Homeದಲಿತ್ ಫೈಲ್ಸ್ಉತ್ತರ ಪ್ರದೇಶ: ಪರೀಕ್ಷೆಯಲ್ಲಿ ತಪ್ಪು ಬರೆದಿದ್ದಕ್ಕೆ ದಲಿತ ಬಾಲಕನನ್ನು ಥಳಿಸಿ ಕೊಂದ ಸವರ್ಣೀಯ ಶಿಕ್ಷಕ; ಭುಗಿಲೆದ್ದ...

ಉತ್ತರ ಪ್ರದೇಶ: ಪರೀಕ್ಷೆಯಲ್ಲಿ ತಪ್ಪು ಬರೆದಿದ್ದಕ್ಕೆ ದಲಿತ ಬಾಲಕನನ್ನು ಥಳಿಸಿ ಕೊಂದ ಸವರ್ಣೀಯ ಶಿಕ್ಷಕ; ಭುಗಿಲೆದ್ದ ಹಿಂಸಾಚಾರ

- Advertisement -
- Advertisement -

ಸೆಪ್ಟೆಂಬರ್ 7 ರಂದು ನಡೆದ ಪರೀಕ್ಷೆಯೊಂದರಲ್ಲಿ ತಪ್ಪು ಉತ್ತರ ಬರೆದಿದ್ದಕ್ಕಾಗಿ ಸವರ್ಣೀಯ ಶಿಕ್ಷಕನಿಂದ ಥಳಿತಕ್ಕೊಳಗಾಗಿ 15 ವರ್ಷದ ದಲಿತ ಬಾಲಕ ಮೃತಪಟ್ಟಿದ್ದು ಉತ್ತರ ಪ್ರದೇಶದ ಔರೈಯಾ ಜಿಲ್ಲೆಯಲ್ಲಿ ಸೋಮವಾರ ವರದಿಯಾಗಿತ್ತು. ಥಳಿತಕ್ಕೊಳಗಾದ ಬಾಲಕನನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದರು. ಅವರ ಸಾವಿನ ನಂತರ ಜಿಲ್ಲೆಯಲ್ಲಿ ಹಿಂಸಾತ್ಮಕ ಪ್ರತಿಭಟನೆ ಭುಗಿಲೆದ್ದಿದ್ದು, ಎರಡು ಪೊಲೀಸ್ ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ.

ಪೊಲೀಸ್‌ ವಾಹನಕ್ಕೆ ಬೆಂಕಿ ಹಚ್ಚಿದ್ದು ಮಾತ್ರವಲ್ಲದೆ, ಇತರ ಎರಡು ವಾಹನಗಳಿಗೂ ಹಾನಿ ಮಾಡಲಾಗಿದೆ. ಉದ್ರಿಕ್ತ ಪ್ರತಿಭಟನಾಕಾರರು ಪೊಲೀಸ್ ಅಧಿಕಾರಿಗಳ ಮೇಲೆ ಕಲ್ಲು ತೂರಾಟ ಕೂಡಾ ನಡೆಸಿದ್ದಾರೆ ಎಂದು ವರದಿಯಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಶಿಕ್ಷಕ ಅಶ್ವಿನಿ ಸಿಂಗ್ ತನ್ನ ಮಗನ ಮೇಲೆ ದೊಣ್ಣೆ, ರಾಡ್‌ಗಳಿಂದ ಹಲ್ಲೆ ನಡೆಸಿ ಪ್ರಜ್ಞೆ ತಪ್ಪುವವರೆಗೂ ಒದ್ದಿದ್ದಾನೆ ಎಂದು ಬಾಲಕನ ತಂದೆ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ. “ಖಾಸಗಿ ಆಸ್ಪತ್ರೆಗೆ ಕರೆದೊಯ್ಯುವಾಗ ಅವನಿಗೆ ಪ್ರಜ್ಞೆ ಬಂದಿತ್ತು, ಆದರೆ ಉಸಿರಾಡಲು ಕಷ್ಟವಾಗುತ್ತಿತ್ತು. ಬಾಲಕನಿಗೆ ಆಂತರಿಕ ಗಾಯಗಳಾಗಿವೆ ಎಂದು ವೈದ್ಯರು ಹೇಳಿದ್ದಾರೆ” ಎಂದು ಅವರು ಹೇಳಿದ್ದಾರೆ ಎಂದು ಟೈಮ್ಸ್‌ ಆಫ್ ಇಂಡಿಯಾ ವರದಿ ಮಾಡಿದೆ.

ಇದನ್ನೂ ಓದಿ: ಉತ್ತರ ಪ್ರದೇಶ: ದಲಿತ ಬಾಲಕನನ್ನು ಹೊಡೆದು ಕೊಂದ ಸವರ್ಣೀಯ ಶಿಕ್ಷಕ

ಈ ನಡುವೆ ಬಾಲಕನಿಗೆ ಹಲವು ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗಿತಾದರೂ, ಚೇತರಿಸಿಕೊಂಡಿರಲಿಲ್ಲ. ಅವರನ್ನು ಸೋಮವಾರ ಸೈಫೈಗೆ ಕರೆದೊಯ್ಯುವಾ ಆಂಬ್ಯುಲೆನ್ಸ್‌ನಲ್ಲಿ ಸಾವನ್ನಪ್ಪಿದ್ದರು.

ಸೆಪ್ಟೆಂಬರ್ 7 ರಂದು ಹಲ್ಲೆ ನಡೆಸಿದ್ದ ಅಶ್ವಿನಿ ಸಿಂಗ್ ಬಾಲಕನ ವೈದ್ಯಕೀಯ ಚಿಕಿತ್ಸೆಗೆ ಹಣ ನೀಡುವುದಾಗಿ ಭರವಸೆ ನೀಡಿದ್ದನು. ಒಟ್ಟು ಎರಡು ಕಂತುಗಳಲ್ಲಿ ಕೇವಲ 40,000 ರೂ.ಗಳನ್ನು ನೀಡಿದ್ದನು. ಹೆಚ್ಚಿನ ಹಣ ಬೇಡಿಕೆ ಇಟ್ಟಾಗ ಬೆದರಿಕೆ ಹಾಕಿದ್ದಾಗಿ ಬಾಲಕನ ತಂದೆ ಹೇಳಿದ್ದಾರೆ.

“ನಮ್ಮ ಮಾತುಕತೆಯ ಸಮಯದಲ್ಲಿ ಶಿಕ್ಷಕ ಅಸಭ್ಯವಾಗಿ ಕೂಡಾ ವರ್ತಿಸಿದ್ದು, ಮಾತ್ರವಲ್ಲದೆ ಜಾತಿ ನಿಂದನೆ ಕೂಡಾ ಮಾಡಿದ್ದಾನೆ. ಹೀಗಾಗಿ ನಾವು ನಂತರ ಪೊಲೀಸ್ ಠಾಣೆಗೆ ಹೋಗಿ ಆತನ ವಿರುದ್ಧ ಸೆಪ್ಟೆಂಬರ್ 24 ರಂದು ದೂರು ಸಲ್ಲಿಸಿದ್ದೇವೆ” ಎಂದು ಬಾಲಕನ ತಂದೆ ಆರೋಪಿಸಿದ್ದಾರೆ.

ಇದನ್ನೂ ಓದಿ: ಯುಪಿ: ದಲಿತ ಬಾಲಕಿಗೆ ಶಿಕ್ಷಣ ನೀಡಲು ನಿರಾಕರಿಸಿದ ಶಿಕ್ಷಕಿ

ಶಿಕ್ಷಕ ಅಶ್ವಿನಿ ಸಿಂಗ್ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 308, 323, 504 ಮತ್ತು ಪರಿಶಿಷ್ಟ ಜಾತಿಗಳ ಕೆಲವು ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

ಶಿಕ್ಷಕನನ್ನು ಬಂಧಿಸಲು ಅಧಿಕಾರಿಗಳು ಶಾಲೆಗೆ ಹೋದಾಗ ಅವರು ತಲೆಮರೆಸಿಕೊಂಡಿದ್ದಾರೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಚಾರು ನಿಗಮ್ ಹೇಳಿದ್ದಾರೆ. ಅವರನ್ನು ಬಂಧಿಸಲು ಪೊಲೀಸ್ ತಂಡಗಳನ್ನು ರಚಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...