Homeಕರ್ನಾಟಕಉತ್ತರ ಕನ್ನಡ ಬಿಜೆಪಿಗೆ ಯಾರಾಗ್ತಾರೆ ಅಧ್ಯಕ್ಷ?!

ಉತ್ತರ ಕನ್ನಡ ಬಿಜೆಪಿಗೆ ಯಾರಾಗ್ತಾರೆ ಅಧ್ಯಕ್ಷ?!

- Advertisement -
- Advertisement -

ಉತ್ತರ ಕನ್ನಡದ ಕೇಸರಿ ಪಾಳೆಯದ ಒಳರಾಜಕಾರಣಕ್ಕೆ ಒಂದೇ ಸಮನೆ ಕಾವೇರುತ್ತಿದೆ. ಯಲ್ಲಾಪುರ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷಾಂತರಿ ಶಿವರಾಮ ಹೆಬ್ಬಾರರನ್ನು ಗೆಲ್ಲಿಸುವುದಕ್ಕಿಂತಲೂ ನಿಷ್ಠಾವಂತ ಅನುಯಾಯಿ ಒಬ್ಬರನ್ನು ಜಿಲ್ಲಾ ಬಿಜೆಪಿ ಪೀಠದಲ್ಲಿ ಪ್ರತಿಷ್ಠಾಪಿಸುವ ತಂತ್ರಗಾರಿಕೆ ಬಗ್ಗೆಯೇ ಸಂಘಿ ಸರದಾರರು ತಲೆಕೆಡಿಸಿಕೊಂಡಿದ್ದಾರೆ. ಹೆಬ್ಬಾರ್ ಗೆಲ್ಲಬೇಕಾಗಿರುವುದು ಸಿಎಂ ಯಡ್ಡಿ ಮಹಾತ್ಮರಿಗೆ ಮಾತ್ರ. ನಿಷ್ಠಾವಂತ ಸಂಘ ಸೈನಿಕರಿಗೆ ಆತ ಗೆದ್ದರೂ ಸೋತರೂ ಫರಕೇನೂ ಬೀಳುವುದಿಲ್ಲ. ಸ್ಪೀಕರ್ ಕಾಗೇರಿ, ಸಂಸದ ಅನಂತ್ಮಾಣಿ, ಎಡಬಿಡಂಗಿ ವಕ್ತಾರ ಪ್ರಮೋದ್ ಹೆಗಡೆ ವಗೈರೆ ಬಿಜೆಪಿಯ ಘಟಾನುಘಟಿಗಳಿಗೆ ಹೆಬ್ಬಾರ್ ಸೋತರೇನೇ ಸುಗ್ಗಿ ಸಂಭ್ರಮ!!

ಬಿಜೆಪಿಯಲ್ಲೀಗ ಸಾಂಸ್ಥಿಕ ಚುನಾವಣೆ ನಡೆಯುತ್ತಿದೆ. ಜಿಲ್ಲಾ ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ಹಿಂದೂತ್ವದ ಗುಣಧರ್ಮದ ಜತೆಗೆ ದುಡ್ಡು ದಂಡಿಯಾಗಿರುವ ಆಸಾಮಿಯನ್ನು ತರಲು ಆರೆಸ್ಸೆಸ್‍ನ ಹಿರಿ ತಲೆಗಳು ತಲಾಶ್ ನಡೆಸಿದ್ದಾರೆ. ವಿಧಾನಸಭಾಧ್ಯಕ್ಷ, ಸಂಸದ, ಭಾವಿ ಮಂತ್ರಿಗಿರಿಯಂಥ ಆಯಕಟ್ಟಿನ ಸ್ಥಾನ ಮತ್ತು ನಿಗಮ-ಮಂಡಳಿ ಅಧಿಕಾರವೆಲ್ಲ ಹವ್ಯಕ ಬ್ರಾಹ್ಮಣ ಬಳಗಕ್ಕೇ ದಕ್ಕುತ್ತಿರುವುದು ಹಿಂದುಳಿದ ವರ್ಗದ ಕಾರ್ಯಕರ್ತರಲ್ಲಿ ರೊಚ್ಚು ಮೂಡಿಸಿದೆ. ಬಿಜೆಪಿಯ ಹಾರವ ಲೀಡರ್‍ಗಳು ಧರ್ಮ, ದೇವರ ಹೆಸರಲ್ಲಿ ಶೂದ್ರರನ್ನು ಮುಂದೆ ನಿಲ್ಲಿಸಿ ಹಿಂದಿನಿಂದ ಅಧಿಕಾರ-ಸುಖ ಸಂಪತ್ತು ಪಡೆಯುತ್ತಿದ್ದಾರೆಂಬ ‘ತಿಳಿವಳಿಕೆ’ ಈಗೀಗ ಹಿಂದುಳಿದ ವರ್ಗದ ಮುಖಂಡರಿಗೆ ಬರತೊಡಗಿದೆ. ಈ ಆತೃಪ್ತ ಶೂದ್ರ ಸಂಕುಲ ಒಂದಾಗದಂತೆ ಜನಿವಾರ ಮಂತ್ರ ಪ್ರಯತ್ನಿಸುತ್ತಿದೆ.

ಅಸಮಾಧಾನಗೊಂಡಿರುವ ಹಿಂದುಳಿದವರಿಗೆ ಜಿಲ್ಲಾ ಬಿಜೆಪಿ ಅಧ್ಯಕ್ಷ ಸ್ಥಾನ ಕೊಟ್ಟು ಬಾಯಿ ಮುಚ್ಚಿಸಿ ತಾವು ನಿಗಮ-ಮಂಡಳಿ-ಮಂತ್ರಿ-ಸಂಸದರಂತಹ ಲಾಭದಾಯಕ ಹುದ್ದೆಯಲ್ಲಿ ಮುಂದುವರಿಯಬೇಕೆಂಬ ಹಿಕಮತ್ತು ಸಂಘಪರಿವಾರದ ರಿಂಗ್‍ಮಾಸ್ಟರ್‍ಗಳು ಹೊಸ ಪ್ಲಾನು ಮಾಡಿದ್ದಾರೆ. ಈಚೆಗೆ ನೇಮಕವಾದ ಎರಡು ನಿಗಮ-ಮಂಡಳಿ ಮುಖ್ಯಸ್ಥರು ಹವ್ಯಕ ಬ್ರಾಹ್ಮಣರು. ಜೀವ ವೈವಿಧ್ಯ ಮಂಡಳಿಗೆ ಅನಂತ ಅಶೀಸರ ನೆಗೆದು ಕೂತಿದ್ದಾರೆ. ಎಂ.ಎ.ಹೆಗಡೆ ಎರಡನೇ ಅವಧಿಗೆ ಯಕ್ಷಗಾನ ಮಂಡಳಿಗೆ ವಕ್ಕರಿಸಿದ್ದಾರೆ. ಮಜಾ ಎಂದರೆ ಈ ಎಂ.ಎ.ಹೆಗಡೆ ಹಿಂದೆ ಕಾಂಗ್ರೆಸ್ ಸರ್ಕಾರವಿದ್ದಾಗಲೇ ಯಕ್ಷಗಾನ ಮಂಡಳಿಗೆ ಗದ್ದುಗೆ ಗಿಟ್ಟಿಸಿದ್ದರು. ಈಗ ಚೆಡ್ಡಿಬಿಡಾರದಲ್ಲಿರುವ ಕುಲಬಂಧು ಭೂತದ ಮೂಲಕ ಲಾಬಿ ಮಾಡಿಸಿ ಅದೇ ಕುರ್ಚಿಯಲ್ಲಿ ಫೆವಿಕಾಲ್ ಹಾಕಿ ಕುಂತಿದ್ದಾರೆ. ಇದು ಅಬ್ರಾಹ್ಮಣರ ಕಣ್ಣು ಕುಕ್ಕುತ್ತಿದೆ ಎಂಬ ವಾಸ್ತವ ಅರಿತಿರುವ ಚೆಡ್ಡಿ ಚೆತುರರು ಜಿಲ್ಲಾ ಬಿಜೆಪಿ ಅಧ್ಯಕ್ಷತೆಗೆ ಹಿಂದುಳಿದವರ ತರಲು ಹವಣಿಸುತ್ತಿದ್ದಾರೆ.

ಆರೆಸ್ಸೆಸ್ ಆಯ್ಕೆ ಕುಮಟಾ ಮೂಲದ ಬೆಳಗಾವಿ-ಮುಂಬೈನ ನಿಗೂಢ ಉದ್ಯಮಿ ಸುಬ್ರಿಯ ವಾಳ್ಕೆ. ಈತ ಸಂಘಪರಿವಾರದ ಸಿದ್ಧಾಂತಿಯೆಂದು ಆರೆಸ್ಸೆಸ್ ಸೂತ್ರಧಾರರು ಹೇಳುತ್ತಿದ್ದಾರೆ. ಆದರೆ ಕಳೆದ ಬಾರಿಯ ಅಸೆಂಬ್ಲಿ ಇಲೆಕ್ಷನ್‍ನಲ್ಲಿ ಕುಮಟೆಯಿಂದ ಬಿಜೆಪಿ ಹುರಿಯಾಳಾಗಲು ತಿಪ್ಪರಲಾಗ ಹಾಕಿದ್ದ ವಾಳ್ಕೆ ಆರೆಸೆಸ್ ಹಿನ್ನಲೆಯಾತನಲ್ಲ. ಬಡ ಮಾಲ್ಕರಿ (ಹೋಟೇಲುಗಳ ತಿಂಡಿ ಕರಿಯುವವ) ಮಗನಾದ ವಾಳ್ಕೆ ಬದುಕಲು ಕಷ್ಟಪಟ್ಟವನು. ಹೊಟ್ಟೆ ಪಾಡಿಗಾಗಿ ಬೆಳಗಾವಿ ಸೇರಿದ್ದ ವಾಳ್ಕೆ ಪರಿಚಯ ಹೀಗಿದೆ. ಕುಮಟೆಯಲ್ಲಿ ಆತನ ಹೆಂಡತಿ ನಿಗೂಢ ಅಪಘಾತದಲ್ಲಿ ಸತ್ತು ಹೋದಾಗ ಮತ್ತು ಆತ ತನ್ನ ಉದ್ಯಮದಲ್ಲಿ ಸಹಾಯಕಿಯಾಗಿದ್ದ ಹುಡುಗಿಯನ್ನೇ ಮರುಮದುವೆ ಆದಾಗ ವಾಳ್ಕೆ ‘ಪ್ರಸಿದ್ಧಿ’ ಕುಮಟೆಯಲ್ಲಾಗಿತ್ತು!! ಆತನಲ್ಲಿರುವ ಅಪಾರ ಹಣದ ಗಂಟಿನ ಮೇಲೆ ಕಣ್ಣು ಹಾಕಿದ ಚೆಡ್ಡಿ ದೊರೆಗಳು ಆತನೇ ಜಿಲ್ಲಾ ಬಿಜೆಪಿ ಅಧ್ಯಕ್ಷತೆಗೆ ಯೋಗ್ಯನೆಂದು ಬಿಂಬಿಸುತ್ತಿದ್ದಾರೆ.

ಮುಂಬೈನ ಬಿಜೆಪಿಯ ಟಾಪ್ ಲೀಡರ್‍ಗಳನ್ನು ಹಿಡಿದು ಲಾಬಿ ಮಾಡಿದರೂ ಕುಮಟೆ ಎಮ್ಮೆಲ್ಲೆಗಿರಿಗೆ ನಿಲ್ಲುವ ಛಾನ್ಸ್ ವಾಳ್ಕೆಗೆ ಸಿಕ್ಕಿರಲಿಲ್ಲ. ಈಗ ತನ್ನ ಮೇಲೆ ಏಕಾಏಕಿ ಜಿಲ್ಲಾಧ್ಯಕ್ಷನಾಗಿ ಮಾಡುವ ಮಮಕಾರ ಬಿಜೆಪಿ ಹಿರಿಯರಿಗೆ ಬಂದಿದ್ದೇಕೆಂಬುದು ವಾಳ್ಕೆಗೆ ಅರ್ಥವಾಗಿದೆ. ತನ್ನಲ್ಲಿರುವ ಹಣ ಪಕ್ಷದ ಸಂಘಟನೆಗೆ ಬಳಸಿ ಕಡೆಗೊಂದು ದಿನ ಈ ದೊಡ್ಡವರು ಕೈಗೆ ಗೆರಟೆ ಕೊಟ್ಟು ಕಳಿಸುತ್ತಾರೆಂಬ ಅರಿವು ಪಕ್ಕಾ ವ್ಯಾಪಾರಿಯಾದ ವಾಳ್ಕೆಗಿದೆ. ಹಾಗಾಗಿ ಆತ ಅಧ್ಯಕ್ಷತೆ ತಾನೊಲ್ಲೆ ಅಂತಿದ್ದಾನೆ. ಬೇಕಿದ್ದರೆ ಮುಂದಿನ ಸಾರಿ ಕುಮಟೆಯಲ್ಲಿ ಕ್ಯಾಂಡಿಡೇಟ್ ಮಾಡಿ; ಈ ಖಾಲಿ ಪುಕ್ಕಟ್ಟೆ ಅಧ್ಯಕ್ಷತೆ ನಂಗೆ ಬೇಡ ಎಂದು ಖಡಾಖಂಡಿತ ವಾಳ್ಕೆ ಹೇಳಿದ್ದಾನೆ. ಎಮ್ಮೆಲ್ಲಿಗಿರಿ ಆಸೆ ತೋರಿಸಿ ಈ ಹಿಂದುಳಿದ ವೈಶ್ಯ ಸಮುದಾಯದ ಬಿಸ್ನೆಸ್‍ಮನ್‍ನ ಹಿಂಡುವ ಪ್ಲಾನು ಹಾಕಿದ್ದ ಚೆಡ್ಡಿಗಳೀಗ ಹೊಸ ಹಣವಂತ ಶೂದ್ರನ ಹುಡುಕಾಟಕ್ಕೆ ಇಳಿದಿದ್ದಾರೆ.

ಈಗಿನ ಅಧ್ಯಕ್ಷ ಕೆ.ಜಿ.ನಾಯ್ಕನಂಥ ದುಡ್ಡಿಲ್ಲದವರು ಸಿಗುತ್ತಿದ್ದಾರೆಯೇ ವಿನಃ ಹಣಕಾಸು ಹರಿಸುವ ಪುಢಾರಿ ಕಾಣಿಸುತ್ತಿಲ್ಲ. ಜಿಲ್ಲಾಧ್ಯಕ್ಷನಾಗುವ ಉಮೇದಿನಲ್ಲಿರುವ ಹಳಿಯಾಳದ ಮಾಜಿ ಶಾಸಕ ಸುನೀಲ್ ಹೆಗಡೆ ಆರೆಸ್ಸೆಸ್ ರಿಂಗ್‍ಮಾಸ್ತರ್‍ಗಳಿಗೆ ಒಪ್ಪಿಗೆ ಆಗುತ್ತಿಲ್ಲ. ಊರು ತುಂಬ ಸಾಲ ಮಾಡಿಕೊಂಡು ಪಾಪರ್ ಆಗಿರುವ ಜಿಲ್ಲಾ ಹೈಕಮಾಂಡ್ ವಿನೋದ್ ಪ್ರಭು, ಅನಂತ್ಮಾಣಿ, ಹನ್ಮಂತ ಶಾನಭಾಗ್ ವಗೈರೆ ಪರಮು ಚೆಡ್ಡಿಗಳದು. ಆದರೆ ಸುನಿಲ್ ಪಟ್ಟು ಸಡಿಲಿಸುತ್ತಿಲ್ಲ. ದೇಶಪಾಂಡೆ ಕ್ಷೇತ್ರದವನಾದ ತಾನು ಜಿಲ್ಲಾ ಬಿಜೆಪಿ ಅಧ್ಯಕ್ಷನಾದರೆ ಹಳಿಯಾಳದಲ್ಲೂ ಕಮಲ ಅರಳಿಸಬಹುದೆಂದು ಕೇಶವಕೃಪಾದಲ್ಲಿ ರಚ್ಚೆ ಹಿಡಿದು ಕುಂತಿದ್ದಾನೆ ಸುನೀಲ್. ಹಣ ಮತ್ತು ಹಿಂದೂತ್ವದ ಕಾಂಬಿನೇಷನ್ ಇರುವಾತ ಸಿಗದೆ ಆರೆಸ್ಸೆಸ್ ಗ್ಯಾಂಗ್ ಗೊಂದಲಕ್ಕೆ ಬಿದ್ದಿದೆ; ಗತಿಯಿಲ್ಲದೆ ಸುನೀಲ್ ಹೆಗಡೆಗೆ ಅಧ್ಯಕ್ಷಗಿರಿ ದೀಕ್ಷೆ ಕೊಡಬೇಕಾದ ಅನಿವಾರ್ಯಕ್ಕೆ ಬಿದ್ದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನದ ಭಿವಾಡಿಯಲ್ಲಿ ಗೋ ಕಳ್ಳಸಾಗಣೆದಾರರು ಮತ್ತು ಗೋರಕ್ಷಕರ ನಡುವೆ ಘರ್ಷಣೆ: ಯುವಕ ಸಾವು

ಜೈಪುರ: ರಾಜಸ್ಥಾನದ ಭಿವಾಡಿಯಲ್ಲಿ ಸೋಮವಾರ ಬೆಳಗಿನ ಜಾವ ಗೋ ಕಳ್ಳಸಾಗಣೆದಾರರು ಮತ್ತು ಗೋರಕ್ಷಕರ ನಡುವೆ ನಡೆದ ಘರ್ಷಣೆಯಲ್ಲಿ ಯುವಕನೊಬ್ಬ ಸಾವನ್ನಪ್ಪಿದ್ದಾನೆ. ಈ ಘಟನೆಯಿಂದಾಗಿ ಮೃತನ ಕುಟುಂಬ ಪ್ರತಿಭಟನೆ ನಡೆಸಿದ್ದು, ಆತನನ್ನು ಗುಂಡಿಕ್ಕಿ ಕೊಲ್ಲಲಾಗಿದೆ ಎಂದು...

ಖಮೇನಿ ಹತ್ಯೆ ಬಗ್ಗೆ ಪ್ರಧಾನಿ ಮೋದಿ ತಮ್ಮ ನಿಲುವು ತಿಳಿಸಬೇಕು: ರಾಹುಲ್ ಗಾಂಧಿ ಒತ್ತಾಯ

ಇರಾನ್‌ನ ಪರಮೋಚ್ಚ ನಾಯಕ ಆಯತೊಲ್ಲಾ ಅಲಿ ಖಮೇನಿ ಹತ್ಯೆಯ ಬಗ್ಗೆ ತಮ್ಮ ನಿಲುವನ್ನು ಸ್ಪಷ್ಟವಾಗಿ ತಿಳಿಸುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕೇಳಿದ್ದಾರೆ. ಅಮೆರಿಕ ಮತ್ತು...

ಇರಾನ್‌ ಮೇಲೆ ಇಸ್ರೇಲ್ ದಾಳಿ: ಟೆಹ್ರಾನ್‌ನಿಂದ 200ಕ್ಕೂ ಹೆಚ್ಚು ಭಾರತೀಯ ವಿದ್ಯಾರ್ಥಿಗಳು ಕೋಮ್‌ಗೆ ಸ್ಥಳಾಂತರ

ನವದೆಹಲಿ: ಇರಾನ್ ಮೇಲೆ ಅಮೆರಿಕ-ಇಸ್ರೇಲ್ ದಾಳಿಗಳು ತೀವ್ರಗೊಳ್ಳುತ್ತಿರುವ ಮಧ್ಯೆ, ಟೆಹ್ರಾನ್‌ನಿಂದ ಸ್ಥಳಾಂತರಿಸಲ್ಪಟ್ಟ ಭಾರತೀಯ ವಿದ್ಯಾರ್ಥಿಗಳನ್ನು ಕೋಮ್‌ಗೆ ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ, ಆದರೆ ಭಾರತೀಯ ರಾಯಭಾರ ಕಚೇರಿಯು ಮುನ್ನೆಚ್ಚರಿಕೆ ಕ್ರಮವಾಗಿ ತನ್ನ ಪ್ರಜೆಗಳನ್ನು ಮನೆಯೊಳಗೆ ಇರುವಂತೆ...

‘ಪಿಟಿಸಿಎಲ್‌ ಕಾಯ್ದೆ’ ಸಮರ್ಪಕ ಜಾರಿಗೆ ಆಗ್ರಹಿಸಿ ಆಹೋರಾತ್ರಿ ಧರಣಿ ಸತ್ಯಾಗ್ರಹ

'ಪಿಟಿಸಿಎಲ್‌ (PTCL) ಕಾಯ್ದೆ' ಸಮರ್ಪಕ ಜಾರಿಗೆ ಆಗ್ರಹಿಸಿ ಆಹೋರಾತ್ರಿ ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದು 'ಪಿಟಿಸಿಎಲ್‌ ಕಾಯ್ದೆ ಭೂಮಿ ವಂಚಿತರ ಹೋರಾಟ ಸಮಿತಿ' ಮುಖಂಡರು ಘೋಷಿಸಿದರು. ಬೆಂಗಳೂರಿನ ಪ್ರೆಸ್‌ ಕ್ಲಬ್‌ನಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ...

ರಾಜಸ್ಥಾನ| ‘ನೀವು ಕೆಳಜಾತಿಯವರು, ಎಲ್‌ಎಲ್‌ಬಿ ನಿಮಗೆ ಸೂಕ್ತವಲ್ಲ..’; ದಲಿತ ವಿದ್ಯಾರ್ಥಿನಿಗೆ ಪ್ರಾಧ್ಯಾಪಕರಿಂದ ಜಾತಿ ನಿಂದನೆ

ರಾಜಸ್ಥಾನದ ಚುರುವಿನ ಸರ್ಕಾರಿ ಕಾನೂನು ಕಾಲೇಜಿನ ಮೂರನೇ ಸೆಮಿಸ್ಟರ್ ದಲಿತ ಎಲ್‌ಎಲ್‌ಬಿ ವಿದ್ಯಾರ್ಥಿನಿಯೊಬ್ಬರು, ಇಬ್ಬರು ಪ್ರಾಧ್ಯಾಪಕರಿಂದ ಜಾತಿ ಆಧಾರಿತ ನಿಂದನೆ, ಬೆದರಿಕೆ ಮತ್ತು ತಾರತಮ್ಯ ಆರೋಪದ ಮೇಲೆ ಪೊಲೀಸ್ ದೂರು ದಾಖಲಿಸಿದ್ದಾರೆ. ಎಸ್‌ಸಿ...

ಬೆಂಗಳೂರು: ಮೂರು ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಅವಘಡ: ಮಹಿಳೆ ಸಾವು, ಮೂವರ ರಕ್ಷಣೆ

ಬೆಂಗಳೂರು: ಸೋಮವಾರ ರಾತ್ರಿ ಉತ್ತರ ಬೆಂಗಳೂರಿನಲ್ಲಿರುವ ಮನೆಯೊಂದರಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ. ಮೃತರನ್ನು 55 ವರ್ಷದ ಸವಿತಾ ಎಂದು ಗುರುತಿಸಲಾಗಿದೆ. ಅವರ ಪತಿ ಗುತ್ತಿಗೆದಾರ ರಮೇಶ್...

ಲಕ್ನೋ | 12 ವರ್ಷದ ಬಾಲಕ ಉನೈಝ್ ಗುಂಡೇಟಿಗೆ ಬಲಿ : ಸಂಚು ರೂಪಿಸಿ ಕೊಲೆ ಮಾಡಲಾಗಿದೆ ಎಂದ ಕುಟುಂಬ

ಉತ್ತರ ಪ್ರದೇಶದ ಲಕ್ನೋದಲ್ಲಿ 12 ವರ್ಷದ ಬಾಲಕನೊಬ್ಬ ಗುಂಡೇಟಿನಿಂದ ಮೃತಪಟ್ಟಿದ್ದು, ಆತನನ್ನು ಕೊಲೆ ಮಾಡಲಾಗಿದೆ. ಕೃತ್ಯವನ್ನು ಮುಚ್ಚಿ ಹಾಕಲು ಪ್ರಯತ್ನಿಸಲಾಗುತ್ತಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಈ ಘಟನೆ ದೇಶದ ಗಮನ ಸೆಳೆದಿದ್ದು, ಸಾಮಾಜಿಕ...

ಕೇರಳ: ಪೊಲೀಸರ ‘ದುರುದ್ದೇಶಪೂರಿತ ಮೊಕದ್ದಮೆ’ಗಾಗಿ ನಿವೃತ್ತ ಸೇನಾ ಅಧಿಕಾರಿಗೆ ಕೇರಳ ನ್ಯಾಯಾಲಯದಿಂದ 5 ಲಕ್ಷ ರೂ. ಪರಿಹಾರ ಘೋಷಣೆ

ಕೊಲ್ಲಂ, ಕೇರಳ: ಪೊಲೀಸರ "ದುರುದ್ದೇಶಪೂರಿತ ಮೊಕದ್ದಮೆ"ಗಾಗಿ ನಿವೃತ್ತ ಸೇನಾ ಅಧಿಕಾರಿಯೊಬ್ಬರಿಗೆ ಕೇರಳ ನ್ಯಾಯಾಲಯವು 5 ಲಕ್ಷ ರೂ.ಗಳ ಪರಿಹಾರವನ್ನು ಘೋಷಿಸಿದೆ.  ಪ್ರಿನ್ಸಿಪಲ್ ಮುನ್ಸಿಫ್ ರಾಗಿ ಎಸ್. ಅವರು, 54 ವರ್ಷದ ನಿವೃತ್ತ ನಾಯಕ್ ಸುಬೇದಾರ್...

ಮಧ್ಯಪ್ರದೇಶ: ಇಂದೋರ್‌ನಲ್ಲಿ ಒಳಚರಂಡಿಗೆ ಇಳಿದು ಇಬ್ಬರು ಪೌರ ಕಾರ್ಮಿಕರು ಸಾವು: ವಿಷಕಾರಿ ಅನಿಲ ಶಂಕೆ

ಇಂದೋರ್‌ನ ಚೋಯಿತ್ರಮ್ ಆಸ್ಪತ್ರೆ ಬಳಿ ಸೋಮವಾರ ಒಳಚರಂಡಿ ಒಳಗೆ ಇಳಿದ ಕಾರಣ ಕರಣ್ ಮತ್ತು ಅಜಯ್ ಎಂದು ಗುರುತಿಸಲಾದ ಇಂದೋರ್ ಮಹಾನಗರ ಪಾಲಿಕೆಯ ಇಬ್ಬರು ಪೌರ ಕಾರ್ಮಿಕರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.  ವಲಯ 13ರ...

‘ಅತೃಪ್ತ ಆತ್ಮಗಳ ಹತಾಶ ಹೇಳಿಕೆ’ : ವಿಪಕ್ಷ ನಾಯಕರ ಫೋನ್ ಕದ್ದಾಲಿಕೆ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ತಿರುಗೇಟು

ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ಮೇಲೆ ಕಣ್ಣಿಡಲು ಪೋನ್ ಕದ್ದಾಲಿಕೆ ನಡೆಯುತ್ತಿದೆ ಎಂಬ ವಿರೋಧ ಪಕ್ಷದ ನಾಯಕರಾದ ಆರ್.ಅಶೋಕ್ ಮತ್ತು ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿಯವರ ಆರೋಪಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ....