Homeಕರ್ನಾಟಕಉತ್ತರ ಕನ್ನಡ ಬಿಜೆಪಿಗೆ ಯಾರಾಗ್ತಾರೆ ಅಧ್ಯಕ್ಷ?!

ಉತ್ತರ ಕನ್ನಡ ಬಿಜೆಪಿಗೆ ಯಾರಾಗ್ತಾರೆ ಅಧ್ಯಕ್ಷ?!

- Advertisement -
- Advertisement -

ಉತ್ತರ ಕನ್ನಡದ ಕೇಸರಿ ಪಾಳೆಯದ ಒಳರಾಜಕಾರಣಕ್ಕೆ ಒಂದೇ ಸಮನೆ ಕಾವೇರುತ್ತಿದೆ. ಯಲ್ಲಾಪುರ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷಾಂತರಿ ಶಿವರಾಮ ಹೆಬ್ಬಾರರನ್ನು ಗೆಲ್ಲಿಸುವುದಕ್ಕಿಂತಲೂ ನಿಷ್ಠಾವಂತ ಅನುಯಾಯಿ ಒಬ್ಬರನ್ನು ಜಿಲ್ಲಾ ಬಿಜೆಪಿ ಪೀಠದಲ್ಲಿ ಪ್ರತಿಷ್ಠಾಪಿಸುವ ತಂತ್ರಗಾರಿಕೆ ಬಗ್ಗೆಯೇ ಸಂಘಿ ಸರದಾರರು ತಲೆಕೆಡಿಸಿಕೊಂಡಿದ್ದಾರೆ. ಹೆಬ್ಬಾರ್ ಗೆಲ್ಲಬೇಕಾಗಿರುವುದು ಸಿಎಂ ಯಡ್ಡಿ ಮಹಾತ್ಮರಿಗೆ ಮಾತ್ರ. ನಿಷ್ಠಾವಂತ ಸಂಘ ಸೈನಿಕರಿಗೆ ಆತ ಗೆದ್ದರೂ ಸೋತರೂ ಫರಕೇನೂ ಬೀಳುವುದಿಲ್ಲ. ಸ್ಪೀಕರ್ ಕಾಗೇರಿ, ಸಂಸದ ಅನಂತ್ಮಾಣಿ, ಎಡಬಿಡಂಗಿ ವಕ್ತಾರ ಪ್ರಮೋದ್ ಹೆಗಡೆ ವಗೈರೆ ಬಿಜೆಪಿಯ ಘಟಾನುಘಟಿಗಳಿಗೆ ಹೆಬ್ಬಾರ್ ಸೋತರೇನೇ ಸುಗ್ಗಿ ಸಂಭ್ರಮ!!

ಬಿಜೆಪಿಯಲ್ಲೀಗ ಸಾಂಸ್ಥಿಕ ಚುನಾವಣೆ ನಡೆಯುತ್ತಿದೆ. ಜಿಲ್ಲಾ ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ಹಿಂದೂತ್ವದ ಗುಣಧರ್ಮದ ಜತೆಗೆ ದುಡ್ಡು ದಂಡಿಯಾಗಿರುವ ಆಸಾಮಿಯನ್ನು ತರಲು ಆರೆಸ್ಸೆಸ್‍ನ ಹಿರಿ ತಲೆಗಳು ತಲಾಶ್ ನಡೆಸಿದ್ದಾರೆ. ವಿಧಾನಸಭಾಧ್ಯಕ್ಷ, ಸಂಸದ, ಭಾವಿ ಮಂತ್ರಿಗಿರಿಯಂಥ ಆಯಕಟ್ಟಿನ ಸ್ಥಾನ ಮತ್ತು ನಿಗಮ-ಮಂಡಳಿ ಅಧಿಕಾರವೆಲ್ಲ ಹವ್ಯಕ ಬ್ರಾಹ್ಮಣ ಬಳಗಕ್ಕೇ ದಕ್ಕುತ್ತಿರುವುದು ಹಿಂದುಳಿದ ವರ್ಗದ ಕಾರ್ಯಕರ್ತರಲ್ಲಿ ರೊಚ್ಚು ಮೂಡಿಸಿದೆ. ಬಿಜೆಪಿಯ ಹಾರವ ಲೀಡರ್‍ಗಳು ಧರ್ಮ, ದೇವರ ಹೆಸರಲ್ಲಿ ಶೂದ್ರರನ್ನು ಮುಂದೆ ನಿಲ್ಲಿಸಿ ಹಿಂದಿನಿಂದ ಅಧಿಕಾರ-ಸುಖ ಸಂಪತ್ತು ಪಡೆಯುತ್ತಿದ್ದಾರೆಂಬ ‘ತಿಳಿವಳಿಕೆ’ ಈಗೀಗ ಹಿಂದುಳಿದ ವರ್ಗದ ಮುಖಂಡರಿಗೆ ಬರತೊಡಗಿದೆ. ಈ ಆತೃಪ್ತ ಶೂದ್ರ ಸಂಕುಲ ಒಂದಾಗದಂತೆ ಜನಿವಾರ ಮಂತ್ರ ಪ್ರಯತ್ನಿಸುತ್ತಿದೆ.

ಅಸಮಾಧಾನಗೊಂಡಿರುವ ಹಿಂದುಳಿದವರಿಗೆ ಜಿಲ್ಲಾ ಬಿಜೆಪಿ ಅಧ್ಯಕ್ಷ ಸ್ಥಾನ ಕೊಟ್ಟು ಬಾಯಿ ಮುಚ್ಚಿಸಿ ತಾವು ನಿಗಮ-ಮಂಡಳಿ-ಮಂತ್ರಿ-ಸಂಸದರಂತಹ ಲಾಭದಾಯಕ ಹುದ್ದೆಯಲ್ಲಿ ಮುಂದುವರಿಯಬೇಕೆಂಬ ಹಿಕಮತ್ತು ಸಂಘಪರಿವಾರದ ರಿಂಗ್‍ಮಾಸ್ಟರ್‍ಗಳು ಹೊಸ ಪ್ಲಾನು ಮಾಡಿದ್ದಾರೆ. ಈಚೆಗೆ ನೇಮಕವಾದ ಎರಡು ನಿಗಮ-ಮಂಡಳಿ ಮುಖ್ಯಸ್ಥರು ಹವ್ಯಕ ಬ್ರಾಹ್ಮಣರು. ಜೀವ ವೈವಿಧ್ಯ ಮಂಡಳಿಗೆ ಅನಂತ ಅಶೀಸರ ನೆಗೆದು ಕೂತಿದ್ದಾರೆ. ಎಂ.ಎ.ಹೆಗಡೆ ಎರಡನೇ ಅವಧಿಗೆ ಯಕ್ಷಗಾನ ಮಂಡಳಿಗೆ ವಕ್ಕರಿಸಿದ್ದಾರೆ. ಮಜಾ ಎಂದರೆ ಈ ಎಂ.ಎ.ಹೆಗಡೆ ಹಿಂದೆ ಕಾಂಗ್ರೆಸ್ ಸರ್ಕಾರವಿದ್ದಾಗಲೇ ಯಕ್ಷಗಾನ ಮಂಡಳಿಗೆ ಗದ್ದುಗೆ ಗಿಟ್ಟಿಸಿದ್ದರು. ಈಗ ಚೆಡ್ಡಿಬಿಡಾರದಲ್ಲಿರುವ ಕುಲಬಂಧು ಭೂತದ ಮೂಲಕ ಲಾಬಿ ಮಾಡಿಸಿ ಅದೇ ಕುರ್ಚಿಯಲ್ಲಿ ಫೆವಿಕಾಲ್ ಹಾಕಿ ಕುಂತಿದ್ದಾರೆ. ಇದು ಅಬ್ರಾಹ್ಮಣರ ಕಣ್ಣು ಕುಕ್ಕುತ್ತಿದೆ ಎಂಬ ವಾಸ್ತವ ಅರಿತಿರುವ ಚೆಡ್ಡಿ ಚೆತುರರು ಜಿಲ್ಲಾ ಬಿಜೆಪಿ ಅಧ್ಯಕ್ಷತೆಗೆ ಹಿಂದುಳಿದವರ ತರಲು ಹವಣಿಸುತ್ತಿದ್ದಾರೆ.

ಆರೆಸ್ಸೆಸ್ ಆಯ್ಕೆ ಕುಮಟಾ ಮೂಲದ ಬೆಳಗಾವಿ-ಮುಂಬೈನ ನಿಗೂಢ ಉದ್ಯಮಿ ಸುಬ್ರಿಯ ವಾಳ್ಕೆ. ಈತ ಸಂಘಪರಿವಾರದ ಸಿದ್ಧಾಂತಿಯೆಂದು ಆರೆಸ್ಸೆಸ್ ಸೂತ್ರಧಾರರು ಹೇಳುತ್ತಿದ್ದಾರೆ. ಆದರೆ ಕಳೆದ ಬಾರಿಯ ಅಸೆಂಬ್ಲಿ ಇಲೆಕ್ಷನ್‍ನಲ್ಲಿ ಕುಮಟೆಯಿಂದ ಬಿಜೆಪಿ ಹುರಿಯಾಳಾಗಲು ತಿಪ್ಪರಲಾಗ ಹಾಕಿದ್ದ ವಾಳ್ಕೆ ಆರೆಸೆಸ್ ಹಿನ್ನಲೆಯಾತನಲ್ಲ. ಬಡ ಮಾಲ್ಕರಿ (ಹೋಟೇಲುಗಳ ತಿಂಡಿ ಕರಿಯುವವ) ಮಗನಾದ ವಾಳ್ಕೆ ಬದುಕಲು ಕಷ್ಟಪಟ್ಟವನು. ಹೊಟ್ಟೆ ಪಾಡಿಗಾಗಿ ಬೆಳಗಾವಿ ಸೇರಿದ್ದ ವಾಳ್ಕೆ ಪರಿಚಯ ಹೀಗಿದೆ. ಕುಮಟೆಯಲ್ಲಿ ಆತನ ಹೆಂಡತಿ ನಿಗೂಢ ಅಪಘಾತದಲ್ಲಿ ಸತ್ತು ಹೋದಾಗ ಮತ್ತು ಆತ ತನ್ನ ಉದ್ಯಮದಲ್ಲಿ ಸಹಾಯಕಿಯಾಗಿದ್ದ ಹುಡುಗಿಯನ್ನೇ ಮರುಮದುವೆ ಆದಾಗ ವಾಳ್ಕೆ ‘ಪ್ರಸಿದ್ಧಿ’ ಕುಮಟೆಯಲ್ಲಾಗಿತ್ತು!! ಆತನಲ್ಲಿರುವ ಅಪಾರ ಹಣದ ಗಂಟಿನ ಮೇಲೆ ಕಣ್ಣು ಹಾಕಿದ ಚೆಡ್ಡಿ ದೊರೆಗಳು ಆತನೇ ಜಿಲ್ಲಾ ಬಿಜೆಪಿ ಅಧ್ಯಕ್ಷತೆಗೆ ಯೋಗ್ಯನೆಂದು ಬಿಂಬಿಸುತ್ತಿದ್ದಾರೆ.

ಮುಂಬೈನ ಬಿಜೆಪಿಯ ಟಾಪ್ ಲೀಡರ್‍ಗಳನ್ನು ಹಿಡಿದು ಲಾಬಿ ಮಾಡಿದರೂ ಕುಮಟೆ ಎಮ್ಮೆಲ್ಲೆಗಿರಿಗೆ ನಿಲ್ಲುವ ಛಾನ್ಸ್ ವಾಳ್ಕೆಗೆ ಸಿಕ್ಕಿರಲಿಲ್ಲ. ಈಗ ತನ್ನ ಮೇಲೆ ಏಕಾಏಕಿ ಜಿಲ್ಲಾಧ್ಯಕ್ಷನಾಗಿ ಮಾಡುವ ಮಮಕಾರ ಬಿಜೆಪಿ ಹಿರಿಯರಿಗೆ ಬಂದಿದ್ದೇಕೆಂಬುದು ವಾಳ್ಕೆಗೆ ಅರ್ಥವಾಗಿದೆ. ತನ್ನಲ್ಲಿರುವ ಹಣ ಪಕ್ಷದ ಸಂಘಟನೆಗೆ ಬಳಸಿ ಕಡೆಗೊಂದು ದಿನ ಈ ದೊಡ್ಡವರು ಕೈಗೆ ಗೆರಟೆ ಕೊಟ್ಟು ಕಳಿಸುತ್ತಾರೆಂಬ ಅರಿವು ಪಕ್ಕಾ ವ್ಯಾಪಾರಿಯಾದ ವಾಳ್ಕೆಗಿದೆ. ಹಾಗಾಗಿ ಆತ ಅಧ್ಯಕ್ಷತೆ ತಾನೊಲ್ಲೆ ಅಂತಿದ್ದಾನೆ. ಬೇಕಿದ್ದರೆ ಮುಂದಿನ ಸಾರಿ ಕುಮಟೆಯಲ್ಲಿ ಕ್ಯಾಂಡಿಡೇಟ್ ಮಾಡಿ; ಈ ಖಾಲಿ ಪುಕ್ಕಟ್ಟೆ ಅಧ್ಯಕ್ಷತೆ ನಂಗೆ ಬೇಡ ಎಂದು ಖಡಾಖಂಡಿತ ವಾಳ್ಕೆ ಹೇಳಿದ್ದಾನೆ. ಎಮ್ಮೆಲ್ಲಿಗಿರಿ ಆಸೆ ತೋರಿಸಿ ಈ ಹಿಂದುಳಿದ ವೈಶ್ಯ ಸಮುದಾಯದ ಬಿಸ್ನೆಸ್‍ಮನ್‍ನ ಹಿಂಡುವ ಪ್ಲಾನು ಹಾಕಿದ್ದ ಚೆಡ್ಡಿಗಳೀಗ ಹೊಸ ಹಣವಂತ ಶೂದ್ರನ ಹುಡುಕಾಟಕ್ಕೆ ಇಳಿದಿದ್ದಾರೆ.

ಈಗಿನ ಅಧ್ಯಕ್ಷ ಕೆ.ಜಿ.ನಾಯ್ಕನಂಥ ದುಡ್ಡಿಲ್ಲದವರು ಸಿಗುತ್ತಿದ್ದಾರೆಯೇ ವಿನಃ ಹಣಕಾಸು ಹರಿಸುವ ಪುಢಾರಿ ಕಾಣಿಸುತ್ತಿಲ್ಲ. ಜಿಲ್ಲಾಧ್ಯಕ್ಷನಾಗುವ ಉಮೇದಿನಲ್ಲಿರುವ ಹಳಿಯಾಳದ ಮಾಜಿ ಶಾಸಕ ಸುನೀಲ್ ಹೆಗಡೆ ಆರೆಸ್ಸೆಸ್ ರಿಂಗ್‍ಮಾಸ್ತರ್‍ಗಳಿಗೆ ಒಪ್ಪಿಗೆ ಆಗುತ್ತಿಲ್ಲ. ಊರು ತುಂಬ ಸಾಲ ಮಾಡಿಕೊಂಡು ಪಾಪರ್ ಆಗಿರುವ ಜಿಲ್ಲಾ ಹೈಕಮಾಂಡ್ ವಿನೋದ್ ಪ್ರಭು, ಅನಂತ್ಮಾಣಿ, ಹನ್ಮಂತ ಶಾನಭಾಗ್ ವಗೈರೆ ಪರಮು ಚೆಡ್ಡಿಗಳದು. ಆದರೆ ಸುನಿಲ್ ಪಟ್ಟು ಸಡಿಲಿಸುತ್ತಿಲ್ಲ. ದೇಶಪಾಂಡೆ ಕ್ಷೇತ್ರದವನಾದ ತಾನು ಜಿಲ್ಲಾ ಬಿಜೆಪಿ ಅಧ್ಯಕ್ಷನಾದರೆ ಹಳಿಯಾಳದಲ್ಲೂ ಕಮಲ ಅರಳಿಸಬಹುದೆಂದು ಕೇಶವಕೃಪಾದಲ್ಲಿ ರಚ್ಚೆ ಹಿಡಿದು ಕುಂತಿದ್ದಾನೆ ಸುನೀಲ್. ಹಣ ಮತ್ತು ಹಿಂದೂತ್ವದ ಕಾಂಬಿನೇಷನ್ ಇರುವಾತ ಸಿಗದೆ ಆರೆಸ್ಸೆಸ್ ಗ್ಯಾಂಗ್ ಗೊಂದಲಕ್ಕೆ ಬಿದ್ದಿದೆ; ಗತಿಯಿಲ್ಲದೆ ಸುನೀಲ್ ಹೆಗಡೆಗೆ ಅಧ್ಯಕ್ಷಗಿರಿ ದೀಕ್ಷೆ ಕೊಡಬೇಕಾದ ಅನಿವಾರ್ಯಕ್ಕೆ ಬಿದ್ದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳ | ಆದಿವಾಸಿ ಯುವಕ ಮಧು ಗುಂಪು ಹತ್ಯೆ ಪ್ರಕರಣ : 12 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಹೈಕೋರ್ಟ್

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಕೇರಳದ ಆದಿವಾಸಿ ಯುವಕ ಮಧು ಗುಂಪು ಹಲ್ಲೆ ಮತ್ತು ಹತ್ಯೆ ಪ್ರಕರಣದ 12 ಜನ ಅಪರಾಧಿಗಳಿಗೆ ಹೈಕೋರ್ಟ್ ಸೋಮವಾರ (ಮೇ.25) ಜೀವಾವಧಿ ಶಿಕ್ಷೆ ಮತ್ತು ತಲಾ 2...

“ನನ್ನ ಅನುಮತಿ ಇಲ್ಲದೆ ನನ್ನ ಮಗುವನ್ನು ಸುಡಲಾಗಿದೆ”: ಕೊಲೆಯಾದ ಕೊಯಮತ್ತೂರು ಬಾಲಕಿಯ ತಾಯಿ ಅಳಲು

ಕೊಯಮತ್ತೂರು ಬಳಿ ಲೈಂಗಿಕ ದೌರ್ಜನ್ಯಕ್ಕೊಳಗಾಗಿ ಕೊಲೆಯಾದ 10 ವರ್ಷದ ಬಾಲಕಿಯ ತಾಯಿ, ತನ್ನ ಮಗಳ ಮೃತದೇಹದ ಅಂತ್ಯಸಂಸ್ಕಾರಕ್ಕೆ ತಾನು ಅನುಮತಿ ನೀಡಿರಲಿಲ್ಲ ಎಂದು ಹೇಳಿದ್ದಾರೆ. ಮಗುವಿನ ಮರಣೋತ್ತರ ಪರೀಕ್ಷೆಯ ನಂತರ, ತನ್ನ ಪತಿ...

ಅಷ್ಟೊಂದು ‘ಸೆಂಟಿಮೆಂಟ್’ ಬೇಡ: ‘ಕಾಕ್ರೋಚ್ ಅಭಿಯಾನ’ದ ವಿರುದ್ಧದ ಅರ್ಜಿಗೆ ಸಿಜೆಐ ಪ್ರತಿಕ್ರಿಯೆ

"ವ್ಯವಸ್ಥೆಯ ಮೇಲೆ ದಾಳಿ ಮಾಡುವವರ" ಕುರಿತು ತಾವು ನೀಡಿದ್ದ ಹೇಳಿಕೆಗೆ ವ್ಯಂಗ್ಯದ ರೂಪದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸೃಷ್ಟಿಯಾಗಿರುವ ‘ಕಾಕ್ರೋಚ್ ಜನತಾ ಪಾರ್ಟಿ’  ವಿವಾದವನ್ನು ಅಷ್ಟೊಂದು "ಭಾವನಾತ್ಮಕವಾಗಿ ತೆಗೆದುಕೊಳ್ಳಬೇಡಿ" ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ...

ನಾಳೆ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ ‘ಕರ್ನಾಟಕದ ಗೌರವಾರ್ಪಣೆ’

ಸ್ವಾತಂತ್ರ್ಯ ಸೇನಾನಿ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ 'ಕರ್ನಾಟಕದ ಗೌರವಾರ್ಪಣೆ' ಕಾರ್ಯಕ್ರಮವನ್ನು ನಾಳೆ, ಅಂದರೆ 2026 ಮೇ 26 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಎಚ್.ಎಸ್‌ ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನ,...

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...