Homeಮುಖಪುಟಉತ್ತರ ಪ್ರದೇಶ | ‘ಶಾಲೆಗೆ ಕೀರ್ತಿ ತರಲು’, ‘ನಿರ್ದೇಶಕರ ಸಮಸ್ಯೆ ಪರಿಹಾರಕ್ಕೆ' ವಾಮಾಚಾರ ಮಾಡಿ 9...

ಉತ್ತರ ಪ್ರದೇಶ | ‘ಶಾಲೆಗೆ ಕೀರ್ತಿ ತರಲು’, ‘ನಿರ್ದೇಶಕರ ಸಮಸ್ಯೆ ಪರಿಹಾರಕ್ಕೆ’ ವಾಮಾಚಾರ ಮಾಡಿ 9 ವರ್ಷದ ಬಾಲಕನ ಹತ್ಯೆ

- Advertisement -
- Advertisement -

“ಶಾಲೆಗೆ ಕೀರ್ತಿ ತರಲು” ಮತ್ತು “ಶಾಲಾ ನಿರ್ದೇಶಕರ ಕುಟುಂಬವು ಎದುರಿಸುತ್ತಿರುವ ಸಮಸ್ಯೆಗಳ ನಿವಾರಣೆಗಾಗಿ” ಖಾಸಗಿ ಶಾಲೆಯಲ್ಲಿ ಓದುತ್ತಿದ್ದ ಮತ್ತು ಅದರ ಹಾಸ್ಟೆಲ್‌ನಲ್ಲಿ ವಾಸಿಸುತ್ತಿದ್ದ 9 ವರ್ಷದ ಮಗುವನ್ನು ಮಾಟಮಂತ್ರದ ಅಚರಣೆಯ ಭಾಗವಾಗಿ ಕೊಂದಿರುವ ಘಟನೆ ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ ನಡೆದಿದೆ ಎಂದು ವರದಿಯಾಗಿದೆ.ಉತ್ತರ ಪ್ರದೇಶ

ಸೆಪ್ಟೆಂಬರ್ 23 ರಂದು ಆಗ್ರಾದಿಂದ 35 ಕಿಮೀ ದೂರದಲ್ಲಿರುವ ಸದಾಬಾದ್ ಪ್ರದೇಶದ ಶಾಲಾ ನಿರ್ದೇಶಕರ ಕಾರಿನಲ್ಲಿ ಹತ್ರಾಸ್ ಪೊಲೀಸರು ಬಾಲಕನ ಶವವನ್ನು ಪತ್ತೆ ಮಾಡಿದಾಗ ಬಾಲಕನ ಸಾವು ಬೆಳಕಿಗೆ ಬಂದಿದೆ ಎಂದು ವರದಿಯು ಹೇಳಿದೆ. ಬಾಲಕನ ಸಾವಿಗೆ ಸಂಬಂಧಿಸಿದಂತೆ ಗುರುವಾರ ರಸ್‌ಗವಾನ್‌ನ ಶಾಲೆಯಲ್ಲಿ ನಿರ್ದೇಶಕ, ನಿರ್ದೇಶಕನ ತಂದೆ ಮತ್ತು ಮೂವರು ಶಿಕ್ಷಕರು ಸೇರಿದಂತೆ ಐವರನ್ನು ಬಂಧಿಸಲಾಗಿದೆ ಎಂದು ಹತ್ರಾಸ್ ಪೊಲೀಸರು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ನಾವು ಶಾಲಾ ನಿರ್ದೇಶಕ ದಿನೇಶ್ ಬಾಘೆಲ್, ಅವರ ತಂದೆ ಜಸೋಧನ್ ಸಿಂಗ್ ಮತ್ತು ಮೂವರು ಶಾಲಾ ಶಿಕ್ಷಕರಾದ ರಾಮಪ್ರಕಾಶ್ ಸೋಲಂಕಿ, ವೀರಪಾಲ್ ಸಿಂಗ್ ಮತ್ತು ಲಕ್ಷ್ಮಣ್ ಸಿಂಗ್ ಅವರನ್ನು ಬಂಧಿಸಿದ್ದೇವೆ” ಎಂದು ಹತ್ರಾಸ್ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ (ಎಎಸ್ಪಿ) ಅಶೋಕ್ ಕುಮಾರ್ ತಿಳಿಸಿದ್ದಾರೆ. ಶಾಲೆಯ ಆವರಣದಲ್ಲಿರುವ ಕೊಠಡಿಯೊಂದರಿಂದ ಹಗ್ಗ, ಧಾರ್ಮಿಕ ಚಿತ್ರಗಳು ಮತ್ತು ಕೀ ಕೂಡ ಸಿಕ್ಕಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂಓದಿ:  ಪುಣೆ ಪೋರ್ಷೆ ಕಾರು ಅಪಘಾತ ಪ್ರಕರಣ: ಕುಡಿದ ಅಮಲಿನಲ್ಲೆ ಆಸ್ಪತ್ರೆಗೆ ಧಾವಿಸಿದ್ದ ಆರೋಪಿ ಕುಟುಂಬದ ಸದಸ್ಯರು

ಸೆಪ್ಟೆಂಬರ್ 22 ರಂದು ಬೆಳಿಗ್ಗೆ 12 ಗಂಟೆಗೆ ಶಾಲೆಯ ವಿದ್ಯಾರ್ಥಿಗಳು ಮಲಗಿದ್ದಾಗ ಶಾಲೆಯ ಶಿಕ್ಷಕಿ ಸೋಲಂಕಿ ಮಗುವನ್ನು ಹಾಸಿಗೆಯಿಂದ ಎತ್ತಿಕೊಂಡು ಹೊರಗೆ ಕರೆತಂದರು ಎಂದು ಅಶೋಕ್ ಕುಮಾರ್ ಹೇಳಿದ್ದಾರೆ. “ಅವರು ಮಗುವನ್ನು ಗೊತ್ತುಪಡಿಸಿದ ಕೋಣೆಯಲ್ಲಿ ಬಲಿಕೊಡಲು ಯೋಜಿಸಿದ್ದರು. ಆದರೆ ಈ ನಡುವೆ ಬಾಲಕ ಎಚ್ಚರಗೊಂಡು ಅಳಲು ಪ್ರಾರಂಭಿಸಿದ್ದರು. ಹಾಗಾಗಿ ಶಿಕ್ಷಕ ಸೋಲಂಕಿ ಮಗುವಿನ ಬಾಯಿಯನ್ನು ಮುಚ್ಚಿ ಹಾಸ್ಟೆಲ್‌ನ ನೆಲಮಹಡಿಗೆ ಕರೆತಂದು ಕತ್ತು ಹಿಸುಕಿದ್ದಾನೆ” ಎಂದು ಪೊಲೀಸ್ ಅಧಿಕಾರಿ ಹೇಳಿದ್ದಾರೆ.

ಅವರನ್ನು ಮೇಲ್ವಿಚಾರಣೆ ಮಾಡಲು ವೀರಪಾಲ್ ಮತ್ತು ಲಕ್ಷ್ಮಣ್ ಸಿಂಗ್ ನಿಂತಿದ್ದರು ಎಂದು ಅಶೋಕ್ ಕುಮಾರ್ ಹೇಳಿದ್ದಾರೆ. ಶಾಲಾ ನಿರ್ದೇಶಕರ ತಂದೆ ಜಸೋಧನ್ ಸಿಂಗ್ ಈಗಾಗಲೇ ತನ್ನ ಮಗ ದಿನೇಶ್ ಬಘೇಲ್‌ಗೆ ವಿಧಿ ವಿಧಾನದ ಬಗ್ಗೆ ತಿಳಿಸಿದ್ದು, ಅವರು ಶವವನ್ನು ಬಿಸಾಕಲು ಸಿದ್ಧರಾಗಿದ್ದರು. ಈ ವೇಳೆ ಬಾಘೆಲ್ ಸಿಕ್ಕಿಬಿದ್ದಿದ್ದಾನೆ ಎಂದು ಪೊಲೀಸ್ ಅಧಿಕಾರಿ ಹೇಳಿದ್ದಾರೆ.

ಬಾಲಕನ ತಂದೆ ಸೆಪ್ಟೆಂಬರ್ 23 ರಂದು ಸಹ್ಪೌ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿದ್ದು, ತನ್ನ ಮಗನ ಸಾವಿಗೆ ಶಾಲಾ ನಿರ್ದೇಶಕರನ್ನು ದೂಷಿಸಿದ್ದಾರೆ. “ಸೆಪ್ಟೆಂಬರ್ 23 ರಂದು ಬೆಳಿಗ್ಗೆ ನಮಗೆ ಕರೆ ಮಾಡಿದ ಬಾಘೆಲ್ ನನ್ನ ಮಗನಿಗೆ ಹುಷಾರಿಲ್ಲ ಮತ್ತು ತಕ್ಷಣದ ವೈದ್ಯಕೀಯ ಸಹಾಯಕ್ಕಾಗಿ ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದೇವೆ ಎಂದು ಹೇಳಿದರು” ಎಂದು ಅವರು ಹೇಳಿದ್ದಾರೆ.

ನಾವು ಹಾಸ್ಟೆಲ್‌ಗೆ ಧಾವಿಸಿದೆವು ಆದರೆ ಅಲ್ಲಿ ಬಾಘೆಲ್ ಮತ್ತು ನಮ್ಮ ಮಗನನ್ನು ಕಂಡುಕೊಂಡೆವು ಎಂದು ಹೇಳಿದ್ದಾರೆ ನೋಡಿದ್ದೇವೆ. “ಹಾಸ್ಟೆಲ್ ತಲುಪಿ ನಾವು ಬಾಘೇಲ್ ಅವರನ್ನು ಸಂಪರ್ಕಿಸಿ ಮಗನ ಬಗ್ಗೆ ಕೇಳಿದಾಗ, ಅವರು ನನ್ನ ಮಗನ ಸ್ಥಿತಿ ಹದಗೆಟ್ಟಿದ್ದರಿಂದ ಆಗ್ರಾಕ್ಕೆ ಕರೆದುಕೊಂಡು ಹೋಗುತ್ತಿರುವುದಾಗಿ ತಿಳಿಸಿದ್ದರು. ನಮಗೆ ಅನುಮಾನ ಬಂದು ಆ ಪ್ರದೇಶದ ಪೊಲೀಸರಿಗೆ ಮಾಹಿತಿ ನೀಡಿದೆವು. ಬಾಘೇಲ್ ಅವರನ್ನು ದಾರಿಯಲ್ಲೆ ಕಾಯಲು ಹೇಳಿ, ನಂತರ ನಾವೂ ಅವರನ್ನು ಹಿಂಬಾಲಿಸಿದೆವು. ಈ ವೇಳೆ ಬಾಘೆಲ್‌ನನ್ನು ಪತ್ತೆಹಚ್ಚಿದಾಗ ನನ್ನ ಮಗ ಅವರ ಕಾರಿನಲ್ಲಿ ಶವವಾಗಿ ಬಿದ್ದಿರುವುದು ಕಂಡುಬಂದಿದೆ” ಎಂದು ತಂದೆ ಹೇಳಿದ್ದಾರೆ.

ಇದನ್ನೂಓದಿ: ತೆಲಂಗಾಣ: ಶವ ಸಂಸ್ಕಾರ ಮಾಡದಂತೆ ದಲಿತ ಕುಟುಂಬವನ್ನು ತಡೆದ ರಿಯಲ್ ಎಸ್ಟೇಟ್‌ ಏಜೆಂಟ್‌ಗಳು  

ಪೊಲೀಸರು ಅದೇ ದಿನ ದಿನೇಶ್ ಬಘೇಲ್‌ನನ್ನು ಬಂಧಿಸಿದ್ದರೂ, ಬಾಲಕನ ಕೊಲೆಯ ಹಿಂದಿನ ಉದ್ದೇಶವನ್ನು ಕಂಡುಹಿಡಿಯಲು ಸಾಧ್ಯವಾಗಿರಲಿಲ್ಲ. “ನಾವು ಬಾಘೇಲ್‌ನನ್ನು ಬಂಧಿಸಿದ ನಂತರ ನಮ್ಮ ತನಿಖೆಯನ್ನು ಪ್ರಾರಂಭಿಸಿದೆವು. ರಸ್ಗವಾ ಗ್ರಾಮದಲ್ಲಿ ಅವನ ಮತ್ತು ಅವನ ಕುಟುಂಬಕ್ಕೆ ಹತ್ತಿರವಿರುವ ಹಲವಾರು ಜನರೊಂದಿಗೆ ಮಾತನಾಡಿದ್ದೇವೆ. ಅವರ ತಂದೆ ಜಸೋಧನ್ ಸಿಂಗ್ ವಾಮಾಚಾರದಲ್ಲಿ ನಂಬಿಕೆ ಹೊಂದಿದ್ದಾಗಿ, ಎರಡು ತಿಂಗಳ ಹಿಂದೆ ಅಪ್ರಾಪ್ತ ಬಾಲಕನನ್ನು ಬಲಿಕೊಡುವಂತೆ ಮಗನಿಗೆ ಸಲಹೆ ನೀಡಿದ್ದರು ಎಂದು ತಿಳಿದು ಬಂದಿತ್ತು” ಎಂದು ಪೊಲೀಸರು ಹೇಳಿದ್ದಾರೆ.

“ವಾಮಾಚಾರ ಯೋಜನೆಯನ್ನು ಕಾರ್ಯಗತಗೊಳಿಸಲು ಜಸೋಧನ್‌ಗೆ ಸಾಧ್ಯವಾಗಿರಲಿಲ್ಲ. ನಾವು ಅವರ ತಂದೆಯನ್ನು ವಿಚಾರಣೆಗೆ ಒಳಪಡಿಸಿದಾ, ಘೋರ ಅಪರಾಧದ ಹಿಂದಿನ ಸತ್ಯವನ್ನು ಬಹಿರಂಗಪಡಿಸಿದರು” ಎಂದು ಅಶೋಕ್ ಕುಮಾರ್ ಹೇಳಿದ್ದಾರೆ.

ಇದರ ನಂತರ ಪೊಲೀಸರು ಮತ್ತೆ ಬಾಘೇಲ್‌ನನ್ನು ವಿಚಾರಣೆಗೆ ಒಳಪಡಿಸಿದ್ದು, ಅವರು ತಮ್ಮ ತಂದೆಯ ಸಲಹೆಯ ಮೇರೆಗೆ ರಾಮ್ ಪ್ರಕಾಶ್ ಸೋಲಂಕಿ ಅವರನ್ನು ಸೆಪ್ಟೆಂಬರ್ 22 ರ ರಾತ್ರಿ ತನ್ನ ಹಾಸ್ಟೆಲ್ ಕೋಣೆಯಿಂದ ಅಪ್ರಾಪ್ತರನ್ನು ಕರೆದುಕೊಂಡು ಬರುವಂತೆ ಹೇಳಿದ್ದಾರೆ.ಉತ್ತರ ಪ್ರದೇಶ

“ಬಾಘೇಲ್ ಆರಂಭದಲ್ಲಿ ಮಗುವಿಗೆ ಅನಾರೋಗ್ಯವಿದೆ ಎಂದು ನಮಗೆ ತಿಳಿಸಿದ್ದರು. ಆದ್ದರಿಂದ ಅವನು ಮೊದಲು ಅವನನ್ನು ಸದಾಬಾದ್‌ನ ಆಸ್ಪತ್ರೆಗೆ ಮತ್ತು ನಂತರ ಆಗ್ರಾಕ್ಕೆ ಕರೆದೊಯ್ದನು. ಅಲ್ಲಿ ವೈದ್ಯರು ಬಾಲಕ ಸತ್ತಿದ್ದಾರೆ ಎಂದು ಘೋಷಿಸಿದರು. ಆದ್ದರಿಂದ ಅವನು ಬಾಲಕನ ಶವವನ್ನು ಹತ್ರಾಸ್‌ನಲ್ಲಿರುವ ರಾಸ್‌ಗಾವಾನ್‌ಗೆ ಕರೆತರುತ್ತಿದ್ದೆನು ಎಂದು ಅವರು ಹೇಳಿದ್ದರು” ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದರು. ಆದರೆ, ಮರಣೋತ್ತರ ಪರೀಕ್ಷೆಯಲ್ಲಿ ಬಾಲಕನ್ನು ಕತ್ತು ಹಿಸುಕಿ ಕೊಲೆ ಮಾಡಿರುವುದು ಹಾಗೂ ಕತ್ತಿನ ಮೂಳೆಗಳು ಮುರಿದಿರುವುದು ದೃಢಪಟ್ಟಿದೆ.

ವಿಡಿಯೊ ನೋಡಿ: ಕಲಬುರಗಿ- ಗೌರಿಯದ್ದು ವೈಚಾರಿಕ ಕೊಲೆ: ಗೌರಿ ನೆನಪು ಕಾರ್ಯಕ್ರಮದಲ್ಲಿ ರಹಮತ್ ತರೀಕೆರೆ ಮಾತುಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...