Homeಮುಖಪುಟಉತ್ತರ ಪ್ರದೇಶ: ಜನರಿಗೆ ಒಮ್ಮೆ ಕೋವ್ಯಾಕ್ಸಿನ್, ಒಮ್ಮೆ ಕೋವಿಶೀಲ್ಡ್ ಲಸಿಕೆ ನೀಡಿದ ಅಧಿಕಾರಿಗಳು!

ಉತ್ತರ ಪ್ರದೇಶ: ಜನರಿಗೆ ಒಮ್ಮೆ ಕೋವ್ಯಾಕ್ಸಿನ್, ಒಮ್ಮೆ ಕೋವಿಶೀಲ್ಡ್ ಲಸಿಕೆ ನೀಡಿದ ಅಧಿಕಾರಿಗಳು!

- Advertisement -
- Advertisement -

ಉತ್ತರ ಪ್ರದೇಶದ ಸರ್ಕಾರಿ ಆಸ್ಪತ್ರೆಯಲ್ಲಿ ಜನರಿಗೆ ಒಮ್ಮೆ ಕೋವ್ಯಾಕ್ಸಿನ್, ಒಮ್ಮೆ ಕೋವಿಶೀಲ್ಡ್ ಮಿಶ್ರ ಪ್ರಮಾಣದ ಲಸಿಕೆಗಳನ್ನು ನೀಡಲಾಗಿದೆ. ನೇಪಾಳ ಗಡಿಯ ಸಮೀಪವಿರುವ ಸಿದ್ಧಾರ್ಥನಗರ ಜಿಲ್ಲೆಯ ಸುಮಾರು 20 ಗ್ರಾಮಸ್ಥರಿಗೆ ಕೋವಾಕ್ಸಿನ್ ಮತ್ತು ಕೋವಿಶೀಲ್ಡ್ ಎರಡನ್ನೂ ನೀಡಲಾಗಿದೆ.

ಲಸಿಕೆ ಮಿಶ್ರಣದಿಂದ ಯಾರ ಆರೋಗ್ಯದ ಮೇಲೂ ವ್ಯತಿರಿಕ್ತ ಪರಿಣಾಮ ಬೀರಿಲ್ಲ ಮತ್ತು ಈ ಘಟನೆಗೆ ಕಾರಣವಾದವರಿಗೆ ಶಿಕ್ಷೆ ನೀಡಲಾಗುತ್ತದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ರಾಜ್ಯ ರಾಜಧಾನಿ ಲಕ್ನೋದಿಂದ 270 ಕಿ.ಮೀ ದೂರದಲ್ಲಿರುವ ಬಹುಮಟ್ಟಿಗೆ ಗ್ರಾಮೀಣ ಜಿಲ್ಲೆಯಾದ  ಸಿದ್ಧಾರ್ಥನಗರದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಈ ಆಘಾತ ಸಂಭವಿಸಿದೆ. ಗ್ರಾಮಸ್ಥರಿಗೆ ಏಪ್ರಿಲ್ ಮೊದಲ ವಾರದಲ್ಲಿ ಕೋವಿಶೀಲ್ಡ್ ಚುಚ್ಚುಮದ್ದು ನೀಡಲಾಗಿತ್ತು. ನಂತರ ಮೇ 14 ರಂದು ಕೋವ್ಯಾಕ್ಸಿನ್ ಅವರ ಎರಡನೇ ಡೋಸ್ ಆಗಿ ನೀಡಲಾಗಿದೆ.

ಇದನ್ನೂ ಓದಿ: ಮೊದಲ ಸಲ ಕೋವ್ಯಾಕ್ಸಿನ್, ಎರಡನೆ ಸಲ ಕೋವಿಶೀಲ್ಡ್ ಲಸಿಕೆ ಪಡೆದರೆ ಅಡ್ಡ ಪರಿಣಾಮ ಆಗುತ್ತವೆಯೇ?

“ಇದು ಖಂಡಿತವಾಗಿಯೂ ಅಜಾಗರೂಕತೆಯಾಗಿದೆ. ಲಸಿಕೆಗಳನ್ನು ಹೀಗೆ ನೀಡಲು ಸರ್ಕಾರದಿಂದ ಯಾವುದೇ ಸೂಚನೆಯಿರಲಿಲ್ಲ. ಆದ್ದರಿಂದ ಇದು ಒಂದು ಅಜಾಗರೂಕತೆಯಾಗಿದೆ. ಈ ಬಗ್ಗೆ ತನಿಖೆಗೆ ಆದೇಶಿಸಿದ್ದೇವೆ. ತಪ್ಪಿತಸ್ಥರಿಂದ ನಾನು ವಿವರಣೆಯನ್ನು ಕೇಳಿದ್ದೇನೆ. ಕ್ರಮ ಕೈಗೊಳ್ಳುತ್ತೇವೆ ”ಎಂದು ಸಿದ್ಧಾರ್ಥನಗರದ ಮುಖ್ಯ ವೈದ್ಯಾಧಿಕಾರಿ ಸಂದೀಪ್ ಚೌಧರಿ ಹೇಳಿದ್ದಾರೆ.

ಇಂತಹ ಅವಘಡ ಸಂಭವಿಸಿದ್ದರೂ, “ನಮ್ಮ ತಂಡಗಳು ಲಸಿಕೆಯನ್ನು ಪಡೆದ ಎಲ್ಲರೊಂದಿಗೆ ಮಾತನಾಡಿದ್ದಾರೆ. ಎರಡನೆಯ ಡೋಸ್ ತಪ್ಪಾಗಿ ತೆಗೆದುಕೊಂಡಿರುವ ಎಲ್ಲರನ್ನು ಭೇಟಿ ಮಾಡಿದ್ದಾರೆ. ಅವರೆಲ್ಲರೂ ಆರೋಗ್ಯವಂತರಾಗಿದ್ದು, ಯಾವುದೇ ಸಮಸ್ಯೆಗಳನ್ನು ಎದುರಿಸುತ್ತಿಲ್ಲ” ಎಂದು ಚೌಧರಿ ಹೇಳಿದ್ದಾರೆ.

ಆದರೆ, ಇಲಾಖೆಯಿಂದ ಇಲ್ಲಿಯವರೆಗೂ ಯಾರು ಬಂದು ಭೇಟಿಯಾಘಿ ಪರೀಕ್ಷಿಸಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. “ನನಗೆ ಕೋವ್ಯಾಕ್ಸಿನ್ ನೀಡಲಾಗಿದೆ ಎಂದು ಗೊತ್ತಿದೆ. ಲಸಿಕೆ ನೀಡುವಾಗ ಏನೋ ತಪ್ಪು ಸಂಭವಿಸಿದೆ ಎಂದು ವೈದ್ಯರು ನಮಗೆ ತಿಳಿಸಿದ್ದಾರೆ. ಆರೋಗ್ಯ ಇಲಾಖೆಯಿಂದ ಯಾರೂ ನಮ್ಮನ್ನು ಪರೀಕ್ಷಿಸಲು ಬಂದಿಲ್ಲ.” ಎಂದು ಗ್ರಾಮಸ್ಥ ವೃದ್ಧ ರಾಮ್ ಸೂರತ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಇತ್ತಿಚೆಗೆ ಲಸಿಕೆ ನೀಡಲು ಗ್ರಾಮಕ್ಕೆ ಬಂದ ಆರೋಗ್ಯ ಕಾರ್ಯಕರ್ತರ ಗುಂಪನ್ನು ನೋಡಿ ಹೆದರಿದ ಜನ ನದಿಗೆ ಹಾರಿರುವ ಘಟನೆ ಉತ್ತರ ಪ್ರದೇಶದ ಬಾರಬಂಕಿಯ ಸಿಸೌರ್ಹಾ ಗ್ರಾಮದಲ್ಲಿ ನಡೆದಿದೆ. ಲಸಿಕೆಯನ್ನು ವಿಷಕಾರಿ ಚುಚ್ಚುಮದ್ದು ಎಂದು ತಿಳಿದ ಗ್ರಾಮಸ್ಥರುಸರಯೂ ನದಿಗೆ ಹಾರಿದ್ದರು. ಈಗಾಗಲೇ ಲಸಿಕೆ ಬಗ್ಗೆ ಅನೇಕ ಅಪನಂಬಿಕೆಗಳಿವೆ. ಇಂತಹ ಸಂದರ್ಭದಲ್ಲಿ ಜಾಗೃತಿ ಮೂಡಿಸಬೇಕಾದ ಆರೋಗ್ಯ ಕಾರ್ಯಕರ್ತರು ಅವಘಡಗಳನ್ನು ಮಾಡಿದರೇ ಜನರಲ್ಲಿ ಲಸಿಕೆ ಬಗ್ಗೆ ಮತ್ತಷ್ಟು ಭಯ ಮೂಡುತ್ತದೆ.


ಇದನ್ನೂ ಓದಿ: ’ಮಾಸ್ಟರ್‌ಸ್ಟ್ರೋಕ್’: ಪ್ರಧಾನಿ ಮೋದಿ ಬಗ್ಗೆ ’ನಿರುದ್ಯೋಗಿ ಭಕ್ತ’ನ 56 ಪುಟಗಳ ಖಾಲಿ ಪುಸ್ತಕ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...