Homeಕರ್ನಾಟಕಉತ್ತರ ಕನ್ನಡ: ಜೀವ ವೈವಿಧ್ಯ ಮಂಡಳಿ ಅಧ್ಯಕ್ಷತೆಗೆ ಆಶೀಸರ ರಾಜೀನಾಮೆ; ನಿಗಮ-ಮಂಡಳಿಗೆ ಬಿಜೆಪಿಯಲ್ಲಿ ಪೈಪೋಟಿ

ಉತ್ತರ ಕನ್ನಡ: ಜೀವ ವೈವಿಧ್ಯ ಮಂಡಳಿ ಅಧ್ಯಕ್ಷತೆಗೆ ಆಶೀಸರ ರಾಜೀನಾಮೆ; ನಿಗಮ-ಮಂಡಳಿಗೆ ಬಿಜೆಪಿಯಲ್ಲಿ ಪೈಪೋಟಿ

- Advertisement -
- Advertisement -

ರಾಜ್ಯ ಜೀವ ವೈವಿಧ್ಯ ಮಂಡಳಿ ಅಧ್ಯಕ್ಷ ಶಿರಸಿಯ ಅನಂತ ಹೆಗಡೆ ಆಶೀಸರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಡಿಸೆಂಬರ್ 2021ರ ಅಂತ್ಯಕ್ಕೆ ಅಧಿಕಾರ ಅವಧಿಯ ಎರಡು ವರ್ಷ ಮುಕ್ತಾಯ ಆಗುತ್ತಿರುವುದರಿಂದ ಪದತ್ಯಾಗ ಮಾಡುತ್ತಿರವುದಾಗಿ ಡಿ.28ರಂದು ಸಲ್ಲಿಸಿರುವ ರಾಜಿನಾಮೆ ಪತ್ರದಲ್ಲಿ ಹೇಳಿದ್ದಾರೆ.

ಅನಂತ ಹೆಗಡೆ ಆಶೀಸರ ಮಂಡಳಿಯ ಅಧ್ಯಕ್ಷರಾದಾಗಿನಿಂದ ಉತ್ತರ ಕನ್ನಡ ಜಿಲ್ಲಾ ಬಿಜೆಪಿಯಲ್ಲಿ ಅಸಮಾಧಾನ ಹೊಗೆಯಾಡುತ್ತಲೆ ಇತ್ತು. ಬಿಜೆಪಿಯ ಸಕ್ರಿಯ ಕಾರ್ಯಕರ್ತನಲ್ಲದ ಆಶೀಸರ ಆರ್‌ಎಸ್‌ಎಸ್ ಶಿಫಾರಸಿನಿಂದ ಬಿಜೆಪಿ ಅಧಿಕಾರಕ್ಕೆ ಬಂದಾಗೆಲ್ಲ ಒಂದಲ್ಲ ಒಂದು ನಿಗಮ-ಮಂಡಳಿ ಅಧಿಕಾರ ಪಡೆಯುತ್ತಾರೆಂದು ಬಿಜೆಪಿಯ ನಿಷ್ಟಾವಂತ ಕಾರ್ಯಕರ್ತರ ಆಕ್ರೋಶವಾಗಿತ್ತು. ಅದರಲ್ಲೂ ಜಿಲ್ಲೆಯ ಘಟ್ಟದ ಮೇಲಿನ ಹವ್ಯಕ ಬ್ರಾಹ್ಮಣ ಸಮುದಾಯದವರೆ ಹೆಚ್ಚು ಅಧಿಕಾರ ಸ್ಥಾನ-ಮಾನ ಅನುಭವಿಸುತ್ತಿದ್ದಾರೆಂಬ ಭಾವನೆ ಹಿಂದುಳಿದವರಲ್ಲಿತ್ತು.

ಕಳೆದ ವಿಧಾನ ಪರಿಷತ್ ಚುನಾವಣೆ ಹೊತ್ತಲ್ಲಿ ಈ ಬೇಸರ ಭುಗಿಲೆದ್ದಿತ್ತು. ಬಂಡಾಯ ಅಭ್ಯರ್ಥಿಗಳಾಗಿ ಕಣಕ್ಕಿಳಿಯಲು 2-3 ಹಳೆಯ ಕಾರ್ಯಕರ್ತರು ಸಿದ್ದವಾಗಿದ್ದರು. ಆಗ ಅವರಲ್ಲಿ ಕೆಲವರಿಗೆ ನಿಗಮ-ಮಂಡಳಿ ಅಧ್ಯಕ್ಷತೆ ಕೊಡುವ ಭರವಸೆ ಕೊಟ್ಟು ಸಮಾಧಾನ ಮಾಡಲಾಗಿತ್ತೆನ್ನಲಾಗಿದೆ. ಆಗಲೆ ಆಶೀಸರ ರಾಜಿನಾಮೆ ಪಡೆಯಲು ಬಿಜೆಪಿ ಹೈಕಮಾಂಡ್ ನಿರ್ಧರಿಸಿರುವ ಸುದ್ದಿ ಹಬ್ಬಿತ್ತು.

ಆಶೀಸರ ರಾಜಿನಾಮೆ ಘೋಷಿಸುತ್ತಿದ್ದಂತೆಯೆ ಜಿಲ್ಲಾ ಬಿಜೆಪಿಯಲ್ಲಿ ನಿಗಮ-ಮಂಡಳಿ ಸ್ಥಾನಕ್ಕಾಗಿ ತುರುಸಿನ ಪೈಪೋಟಿ ಶುರುವಾಗಿದ್ದು, ಘಟ್ಟದ ಮೇಲಿನ-ಘಟ್ಟದ ಕೆಳಗಿನ [ಕರಾವಳಿ], ಬ್ರಾಹ್ಮಣ-ಶೂದ್ರ ಲೆಕ್ಕಾಚಾರ ನಡೆಯಲಾರಂಭಿಸಿದೆ. ಸಂಸದ ಅನಂತಕುಮಾರ್ ಹೆಗಡೆ, ಸ್ಪೀಕರ್ ಕಾಗೇರಿ, ಜಿಲ್ಲಾ ಉಸ್ತುವಾರಿ ಮಂತ್ರಿ ಶಿವರಾಮ ಹೆಬ್ಬಾರ್ ಘಟ್ಟದ ಮೇಲಿನ ಹವ್ಯಕ ಬ್ರಾಹ್ಮಣರು. ಲಿಂಗಾಯತ ಸಮುದಾಯದ ವಿ.ಎಸ್.ಪಾಟೀಲ್ ವಾಯವ್ಯ ಕರ್ನಾಟಕ ಸಾರಿಗೆ ನಿಗಮದ ಅಧ್ಯಕ್ಷರಾಗಿದ್ದಾರೆ. ಕೆಲ ತಿಂಗಳ ಹಿಂದೆ ನಿಧನರಾದ ಶಿರಸಿಯ ಎಂ.ಎ.ಹೆಗಡೆ ಯಕ್ಷಗಾನ ಮಂಡಳಿ ಅಧ್ಯಕ್ಷರಾಗಿದ್ದರು.

ಬಿಜೆಪಿಯನ್ನು ನಿರಂತರವಾಗಿ ಬೆಂಬಲಿಸುತ್ತ ಬಂದಿರುವ ಜಿಲ್ಲೆಯ ದೊಡ್ಡ ಸಮುದಾಯವಾದ ದೀವರು [ಈಡಿಗರು] ಕಾರ್ಯಕರ್ತರಲ್ಲಿ ತಮ್ಮನ್ನು ಬರಿ ಚುನಾವಣೆಯಲ್ಲಿ ಪೋಸ್ಟರ್ ಅಂಟಿಸುವ ಚಾಕರಿಗಷ್ಟೆ ಬಳಸಲಾಗುತ್ತಿದೆಯೆಂಬ ಬೇರಸ ಮೂಡಿದೆ. ಈ ಜಾತಿಗೆ ಸೇರಿದ ಜಿಲ್ಲಾ ಬಿಜೆಪಿ ಮಾಜಿ ಅಧ್ಯಕ್ಷ ಕೆ.ಜಿ.ನಾಯ್ಕ್, ಭಟ್ಕಳದ ಗೋವಿಂದ ನಾಯ್ಕ್, ನಾಡವ ಸಮುದಾಯದ ನಾಗರಾಜ್ ನಾಯಕ ತೊರ್ಕೆ, ಅಂಕೋಲಾದ ವಕೀಲ ನಾಗರಾಜ್ ನಾಯಕ್, ಭಾಸ್ಕರ್ ನಾರ್ವೇಕರ್ ಎಮ್ಮೆಲ್ಸಿ ಟಿಕೆಟ್‌ಗೆ ಹಠ ಹಿಡಿದಿದ್ದರು. ಅವರೆಲ್ಲರನ್ನು ಸಮಾಧಾನ ಪಡಿಸಿ ಗಣಪತಿ ಉಳ್ವೇಕರ್ ಅವರನ್ನು ಕಣಕ್ಕಿಳಿಸಲಾಗಿತ್ತು.

ಆಗ ಸಂಧಾನಕಾರರ ಮಾತು ನಂಬಿ ಹಿಂದೆ ಸರಿದವರೆಲ್ಲ ಈಗ ನಿಗಮ-ಮಂಡಳಿ ಆವಕಾಶ ಬೇಡುತ್ತಿದ್ದಾರೆ. ಘಟ್ಟದ ಮೇಲಿನ ಹಲವರಿಗೆ, ಅದರಲ್ಲೂ ಹವ್ಯಕ ಬ್ರಾಹ್ಮಣ ಜನಾಂಗಕ್ಕೆ ಹೆಚ್ಚಿನ ಪ್ರಾತಿನಿಧ್ಯ ಸಿಕ್ಕಿರುವುದರಿಂದ ಈ ಬಾರಿ ಘಟ್ಟದ ಕೆಳಗಿನ ದೀವರಿಗೆ ಅವಕಾಶ ಸಿಗಲಿದೆಯೆಂಬ ಮಾತು ಬಿಜೆಪಿ ವಲಯದಲ್ಲಿ ಕೇಳಿಬರುತ್ತಿದೆ. ಸಿದ್ದಾಪುರದ ಕೆ.ಜಿ.ನಾಯ್ಕ್ ಹೆಸರು ಮುಂಚೂಣಿಯಲ್ಲಿದೆ ಎಂದು ಬಿಜೆಪಿ ಕಾರ್ಯಕರ್ತರು ಹೇಳುತ್ತಾರೆ.


ಇದನ್ನೂ ಓದಿ: ಕೃಷಿಕಥನ 03: ರೈತರದು ಆತ್ಮಹತ್ಯೆಯಲ್ಲ, ಹತ್ಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...