Homeಮುಖಪುಟಉತ್ತರ ಪ್ರದೇಶ | ‘ಶಾಲೆಗೆ ಕೀರ್ತಿ ತರಲು’, ‘ನಿರ್ದೇಶಕರ ಸಮಸ್ಯೆ ಪರಿಹಾರಕ್ಕೆ' ವಾಮಾಚಾರ ಮಾಡಿ 9...

ಉತ್ತರ ಪ್ರದೇಶ | ‘ಶಾಲೆಗೆ ಕೀರ್ತಿ ತರಲು’, ‘ನಿರ್ದೇಶಕರ ಸಮಸ್ಯೆ ಪರಿಹಾರಕ್ಕೆ’ ವಾಮಾಚಾರ ಮಾಡಿ 9 ವರ್ಷದ ಬಾಲಕನ ಹತ್ಯೆ

- Advertisement -
- Advertisement -

“ಶಾಲೆಗೆ ಕೀರ್ತಿ ತರಲು” ಮತ್ತು “ಶಾಲಾ ನಿರ್ದೇಶಕರ ಕುಟುಂಬವು ಎದುರಿಸುತ್ತಿರುವ ಸಮಸ್ಯೆಗಳ ನಿವಾರಣೆಗಾಗಿ” ಖಾಸಗಿ ಶಾಲೆಯಲ್ಲಿ ಓದುತ್ತಿದ್ದ ಮತ್ತು ಅದರ ಹಾಸ್ಟೆಲ್‌ನಲ್ಲಿ ವಾಸಿಸುತ್ತಿದ್ದ 9 ವರ್ಷದ ಮಗುವನ್ನು ಮಾಟಮಂತ್ರದ ಅಚರಣೆಯ ಭಾಗವಾಗಿ ಕೊಂದಿರುವ ಘಟನೆ ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ ನಡೆದಿದೆ ಎಂದು ವರದಿಯಾಗಿದೆ.ಉತ್ತರ ಪ್ರದೇಶ

ಸೆಪ್ಟೆಂಬರ್ 23 ರಂದು ಆಗ್ರಾದಿಂದ 35 ಕಿಮೀ ದೂರದಲ್ಲಿರುವ ಸದಾಬಾದ್ ಪ್ರದೇಶದ ಶಾಲಾ ನಿರ್ದೇಶಕರ ಕಾರಿನಲ್ಲಿ ಹತ್ರಾಸ್ ಪೊಲೀಸರು ಬಾಲಕನ ಶವವನ್ನು ಪತ್ತೆ ಮಾಡಿದಾಗ ಬಾಲಕನ ಸಾವು ಬೆಳಕಿಗೆ ಬಂದಿದೆ ಎಂದು ವರದಿಯು ಹೇಳಿದೆ. ಬಾಲಕನ ಸಾವಿಗೆ ಸಂಬಂಧಿಸಿದಂತೆ ಗುರುವಾರ ರಸ್‌ಗವಾನ್‌ನ ಶಾಲೆಯಲ್ಲಿ ನಿರ್ದೇಶಕ, ನಿರ್ದೇಶಕನ ತಂದೆ ಮತ್ತು ಮೂವರು ಶಿಕ್ಷಕರು ಸೇರಿದಂತೆ ಐವರನ್ನು ಬಂಧಿಸಲಾಗಿದೆ ಎಂದು ಹತ್ರಾಸ್ ಪೊಲೀಸರು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ನಾವು ಶಾಲಾ ನಿರ್ದೇಶಕ ದಿನೇಶ್ ಬಾಘೆಲ್, ಅವರ ತಂದೆ ಜಸೋಧನ್ ಸಿಂಗ್ ಮತ್ತು ಮೂವರು ಶಾಲಾ ಶಿಕ್ಷಕರಾದ ರಾಮಪ್ರಕಾಶ್ ಸೋಲಂಕಿ, ವೀರಪಾಲ್ ಸಿಂಗ್ ಮತ್ತು ಲಕ್ಷ್ಮಣ್ ಸಿಂಗ್ ಅವರನ್ನು ಬಂಧಿಸಿದ್ದೇವೆ” ಎಂದು ಹತ್ರಾಸ್ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ (ಎಎಸ್ಪಿ) ಅಶೋಕ್ ಕುಮಾರ್ ತಿಳಿಸಿದ್ದಾರೆ. ಶಾಲೆಯ ಆವರಣದಲ್ಲಿರುವ ಕೊಠಡಿಯೊಂದರಿಂದ ಹಗ್ಗ, ಧಾರ್ಮಿಕ ಚಿತ್ರಗಳು ಮತ್ತು ಕೀ ಕೂಡ ಸಿಕ್ಕಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂಓದಿ:  ಪುಣೆ ಪೋರ್ಷೆ ಕಾರು ಅಪಘಾತ ಪ್ರಕರಣ: ಕುಡಿದ ಅಮಲಿನಲ್ಲೆ ಆಸ್ಪತ್ರೆಗೆ ಧಾವಿಸಿದ್ದ ಆರೋಪಿ ಕುಟುಂಬದ ಸದಸ್ಯರು

ಸೆಪ್ಟೆಂಬರ್ 22 ರಂದು ಬೆಳಿಗ್ಗೆ 12 ಗಂಟೆಗೆ ಶಾಲೆಯ ವಿದ್ಯಾರ್ಥಿಗಳು ಮಲಗಿದ್ದಾಗ ಶಾಲೆಯ ಶಿಕ್ಷಕಿ ಸೋಲಂಕಿ ಮಗುವನ್ನು ಹಾಸಿಗೆಯಿಂದ ಎತ್ತಿಕೊಂಡು ಹೊರಗೆ ಕರೆತಂದರು ಎಂದು ಅಶೋಕ್ ಕುಮಾರ್ ಹೇಳಿದ್ದಾರೆ. “ಅವರು ಮಗುವನ್ನು ಗೊತ್ತುಪಡಿಸಿದ ಕೋಣೆಯಲ್ಲಿ ಬಲಿಕೊಡಲು ಯೋಜಿಸಿದ್ದರು. ಆದರೆ ಈ ನಡುವೆ ಬಾಲಕ ಎಚ್ಚರಗೊಂಡು ಅಳಲು ಪ್ರಾರಂಭಿಸಿದ್ದರು. ಹಾಗಾಗಿ ಶಿಕ್ಷಕ ಸೋಲಂಕಿ ಮಗುವಿನ ಬಾಯಿಯನ್ನು ಮುಚ್ಚಿ ಹಾಸ್ಟೆಲ್‌ನ ನೆಲಮಹಡಿಗೆ ಕರೆತಂದು ಕತ್ತು ಹಿಸುಕಿದ್ದಾನೆ” ಎಂದು ಪೊಲೀಸ್ ಅಧಿಕಾರಿ ಹೇಳಿದ್ದಾರೆ.

ಅವರನ್ನು ಮೇಲ್ವಿಚಾರಣೆ ಮಾಡಲು ವೀರಪಾಲ್ ಮತ್ತು ಲಕ್ಷ್ಮಣ್ ಸಿಂಗ್ ನಿಂತಿದ್ದರು ಎಂದು ಅಶೋಕ್ ಕುಮಾರ್ ಹೇಳಿದ್ದಾರೆ. ಶಾಲಾ ನಿರ್ದೇಶಕರ ತಂದೆ ಜಸೋಧನ್ ಸಿಂಗ್ ಈಗಾಗಲೇ ತನ್ನ ಮಗ ದಿನೇಶ್ ಬಘೇಲ್‌ಗೆ ವಿಧಿ ವಿಧಾನದ ಬಗ್ಗೆ ತಿಳಿಸಿದ್ದು, ಅವರು ಶವವನ್ನು ಬಿಸಾಕಲು ಸಿದ್ಧರಾಗಿದ್ದರು. ಈ ವೇಳೆ ಬಾಘೆಲ್ ಸಿಕ್ಕಿಬಿದ್ದಿದ್ದಾನೆ ಎಂದು ಪೊಲೀಸ್ ಅಧಿಕಾರಿ ಹೇಳಿದ್ದಾರೆ.

ಬಾಲಕನ ತಂದೆ ಸೆಪ್ಟೆಂಬರ್ 23 ರಂದು ಸಹ್ಪೌ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿದ್ದು, ತನ್ನ ಮಗನ ಸಾವಿಗೆ ಶಾಲಾ ನಿರ್ದೇಶಕರನ್ನು ದೂಷಿಸಿದ್ದಾರೆ. “ಸೆಪ್ಟೆಂಬರ್ 23 ರಂದು ಬೆಳಿಗ್ಗೆ ನಮಗೆ ಕರೆ ಮಾಡಿದ ಬಾಘೆಲ್ ನನ್ನ ಮಗನಿಗೆ ಹುಷಾರಿಲ್ಲ ಮತ್ತು ತಕ್ಷಣದ ವೈದ್ಯಕೀಯ ಸಹಾಯಕ್ಕಾಗಿ ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದೇವೆ ಎಂದು ಹೇಳಿದರು” ಎಂದು ಅವರು ಹೇಳಿದ್ದಾರೆ.

ನಾವು ಹಾಸ್ಟೆಲ್‌ಗೆ ಧಾವಿಸಿದೆವು ಆದರೆ ಅಲ್ಲಿ ಬಾಘೆಲ್ ಮತ್ತು ನಮ್ಮ ಮಗನನ್ನು ಕಂಡುಕೊಂಡೆವು ಎಂದು ಹೇಳಿದ್ದಾರೆ ನೋಡಿದ್ದೇವೆ. “ಹಾಸ್ಟೆಲ್ ತಲುಪಿ ನಾವು ಬಾಘೇಲ್ ಅವರನ್ನು ಸಂಪರ್ಕಿಸಿ ಮಗನ ಬಗ್ಗೆ ಕೇಳಿದಾಗ, ಅವರು ನನ್ನ ಮಗನ ಸ್ಥಿತಿ ಹದಗೆಟ್ಟಿದ್ದರಿಂದ ಆಗ್ರಾಕ್ಕೆ ಕರೆದುಕೊಂಡು ಹೋಗುತ್ತಿರುವುದಾಗಿ ತಿಳಿಸಿದ್ದರು. ನಮಗೆ ಅನುಮಾನ ಬಂದು ಆ ಪ್ರದೇಶದ ಪೊಲೀಸರಿಗೆ ಮಾಹಿತಿ ನೀಡಿದೆವು. ಬಾಘೇಲ್ ಅವರನ್ನು ದಾರಿಯಲ್ಲೆ ಕಾಯಲು ಹೇಳಿ, ನಂತರ ನಾವೂ ಅವರನ್ನು ಹಿಂಬಾಲಿಸಿದೆವು. ಈ ವೇಳೆ ಬಾಘೆಲ್‌ನನ್ನು ಪತ್ತೆಹಚ್ಚಿದಾಗ ನನ್ನ ಮಗ ಅವರ ಕಾರಿನಲ್ಲಿ ಶವವಾಗಿ ಬಿದ್ದಿರುವುದು ಕಂಡುಬಂದಿದೆ” ಎಂದು ತಂದೆ ಹೇಳಿದ್ದಾರೆ.

ಇದನ್ನೂಓದಿ: ತೆಲಂಗಾಣ: ಶವ ಸಂಸ್ಕಾರ ಮಾಡದಂತೆ ದಲಿತ ಕುಟುಂಬವನ್ನು ತಡೆದ ರಿಯಲ್ ಎಸ್ಟೇಟ್‌ ಏಜೆಂಟ್‌ಗಳು  

ಪೊಲೀಸರು ಅದೇ ದಿನ ದಿನೇಶ್ ಬಘೇಲ್‌ನನ್ನು ಬಂಧಿಸಿದ್ದರೂ, ಬಾಲಕನ ಕೊಲೆಯ ಹಿಂದಿನ ಉದ್ದೇಶವನ್ನು ಕಂಡುಹಿಡಿಯಲು ಸಾಧ್ಯವಾಗಿರಲಿಲ್ಲ. “ನಾವು ಬಾಘೇಲ್‌ನನ್ನು ಬಂಧಿಸಿದ ನಂತರ ನಮ್ಮ ತನಿಖೆಯನ್ನು ಪ್ರಾರಂಭಿಸಿದೆವು. ರಸ್ಗವಾ ಗ್ರಾಮದಲ್ಲಿ ಅವನ ಮತ್ತು ಅವನ ಕುಟುಂಬಕ್ಕೆ ಹತ್ತಿರವಿರುವ ಹಲವಾರು ಜನರೊಂದಿಗೆ ಮಾತನಾಡಿದ್ದೇವೆ. ಅವರ ತಂದೆ ಜಸೋಧನ್ ಸಿಂಗ್ ವಾಮಾಚಾರದಲ್ಲಿ ನಂಬಿಕೆ ಹೊಂದಿದ್ದಾಗಿ, ಎರಡು ತಿಂಗಳ ಹಿಂದೆ ಅಪ್ರಾಪ್ತ ಬಾಲಕನನ್ನು ಬಲಿಕೊಡುವಂತೆ ಮಗನಿಗೆ ಸಲಹೆ ನೀಡಿದ್ದರು ಎಂದು ತಿಳಿದು ಬಂದಿತ್ತು” ಎಂದು ಪೊಲೀಸರು ಹೇಳಿದ್ದಾರೆ.

“ವಾಮಾಚಾರ ಯೋಜನೆಯನ್ನು ಕಾರ್ಯಗತಗೊಳಿಸಲು ಜಸೋಧನ್‌ಗೆ ಸಾಧ್ಯವಾಗಿರಲಿಲ್ಲ. ನಾವು ಅವರ ತಂದೆಯನ್ನು ವಿಚಾರಣೆಗೆ ಒಳಪಡಿಸಿದಾ, ಘೋರ ಅಪರಾಧದ ಹಿಂದಿನ ಸತ್ಯವನ್ನು ಬಹಿರಂಗಪಡಿಸಿದರು” ಎಂದು ಅಶೋಕ್ ಕುಮಾರ್ ಹೇಳಿದ್ದಾರೆ.

ಇದರ ನಂತರ ಪೊಲೀಸರು ಮತ್ತೆ ಬಾಘೇಲ್‌ನನ್ನು ವಿಚಾರಣೆಗೆ ಒಳಪಡಿಸಿದ್ದು, ಅವರು ತಮ್ಮ ತಂದೆಯ ಸಲಹೆಯ ಮೇರೆಗೆ ರಾಮ್ ಪ್ರಕಾಶ್ ಸೋಲಂಕಿ ಅವರನ್ನು ಸೆಪ್ಟೆಂಬರ್ 22 ರ ರಾತ್ರಿ ತನ್ನ ಹಾಸ್ಟೆಲ್ ಕೋಣೆಯಿಂದ ಅಪ್ರಾಪ್ತರನ್ನು ಕರೆದುಕೊಂಡು ಬರುವಂತೆ ಹೇಳಿದ್ದಾರೆ.ಉತ್ತರ ಪ್ರದೇಶ

“ಬಾಘೇಲ್ ಆರಂಭದಲ್ಲಿ ಮಗುವಿಗೆ ಅನಾರೋಗ್ಯವಿದೆ ಎಂದು ನಮಗೆ ತಿಳಿಸಿದ್ದರು. ಆದ್ದರಿಂದ ಅವನು ಮೊದಲು ಅವನನ್ನು ಸದಾಬಾದ್‌ನ ಆಸ್ಪತ್ರೆಗೆ ಮತ್ತು ನಂತರ ಆಗ್ರಾಕ್ಕೆ ಕರೆದೊಯ್ದನು. ಅಲ್ಲಿ ವೈದ್ಯರು ಬಾಲಕ ಸತ್ತಿದ್ದಾರೆ ಎಂದು ಘೋಷಿಸಿದರು. ಆದ್ದರಿಂದ ಅವನು ಬಾಲಕನ ಶವವನ್ನು ಹತ್ರಾಸ್‌ನಲ್ಲಿರುವ ರಾಸ್‌ಗಾವಾನ್‌ಗೆ ಕರೆತರುತ್ತಿದ್ದೆನು ಎಂದು ಅವರು ಹೇಳಿದ್ದರು” ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದರು. ಆದರೆ, ಮರಣೋತ್ತರ ಪರೀಕ್ಷೆಯಲ್ಲಿ ಬಾಲಕನ್ನು ಕತ್ತು ಹಿಸುಕಿ ಕೊಲೆ ಮಾಡಿರುವುದು ಹಾಗೂ ಕತ್ತಿನ ಮೂಳೆಗಳು ಮುರಿದಿರುವುದು ದೃಢಪಟ್ಟಿದೆ.

ವಿಡಿಯೊ ನೋಡಿ: ಕಲಬುರಗಿ- ಗೌರಿಯದ್ದು ವೈಚಾರಿಕ ಕೊಲೆ: ಗೌರಿ ನೆನಪು ಕಾರ್ಯಕ್ರಮದಲ್ಲಿ ರಹಮತ್ ತರೀಕೆರೆ ಮಾತುಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...