Homeಕರ್ನಾಟಕಉತ್ತರ ಕನ್ನಡ: ಸೆಲ್ಫಿ ತೆಗೆಯುವಾಗ ನದಿಗೆ ಬಿದ್ದಿದ್ದ ಪ್ರೇಮಿಗಳ ಮೃತದೇಹಗಳು ಪತ್ತೆ

ಉತ್ತರ ಕನ್ನಡ: ಸೆಲ್ಫಿ ತೆಗೆಯುವಾಗ ನದಿಗೆ ಬಿದ್ದಿದ್ದ ಪ್ರೇಮಿಗಳ ಮೃತದೇಹಗಳು ಪತ್ತೆ

- Advertisement -
- Advertisement -

ಉತ್ತರ ಕನ್ನಡ ಜಿಲ್ಲೆಯ ಜೊಯೊಡಾ ತಾಲೂಕಿನ ಸೂಪಾ ಅಣೆಕಟ್ಟೆಯ ಬಳಿ ಸೆಲ್ಫಿ ತೆಗೆಯಲು ಹೋಗಿ ಆಯತಪ್ಪಿ ಡ್ಯಾಂಗೆ ಬಿದ್ದಿದ್ದ ಪ್ರೇಮಿಗಳ ಮೃತದೇಹಗಳು ಪತ್ತೆಯಾಗಿದೆ. ಮೃತರನ್ನು ಬೀದರ್‌ನ ರಕ್ಷಿತಾ ಚಿದ್ರಿ ಮತ್ತು ಪುರುಷೋತ್ತಮ್ ಎಂದು ಗುರುತಿಸಲಾಗಿದೆ. ಈ ಘಟನೆ ಕುರಿತು ಜೊಯಿಡಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೀದರ್ ಮೂಲದ ಇಬ್ಬರು ಪ್ರವಾಸಕ್ಕೆ ಬಂದಿದ್ದು, ಏಪ್ರಿಲ್ 12 ರ ಶೂಕ್ರವಾರ ಸೂಪಾ‌ ಡ್ಯಾಂ ಬಳಿ ಸೆಲ್ಫಿ ತೆಗೆಸಿಕೊಳ್ಳುವಾಗ ಆಯತಪ್ಪಿ ಕಾಳಿ ನದಿಗೆ ಬಿದ್ದಿದ್ದರು. ನಿನ್ನೆಯಿಂದಲೇ ಇಬ್ಬರ ಪತ್ತೆಗೆ ಕಾರ್ಯಾಚರಣೆ ನಡೆಯುತ್ತಿತ್ತು. ಇಂದು ಪ್ರೇಮಿಗಳ ಮೃತದೇಹಗಳು ಪತ್ತೆಯಾಗಿದೆ.

ಮೃತ ಯುವತಿ ರಕ್ಷಿತಾ ಕಲಬುರಗಿಯಲ್ಲಿ  ಎಂಜಿನಿಯರಿಂಗ್ ವಿದ್ಯಾರ್ಥಿನಿಯಾಗಿದ್ದರು. ಪುರುಷೋತ್ತಮ್ ಬೀದರ್‌ನ ಕರ್ನಾಟಕ ಕಾಲೇಜಿನಲ್ಲಿ ಪದವಿ ಓದುತ್ತಿದ್ದರು ಎನ್ನಲಾಗಿದೆ.

ಇದನ್ನೂ ಓದಿ: ಜಪಾನ್ ಪರಮಾಣು ಸ್ಥಾವರದ ನೀರು ಸಮುದ್ರಕ್ಕೆ: ಭಾರತದ ಮೇಲೆ ಯಾವ ಪರಿಣಾಮ ಬೀರಲಿದೆ?

ಇಬ್ಬರು ಜೊಯಿಡಾ ತಾಲೂಕಿನ‌ ಗಣೇಶಗುಡಿಗೆ ಪ್ರವಾಸಕ್ಕೆ ಎಂದು ಆಗಮಿಸಿದ್ದರು. ಸೋಮವಾರ ಸೂಪಾ‌ ಡ್ಯಾಂ ಬಳಿಯಿರುವ ಕಾಳಿ ಸೇತುವೆಯಲ್ಲಿ‌ ನಿಂತು ಸೆಲ್ಫಿ ತೆಗೆಯುತ್ತಿದ್ದ ವೇಳೆ ಕಾಲುಜಾರಿ ನದಿಗೆ ಬಿದ್ದು ಪ್ರಾಣ ಕಳೆದುಕೊಂಡಿದ್ದಾರೆ.

ಪೊಲೀಸರು ಹಾಗೂ ಅಗ್ನಿಶಾಮಕದಳ ಸಿಬ್ಬಂದಿ ನಿನ್ನೆಯಿಂದ ಹುಡುಕಾಡುತ್ತಿದ್ದರು. ಮುಳುಗು ತಜ್ಞರು, ಟ್ಯೂಬ್ ಬೋಟ್ ಹಾಗೂ ಕಯಾಕ್ ಮೂಲಕ ಹುಡುಕಾಟ ನಡೆಸಿದ್ದರು. ಇಂದು ಪ್ರೇಮಿಗಳ ಮೃತದೇಹಗಳು ಪತ್ತೆಯಾಗಿದೆ. ಸೂಪಾ ಅಣೆಕಟ್ಟನ್ನು ಕಾಳಿ ನದಿಗೆ ಕಟ್ಟಲಾಗಿದ್ದು, ಉತ್ತರ ಕನ್ನಡ ಜಿಲ್ಲೆಯ ಅತಿದೊಡ್ಡ ಅಣೆಕಟ್ಟು ಎಂಬ ಖ್ಯಾತಿ ಗಳಿಸಿದೆ.


ಇದನ್ನೂ ಓದಿ: ಸಾರಿಗೆ ನೌಕರರನ್ನು ವಾರೆಂಟ್ ಇಲ್ಲದೆ ಬಂಧಿಸಿ ‘ಪೊಲೀಸ್ ರಾಜ್ಯ’ ಮಾಡುತ್ತಿದ್ದಾರೆಯೆ: ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...