Homeಮುಖಪುಟಉತ್ತರ ಪ್ರದೇಶದ ಕಾರ್ಮಿಕರು ಆದಿತ್ಯನಾಥರ ವೈಯಕ್ತಿಕ ಆಸ್ತಿಯಲ್ಲ: ರಾಹುಲ್ ಗಾಂಧಿ ಕಿಡಿ

ಉತ್ತರ ಪ್ರದೇಶದ ಕಾರ್ಮಿಕರು ಆದಿತ್ಯನಾಥರ ವೈಯಕ್ತಿಕ ಆಸ್ತಿಯಲ್ಲ: ರಾಹುಲ್ ಗಾಂಧಿ ಕಿಡಿ

ಉತ್ತರಪ್ರದೇಶದಿಂದ ಕಾರ್ಮಿಕರನ್ನು ನೇಮಕ ಮಾಡುವ ಮೊದಲು ಇತರ ರಾಜ್ಯಗಳು ತಮ್ಮ ಸರ್ಕಾರದಿಂದ ಅನುಮತಿ ಪಡೆಯಬೇಕಾಗುತ್ತದೆ ಎಂದು ಆದಿತ್ಯನಾಥ್ ಹೇಳಿದ್ದರು.

- Advertisement -
- Advertisement -

ಉತ್ತರ ಪ್ರದೇಶದ ಕಾರ್ಮಿಕರು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ರವರ ವೈಯಕ್ತಿಕ ಆಸ್ತಿಯಲ್ಲ ಎಂದು ರಾಹುಲ್‌ ಗಾಂಧಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ, ಮುಖ್ಯಮಂತ್ರಿ ಆದಿತ್ಯನಾಥ್ ಅವರ ಮಾತು ಸಂಪೂರ್ಣವಾಗಿ ಅಸಂಬದ್ಧ, ದುರದೃಷ್ಟಕರ. ಜನರು ಮೊದಲು ಭಾರತೀಯರು ನಂತರ ಅವರು ತಮ್ಮ ರಾಜ್ಯಗಳಿಗೆ ಸೇರಿದವರು ಎಂದು ನಾನು ಭಾವಿಸುತ್ತೇನೆ. ಯಾರಾದರೂ ಉತ್ತರ ಪ್ರದೇಶದಿಂದ ದೇಶದ ಉಳಿದ ಭಾಗಗಳಿಗೆ ಕೆಲಸಕ್ಕೆ ಹೋಗುತ್ತಾರೆಯೇ ಎಂಬ ನಿರ್ಧಾರ ಮಾಡಬೇಕಿರುವುದು ಮುಖ್ಯಮಂತ್ರಿ ಅಲ್ಲ. ಕಾರ್ಮಿಕರು ಮುಖ್ಯಮಂತ್ರಿಯ ವೈಯಕ್ತಿಕ ಆಸ್ತಿ ಅಲ್ಲ” ಎಂದು ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆದ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.

ನಿನ್ನೆ ಆರ್‌ಎಸ್‌ಎಸ್  ಆಯೋಜಿಸಿದ್ದ ವೆಬ್‌ನಾರ್‌ನಲ್ಲಿ ಮಾಧ್ಯಮಗಳೊಂದಿಗೆ ಸಂವಹನ ನಡೆಸಿದ ಆದಿತ್ಯನಾಥ್, ಉತ್ತರಪ್ರದೇಶದಿಂದ ಕಾರ್ಮಿಕರನ್ನು ನೇಮಕ ಮಾಡುವ ಮೊದಲು ಇತರ ರಾಜ್ಯಗಳು ತಮ್ಮ ಸರ್ಕಾರದಿಂದ ಅನುಮತಿ ಪಡೆಯಬೇಕಾಗುತ್ತದೆ ಎಂದು ಹೇಳಿದ್ದಾರೆ.

“ಯಾವುದೇ ರಾಜ್ಯವು ಮಾನವಶಕ್ತಿಯನ್ನು ಬಯಸಿದರೆ, ರಾಜ್ಯ ಸರ್ಕಾರವು ಕಾರ್ಮಿಕರ ಸಾಮಾಜಿಕ ಭದ್ರತೆ ಮತ್ತು ವಿಮೆಗೆ ಖಾತರಿ ನೀಡಬೇಕಾಗುತ್ತದೆ. ಅವರನ್ನು ಕೆಲವು ರಾಜ್ಯಗಳು ನಡೆಸಿಕೊಂಡ ರೀತಿಯಿಂದಾಗಿ ನಮ್ಮ ಅನುಮತಿಯಿಲ್ಲದೆ ಅವರು ನಮ್ಮ ಜನರನ್ನು ಕರೆದೊಯ್ಯುವ ಹಾಗಿಲ್ಲ” ಎಂದು ಅವರು ಹೇಳಿದ್ದರು.

ಆದರೆ ಆದಿತ್ಯನಾಥ್ ಅವರ ಹೇಳಿಕೆಯನ್ನು ರಾಹುಲ್ ಗಾಂಧಿ ತಳ್ಳಿಹಾಕಿದರು. “ಉತ್ತರ ಪ್ರದೇಶದ ನಾಗರಿಕನು ಮಹಾರಾಷ್ಟ್ರದಲ್ಲಿ, ದೆಹಲಿಯಲ್ಲಿ, ಕರ್ನಾಟಕದಲ್ಲಿ , ಬೇರೆಲ್ಲಿಯಾದರೂ ಹೋಗಿ ತನ್ನ ಕನಸುಗಳನ್ನು ಈಡೇರಿಸಲು ಬಯಸಿದರೆ, ಅವನು ಹಾಗೆ ಮಾಡುವ ಹಕ್ಕನ್ನು ಹೊಂದಿರಬೇಕು” ಎಂದು ಅವರು ಹೇಳಿದ್ದಾರೆ.

“ಉತ್ತರ ಪ್ರದೇಶದ ಮುಖ್ಯಮಂತ್ರಿ ಭಾರತವನ್ನು ಈ ರೀತಿ ನೋಡುತ್ತಿರುವುದು ಅತ್ಯಂತ ದುರದೃಷ್ಟಕರ. ಈ ಜನರು ಅವರ ವೈಯಕ್ತಿಕ ಆಸ್ತಿಯಲ್ಲ. ಅವರು ಉತ್ತರ ಪ್ರದೇಶದ ಆಸ್ತಿಯಲ್ಲ. ಈ ಜನರು ಭಾರತೀಯ ಪ್ರಜೆಗಳು ಮತ್ತು ಅವರು ಏನು ಮಾಡಬೇಕೆಂದು ನಿರ್ಧರಿಸುವ ಹಕ್ಕು ಅವರಿಗೆ ಇದೆ. ಅವರು ಬಯಸಿದಂತೆ ಬದುಕಲು ಜೀವನವನ್ನು ನಡೆಸುವ ಹಕ್ಕಿದೆ ” ಎಂದಿದ್ದಾರೆ.

“ಅವರ ಕನಸುಗಳನ್ನು ಈಡೇರಿಸಲು ಅವರನ್ನು ಬೆಂಬಲಿಸುವುದು ನಮ್ಮ ಕೆಲಸ. ನೀವು ನನಗೆ ಸೇರಿದವರು ಎಂದು ಹೇಳುವುದು ನಮ್ಮ ಕೆಲಸವಲ್ಲ. ಇದು ಸಂಪೂರ್ಣವಾಗಿ ಅಸಂಬದ್ಧ ಸ್ಥಾನವಾಗಿದೆ, ” ಎಂದು ಎಂದು ರಾಹುಲ್ ಗಾಂಧಿ ಹೇಳಿದರು.


ಓದಿ: ಅನುಮತಿಯಿಲ್ಲದೆ ರಾಜ್ಯಗಳು ಉತ್ತರ ಪ್ರದೇಶದ ಕಾರ್ಮಿಕರನ್ನು ನೇಮಿಸಿಕೊಳ್ಳುವಂತಿಲ್ಲ: ಯೋಗಿ ಆದಿತ್ಯನಾಥ್


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...