Homeಕರ್ನಾಟಕಉತ್ತರ ಕನ್ನಡ: ಜೀವ ವೈವಿಧ್ಯ ಮಂಡಳಿ ಅಧ್ಯಕ್ಷತೆಗೆ ಆಶೀಸರ ರಾಜೀನಾಮೆ; ನಿಗಮ-ಮಂಡಳಿಗೆ ಬಿಜೆಪಿಯಲ್ಲಿ ಪೈಪೋಟಿ

ಉತ್ತರ ಕನ್ನಡ: ಜೀವ ವೈವಿಧ್ಯ ಮಂಡಳಿ ಅಧ್ಯಕ್ಷತೆಗೆ ಆಶೀಸರ ರಾಜೀನಾಮೆ; ನಿಗಮ-ಮಂಡಳಿಗೆ ಬಿಜೆಪಿಯಲ್ಲಿ ಪೈಪೋಟಿ

- Advertisement -
- Advertisement -

ರಾಜ್ಯ ಜೀವ ವೈವಿಧ್ಯ ಮಂಡಳಿ ಅಧ್ಯಕ್ಷ ಶಿರಸಿಯ ಅನಂತ ಹೆಗಡೆ ಆಶೀಸರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಡಿಸೆಂಬರ್ 2021ರ ಅಂತ್ಯಕ್ಕೆ ಅಧಿಕಾರ ಅವಧಿಯ ಎರಡು ವರ್ಷ ಮುಕ್ತಾಯ ಆಗುತ್ತಿರುವುದರಿಂದ ಪದತ್ಯಾಗ ಮಾಡುತ್ತಿರವುದಾಗಿ ಡಿ.28ರಂದು ಸಲ್ಲಿಸಿರುವ ರಾಜಿನಾಮೆ ಪತ್ರದಲ್ಲಿ ಹೇಳಿದ್ದಾರೆ.

ಅನಂತ ಹೆಗಡೆ ಆಶೀಸರ ಮಂಡಳಿಯ ಅಧ್ಯಕ್ಷರಾದಾಗಿನಿಂದ ಉತ್ತರ ಕನ್ನಡ ಜಿಲ್ಲಾ ಬಿಜೆಪಿಯಲ್ಲಿ ಅಸಮಾಧಾನ ಹೊಗೆಯಾಡುತ್ತಲೆ ಇತ್ತು. ಬಿಜೆಪಿಯ ಸಕ್ರಿಯ ಕಾರ್ಯಕರ್ತನಲ್ಲದ ಆಶೀಸರ ಆರ್‌ಎಸ್‌ಎಸ್ ಶಿಫಾರಸಿನಿಂದ ಬಿಜೆಪಿ ಅಧಿಕಾರಕ್ಕೆ ಬಂದಾಗೆಲ್ಲ ಒಂದಲ್ಲ ಒಂದು ನಿಗಮ-ಮಂಡಳಿ ಅಧಿಕಾರ ಪಡೆಯುತ್ತಾರೆಂದು ಬಿಜೆಪಿಯ ನಿಷ್ಟಾವಂತ ಕಾರ್ಯಕರ್ತರ ಆಕ್ರೋಶವಾಗಿತ್ತು. ಅದರಲ್ಲೂ ಜಿಲ್ಲೆಯ ಘಟ್ಟದ ಮೇಲಿನ ಹವ್ಯಕ ಬ್ರಾಹ್ಮಣ ಸಮುದಾಯದವರೆ ಹೆಚ್ಚು ಅಧಿಕಾರ ಸ್ಥಾನ-ಮಾನ ಅನುಭವಿಸುತ್ತಿದ್ದಾರೆಂಬ ಭಾವನೆ ಹಿಂದುಳಿದವರಲ್ಲಿತ್ತು.

ಕಳೆದ ವಿಧಾನ ಪರಿಷತ್ ಚುನಾವಣೆ ಹೊತ್ತಲ್ಲಿ ಈ ಬೇಸರ ಭುಗಿಲೆದ್ದಿತ್ತು. ಬಂಡಾಯ ಅಭ್ಯರ್ಥಿಗಳಾಗಿ ಕಣಕ್ಕಿಳಿಯಲು 2-3 ಹಳೆಯ ಕಾರ್ಯಕರ್ತರು ಸಿದ್ದವಾಗಿದ್ದರು. ಆಗ ಅವರಲ್ಲಿ ಕೆಲವರಿಗೆ ನಿಗಮ-ಮಂಡಳಿ ಅಧ್ಯಕ್ಷತೆ ಕೊಡುವ ಭರವಸೆ ಕೊಟ್ಟು ಸಮಾಧಾನ ಮಾಡಲಾಗಿತ್ತೆನ್ನಲಾಗಿದೆ. ಆಗಲೆ ಆಶೀಸರ ರಾಜಿನಾಮೆ ಪಡೆಯಲು ಬಿಜೆಪಿ ಹೈಕಮಾಂಡ್ ನಿರ್ಧರಿಸಿರುವ ಸುದ್ದಿ ಹಬ್ಬಿತ್ತು.

ಆಶೀಸರ ರಾಜಿನಾಮೆ ಘೋಷಿಸುತ್ತಿದ್ದಂತೆಯೆ ಜಿಲ್ಲಾ ಬಿಜೆಪಿಯಲ್ಲಿ ನಿಗಮ-ಮಂಡಳಿ ಸ್ಥಾನಕ್ಕಾಗಿ ತುರುಸಿನ ಪೈಪೋಟಿ ಶುರುವಾಗಿದ್ದು, ಘಟ್ಟದ ಮೇಲಿನ-ಘಟ್ಟದ ಕೆಳಗಿನ [ಕರಾವಳಿ], ಬ್ರಾಹ್ಮಣ-ಶೂದ್ರ ಲೆಕ್ಕಾಚಾರ ನಡೆಯಲಾರಂಭಿಸಿದೆ. ಸಂಸದ ಅನಂತಕುಮಾರ್ ಹೆಗಡೆ, ಸ್ಪೀಕರ್ ಕಾಗೇರಿ, ಜಿಲ್ಲಾ ಉಸ್ತುವಾರಿ ಮಂತ್ರಿ ಶಿವರಾಮ ಹೆಬ್ಬಾರ್ ಘಟ್ಟದ ಮೇಲಿನ ಹವ್ಯಕ ಬ್ರಾಹ್ಮಣರು. ಲಿಂಗಾಯತ ಸಮುದಾಯದ ವಿ.ಎಸ್.ಪಾಟೀಲ್ ವಾಯವ್ಯ ಕರ್ನಾಟಕ ಸಾರಿಗೆ ನಿಗಮದ ಅಧ್ಯಕ್ಷರಾಗಿದ್ದಾರೆ. ಕೆಲ ತಿಂಗಳ ಹಿಂದೆ ನಿಧನರಾದ ಶಿರಸಿಯ ಎಂ.ಎ.ಹೆಗಡೆ ಯಕ್ಷಗಾನ ಮಂಡಳಿ ಅಧ್ಯಕ್ಷರಾಗಿದ್ದರು.

ಬಿಜೆಪಿಯನ್ನು ನಿರಂತರವಾಗಿ ಬೆಂಬಲಿಸುತ್ತ ಬಂದಿರುವ ಜಿಲ್ಲೆಯ ದೊಡ್ಡ ಸಮುದಾಯವಾದ ದೀವರು [ಈಡಿಗರು] ಕಾರ್ಯಕರ್ತರಲ್ಲಿ ತಮ್ಮನ್ನು ಬರಿ ಚುನಾವಣೆಯಲ್ಲಿ ಪೋಸ್ಟರ್ ಅಂಟಿಸುವ ಚಾಕರಿಗಷ್ಟೆ ಬಳಸಲಾಗುತ್ತಿದೆಯೆಂಬ ಬೇರಸ ಮೂಡಿದೆ. ಈ ಜಾತಿಗೆ ಸೇರಿದ ಜಿಲ್ಲಾ ಬಿಜೆಪಿ ಮಾಜಿ ಅಧ್ಯಕ್ಷ ಕೆ.ಜಿ.ನಾಯ್ಕ್, ಭಟ್ಕಳದ ಗೋವಿಂದ ನಾಯ್ಕ್, ನಾಡವ ಸಮುದಾಯದ ನಾಗರಾಜ್ ನಾಯಕ ತೊರ್ಕೆ, ಅಂಕೋಲಾದ ವಕೀಲ ನಾಗರಾಜ್ ನಾಯಕ್, ಭಾಸ್ಕರ್ ನಾರ್ವೇಕರ್ ಎಮ್ಮೆಲ್ಸಿ ಟಿಕೆಟ್‌ಗೆ ಹಠ ಹಿಡಿದಿದ್ದರು. ಅವರೆಲ್ಲರನ್ನು ಸಮಾಧಾನ ಪಡಿಸಿ ಗಣಪತಿ ಉಳ್ವೇಕರ್ ಅವರನ್ನು ಕಣಕ್ಕಿಳಿಸಲಾಗಿತ್ತು.

ಆಗ ಸಂಧಾನಕಾರರ ಮಾತು ನಂಬಿ ಹಿಂದೆ ಸರಿದವರೆಲ್ಲ ಈಗ ನಿಗಮ-ಮಂಡಳಿ ಆವಕಾಶ ಬೇಡುತ್ತಿದ್ದಾರೆ. ಘಟ್ಟದ ಮೇಲಿನ ಹಲವರಿಗೆ, ಅದರಲ್ಲೂ ಹವ್ಯಕ ಬ್ರಾಹ್ಮಣ ಜನಾಂಗಕ್ಕೆ ಹೆಚ್ಚಿನ ಪ್ರಾತಿನಿಧ್ಯ ಸಿಕ್ಕಿರುವುದರಿಂದ ಈ ಬಾರಿ ಘಟ್ಟದ ಕೆಳಗಿನ ದೀವರಿಗೆ ಅವಕಾಶ ಸಿಗಲಿದೆಯೆಂಬ ಮಾತು ಬಿಜೆಪಿ ವಲಯದಲ್ಲಿ ಕೇಳಿಬರುತ್ತಿದೆ. ಸಿದ್ದಾಪುರದ ಕೆ.ಜಿ.ನಾಯ್ಕ್ ಹೆಸರು ಮುಂಚೂಣಿಯಲ್ಲಿದೆ ಎಂದು ಬಿಜೆಪಿ ಕಾರ್ಯಕರ್ತರು ಹೇಳುತ್ತಾರೆ.


ಇದನ್ನೂ ಓದಿ: ಕೃಷಿಕಥನ 03: ರೈತರದು ಆತ್ಮಹತ್ಯೆಯಲ್ಲ, ಹತ್ಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....