Homeಮುಖಪುಟಉತ್ತರ ಪ್ರದೇಶದ ಕಾರ್ಮಿಕರು ಆದಿತ್ಯನಾಥರ ವೈಯಕ್ತಿಕ ಆಸ್ತಿಯಲ್ಲ: ರಾಹುಲ್ ಗಾಂಧಿ ಕಿಡಿ

ಉತ್ತರ ಪ್ರದೇಶದ ಕಾರ್ಮಿಕರು ಆದಿತ್ಯನಾಥರ ವೈಯಕ್ತಿಕ ಆಸ್ತಿಯಲ್ಲ: ರಾಹುಲ್ ಗಾಂಧಿ ಕಿಡಿ

ಉತ್ತರಪ್ರದೇಶದಿಂದ ಕಾರ್ಮಿಕರನ್ನು ನೇಮಕ ಮಾಡುವ ಮೊದಲು ಇತರ ರಾಜ್ಯಗಳು ತಮ್ಮ ಸರ್ಕಾರದಿಂದ ಅನುಮತಿ ಪಡೆಯಬೇಕಾಗುತ್ತದೆ ಎಂದು ಆದಿತ್ಯನಾಥ್ ಹೇಳಿದ್ದರು.

- Advertisement -
- Advertisement -

ಉತ್ತರ ಪ್ರದೇಶದ ಕಾರ್ಮಿಕರು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ರವರ ವೈಯಕ್ತಿಕ ಆಸ್ತಿಯಲ್ಲ ಎಂದು ರಾಹುಲ್‌ ಗಾಂಧಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ, ಮುಖ್ಯಮಂತ್ರಿ ಆದಿತ್ಯನಾಥ್ ಅವರ ಮಾತು ಸಂಪೂರ್ಣವಾಗಿ ಅಸಂಬದ್ಧ, ದುರದೃಷ್ಟಕರ. ಜನರು ಮೊದಲು ಭಾರತೀಯರು ನಂತರ ಅವರು ತಮ್ಮ ರಾಜ್ಯಗಳಿಗೆ ಸೇರಿದವರು ಎಂದು ನಾನು ಭಾವಿಸುತ್ತೇನೆ. ಯಾರಾದರೂ ಉತ್ತರ ಪ್ರದೇಶದಿಂದ ದೇಶದ ಉಳಿದ ಭಾಗಗಳಿಗೆ ಕೆಲಸಕ್ಕೆ ಹೋಗುತ್ತಾರೆಯೇ ಎಂಬ ನಿರ್ಧಾರ ಮಾಡಬೇಕಿರುವುದು ಮುಖ್ಯಮಂತ್ರಿ ಅಲ್ಲ. ಕಾರ್ಮಿಕರು ಮುಖ್ಯಮಂತ್ರಿಯ ವೈಯಕ್ತಿಕ ಆಸ್ತಿ ಅಲ್ಲ” ಎಂದು ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆದ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.

ನಿನ್ನೆ ಆರ್‌ಎಸ್‌ಎಸ್  ಆಯೋಜಿಸಿದ್ದ ವೆಬ್‌ನಾರ್‌ನಲ್ಲಿ ಮಾಧ್ಯಮಗಳೊಂದಿಗೆ ಸಂವಹನ ನಡೆಸಿದ ಆದಿತ್ಯನಾಥ್, ಉತ್ತರಪ್ರದೇಶದಿಂದ ಕಾರ್ಮಿಕರನ್ನು ನೇಮಕ ಮಾಡುವ ಮೊದಲು ಇತರ ರಾಜ್ಯಗಳು ತಮ್ಮ ಸರ್ಕಾರದಿಂದ ಅನುಮತಿ ಪಡೆಯಬೇಕಾಗುತ್ತದೆ ಎಂದು ಹೇಳಿದ್ದಾರೆ.

“ಯಾವುದೇ ರಾಜ್ಯವು ಮಾನವಶಕ್ತಿಯನ್ನು ಬಯಸಿದರೆ, ರಾಜ್ಯ ಸರ್ಕಾರವು ಕಾರ್ಮಿಕರ ಸಾಮಾಜಿಕ ಭದ್ರತೆ ಮತ್ತು ವಿಮೆಗೆ ಖಾತರಿ ನೀಡಬೇಕಾಗುತ್ತದೆ. ಅವರನ್ನು ಕೆಲವು ರಾಜ್ಯಗಳು ನಡೆಸಿಕೊಂಡ ರೀತಿಯಿಂದಾಗಿ ನಮ್ಮ ಅನುಮತಿಯಿಲ್ಲದೆ ಅವರು ನಮ್ಮ ಜನರನ್ನು ಕರೆದೊಯ್ಯುವ ಹಾಗಿಲ್ಲ” ಎಂದು ಅವರು ಹೇಳಿದ್ದರು.

ಆದರೆ ಆದಿತ್ಯನಾಥ್ ಅವರ ಹೇಳಿಕೆಯನ್ನು ರಾಹುಲ್ ಗಾಂಧಿ ತಳ್ಳಿಹಾಕಿದರು. “ಉತ್ತರ ಪ್ರದೇಶದ ನಾಗರಿಕನು ಮಹಾರಾಷ್ಟ್ರದಲ್ಲಿ, ದೆಹಲಿಯಲ್ಲಿ, ಕರ್ನಾಟಕದಲ್ಲಿ , ಬೇರೆಲ್ಲಿಯಾದರೂ ಹೋಗಿ ತನ್ನ ಕನಸುಗಳನ್ನು ಈಡೇರಿಸಲು ಬಯಸಿದರೆ, ಅವನು ಹಾಗೆ ಮಾಡುವ ಹಕ್ಕನ್ನು ಹೊಂದಿರಬೇಕು” ಎಂದು ಅವರು ಹೇಳಿದ್ದಾರೆ.

“ಉತ್ತರ ಪ್ರದೇಶದ ಮುಖ್ಯಮಂತ್ರಿ ಭಾರತವನ್ನು ಈ ರೀತಿ ನೋಡುತ್ತಿರುವುದು ಅತ್ಯಂತ ದುರದೃಷ್ಟಕರ. ಈ ಜನರು ಅವರ ವೈಯಕ್ತಿಕ ಆಸ್ತಿಯಲ್ಲ. ಅವರು ಉತ್ತರ ಪ್ರದೇಶದ ಆಸ್ತಿಯಲ್ಲ. ಈ ಜನರು ಭಾರತೀಯ ಪ್ರಜೆಗಳು ಮತ್ತು ಅವರು ಏನು ಮಾಡಬೇಕೆಂದು ನಿರ್ಧರಿಸುವ ಹಕ್ಕು ಅವರಿಗೆ ಇದೆ. ಅವರು ಬಯಸಿದಂತೆ ಬದುಕಲು ಜೀವನವನ್ನು ನಡೆಸುವ ಹಕ್ಕಿದೆ ” ಎಂದಿದ್ದಾರೆ.

“ಅವರ ಕನಸುಗಳನ್ನು ಈಡೇರಿಸಲು ಅವರನ್ನು ಬೆಂಬಲಿಸುವುದು ನಮ್ಮ ಕೆಲಸ. ನೀವು ನನಗೆ ಸೇರಿದವರು ಎಂದು ಹೇಳುವುದು ನಮ್ಮ ಕೆಲಸವಲ್ಲ. ಇದು ಸಂಪೂರ್ಣವಾಗಿ ಅಸಂಬದ್ಧ ಸ್ಥಾನವಾಗಿದೆ, ” ಎಂದು ಎಂದು ರಾಹುಲ್ ಗಾಂಧಿ ಹೇಳಿದರು.


ಓದಿ: ಅನುಮತಿಯಿಲ್ಲದೆ ರಾಜ್ಯಗಳು ಉತ್ತರ ಪ್ರದೇಶದ ಕಾರ್ಮಿಕರನ್ನು ನೇಮಿಸಿಕೊಳ್ಳುವಂತಿಲ್ಲ: ಯೋಗಿ ಆದಿತ್ಯನಾಥ್


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...