Homeಮುಖಪುಟಉತ್ತರ ಪ್ರದೇಶ | ‘ಶಾಲೆಗೆ ಕೀರ್ತಿ ತರಲು’, ‘ನಿರ್ದೇಶಕರ ಸಮಸ್ಯೆ ಪರಿಹಾರಕ್ಕೆ' ವಾಮಾಚಾರ ಮಾಡಿ 9...

ಉತ್ತರ ಪ್ರದೇಶ | ‘ಶಾಲೆಗೆ ಕೀರ್ತಿ ತರಲು’, ‘ನಿರ್ದೇಶಕರ ಸಮಸ್ಯೆ ಪರಿಹಾರಕ್ಕೆ’ ವಾಮಾಚಾರ ಮಾಡಿ 9 ವರ್ಷದ ಬಾಲಕನ ಹತ್ಯೆ

- Advertisement -
- Advertisement -

“ಶಾಲೆಗೆ ಕೀರ್ತಿ ತರಲು” ಮತ್ತು “ಶಾಲಾ ನಿರ್ದೇಶಕರ ಕುಟುಂಬವು ಎದುರಿಸುತ್ತಿರುವ ಸಮಸ್ಯೆಗಳ ನಿವಾರಣೆಗಾಗಿ” ಖಾಸಗಿ ಶಾಲೆಯಲ್ಲಿ ಓದುತ್ತಿದ್ದ ಮತ್ತು ಅದರ ಹಾಸ್ಟೆಲ್‌ನಲ್ಲಿ ವಾಸಿಸುತ್ತಿದ್ದ 9 ವರ್ಷದ ಮಗುವನ್ನು ಮಾಟಮಂತ್ರದ ಅಚರಣೆಯ ಭಾಗವಾಗಿ ಕೊಂದಿರುವ ಘಟನೆ ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ ನಡೆದಿದೆ ಎಂದು ವರದಿಯಾಗಿದೆ.ಉತ್ತರ ಪ್ರದೇಶ

ಸೆಪ್ಟೆಂಬರ್ 23 ರಂದು ಆಗ್ರಾದಿಂದ 35 ಕಿಮೀ ದೂರದಲ್ಲಿರುವ ಸದಾಬಾದ್ ಪ್ರದೇಶದ ಶಾಲಾ ನಿರ್ದೇಶಕರ ಕಾರಿನಲ್ಲಿ ಹತ್ರಾಸ್ ಪೊಲೀಸರು ಬಾಲಕನ ಶವವನ್ನು ಪತ್ತೆ ಮಾಡಿದಾಗ ಬಾಲಕನ ಸಾವು ಬೆಳಕಿಗೆ ಬಂದಿದೆ ಎಂದು ವರದಿಯು ಹೇಳಿದೆ. ಬಾಲಕನ ಸಾವಿಗೆ ಸಂಬಂಧಿಸಿದಂತೆ ಗುರುವಾರ ರಸ್‌ಗವಾನ್‌ನ ಶಾಲೆಯಲ್ಲಿ ನಿರ್ದೇಶಕ, ನಿರ್ದೇಶಕನ ತಂದೆ ಮತ್ತು ಮೂವರು ಶಿಕ್ಷಕರು ಸೇರಿದಂತೆ ಐವರನ್ನು ಬಂಧಿಸಲಾಗಿದೆ ಎಂದು ಹತ್ರಾಸ್ ಪೊಲೀಸರು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ನಾವು ಶಾಲಾ ನಿರ್ದೇಶಕ ದಿನೇಶ್ ಬಾಘೆಲ್, ಅವರ ತಂದೆ ಜಸೋಧನ್ ಸಿಂಗ್ ಮತ್ತು ಮೂವರು ಶಾಲಾ ಶಿಕ್ಷಕರಾದ ರಾಮಪ್ರಕಾಶ್ ಸೋಲಂಕಿ, ವೀರಪಾಲ್ ಸಿಂಗ್ ಮತ್ತು ಲಕ್ಷ್ಮಣ್ ಸಿಂಗ್ ಅವರನ್ನು ಬಂಧಿಸಿದ್ದೇವೆ” ಎಂದು ಹತ್ರಾಸ್ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ (ಎಎಸ್ಪಿ) ಅಶೋಕ್ ಕುಮಾರ್ ತಿಳಿಸಿದ್ದಾರೆ. ಶಾಲೆಯ ಆವರಣದಲ್ಲಿರುವ ಕೊಠಡಿಯೊಂದರಿಂದ ಹಗ್ಗ, ಧಾರ್ಮಿಕ ಚಿತ್ರಗಳು ಮತ್ತು ಕೀ ಕೂಡ ಸಿಕ್ಕಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂಓದಿ:  ಪುಣೆ ಪೋರ್ಷೆ ಕಾರು ಅಪಘಾತ ಪ್ರಕರಣ: ಕುಡಿದ ಅಮಲಿನಲ್ಲೆ ಆಸ್ಪತ್ರೆಗೆ ಧಾವಿಸಿದ್ದ ಆರೋಪಿ ಕುಟುಂಬದ ಸದಸ್ಯರು

ಸೆಪ್ಟೆಂಬರ್ 22 ರಂದು ಬೆಳಿಗ್ಗೆ 12 ಗಂಟೆಗೆ ಶಾಲೆಯ ವಿದ್ಯಾರ್ಥಿಗಳು ಮಲಗಿದ್ದಾಗ ಶಾಲೆಯ ಶಿಕ್ಷಕಿ ಸೋಲಂಕಿ ಮಗುವನ್ನು ಹಾಸಿಗೆಯಿಂದ ಎತ್ತಿಕೊಂಡು ಹೊರಗೆ ಕರೆತಂದರು ಎಂದು ಅಶೋಕ್ ಕುಮಾರ್ ಹೇಳಿದ್ದಾರೆ. “ಅವರು ಮಗುವನ್ನು ಗೊತ್ತುಪಡಿಸಿದ ಕೋಣೆಯಲ್ಲಿ ಬಲಿಕೊಡಲು ಯೋಜಿಸಿದ್ದರು. ಆದರೆ ಈ ನಡುವೆ ಬಾಲಕ ಎಚ್ಚರಗೊಂಡು ಅಳಲು ಪ್ರಾರಂಭಿಸಿದ್ದರು. ಹಾಗಾಗಿ ಶಿಕ್ಷಕ ಸೋಲಂಕಿ ಮಗುವಿನ ಬಾಯಿಯನ್ನು ಮುಚ್ಚಿ ಹಾಸ್ಟೆಲ್‌ನ ನೆಲಮಹಡಿಗೆ ಕರೆತಂದು ಕತ್ತು ಹಿಸುಕಿದ್ದಾನೆ” ಎಂದು ಪೊಲೀಸ್ ಅಧಿಕಾರಿ ಹೇಳಿದ್ದಾರೆ.

ಅವರನ್ನು ಮೇಲ್ವಿಚಾರಣೆ ಮಾಡಲು ವೀರಪಾಲ್ ಮತ್ತು ಲಕ್ಷ್ಮಣ್ ಸಿಂಗ್ ನಿಂತಿದ್ದರು ಎಂದು ಅಶೋಕ್ ಕುಮಾರ್ ಹೇಳಿದ್ದಾರೆ. ಶಾಲಾ ನಿರ್ದೇಶಕರ ತಂದೆ ಜಸೋಧನ್ ಸಿಂಗ್ ಈಗಾಗಲೇ ತನ್ನ ಮಗ ದಿನೇಶ್ ಬಘೇಲ್‌ಗೆ ವಿಧಿ ವಿಧಾನದ ಬಗ್ಗೆ ತಿಳಿಸಿದ್ದು, ಅವರು ಶವವನ್ನು ಬಿಸಾಕಲು ಸಿದ್ಧರಾಗಿದ್ದರು. ಈ ವೇಳೆ ಬಾಘೆಲ್ ಸಿಕ್ಕಿಬಿದ್ದಿದ್ದಾನೆ ಎಂದು ಪೊಲೀಸ್ ಅಧಿಕಾರಿ ಹೇಳಿದ್ದಾರೆ.

ಬಾಲಕನ ತಂದೆ ಸೆಪ್ಟೆಂಬರ್ 23 ರಂದು ಸಹ್ಪೌ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿದ್ದು, ತನ್ನ ಮಗನ ಸಾವಿಗೆ ಶಾಲಾ ನಿರ್ದೇಶಕರನ್ನು ದೂಷಿಸಿದ್ದಾರೆ. “ಸೆಪ್ಟೆಂಬರ್ 23 ರಂದು ಬೆಳಿಗ್ಗೆ ನಮಗೆ ಕರೆ ಮಾಡಿದ ಬಾಘೆಲ್ ನನ್ನ ಮಗನಿಗೆ ಹುಷಾರಿಲ್ಲ ಮತ್ತು ತಕ್ಷಣದ ವೈದ್ಯಕೀಯ ಸಹಾಯಕ್ಕಾಗಿ ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದೇವೆ ಎಂದು ಹೇಳಿದರು” ಎಂದು ಅವರು ಹೇಳಿದ್ದಾರೆ.

ನಾವು ಹಾಸ್ಟೆಲ್‌ಗೆ ಧಾವಿಸಿದೆವು ಆದರೆ ಅಲ್ಲಿ ಬಾಘೆಲ್ ಮತ್ತು ನಮ್ಮ ಮಗನನ್ನು ಕಂಡುಕೊಂಡೆವು ಎಂದು ಹೇಳಿದ್ದಾರೆ ನೋಡಿದ್ದೇವೆ. “ಹಾಸ್ಟೆಲ್ ತಲುಪಿ ನಾವು ಬಾಘೇಲ್ ಅವರನ್ನು ಸಂಪರ್ಕಿಸಿ ಮಗನ ಬಗ್ಗೆ ಕೇಳಿದಾಗ, ಅವರು ನನ್ನ ಮಗನ ಸ್ಥಿತಿ ಹದಗೆಟ್ಟಿದ್ದರಿಂದ ಆಗ್ರಾಕ್ಕೆ ಕರೆದುಕೊಂಡು ಹೋಗುತ್ತಿರುವುದಾಗಿ ತಿಳಿಸಿದ್ದರು. ನಮಗೆ ಅನುಮಾನ ಬಂದು ಆ ಪ್ರದೇಶದ ಪೊಲೀಸರಿಗೆ ಮಾಹಿತಿ ನೀಡಿದೆವು. ಬಾಘೇಲ್ ಅವರನ್ನು ದಾರಿಯಲ್ಲೆ ಕಾಯಲು ಹೇಳಿ, ನಂತರ ನಾವೂ ಅವರನ್ನು ಹಿಂಬಾಲಿಸಿದೆವು. ಈ ವೇಳೆ ಬಾಘೆಲ್‌ನನ್ನು ಪತ್ತೆಹಚ್ಚಿದಾಗ ನನ್ನ ಮಗ ಅವರ ಕಾರಿನಲ್ಲಿ ಶವವಾಗಿ ಬಿದ್ದಿರುವುದು ಕಂಡುಬಂದಿದೆ” ಎಂದು ತಂದೆ ಹೇಳಿದ್ದಾರೆ.

ಇದನ್ನೂಓದಿ: ತೆಲಂಗಾಣ: ಶವ ಸಂಸ್ಕಾರ ಮಾಡದಂತೆ ದಲಿತ ಕುಟುಂಬವನ್ನು ತಡೆದ ರಿಯಲ್ ಎಸ್ಟೇಟ್‌ ಏಜೆಂಟ್‌ಗಳು  

ಪೊಲೀಸರು ಅದೇ ದಿನ ದಿನೇಶ್ ಬಘೇಲ್‌ನನ್ನು ಬಂಧಿಸಿದ್ದರೂ, ಬಾಲಕನ ಕೊಲೆಯ ಹಿಂದಿನ ಉದ್ದೇಶವನ್ನು ಕಂಡುಹಿಡಿಯಲು ಸಾಧ್ಯವಾಗಿರಲಿಲ್ಲ. “ನಾವು ಬಾಘೇಲ್‌ನನ್ನು ಬಂಧಿಸಿದ ನಂತರ ನಮ್ಮ ತನಿಖೆಯನ್ನು ಪ್ರಾರಂಭಿಸಿದೆವು. ರಸ್ಗವಾ ಗ್ರಾಮದಲ್ಲಿ ಅವನ ಮತ್ತು ಅವನ ಕುಟುಂಬಕ್ಕೆ ಹತ್ತಿರವಿರುವ ಹಲವಾರು ಜನರೊಂದಿಗೆ ಮಾತನಾಡಿದ್ದೇವೆ. ಅವರ ತಂದೆ ಜಸೋಧನ್ ಸಿಂಗ್ ವಾಮಾಚಾರದಲ್ಲಿ ನಂಬಿಕೆ ಹೊಂದಿದ್ದಾಗಿ, ಎರಡು ತಿಂಗಳ ಹಿಂದೆ ಅಪ್ರಾಪ್ತ ಬಾಲಕನನ್ನು ಬಲಿಕೊಡುವಂತೆ ಮಗನಿಗೆ ಸಲಹೆ ನೀಡಿದ್ದರು ಎಂದು ತಿಳಿದು ಬಂದಿತ್ತು” ಎಂದು ಪೊಲೀಸರು ಹೇಳಿದ್ದಾರೆ.

“ವಾಮಾಚಾರ ಯೋಜನೆಯನ್ನು ಕಾರ್ಯಗತಗೊಳಿಸಲು ಜಸೋಧನ್‌ಗೆ ಸಾಧ್ಯವಾಗಿರಲಿಲ್ಲ. ನಾವು ಅವರ ತಂದೆಯನ್ನು ವಿಚಾರಣೆಗೆ ಒಳಪಡಿಸಿದಾ, ಘೋರ ಅಪರಾಧದ ಹಿಂದಿನ ಸತ್ಯವನ್ನು ಬಹಿರಂಗಪಡಿಸಿದರು” ಎಂದು ಅಶೋಕ್ ಕುಮಾರ್ ಹೇಳಿದ್ದಾರೆ.

ಇದರ ನಂತರ ಪೊಲೀಸರು ಮತ್ತೆ ಬಾಘೇಲ್‌ನನ್ನು ವಿಚಾರಣೆಗೆ ಒಳಪಡಿಸಿದ್ದು, ಅವರು ತಮ್ಮ ತಂದೆಯ ಸಲಹೆಯ ಮೇರೆಗೆ ರಾಮ್ ಪ್ರಕಾಶ್ ಸೋಲಂಕಿ ಅವರನ್ನು ಸೆಪ್ಟೆಂಬರ್ 22 ರ ರಾತ್ರಿ ತನ್ನ ಹಾಸ್ಟೆಲ್ ಕೋಣೆಯಿಂದ ಅಪ್ರಾಪ್ತರನ್ನು ಕರೆದುಕೊಂಡು ಬರುವಂತೆ ಹೇಳಿದ್ದಾರೆ.ಉತ್ತರ ಪ್ರದೇಶ

“ಬಾಘೇಲ್ ಆರಂಭದಲ್ಲಿ ಮಗುವಿಗೆ ಅನಾರೋಗ್ಯವಿದೆ ಎಂದು ನಮಗೆ ತಿಳಿಸಿದ್ದರು. ಆದ್ದರಿಂದ ಅವನು ಮೊದಲು ಅವನನ್ನು ಸದಾಬಾದ್‌ನ ಆಸ್ಪತ್ರೆಗೆ ಮತ್ತು ನಂತರ ಆಗ್ರಾಕ್ಕೆ ಕರೆದೊಯ್ದನು. ಅಲ್ಲಿ ವೈದ್ಯರು ಬಾಲಕ ಸತ್ತಿದ್ದಾರೆ ಎಂದು ಘೋಷಿಸಿದರು. ಆದ್ದರಿಂದ ಅವನು ಬಾಲಕನ ಶವವನ್ನು ಹತ್ರಾಸ್‌ನಲ್ಲಿರುವ ರಾಸ್‌ಗಾವಾನ್‌ಗೆ ಕರೆತರುತ್ತಿದ್ದೆನು ಎಂದು ಅವರು ಹೇಳಿದ್ದರು” ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದರು. ಆದರೆ, ಮರಣೋತ್ತರ ಪರೀಕ್ಷೆಯಲ್ಲಿ ಬಾಲಕನ್ನು ಕತ್ತು ಹಿಸುಕಿ ಕೊಲೆ ಮಾಡಿರುವುದು ಹಾಗೂ ಕತ್ತಿನ ಮೂಳೆಗಳು ಮುರಿದಿರುವುದು ದೃಢಪಟ್ಟಿದೆ.

ವಿಡಿಯೊ ನೋಡಿ: ಕಲಬುರಗಿ- ಗೌರಿಯದ್ದು ವೈಚಾರಿಕ ಕೊಲೆ: ಗೌರಿ ನೆನಪು ಕಾರ್ಯಕ್ರಮದಲ್ಲಿ ರಹಮತ್ ತರೀಕೆರೆ ಮಾತುಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...