ ಹಾನಿ ಮಾಡಲಾಗಿದೆ. ಉದ್ರಿಕ್ತ ಪ್ರತಿಭಟನಾಕಾರರು ಪೊಲೀಸ್ ಅಧಿಕಾರಿಗಳ ಮೇಲೆ ಕಲ್ಲು ತೂರಾಟ ಕೂಡಾ ನಡೆಸಿದ್ದಾರೆ ಎಂದು ವರದಿಯಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಶಿಕ್ಷಕ ಅಶ್ವಿನಿ ಸಿಂಗ್ ತನ್ನ ಮಗನ ಮೇಲೆ ದೊಣ್ಣೆ, ರಾಡ್‌ಗಳಿಂದ ಹಲ್ಲೆ ನಡೆಸಿ ಪ್ರಜ್ಞೆ ತಪ್ಪುವವರೆಗೂ ಒದ್ದಿದ್ದಾನೆ ಎಂದು ಬಾಲಕನ ತಂದೆ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ. “ಖಾಸಗಿ ಆಸ್ಪತ್ರೆಗೆ ಕರೆದೊಯ್ಯುವಾಗ ಅವನಿಗೆ ಪ್ರಜ್ಞೆ ಬಂದಿತ್ತು, ಆದರೆ ಉಸಿರಾಡಲು ಕಷ್ಟವಾಗುತ್ತಿತ್ತು. ಬಾಲಕನಿಗೆ ಆಂತರಿಕ ಗಾಯಗಳಾಗಿವೆ ಎಂದು ವೈದ್ಯರು ಹೇಳಿದ್ದಾರೆ” ಎಂದು ಅವರು ಹೇಳಿದ್ದಾರೆ ಎಂದು ಟೈಮ್ಸ್‌ ಆಫ್ ಇಂಡಿಯಾ ವರದಿ ಮಾಡಿದೆ.

ಇದನ್ನೂ ಓದಿ: ಉತ್ತರ ಪ್ರದೇಶ: ದಲಿತ ಬಾಲಕನನ್ನು ಹೊಡೆದು ಕೊಂದ ಸವರ್ಣೀಯ ಶಿಕ್ಷಕ

ಈ ನಡುವೆ ಬಾಲಕನಿಗೆ ಹಲವು ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗಿತಾದರೂ, ಚೇತರಿಸಿಕೊಂಡಿರಲಿಲ್ಲ. ಅವರನ್ನು ಸೋಮವಾರ ಸೈಫೈಗೆ ಕರೆದೊಯ್ಯುವಾ ಆಂಬ್ಯುಲೆನ್ಸ್‌ನಲ್ಲಿ ಸಾವನ್ನಪ್ಪಿದ್ದರು.

ಸೆಪ್ಟೆಂಬರ್ 7 ರಂದು ಹಲ್ಲೆ ನಡೆಸಿದ್ದ ಅಶ್ವಿನಿ ಸಿಂಗ್ ಬಾಲಕನ ವೈದ್ಯಕೀಯ ಚಿಕಿತ್ಸೆಗೆ ಹಣ ನೀಡುವುದಾಗಿ ಭರವಸೆ ನೀಡಿದ್ದನು. ಒಟ್ಟು ಎರಡು ಕಂತುಗಳಲ್ಲಿ ಕೇವಲ 40,000 ರೂ.ಗಳನ್ನು ನೀಡಿದ್ದನು. ಹೆಚ್ಚಿನ ಹಣ ಬೇಡಿಕೆ ಇಟ್ಟಾಗ ಬೆದರಿಕೆ ಹಾಕಿದ್ದಾಗಿ ಬಾಲಕನ ತಂದೆ ಹೇಳಿದ್ದಾರೆ.

“ನಮ್ಮ ಮಾತುಕತೆಯ ಸಮಯದಲ್ಲಿ ಶಿಕ್ಷಕ ಅಸಭ್ಯವಾಗಿ ಕೂಡಾ ವರ್ತಿಸಿದ್ದು, ಮಾತ್ರವಲ್ಲದೆ ಜಾತಿ ನಿಂದನೆ ಕೂಡಾ ಮಾಡಿದ್ದಾನೆ. ಹೀಗಾಗಿ ನಾವು ನಂತರ ಪೊಲೀಸ್ ಠಾಣೆಗೆ ಹೋಗಿ ಆತನ ವಿರುದ್ಧ ಸೆಪ್ಟೆಂಬರ್ 24 ರಂದು ದೂರು ಸಲ್ಲಿಸಿದ್ದೇವೆ” ಎಂದು ಬಾಲಕನ ತಂದೆ ಆರೋಪಿಸಿದ್ದಾರೆ.

ಇದನ್ನೂ ಓದಿ: ಯುಪಿ: ದಲಿತ ಬಾಲಕಿಗೆ ಶಿಕ್ಷಣ ನೀಡಲು ನಿರಾಕರಿಸಿದ ಶಿಕ್ಷಕಿ

ಶಿಕ್ಷಕ ಅಶ್ವಿನಿ ಸಿಂಗ್ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 308, 323, 504 ಮತ್ತು ಪರಿಶಿಷ್ಟ ಜಾತಿಗಳ ಕೆಲವು ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

ಶಿಕ್ಷಕನನ್ನು ಬಂಧಿಸಲು ಅಧಿಕಾರಿಗಳು ಶಾಲೆಗೆ ಹೋದಾಗ ಅವರು ತಲೆಮರೆಸಿಕೊಂಡಿದ್ದಾರೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಚಾರು ನಿಗಮ್ ಹೇಳಿದ್ದಾರೆ. ಅವರನ್ನು ಬಂಧಿಸಲು ಪೊಲೀಸ್ ತಂಡಗಳನ್ನು ರಚಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...