Homeಕರ್ನಾಟಕಉತ್ತರ ಕನ್ನಡ: ಜೀವ ವೈವಿಧ್ಯ ಮಂಡಳಿ ಅಧ್ಯಕ್ಷತೆಗೆ ಆಶೀಸರ ರಾಜೀನಾಮೆ; ನಿಗಮ-ಮಂಡಳಿಗೆ ಬಿಜೆಪಿಯಲ್ಲಿ ಪೈಪೋಟಿ

ಉತ್ತರ ಕನ್ನಡ: ಜೀವ ವೈವಿಧ್ಯ ಮಂಡಳಿ ಅಧ್ಯಕ್ಷತೆಗೆ ಆಶೀಸರ ರಾಜೀನಾಮೆ; ನಿಗಮ-ಮಂಡಳಿಗೆ ಬಿಜೆಪಿಯಲ್ಲಿ ಪೈಪೋಟಿ

- Advertisement -
- Advertisement -

ರಾಜ್ಯ ಜೀವ ವೈವಿಧ್ಯ ಮಂಡಳಿ ಅಧ್ಯಕ್ಷ ಶಿರಸಿಯ ಅನಂತ ಹೆಗಡೆ ಆಶೀಸರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಡಿಸೆಂಬರ್ 2021ರ ಅಂತ್ಯಕ್ಕೆ ಅಧಿಕಾರ ಅವಧಿಯ ಎರಡು ವರ್ಷ ಮುಕ್ತಾಯ ಆಗುತ್ತಿರುವುದರಿಂದ ಪದತ್ಯಾಗ ಮಾಡುತ್ತಿರವುದಾಗಿ ಡಿ.28ರಂದು ಸಲ್ಲಿಸಿರುವ ರಾಜಿನಾಮೆ ಪತ್ರದಲ್ಲಿ ಹೇಳಿದ್ದಾರೆ.

ಅನಂತ ಹೆಗಡೆ ಆಶೀಸರ ಮಂಡಳಿಯ ಅಧ್ಯಕ್ಷರಾದಾಗಿನಿಂದ ಉತ್ತರ ಕನ್ನಡ ಜಿಲ್ಲಾ ಬಿಜೆಪಿಯಲ್ಲಿ ಅಸಮಾಧಾನ ಹೊಗೆಯಾಡುತ್ತಲೆ ಇತ್ತು. ಬಿಜೆಪಿಯ ಸಕ್ರಿಯ ಕಾರ್ಯಕರ್ತನಲ್ಲದ ಆಶೀಸರ ಆರ್‌ಎಸ್‌ಎಸ್ ಶಿಫಾರಸಿನಿಂದ ಬಿಜೆಪಿ ಅಧಿಕಾರಕ್ಕೆ ಬಂದಾಗೆಲ್ಲ ಒಂದಲ್ಲ ಒಂದು ನಿಗಮ-ಮಂಡಳಿ ಅಧಿಕಾರ ಪಡೆಯುತ್ತಾರೆಂದು ಬಿಜೆಪಿಯ ನಿಷ್ಟಾವಂತ ಕಾರ್ಯಕರ್ತರ ಆಕ್ರೋಶವಾಗಿತ್ತು. ಅದರಲ್ಲೂ ಜಿಲ್ಲೆಯ ಘಟ್ಟದ ಮೇಲಿನ ಹವ್ಯಕ ಬ್ರಾಹ್ಮಣ ಸಮುದಾಯದವರೆ ಹೆಚ್ಚು ಅಧಿಕಾರ ಸ್ಥಾನ-ಮಾನ ಅನುಭವಿಸುತ್ತಿದ್ದಾರೆಂಬ ಭಾವನೆ ಹಿಂದುಳಿದವರಲ್ಲಿತ್ತು.

ಕಳೆದ ವಿಧಾನ ಪರಿಷತ್ ಚುನಾವಣೆ ಹೊತ್ತಲ್ಲಿ ಈ ಬೇಸರ ಭುಗಿಲೆದ್ದಿತ್ತು. ಬಂಡಾಯ ಅಭ್ಯರ್ಥಿಗಳಾಗಿ ಕಣಕ್ಕಿಳಿಯಲು 2-3 ಹಳೆಯ ಕಾರ್ಯಕರ್ತರು ಸಿದ್ದವಾಗಿದ್ದರು. ಆಗ ಅವರಲ್ಲಿ ಕೆಲವರಿಗೆ ನಿಗಮ-ಮಂಡಳಿ ಅಧ್ಯಕ್ಷತೆ ಕೊಡುವ ಭರವಸೆ ಕೊಟ್ಟು ಸಮಾಧಾನ ಮಾಡಲಾಗಿತ್ತೆನ್ನಲಾಗಿದೆ. ಆಗಲೆ ಆಶೀಸರ ರಾಜಿನಾಮೆ ಪಡೆಯಲು ಬಿಜೆಪಿ ಹೈಕಮಾಂಡ್ ನಿರ್ಧರಿಸಿರುವ ಸುದ್ದಿ ಹಬ್ಬಿತ್ತು.

ಆಶೀಸರ ರಾಜಿನಾಮೆ ಘೋಷಿಸುತ್ತಿದ್ದಂತೆಯೆ ಜಿಲ್ಲಾ ಬಿಜೆಪಿಯಲ್ಲಿ ನಿಗಮ-ಮಂಡಳಿ ಸ್ಥಾನಕ್ಕಾಗಿ ತುರುಸಿನ ಪೈಪೋಟಿ ಶುರುವಾಗಿದ್ದು, ಘಟ್ಟದ ಮೇಲಿನ-ಘಟ್ಟದ ಕೆಳಗಿನ [ಕರಾವಳಿ], ಬ್ರಾಹ್ಮಣ-ಶೂದ್ರ ಲೆಕ್ಕಾಚಾರ ನಡೆಯಲಾರಂಭಿಸಿದೆ. ಸಂಸದ ಅನಂತಕುಮಾರ್ ಹೆಗಡೆ, ಸ್ಪೀಕರ್ ಕಾಗೇರಿ, ಜಿಲ್ಲಾ ಉಸ್ತುವಾರಿ ಮಂತ್ರಿ ಶಿವರಾಮ ಹೆಬ್ಬಾರ್ ಘಟ್ಟದ ಮೇಲಿನ ಹವ್ಯಕ ಬ್ರಾಹ್ಮಣರು. ಲಿಂಗಾಯತ ಸಮುದಾಯದ ವಿ.ಎಸ್.ಪಾಟೀಲ್ ವಾಯವ್ಯ ಕರ್ನಾಟಕ ಸಾರಿಗೆ ನಿಗಮದ ಅಧ್ಯಕ್ಷರಾಗಿದ್ದಾರೆ. ಕೆಲ ತಿಂಗಳ ಹಿಂದೆ ನಿಧನರಾದ ಶಿರಸಿಯ ಎಂ.ಎ.ಹೆಗಡೆ ಯಕ್ಷಗಾನ ಮಂಡಳಿ ಅಧ್ಯಕ್ಷರಾಗಿದ್ದರು.

ಬಿಜೆಪಿಯನ್ನು ನಿರಂತರವಾಗಿ ಬೆಂಬಲಿಸುತ್ತ ಬಂದಿರುವ ಜಿಲ್ಲೆಯ ದೊಡ್ಡ ಸಮುದಾಯವಾದ ದೀವರು [ಈಡಿಗರು] ಕಾರ್ಯಕರ್ತರಲ್ಲಿ ತಮ್ಮನ್ನು ಬರಿ ಚುನಾವಣೆಯಲ್ಲಿ ಪೋಸ್ಟರ್ ಅಂಟಿಸುವ ಚಾಕರಿಗಷ್ಟೆ ಬಳಸಲಾಗುತ್ತಿದೆಯೆಂಬ ಬೇರಸ ಮೂಡಿದೆ. ಈ ಜಾತಿಗೆ ಸೇರಿದ ಜಿಲ್ಲಾ ಬಿಜೆಪಿ ಮಾಜಿ ಅಧ್ಯಕ್ಷ ಕೆ.ಜಿ.ನಾಯ್ಕ್, ಭಟ್ಕಳದ ಗೋವಿಂದ ನಾಯ್ಕ್, ನಾಡವ ಸಮುದಾಯದ ನಾಗರಾಜ್ ನಾಯಕ ತೊರ್ಕೆ, ಅಂಕೋಲಾದ ವಕೀಲ ನಾಗರಾಜ್ ನಾಯಕ್, ಭಾಸ್ಕರ್ ನಾರ್ವೇಕರ್ ಎಮ್ಮೆಲ್ಸಿ ಟಿಕೆಟ್‌ಗೆ ಹಠ ಹಿಡಿದಿದ್ದರು. ಅವರೆಲ್ಲರನ್ನು ಸಮಾಧಾನ ಪಡಿಸಿ ಗಣಪತಿ ಉಳ್ವೇಕರ್ ಅವರನ್ನು ಕಣಕ್ಕಿಳಿಸಲಾಗಿತ್ತು.

ಆಗ ಸಂಧಾನಕಾರರ ಮಾತು ನಂಬಿ ಹಿಂದೆ ಸರಿದವರೆಲ್ಲ ಈಗ ನಿಗಮ-ಮಂಡಳಿ ಆವಕಾಶ ಬೇಡುತ್ತಿದ್ದಾರೆ. ಘಟ್ಟದ ಮೇಲಿನ ಹಲವರಿಗೆ, ಅದರಲ್ಲೂ ಹವ್ಯಕ ಬ್ರಾಹ್ಮಣ ಜನಾಂಗಕ್ಕೆ ಹೆಚ್ಚಿನ ಪ್ರಾತಿನಿಧ್ಯ ಸಿಕ್ಕಿರುವುದರಿಂದ ಈ ಬಾರಿ ಘಟ್ಟದ ಕೆಳಗಿನ ದೀವರಿಗೆ ಅವಕಾಶ ಸಿಗಲಿದೆಯೆಂಬ ಮಾತು ಬಿಜೆಪಿ ವಲಯದಲ್ಲಿ ಕೇಳಿಬರುತ್ತಿದೆ. ಸಿದ್ದಾಪುರದ ಕೆ.ಜಿ.ನಾಯ್ಕ್ ಹೆಸರು ಮುಂಚೂಣಿಯಲ್ಲಿದೆ ಎಂದು ಬಿಜೆಪಿ ಕಾರ್ಯಕರ್ತರು ಹೇಳುತ್ತಾರೆ.


ಇದನ್ನೂ ಓದಿ: ಕೃಷಿಕಥನ 03: ರೈತರದು ಆತ್ಮಹತ್ಯೆಯಲ್ಲ, ಹತ್ಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....