Homeಕರ್ನಾಟಕಉತ್ತರ ಕನ್ನಡ: ಜೀವ ವೈವಿಧ್ಯ ಮಂಡಳಿ ಅಧ್ಯಕ್ಷತೆಗೆ ಆಶೀಸರ ರಾಜೀನಾಮೆ; ನಿಗಮ-ಮಂಡಳಿಗೆ ಬಿಜೆಪಿಯಲ್ಲಿ ಪೈಪೋಟಿ

ಉತ್ತರ ಕನ್ನಡ: ಜೀವ ವೈವಿಧ್ಯ ಮಂಡಳಿ ಅಧ್ಯಕ್ಷತೆಗೆ ಆಶೀಸರ ರಾಜೀನಾಮೆ; ನಿಗಮ-ಮಂಡಳಿಗೆ ಬಿಜೆಪಿಯಲ್ಲಿ ಪೈಪೋಟಿ

- Advertisement -
- Advertisement -

ರಾಜ್ಯ ಜೀವ ವೈವಿಧ್ಯ ಮಂಡಳಿ ಅಧ್ಯಕ್ಷ ಶಿರಸಿಯ ಅನಂತ ಹೆಗಡೆ ಆಶೀಸರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಡಿಸೆಂಬರ್ 2021ರ ಅಂತ್ಯಕ್ಕೆ ಅಧಿಕಾರ ಅವಧಿಯ ಎರಡು ವರ್ಷ ಮುಕ್ತಾಯ ಆಗುತ್ತಿರುವುದರಿಂದ ಪದತ್ಯಾಗ ಮಾಡುತ್ತಿರವುದಾಗಿ ಡಿ.28ರಂದು ಸಲ್ಲಿಸಿರುವ ರಾಜಿನಾಮೆ ಪತ್ರದಲ್ಲಿ ಹೇಳಿದ್ದಾರೆ.

ಅನಂತ ಹೆಗಡೆ ಆಶೀಸರ ಮಂಡಳಿಯ ಅಧ್ಯಕ್ಷರಾದಾಗಿನಿಂದ ಉತ್ತರ ಕನ್ನಡ ಜಿಲ್ಲಾ ಬಿಜೆಪಿಯಲ್ಲಿ ಅಸಮಾಧಾನ ಹೊಗೆಯಾಡುತ್ತಲೆ ಇತ್ತು. ಬಿಜೆಪಿಯ ಸಕ್ರಿಯ ಕಾರ್ಯಕರ್ತನಲ್ಲದ ಆಶೀಸರ ಆರ್‌ಎಸ್‌ಎಸ್ ಶಿಫಾರಸಿನಿಂದ ಬಿಜೆಪಿ ಅಧಿಕಾರಕ್ಕೆ ಬಂದಾಗೆಲ್ಲ ಒಂದಲ್ಲ ಒಂದು ನಿಗಮ-ಮಂಡಳಿ ಅಧಿಕಾರ ಪಡೆಯುತ್ತಾರೆಂದು ಬಿಜೆಪಿಯ ನಿಷ್ಟಾವಂತ ಕಾರ್ಯಕರ್ತರ ಆಕ್ರೋಶವಾಗಿತ್ತು. ಅದರಲ್ಲೂ ಜಿಲ್ಲೆಯ ಘಟ್ಟದ ಮೇಲಿನ ಹವ್ಯಕ ಬ್ರಾಹ್ಮಣ ಸಮುದಾಯದವರೆ ಹೆಚ್ಚು ಅಧಿಕಾರ ಸ್ಥಾನ-ಮಾನ ಅನುಭವಿಸುತ್ತಿದ್ದಾರೆಂಬ ಭಾವನೆ ಹಿಂದುಳಿದವರಲ್ಲಿತ್ತು.

ಕಳೆದ ವಿಧಾನ ಪರಿಷತ್ ಚುನಾವಣೆ ಹೊತ್ತಲ್ಲಿ ಈ ಬೇಸರ ಭುಗಿಲೆದ್ದಿತ್ತು. ಬಂಡಾಯ ಅಭ್ಯರ್ಥಿಗಳಾಗಿ ಕಣಕ್ಕಿಳಿಯಲು 2-3 ಹಳೆಯ ಕಾರ್ಯಕರ್ತರು ಸಿದ್ದವಾಗಿದ್ದರು. ಆಗ ಅವರಲ್ಲಿ ಕೆಲವರಿಗೆ ನಿಗಮ-ಮಂಡಳಿ ಅಧ್ಯಕ್ಷತೆ ಕೊಡುವ ಭರವಸೆ ಕೊಟ್ಟು ಸಮಾಧಾನ ಮಾಡಲಾಗಿತ್ತೆನ್ನಲಾಗಿದೆ. ಆಗಲೆ ಆಶೀಸರ ರಾಜಿನಾಮೆ ಪಡೆಯಲು ಬಿಜೆಪಿ ಹೈಕಮಾಂಡ್ ನಿರ್ಧರಿಸಿರುವ ಸುದ್ದಿ ಹಬ್ಬಿತ್ತು.

ಆಶೀಸರ ರಾಜಿನಾಮೆ ಘೋಷಿಸುತ್ತಿದ್ದಂತೆಯೆ ಜಿಲ್ಲಾ ಬಿಜೆಪಿಯಲ್ಲಿ ನಿಗಮ-ಮಂಡಳಿ ಸ್ಥಾನಕ್ಕಾಗಿ ತುರುಸಿನ ಪೈಪೋಟಿ ಶುರುವಾಗಿದ್ದು, ಘಟ್ಟದ ಮೇಲಿನ-ಘಟ್ಟದ ಕೆಳಗಿನ [ಕರಾವಳಿ], ಬ್ರಾಹ್ಮಣ-ಶೂದ್ರ ಲೆಕ್ಕಾಚಾರ ನಡೆಯಲಾರಂಭಿಸಿದೆ. ಸಂಸದ ಅನಂತಕುಮಾರ್ ಹೆಗಡೆ, ಸ್ಪೀಕರ್ ಕಾಗೇರಿ, ಜಿಲ್ಲಾ ಉಸ್ತುವಾರಿ ಮಂತ್ರಿ ಶಿವರಾಮ ಹೆಬ್ಬಾರ್ ಘಟ್ಟದ ಮೇಲಿನ ಹವ್ಯಕ ಬ್ರಾಹ್ಮಣರು. ಲಿಂಗಾಯತ ಸಮುದಾಯದ ವಿ.ಎಸ್.ಪಾಟೀಲ್ ವಾಯವ್ಯ ಕರ್ನಾಟಕ ಸಾರಿಗೆ ನಿಗಮದ ಅಧ್ಯಕ್ಷರಾಗಿದ್ದಾರೆ. ಕೆಲ ತಿಂಗಳ ಹಿಂದೆ ನಿಧನರಾದ ಶಿರಸಿಯ ಎಂ.ಎ.ಹೆಗಡೆ ಯಕ್ಷಗಾನ ಮಂಡಳಿ ಅಧ್ಯಕ್ಷರಾಗಿದ್ದರು.

ಬಿಜೆಪಿಯನ್ನು ನಿರಂತರವಾಗಿ ಬೆಂಬಲಿಸುತ್ತ ಬಂದಿರುವ ಜಿಲ್ಲೆಯ ದೊಡ್ಡ ಸಮುದಾಯವಾದ ದೀವರು [ಈಡಿಗರು] ಕಾರ್ಯಕರ್ತರಲ್ಲಿ ತಮ್ಮನ್ನು ಬರಿ ಚುನಾವಣೆಯಲ್ಲಿ ಪೋಸ್ಟರ್ ಅಂಟಿಸುವ ಚಾಕರಿಗಷ್ಟೆ ಬಳಸಲಾಗುತ್ತಿದೆಯೆಂಬ ಬೇರಸ ಮೂಡಿದೆ. ಈ ಜಾತಿಗೆ ಸೇರಿದ ಜಿಲ್ಲಾ ಬಿಜೆಪಿ ಮಾಜಿ ಅಧ್ಯಕ್ಷ ಕೆ.ಜಿ.ನಾಯ್ಕ್, ಭಟ್ಕಳದ ಗೋವಿಂದ ನಾಯ್ಕ್, ನಾಡವ ಸಮುದಾಯದ ನಾಗರಾಜ್ ನಾಯಕ ತೊರ್ಕೆ, ಅಂಕೋಲಾದ ವಕೀಲ ನಾಗರಾಜ್ ನಾಯಕ್, ಭಾಸ್ಕರ್ ನಾರ್ವೇಕರ್ ಎಮ್ಮೆಲ್ಸಿ ಟಿಕೆಟ್‌ಗೆ ಹಠ ಹಿಡಿದಿದ್ದರು. ಅವರೆಲ್ಲರನ್ನು ಸಮಾಧಾನ ಪಡಿಸಿ ಗಣಪತಿ ಉಳ್ವೇಕರ್ ಅವರನ್ನು ಕಣಕ್ಕಿಳಿಸಲಾಗಿತ್ತು.

ಆಗ ಸಂಧಾನಕಾರರ ಮಾತು ನಂಬಿ ಹಿಂದೆ ಸರಿದವರೆಲ್ಲ ಈಗ ನಿಗಮ-ಮಂಡಳಿ ಆವಕಾಶ ಬೇಡುತ್ತಿದ್ದಾರೆ. ಘಟ್ಟದ ಮೇಲಿನ ಹಲವರಿಗೆ, ಅದರಲ್ಲೂ ಹವ್ಯಕ ಬ್ರಾಹ್ಮಣ ಜನಾಂಗಕ್ಕೆ ಹೆಚ್ಚಿನ ಪ್ರಾತಿನಿಧ್ಯ ಸಿಕ್ಕಿರುವುದರಿಂದ ಈ ಬಾರಿ ಘಟ್ಟದ ಕೆಳಗಿನ ದೀವರಿಗೆ ಅವಕಾಶ ಸಿಗಲಿದೆಯೆಂಬ ಮಾತು ಬಿಜೆಪಿ ವಲಯದಲ್ಲಿ ಕೇಳಿಬರುತ್ತಿದೆ. ಸಿದ್ದಾಪುರದ ಕೆ.ಜಿ.ನಾಯ್ಕ್ ಹೆಸರು ಮುಂಚೂಣಿಯಲ್ಲಿದೆ ಎಂದು ಬಿಜೆಪಿ ಕಾರ್ಯಕರ್ತರು ಹೇಳುತ್ತಾರೆ.


ಇದನ್ನೂ ಓದಿ: ಕೃಷಿಕಥನ 03: ರೈತರದು ಆತ್ಮಹತ್ಯೆಯಲ್ಲ, ಹತ್ಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...