Homeಚಳವಳಿಇತ್ತ ಹತ್ಯೆಗೀಡಾದ ರೈತರಿಗಾಗಿ ಶೋಕಿಸುತ್ತಿರುವ ದೇಶ : ಅತ್ತ ಯುಪಿಯ ಕಾರ್ಯಕ್ರಮಗಳಲ್ಲಿ ಪ್ರಧಾನಿ ಭಾಗಿ

ಇತ್ತ ಹತ್ಯೆಗೀಡಾದ ರೈತರಿಗಾಗಿ ಶೋಕಿಸುತ್ತಿರುವ ದೇಶ : ಅತ್ತ ಯುಪಿಯ ಕಾರ್ಯಕ್ರಮಗಳಲ್ಲಿ ಪ್ರಧಾನಿ ಭಾಗಿ

- Advertisement -
- Advertisement -

ಉತ್ತರ ಪ್ರದೇಶದ ಲಖಿಂಪುರ್‌ ಖೇರಿಯಲ್ಲಿ ನಡೆದ ಹಿಂಸಾಚಾರಕ್ಕೆ ಆಕ್ರೋಶ ವ್ಯಕ್ತಪಡಿಸಿ ದೇಶದೆಲ್ಲೇಡೆ ಪ್ರತಿಭಟನೆ ನಡೆದು, ರೈತರನ್ನು ಹತ್ಯೆ ಮಾಡಿರುವುದನ್ನು ಖಂಡಿಸಿ, ಇಡೀ ದೇಶ ದುಖಃದಲ್ಲಿದೆ. ಇದೆ ಸಮಯದಲ್ಲಿ ಪ್ರಧಾನಿ ಮೋದಿ ಯುಪಿಗೆ ಭೇಟಿ ನೀಡಿದ್ದು, 75 ವರ್ಷಗಳ ಸ್ವಾತಂತ್ರ್ಯ ಅಭಿಯಾನದ ಕಾರ್ಯಕ್ರಮಗಳಿಗೆ ಚಾಲನೆ ನೀಡಿದ್ದಾರೆ.

ಭಾರತದ 75 ವರ್ಷಗಳ ಸ್ವಾತಂತ್ರ್ಯವನ್ನು ಆಚರಿಸುವ ಕೇಂದ್ರ ಸರ್ಕಾರದ ಒಂದು ವರ್ಷದ ಅಭಿಯಾನದ ಭಾಗವಾಗಿ ನಡೆಯುತ್ತಿರುವ ಕಾರ್ಯಕ್ರಮಗಳು ಮತ್ತು ಯೋಜನೆಗಳನ್ನು ಉದ್ಘಾಟಿಸಲು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಉತ್ತರ ಪ್ರದೇಶದ ರಾಜಧಾನಿ ಲಕ್ನೋಗೆ ಭೇಟಿ ನೀಡಿದ್ದಾರೆ.

ಯುಪಿಯ ನಗರಾಭಿವೃದ್ಧಿ ಇಲಾಖೆಯು ಆಯೋಜಿಸಿರುವ ಮೂರು ದಿನಗಳ ನಗರ ಸಮಾವೇಶ ಕಾರ್ಯಕ್ರಮ ‘ಆಜಾದಿ@75-ನ್ಯೂ ಅರ್ಬನ್ ಇಂಡಿಯಾ: ಟ್ರಾನ್ಸ್‌ಫಾರ್ಮಿಂಗ್ ಅರ್ಬನ್ ಲ್ಯಾಂಡ್‌ಸ್ಕೇಪ್’ ಕಾನ್ಫರೆನ್ಸ್-ಕಮ್-ಎಕ್ಸ್‌ಪೋ ಉದ್ಘಾಟಿಸಿದ್ದಾರೆ.

ಭಾನುವಾರ ಲಖಿಂಪುರ್ ಖೇರಿ ಜಿಲ್ಲೆಯಲ್ಲಿ ನಡೆದ ಹಿಂಸಾತ್ಮಕ ಘರ್ಷಣೆಯಲ್ಲಿ ರೈತರು ಮತ್ತು ಸ್ಥಳೀಯ ಪತ್ರಕರ್ತರು ಸೇರಿದಂತೆ ಎಂಟು ಜನರು ಸಾವಿಗೀಡಾಗಿದ್ದಾರೆ. ಇದಕ್ಕೆ ದೇಶದಲ್ಲಿ ಭಾರಿ ಆಕ್ರೋಶ ವ್ಯಕ್ತವಾಗಿದ. ಉತ್ತರ ಪ್ರದೇಶ ನೋವಿನಲ್ಲಿದೆ ಈ ಸಮಯದಲ್ಲಿ ಪ್ರಧಾನಿ ಕಾರ್ಯಕ್ರಮಗಳಿಗೆ ಚಾಲನೆ ನೀಡುತ್ತಿರುವುದು ಟೀಕೆಗೆ ಗುರಿಯಾಗಿದೆ.

ಇದನ್ನೂ ಓದಿ: ಸಚಿವರ ಬೆಂಗಾವಲು ವಾಹನ ಹತ್ತಿಸಿ ನಾಲ್ವರು ರೈತರ ಹತ್ಯೆ; ನಂತರದ ಪ್ರತಿರೋಧದಲ್ಲಿ ನಾಲ್ವರ ಸಾವು

ಉತ್ತರ ಪ್ರದೇಶ ಪ್ರತಿಪಕ್ಷ ನಾಯಕ ಅಖಿಲೇಶ್ ಯಾದವ್ ಟೀಕಿಸಿದ್ದಾರೆ. “ರೈತರ ಕೊಲೆಗೆ ಉತ್ತರ ಪ್ರದೇಶ ಶೋಕದಲ್ಲಿದೆ. ಇದು ಸಂಭ್ರಮದ ಸಮಯವಲ್ಲ” ಎಂದಿದ್ದಾರೆ.

ಕಾಂಗ್ರೆಸ್ ನಾಯಕಿ ಪ್ರಿಯಾಂಕ ಗಾಂಧಿ ಪ್ರಧಾನಿಯವರ ಲಕ್ನೋ ಭೇಟಿಗೆ ವಿಡಿಯೋ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಪ್ರಧಾನಿ ಮೋದಿಯವರೆ, ನೀವು ಆಜಾದಿ ಅಮೃತ್ ಮಹೋತ್ಸವಕ್ಕಾಗಿ ಲಕ್ನೋಗೆ ಬರುತ್ತಿದ್ದೀರಿ ಎಂದು ನಾನು ಕೇಳಿದೆ. ನೀವು ಈ ವಿಡಿಯೋವನ್ನು ನೋಡಿದ್ದೀರಾ?” ಎಂದು ಪ್ರಿಯಾಂಕ ಗಾಂಧಿ ವೈರಲ್ ವಿಡಿಯೋವೊಂದನ್ನು ತಮ್ಮ ಮೊಬೈಲ್‌ನಿಂದ ಪ್ರದರ್ಶಿಸಿದ್ದಾರೆ.

“ರೈತರ ಮೇಲೆ ಕಾರು ಹರಿಸಿ ಕೊಂದ ಈ ಮನುಷ್ಯನನ್ನು ಏಕೆ ಇನ್ನೂ ಬಂಧಿಸಲಾಗಿಲ್ಲ? ಲಖಿಂಪುರ್ ಖೇರಿಗೆ ಭೇಟಿ ನೀಡಲು ಬಯಸುವ ನಮ್ಮಂತಹ ನಾಯಕರನ್ನು ಯಾವುದೇ ಎಫ್‌ಐಆರ್ ಅಥವಾ ಆದೇಶವಿಲ್ಲದೆ ಬಂಧಿಸಲಾಗಿದೆ? ಈ ಮನುಷ್ಯ ಏಕೆ ಮುಕ್ತನಾಗಿದ್ದಾನೆ ಎಂದು ತಿಳಿಯಲು ನಾನು ಬಯಸುತ್ತೇನೆ? ಎಂದು ಪ್ರಿಯಾಂಕ ಗಾಂಧಿ ವಿಡಿಯೋದಲ್ಲಿ ಹೇಳಿದ್ದಾರೆ.

ಪ್ರಧಾನಿ ಮೋದಿಯೊಂದಿಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ, ಉತ್ತರ ಪ್ರದೇಶ ರಾಜ್ಯಪಾಲ ಆನಂದಿಬೆನ್ ಪಟೇಲ್ ಮತ್ತು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕೂಡ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ.

 


ಇದನ್ನೂ ಓದಿ: ಹತ್ಯೆಗೀಡಾದ ರೈತ ಕುಟುಂಬಗಳ ಭೇಟಿಗೆ ಹೊರಟಿದ್ದ ಪ್ರಿಯಾಂಕ ಗಾಂಧಿ ವಶಕ್ಕೆ ಪಡೆದ ಪೊಲೀಸರು: ತೀವ್ರ ವಾಗ್ವಾದ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜು ಪಟ್ನಾಯಕ್ ವಿರುದ್ಧ ಹೇಳಿಕೆ : ಬೇಷರತ್ ಕ್ಷಮೆಯಾಚಿಸಿದ ಬಿಜೆಪಿ ಸಂಸದ ನಿಶಿಕಾಂತ್ ದುಬೆ

ಒಡಿಶಾದ ಮಾಜಿ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಅವರ ಕುರಿತು ನೀಡಿದ ಹೇಳಿಕೆ ವಿರುದ್ದ ದೇಶದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆ, ಬಿಜೆಪಿ ಸಂಸದ ನಿಶಿಕಾಂತ್ ದುಬೆ ಬುಧವಾರ (ಏ.1) ಬೇಷರತ್ ಕ್ಷಮೆಯಾಚಿಸಿದ್ದಾರೆ. "ಬಿಜು ಬಾಬು...

ಮಹಾರಾಷ್ಟ್ರ: ‘ನಿನ್ನ ಮಗಳನ್ನು ನನ್ನ ಬಳಿ ಕಳುಹಿಸು’; ಬಂಧಿತ ಮಹಿಳಾ ಆರೋಪಿಗೆ ಲೈಂಗಿಕ ಕಿರುಕುಳ ನೀಡಿದ್ದ ಪೊಲೀಸ್ ಅಮಾನತು 

ಮಹಾರಾಷ್ಟ್ರ: ಅಕೋಲಾದಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಕಸ್ಟಡಿಯಲ್ಲಿರುವ ಮಹಿಳೆಯೊಬ್ಬರಿಂದ ಲೈಂಗಿಕ ಕಿರುಕುಳಕ್ಕೆ ಬೇಡಿಕೆ ಇಟ್ಟಿದ್ದ ಮತ್ತು ಆಕೆಯ ಮಗಳನ್ನು ತನ್ನ ಬಳಿಗೆ ಕಳುಹಿಸುವಂತೆ ಕೇಳಿದ್ದಕ್ಕಾಗಿ ಸಹಾಯಕ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಎಎಸ್‌ಐ) ಒಬ್ಬರನ್ನು ಅಮಾನತುಗೊಳಿಸಲಾಗಿದೆ.  80...

ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ : 8 ಮಹಿಳಾ ಕಾರ್ಮಿಕರು ಸಾವು

ವೇಗವಾಗಿ ಬಂದ ಟ್ರಕ್ ಟೆಂಪೋಗೆ ಡಿಕ್ಕಿ ಹೊಡೆದ ಪರಿಣಾಮ ಎಂಟು ಮಹಿಳಾ ಕಾರ್ಮಿಕರು ಸಾವನ್ನಪ್ಪಿ, ಮೂವರು ಗಾಯಗೊಂಡ ಘಟನೆ ಮಹಾರಾಷ್ಟ್ರದ ಜಲ್ನಾ ಜಿಲ್ಲೆಯ ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಬುಧವಾರ (ಏ.1) ಸಂಜೆ ನಡೆದಿದೆ. ಎಕ್ಸ್‌ಪ್ರೆಸ್‌ವೇಯ...

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...