Homeಕರ್ನಾಟಕಉತ್ತರ ಕನ್ನಡ: ಸೆಲ್ಫಿ ತೆಗೆಯುವಾಗ ನದಿಗೆ ಬಿದ್ದಿದ್ದ ಪ್ರೇಮಿಗಳ ಮೃತದೇಹಗಳು ಪತ್ತೆ

ಉತ್ತರ ಕನ್ನಡ: ಸೆಲ್ಫಿ ತೆಗೆಯುವಾಗ ನದಿಗೆ ಬಿದ್ದಿದ್ದ ಪ್ರೇಮಿಗಳ ಮೃತದೇಹಗಳು ಪತ್ತೆ

- Advertisement -
- Advertisement -

ಉತ್ತರ ಕನ್ನಡ ಜಿಲ್ಲೆಯ ಜೊಯೊಡಾ ತಾಲೂಕಿನ ಸೂಪಾ ಅಣೆಕಟ್ಟೆಯ ಬಳಿ ಸೆಲ್ಫಿ ತೆಗೆಯಲು ಹೋಗಿ ಆಯತಪ್ಪಿ ಡ್ಯಾಂಗೆ ಬಿದ್ದಿದ್ದ ಪ್ರೇಮಿಗಳ ಮೃತದೇಹಗಳು ಪತ್ತೆಯಾಗಿದೆ. ಮೃತರನ್ನು ಬೀದರ್‌ನ ರಕ್ಷಿತಾ ಚಿದ್ರಿ ಮತ್ತು ಪುರುಷೋತ್ತಮ್ ಎಂದು ಗುರುತಿಸಲಾಗಿದೆ. ಈ ಘಟನೆ ಕುರಿತು ಜೊಯಿಡಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೀದರ್ ಮೂಲದ ಇಬ್ಬರು ಪ್ರವಾಸಕ್ಕೆ ಬಂದಿದ್ದು, ಏಪ್ರಿಲ್ 12 ರ ಶೂಕ್ರವಾರ ಸೂಪಾ‌ ಡ್ಯಾಂ ಬಳಿ ಸೆಲ್ಫಿ ತೆಗೆಸಿಕೊಳ್ಳುವಾಗ ಆಯತಪ್ಪಿ ಕಾಳಿ ನದಿಗೆ ಬಿದ್ದಿದ್ದರು. ನಿನ್ನೆಯಿಂದಲೇ ಇಬ್ಬರ ಪತ್ತೆಗೆ ಕಾರ್ಯಾಚರಣೆ ನಡೆಯುತ್ತಿತ್ತು. ಇಂದು ಪ್ರೇಮಿಗಳ ಮೃತದೇಹಗಳು ಪತ್ತೆಯಾಗಿದೆ.

ಮೃತ ಯುವತಿ ರಕ್ಷಿತಾ ಕಲಬುರಗಿಯಲ್ಲಿ  ಎಂಜಿನಿಯರಿಂಗ್ ವಿದ್ಯಾರ್ಥಿನಿಯಾಗಿದ್ದರು. ಪುರುಷೋತ್ತಮ್ ಬೀದರ್‌ನ ಕರ್ನಾಟಕ ಕಾಲೇಜಿನಲ್ಲಿ ಪದವಿ ಓದುತ್ತಿದ್ದರು ಎನ್ನಲಾಗಿದೆ.

ಇದನ್ನೂ ಓದಿ: ಜಪಾನ್ ಪರಮಾಣು ಸ್ಥಾವರದ ನೀರು ಸಮುದ್ರಕ್ಕೆ: ಭಾರತದ ಮೇಲೆ ಯಾವ ಪರಿಣಾಮ ಬೀರಲಿದೆ?

ಇಬ್ಬರು ಜೊಯಿಡಾ ತಾಲೂಕಿನ‌ ಗಣೇಶಗುಡಿಗೆ ಪ್ರವಾಸಕ್ಕೆ ಎಂದು ಆಗಮಿಸಿದ್ದರು. ಸೋಮವಾರ ಸೂಪಾ‌ ಡ್ಯಾಂ ಬಳಿಯಿರುವ ಕಾಳಿ ಸೇತುವೆಯಲ್ಲಿ‌ ನಿಂತು ಸೆಲ್ಫಿ ತೆಗೆಯುತ್ತಿದ್ದ ವೇಳೆ ಕಾಲುಜಾರಿ ನದಿಗೆ ಬಿದ್ದು ಪ್ರಾಣ ಕಳೆದುಕೊಂಡಿದ್ದಾರೆ.

ಪೊಲೀಸರು ಹಾಗೂ ಅಗ್ನಿಶಾಮಕದಳ ಸಿಬ್ಬಂದಿ ನಿನ್ನೆಯಿಂದ ಹುಡುಕಾಡುತ್ತಿದ್ದರು. ಮುಳುಗು ತಜ್ಞರು, ಟ್ಯೂಬ್ ಬೋಟ್ ಹಾಗೂ ಕಯಾಕ್ ಮೂಲಕ ಹುಡುಕಾಟ ನಡೆಸಿದ್ದರು. ಇಂದು ಪ್ರೇಮಿಗಳ ಮೃತದೇಹಗಳು ಪತ್ತೆಯಾಗಿದೆ. ಸೂಪಾ ಅಣೆಕಟ್ಟನ್ನು ಕಾಳಿ ನದಿಗೆ ಕಟ್ಟಲಾಗಿದ್ದು, ಉತ್ತರ ಕನ್ನಡ ಜಿಲ್ಲೆಯ ಅತಿದೊಡ್ಡ ಅಣೆಕಟ್ಟು ಎಂಬ ಖ್ಯಾತಿ ಗಳಿಸಿದೆ.


ಇದನ್ನೂ ಓದಿ: ಸಾರಿಗೆ ನೌಕರರನ್ನು ವಾರೆಂಟ್ ಇಲ್ಲದೆ ಬಂಧಿಸಿ ‘ಪೊಲೀಸ್ ರಾಜ್ಯ’ ಮಾಡುತ್ತಿದ್ದಾರೆಯೆ: ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ| ‘ನೀವು ಕೆಳಜಾತಿಯವರು, ಎಲ್‌ಎಲ್‌ಬಿ ನಿಮಗೆ ಸೂಕ್ತವಲ್ಲ..’; ದಲಿತ ವಿದ್ಯಾರ್ಥಿನಿಗೆ ಪ್ರಾಧ್ಯಾಪಕರಿಂದ ಜಾತಿ ನಿಂದನೆ

ರಾಜಸ್ಥಾನದ ಚುರುವಿನ ಸರ್ಕಾರಿ ಕಾನೂನು ಕಾಲೇಜಿನ ಮೂರನೇ ಸೆಮಿಸ್ಟರ್ ದಲಿತ ಎಲ್‌ಎಲ್‌ಬಿ ವಿದ್ಯಾರ್ಥಿನಿಯೊಬ್ಬರು, ಇಬ್ಬರು ಪ್ರಾಧ್ಯಾಪಕರಿಂದ ಜಾತಿ ಆಧಾರಿತ ನಿಂದನೆ, ಬೆದರಿಕೆ ಮತ್ತು ತಾರತಮ್ಯ ಆರೋಪದ ಮೇಲೆ ಪೊಲೀಸ್ ದೂರು ದಾಖಲಿಸಿದ್ದಾರೆ. ಎಸ್‌ಸಿ...

ಬೆಂಗಳೂರು: ಮೂರು ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಅವಘಡ: ಮಹಿಳೆ ಸಾವು, ಮೂವರ ರಕ್ಷಣೆ

ಬೆಂಗಳೂರು: ಸೋಮವಾರ ರಾತ್ರಿ ಉತ್ತರ ಬೆಂಗಳೂರಿನಲ್ಲಿರುವ ಮನೆಯೊಂದರಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ. ಮೃತರನ್ನು 55 ವರ್ಷದ ಸವಿತಾ ಎಂದು ಗುರುತಿಸಲಾಗಿದೆ. ಅವರ ಪತಿ ಗುತ್ತಿಗೆದಾರ ರಮೇಶ್...

ಲಕ್ನೋ | 12 ವರ್ಷದ ಬಾಲಕ ಉನೈಝ್ ಗುಂಡೇಟಿಗೆ ಬಲಿ : ಸಂಚು ರೂಪಿಸಿ ಕೊಲೆ ಮಾಡಲಾಗಿದೆ ಎಂದ ಕುಟುಂಬ

ಉತ್ತರ ಪ್ರದೇಶದ ಲಕ್ನೋದಲ್ಲಿ 12 ವರ್ಷದ ಬಾಲಕನೊಬ್ಬ ಗುಂಡೇಟಿನಿಂದ ಮೃತಪಟ್ಟಿದ್ದು, ಆತನನ್ನು ಕೊಲೆ ಮಾಡಲಾಗಿದೆ. ಕೃತ್ಯವನ್ನು ಮುಚ್ಚಿ ಹಾಕಲು ಪ್ರಯತ್ನಿಸಲಾಗುತ್ತಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಈ ಘಟನೆ ದೇಶದ ಗಮನ ಸೆಳೆದಿದ್ದು, ಸಾಮಾಜಿಕ...

ಕೇರಳ: ಪೊಲೀಸರ ‘ದುರುದ್ದೇಶಪೂರಿತ ಮೊಕದ್ದಮೆ’ಗಾಗಿ ನಿವೃತ್ತ ಸೇನಾ ಅಧಿಕಾರಿಗೆ ಕೇರಳ ನ್ಯಾಯಾಲಯದಿಂದ 5 ಲಕ್ಷ ರೂ. ಪರಿಹಾರ ಘೋಷಣೆ

ಕೊಲ್ಲಂ, ಕೇರಳ: ಪೊಲೀಸರ "ದುರುದ್ದೇಶಪೂರಿತ ಮೊಕದ್ದಮೆ"ಗಾಗಿ ನಿವೃತ್ತ ಸೇನಾ ಅಧಿಕಾರಿಯೊಬ್ಬರಿಗೆ ಕೇರಳ ನ್ಯಾಯಾಲಯವು 5 ಲಕ್ಷ ರೂ.ಗಳ ಪರಿಹಾರವನ್ನು ಘೋಷಿಸಿದೆ.  ಪ್ರಿನ್ಸಿಪಲ್ ಮುನ್ಸಿಫ್ ರಾಗಿ ಎಸ್. ಅವರು, 54 ವರ್ಷದ ನಿವೃತ್ತ ನಾಯಕ್ ಸುಬೇದಾರ್...

ಮಧ್ಯಪ್ರದೇಶ: ಇಂದೋರ್‌ನಲ್ಲಿ ಒಳಚರಂಡಿಗೆ ಇಳಿದು ಇಬ್ಬರು ಪೌರ ಕಾರ್ಮಿಕರು ಸಾವು: ವಿಷಕಾರಿ ಅನಿಲ ಶಂಕೆ

ಇಂದೋರ್‌ನ ಚೋಯಿತ್ರಮ್ ಆಸ್ಪತ್ರೆ ಬಳಿ ಸೋಮವಾರ ಒಳಚರಂಡಿ ಒಳಗೆ ಇಳಿದ ಕಾರಣ ಕರಣ್ ಮತ್ತು ಅಜಯ್ ಎಂದು ಗುರುತಿಸಲಾದ ಇಂದೋರ್ ಮಹಾನಗರ ಪಾಲಿಕೆಯ ಇಬ್ಬರು ಪೌರ ಕಾರ್ಮಿಕರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.  ವಲಯ 13ರ...

‘ಅತೃಪ್ತ ಆತ್ಮಗಳ ಹತಾಶ ಹೇಳಿಕೆ’ : ವಿಪಕ್ಷ ನಾಯಕರ ಫೋನ್ ಕದ್ದಾಲಿಕೆ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ತಿರುಗೇಟು

ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ಮೇಲೆ ಕಣ್ಣಿಡಲು ಪೋನ್ ಕದ್ದಾಲಿಕೆ ನಡೆಯುತ್ತಿದೆ ಎಂಬ ವಿರೋಧ ಪಕ್ಷದ ನಾಯಕರಾದ ಆರ್.ಅಶೋಕ್ ಮತ್ತು ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿಯವರ ಆರೋಪಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ....

‘ಖಮೇನಿ ಹತ್ಯೆ ಬಗ್ಗೆ ಮೋದಿ ಸರ್ಕಾರದ ಮೌನ ತಟಸ್ಥವಲ್ಲ, ಬದಲಿಗೆ ಪದತ್ಯಾಗ’: ಸೋನಿಯಾ ಗಾಂಧಿ

ಮಂಗಳವಾರ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ, ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಹತ್ಯೆಯ ಬಗ್ಗೆ ಮೋದಿಯವರ ಮೌನವು ತಟಸ್ಥವಲ್ಲ, ಬದಲಾಗಿ ತ್ಯಾಗವಾಗಿದೆ...

ಟೆಕ್ಸಾಸ್‌ನಲ್ಲಿ ಗುಂಡಿನ ದಾಳಿ: ಭಾರತೀಯ ಮೂಲದ ವಿದ್ಯಾರ್ಥಿನಿ ಸೇರಿ ನಾಲ್ವರು ಸಾವು

ಟೆಕ್ಸಾಸ್‌ನ ಆಸ್ಟಿನ್ ನಗರದ ಬಾರ್ ಒಂದರ ಹೊರಗಡೆ ನಡೆದ ಗುಂಡಿನ ದಾಳಿಯಲ್ಲಿ ಭಾರತ ಮೂಲದ ಅಮೆರಿಕನ್ ವಿದ್ಯಾರ್ಥಿನಿ ಸೇರಿದಂತೆ ನಾಲ್ವರು ಸಾವನ್ನಪ್ಪಿದ್ದಾರೆ. ಈ ಘಟನೆಯನ್ನು ಭಯೋತ್ಪಾದನಾ ಕೃತ್ಯವಾಗಿರಬಹುದು ಎಂಬ ಶಂಕೆಯ ಮೇಲೆ ತನಿಖೆ...

ಹಾರ್ಮುಜ್ ಜಲಸಂಧಿ ಮುಚ್ಚಿದ ಇರಾನ್ : ಜಾಗತಿಕ ತೈಲ ಮಾರುಕಟ್ಟೆಯಲ್ಲಿ ತಲ್ಲಣ

ಅಮೆರಿಕ ಮತ್ತು ಇಸ್ರೇಲ್ ದೇಶಗಳು ಇರಾನ್ ಜೊತೆ ನಡೆಸುತ್ತಿರುವ ಯುದ್ಧವು ಇದೀಗ ವಿಶ್ವದ ಅತ್ಯಂತ ನಿರ್ಣಾಯಕ ಇಂಧನ ಮಾರ್ಗಗಳಲ್ಲಿ ಒಂದಾದ 'ಹಾರ್ಮುಜ್ ಜಲಸಂಧಿ'ಗೆ ವ್ಯಾಪಿಸಿದೆ. ಈ ಬೆಳವಣಿಗೆಯಿಂದಾಗಿ ಜಾಗತಿಕ ಮಾರುಕಟ್ಟೆಯಲ್ಲಿ ತೈಲ ಬೆಲೆಗಳು...

ಹುಬ್ಬಳ್ಳಿಯಲ್ಲಿ ವಲಸೆ ಕಾರ್ಮಿಕನ ಎನ್‌ಕೌಂಟರ್ ಪ್ರಕರಣ: ನ್ಯಾಯಾಂಗ ತನಿಖೆಗೆ ಹೈಕೋರ್ಟ್ ಆದೇಶ

ಹುಬ್ಬಳ್ಳಿಯಲ್ಲಿ ಐದು ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆಗೈದ ಆರೋಪ ಎದುರಿಸುತ್ತಿದ್ದ ಬಿಹಾರ ಮೂಲದ ವಲಸೆ ಕಾರ್ಮಿಕ ರಿತೇಶ್ ಕುಮಾರ್ ಎನ್‌ಕೌಂಟರ್ ಪ್ರಕರಣವನ್ನು ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಅವರಿಂದ ಸ್ವತಂತ್ರ ತನಿಖೆಗೆ ವಹಿಸಿ ಸೋಮವಾರ...