Homeಮುಖಪುಟಉತ್ತರ ಪ್ರದೇಶ ಪೊಲೀಸರ ಕ್ರೌರ್ಯ: ರೈಲಿಗೆ ಸಿಕ್ಕಿ ಎರಡೂ ಕಾಲು ಕಳೆದುಕೊಂಡ ಬಡ ವ್ಯಾಪಾರಿ

ಉತ್ತರ ಪ್ರದೇಶ ಪೊಲೀಸರ ಕ್ರೌರ್ಯ: ರೈಲಿಗೆ ಸಿಕ್ಕಿ ಎರಡೂ ಕಾಲು ಕಳೆದುಕೊಂಡ ಬಡ ವ್ಯಾಪಾರಿ

- Advertisement -
- Advertisement -

ಪೊಲೀಸರು ಎಸೆದ ತನ್ನ ತಕ್ಕಡಿ ತೆಗೆದುಕೊಳ್ಳಲು ರೈಲ್ವೆ ಹಳಿ ಪ್ರವೇಶಿಸಿದ ಯುವಕನಿಗೆ ರೈಲು ಡಿಕ್ಕಿ ಹೊಡೆದ ಪರಿಣಾಮ ಆತ ಎರಡೂ ಕಾಲುಗಳನ್ನು ಕಳೆದುಕೊಂಡಿರುವ ಹೃದಯ ವಿದ್ರಾವಕ ಘಟನೆ ಉತ್ತರ ಪ್ರದೇಶದ ಕಾನ್ಪುರದಲ್ಲಿ ಜರುಗಿದೆ.

ಕಾನ್ಪುರದ ಕಲ್ಯಾಣಪುರ್ ಬಳಿಯ ಸಾಹೇಬ್ ನಗರದ ನಿವಾಸಿ 17 ವರ್ಷದ ಅರ್ಸಲಾನ್ ತೀವ್ರ ಗಾಯೊಂಡಿದ್ದು, ಸದ್ಯಕ್ಕೆ ಆಸ್ಪತ್ರೆಗೆ ಸೇರಿಸಲಾಗಿದೆ. ಆದರೆ ಹೆಚ್ಚಿನ ಚಿಕಿತ್ಸೆಗಾಗಿ ಲಕ್ನೋದ ಎಸ್‌ಡಿಪಿಜಿಐಗೆ ಸೇರಿಸಲು ವೈದ್ಯರು ಸೂಚಿಸಿದ್ದಾರೆ.

ಪ್ರತಿದಿನದಂತೆ ಶುಕ್ರವಾರ ಸಂಜೆ ಅರ್ಸಲಾನ್ ಜಿಟಿ ರಸ್ತೆಯಲ್ಲಿ ರಸ್ತೆಬದಿಯಲ್ಲಿ ತರಕಾರಿ ಮಾರಾಟದಲ್ಲಿ ನಿರತರಾಗಿದ್ದರು. ಆ ಸಂದರ್ಭದಲ್ಲಿ ಸಬ್ ಇನ್ಸ್‌ಪೆಕ್ಟರ್ ಶದಬ್ ಖಾನ್ ಮತ್ತು ಹೆಡ್ ಕಾನ್ಸ್ಟೇಬಲ್ ರಾಕೇಶ್ ಕುಮಾರ್ ಅರ್ಸಲಾನ್ ಜೊತೆ ಅನುಚಿತವಾಗಿ ವರ್ತಿಸಿದ್ದಾರೆ. ಆತನ ಮೇಲೆ ಹಲ್ಲೆ ಮಾಡಿದ್ದಲ್ಲದೆ ಆತನ ತಕ್ಕಡಿಯನ್ನು ರೈಲು ಹಳಿಗಳ ಮೇಲೆ ಎಸೆದಿದ್ದಾರೆ. ಭಯಭೀತಗೊಂಡ ಅರ್ಸಲಾನ್ ಏನನ್ನು ಯೋಚಿಸಿದೆ ಮರುಕ್ಷಣವೇ ತಕ್ಕಡಿ ಎತ್ತಿಕೊಳ್ಳಲು ರೈಲು ಹಳಿ ತಲುಪಿದಾಗ ವೇಗವಾಗಿ ಬರುತ್ತಿದ್ದ ಮೆಮು ರೈಲು ಡಿಕ್ಕಿ ಹೊಡೆದಿದೆ. ಪರಿಣಾಮ ಆತನ ಎರಡೂ ಕಾಲುಗಳಿಗೆ ಗಂಭೀರ ಗಾಯವಾಗಿದೆ.

ಕೂಡಲೇ ಜನರು ಮತ್ತು ಪೊಲೀಸರು ಆ ಬಾಲಕನ್ನು ರೈಲುಹಳಿಗಳಿಂದ ಎತ್ತಿಕೊಂಡು ಹೋಗುವಾಗ ಎರಡೂ ಕಾಲುಗಳು ಸಂಪೂರ್ಣ ನಜ್ಜುಗುಜ್ಜಾಗಿರುವುದನ್ನು ತೋರಿಸುವ ಭಯಾನಕ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ವಿಷಯ ತಿಳಿದ ಕಾನ್ಪುರ ಪಶ್ಚಿಮ ಡಿಸಿಪಿ ವಿಜಯ್ ಧುಲ್ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ರಸ್ತೆಬದಿ ವ್ಯಾಪಾರಿ ಅರ್ಸಲಾನ್ ಮೇಲೆ ಹಲ್ಲೆ ನಡೆದಿರುವುದು, ಆತನ ತಕ್ಕಡಿಯನ್ನು ರೈಲು ಹಳಿಗಳ ಮೇಲೆ ಎಸೆದಿರುವುದು ನಿಜೆ ಎಂದು ಪ್ರಾಥಮಿಕ ವಿಚಾರಣೆಯಲ್ಲಿ ಕಂಡುಬಂದ ನಂತರ ಆ ಇಬ್ಬರೂ ಪೊಲೀಸ್ ಅಧಿಕಾರಿಗಳನ್ನು ಅಮಾನತ್ತು ಮಾಡಲಾಗಿದೆ ಮತ್ತು ಎಸಿಪಿ ಮಟ್ಟದಲ್ಲಿ ತನಿಖೆ ನಡೆಸಲು ಆದೇಶಿಸಿದ್ದಾರೆ.

ಇನ್ನೊಂದೆಡೆ ಅರ್ಸಲಾನ್‌ನ ಪರಿಸ್ಥಿತಿ ಗಂಭೀರವಾಗಿದೆ. ಆತನ ಕಾಲುಗಳು ತುಂಡರಿಸಿದ್ದು, ಹೆಚ್ಚಿನ ರಕ್ತ ಸೋರಿಕೆಯಾಗಿದೆಎ ಎಂದು ವೈದ್ಯರು ತಿಳಿಸಿದ್ದಾರೆ.

ಇದನ್ನೂ ಓದಿ; ಕೋಲಾರದ ದಲಿತ ಯುವಕನ ಮೇಲಿನ ದೌರ್ಜನ್ಯ: ನಿರ್ದಾಕ್ಷಿಣ್ಯ ಕ್ರಮಕ್ಕೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಈ ಪೊಲೀಸರನ್ನು ಕೂಡ ಅದೇ ರೈಲಿನ ಹಳ್ಳಿಗಳ ಮೇಲೆ ಅಡ್ಡಡ್ಡ ಮಲಗಿಸಬೇಕು ರೈಲು ಹೋಗುವಾಗ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...