Homeಕರ್ನಾಟಕಉತ್ತರ ಕನ್ನಡ: ಹೆಬ್ಬಾರ್‌ರ ಯಲ್ಲಾಪುರದಿಂದ ಸ್ಪರ್ಧೆಗೆ ದೇಶಪಾಂಡೆ ಮಗ ಸಜ್ಜು

ಉತ್ತರ ಕನ್ನಡ: ಹೆಬ್ಬಾರ್‌ರ ಯಲ್ಲಾಪುರದಿಂದ ಸ್ಪರ್ಧೆಗೆ ದೇಶಪಾಂಡೆ ಮಗ ಸಜ್ಜು

- Advertisement -
- Advertisement -

ಉತ್ತರ ಕನ್ನಡ ರಾಜಕೀಯದ ಹಳೆ ಹುಲಿ ರಘುನಾಥ್ ವಿಶ್ವನಾಥರಾವ್ ದೇಶಪಾಂಡೆಯ ಉತ್ತರಾಧಿಕಾರಿ ಎಂದೆ ಬಿಂಬಿತವಾಗಿರುವ ಅವರ ಪುತ್ರ ಪ್ರಶಾಂತ ದೇಶಪಾಂಡೆ ತಾನು ಯಲ್ಲಾಪುರದಿಂದ ಅಸೆಂಬ್ಲಿಗೆ ಸ್ಪರ್ಧಿಸಲು ಸಿದ್ಧನೆಂದು ಹೇಳಿದ್ದಾರೆ. ಈ ಮೂಲಕ ಜಿಲ್ಲೆಯ ರಾಜಕೀಯ ಪಡಸಾಲೆಯಲ್ಲಿ ನಾನಾ ನಮೂನೆಯ ಸಮೀಕರಣದ ಸಾಧ್ಯತೆಯ ಚರ್ಚೆ ಶುರುವಾಗಿಬಿಟ್ಟಿದೆ.

ಪ್ರಶಾಂತ್ ದೇಶಪಾಂಡೆ ಕಳೆದೊಂದು ವರ್ಷದಿಂದ ತುಂಬ ಆಸಕ್ತಿಯಿಂದ ಯಲ್ಲಾಪುರ-ಮುಂಡಗೋಡು ವಿಧಾನಸಭಾ ಕ್ಷೇತ್ರದಲ್ಲಿ ಓಡಾಡಿಕೊಂಡಿದ್ಧಾರೆ. ತಾನು ಕಾಂಗ್ರೆಸ್‌ನಲ್ಲಿದ್ದರೆ ದೇಶಪಾಂಡೆ ತನಗೆ ಮಂತ್ರಿಯಾಗಲು ಬಿಡುವುದಿಲ್ಲ… ತನ್ನ ಏಳ್ಗೆಗೆ ದೇಶಪಾಂಡೆ ಅಡ್ಡಗಾಲು ಹಾಕುತ್ತಾರೆಂಬ ಅರ್ಥದ ಮಾತಾಡಿ ಬಿಜೆಪಿ ಸೇರಿ ಸಚಿವರಾದ ಶಿವರಾಮ್ ಹೆಬ್ಬಾರ್ ರವರ ತವರು ಕ್ಷೇತ್ರ ಯಲ್ಲಾಪುರ. ಅಪ್ಪ ನಾಲ್ಕು ದಶಕದಿಂದ ಪ್ರತಿನಿಧಿಸುತ್ತಿರುವ ಹಳಿಯಾಳ ಬಿಟ್ಟು ಮಂತ್ರಿ ಹೆಬ್ಬಾರರ ಸ್ವಜಾತಿ ಹವ್ಯಕ ಬ್ರಾಹ್ಮಣರೆ ಹೆಚ್ಚಿರುವ ಯಲ್ಲಾಪುರದಲ್ಲೇಕೆ ಪ್ರಶಾಂತ ಆಟ ಆರಂಭಿಸಿದ್ದಾರೆಂಬ ಒಗಟು ಒಡೆಯಲಾಗದೆ ರಾಜಕೀಯ ತಂತ್ರಜ್ಞರು ತಲೆ ಕೆರೆದುಕೊಳ್ಳುವಂತಾಗಿತ್ತು!

ದೇಶಪಾಂಡೆ

ಮಗನನ್ನು ಲೋಕಸಭಾ ಸದಸ್ಯ ಮಾಡಬೇಕೆಂಬ ದೊಡ್ಡ ಕನಸು ದೇಶಪಾಂಡೆಯವರದು. 2014ರ ಪಾರ್ಲಿಮೆಂಟ್ ಎಲೆಕ್ಷನ್‌ಗೆ ಮಗನನ್ನು ಆಖಾಡಕ್ಕಿಳಿಸಿದ್ದರು. ಆದರೆ ನಂಬಿದವರೆ ಕೈಕೊಟ್ಟು ಸೋಲಿಸಿದ್ದರು. ಹತಾಶನಾದ ಪ್ರಶಾಂತ್ ಮುಂಬೈನ ವಕೀಲಿ ವೃತ್ತಿಯಲ್ಲಿ ತೊಡಗಿಕೊಂಡು ಐದಾರು ವರ್ಷ ಜಿಲ್ಲೆಯತ್ತ ತಿರುಗಿಯೂ ನೋಡಲಿಲ್ಲ. 2019ರ ಚುನಾವಣೆ ಹುಸಾಬರಿಗೂ ಹೋಗಲಿಲ್ಲ. ಯಾವಾಗ ಹೆಬ್ಬಾರ್ ಬಿಜೆಪಿಯಿಂದ ಉಪಚುನಾವಣೆಗೆ ಸ್ಪರ್ಧಿಸಿದರೋ ಆಗ ಚುರುಕಾದ ಪ್ರಶಾಂತ್ ಹೆಚ್ಚೆಚ್ಚು ಯಲ್ಲಾಪುರ-ಮುಂಡಗೋಡಲ್ಲಿ ಕಾಣಿಸಿ ಕೊಳ್ಳತೊಡಗಿದರು. ಕೋವಿಡ್ ಸಂತ್ರಸ್ತರಿಗೆ ತನ್ನಜ್ಜನ ಹೆಸರಿನ ಟ್ರಸ್ಟ್ ವತಿಯಿಂದ ನೆರವಾಗುವ ನೆಪದಲ್ಲಿ ಹಳ್ಳಿ-ಹಳ್ಳಿ ಹೊಕ್ಕು ಹೊರಬರತೊಡಗಿದರು. ಯಲ್ಲಾಪುರದಿಂದ ಶಾಸಕನಾಗುವ ಇರಾದೆಯಿಂದಲೇ ನಿಧಾನವಾಗಿ ಕ್ಷೇತ್ರ ಹದಗೊಳಿಸಿಕೊಳ್ಳ ಹತ್ತಿದ್ದರು. ಕೇತ್ರ ಪುನರ್ ವಿಂಗಡಣೆಗೂ ಮೊದಲು ಈಗ ಯಲ್ಲಾಪುರದ ಜತೆಗಿರುವ ಮುಂಡಗೋಡು ಹಳಿಯಾಳ ಕ್ಷೇತ್ರದಲ್ಲಿತ್ತು. ಇಲ್ಲಿಂದ ದೇಶಪಾಂಡೆ ನಾಲ್ಕು ಸಲ ಆಯ್ಕೆಯಾಗಿದ್ದರು. ಹೀಗಾಗಿ ಮಂಡಗೋಡಿನಲ್ಲಿರುವ ತಂದೆಯ ಪ್ರಭಾವ ತನಗೆ ಅನುಕೂಲಕರವೆಂದು ಪ್ರಶಾಂತ ಲೆಕ್ಕಹಾಕಿದ್ದಾರೆ.

ಅಪ್ಪ-ಮಗ ತಮ್ಮ ಶತ್ರು ಹೆಬ್ಬಾರ್‌ಗೆ ಪಾಠ ಕಲಿಸಲು ಪ್ಲಾನ್ ಹಾಕಿದ್ದಾರೆಂಬ ಭಾವನೆ ಸಹಜವಾಗೆ ಮೂಡಿತ್ತು. ಮಂತ್ರಿ ಹೆಬ್ಬಾರ್‌ಗೂ ಕಿರಿಕಿರಿಯಾದರೂ ದೇಶಪಾಂಡೆ ಆ ರಿಸ್ಕ್ ತೆಗೆದುಕೊಳ್ಳಲಿಕ್ಕಿಲ್ಲವೆಂಬ ಸಮಾಧಾನದಲ್ಲಿದ್ದರು. ಆದರೆ ಸ್ವಕ್ಷೆತ್ರ ಹಳಿಯಾಳದಲ್ಲಾಗತ್ತಿರುವ ರಾಜಕೀಯ ಬದಲಾವಣೆಗಳು ಮತ್ತು ಹೆಬ್ಬಾರ್ ಕಾಂಗ್ರೆಸಲ್ಲಿದ್ದಾಗ ಭಟ್ಕಳ ಶಾಸಕನಾಗಿದ್ದ ಮಂಕಾಳ್ ವೈದ್ಯ, ಕಾರವಾರದ ಸತೀಶ್ ಸೈಲ್‌ರ ಜತೆ ಸೇರಿ ಕೆಡಿಸಿಸಿ ಸಿಂಡಿಕೇಟ್ [ಇವರೆಲ್ಲ ಅಂದು ಜಿಲ್ಲಾ ಮದ್ಯವರ್ತಿ ಬ್ಯಾಂಕ್-ಕೆಡಿಸಿಸಿ ನಿರ್ದೇಶಕರಾಗಿದ್ದರು] ಕಟ್ಟಿ ಕಾಡಿದ ಸೇಡು ತೀರಿಸಿಕೊಳ್ಳುವ ಹಠದಿಂದ ದೇಶಪಾಂಡೆಗೆ ಮಗನನ್ನು ಯಲ್ಲಾಪುರದಲ್ಲಿ ಅಶ್ವಮೇಧದ ಕುದುರೆಯಾಗಿ ಬಿಡಬೇಕಾಗಿ ಬಂತು! ಬಿಜೆಪಿ ಮಂತ್ರಿಯಾಗಿದ್ದರೂ ಈಗಲೂ ಸಹ ಹೆಬ್ಬಾರ್ ಕಾಂಗ್ರೆಸ್ ರಾಜಕಾರಣದಲ್ಲಿ ಕೈಯ್ಯಾಡಿಸುತ್ತ ತನ್ನ ವಿರುದ್ದ ಸಂಚು ಮಾಡುತ್ತಿದ್ದಾರರೆಂಬ ಸಂಶಯ ಕಾಡುತ್ತಿದೆಯಂದು ಹೆಬ್ಬಾರ್ ಹಳೆ ’ಸಿಂಡಿಕೇಟ್’ ಹಿಡಿದುಕೊಂಡು ಹೊಸ ಡಿಸಿಸಿ ಅಧ್ಯಕ್ಷ ದೇಶಪಾಂಡೆ ನಿಷ್ಟನಾಗದಂತೆ ನೋಡಿಕೊಳ್ಳುತ್ತಿದ್ದಾರೆಂದು ಹೇಳಲಾಗಿದೆ.

ಮಗನಿಗಾಗಿ ದೆಶಪಾಂಡೆ ಮೊದಲ ಆಯ್ಕೆ ಹಳಿಯಾಳವೇ ಆಗಿತ್ತು. ಆದರೆ ಅಲ್ಲಿ ಮಗನನ್ನು ಉತ್ತರಾಧಿಕಾರಿಯಾಗಿ ಪ್ರತಿಷ್ಟಾಪಿಸಲು ಈಗ ವೈರಿಯಾಗಿ ಬದಲಾಗಿರುವ ಹಲವು ವರ್ಷದ ನಿಷ್ಟಾವಂತ ಶಿಷ್ಯ ಎಮ್‌ಎಲ್‌ಸಿ ಶ್ರೀಕಾಂತ ಘೋಟನೇಕರ್ ಬಿಡುತ್ತಿಲ್ಲ. ಮರಾಠರು ಪ್ರಥಮ ಬಹು ಸಂಖ್ಯಾತರಾಗಿರುವ ಹಳಿಯಾಳದಲ್ಲಿ ದೇಶಪಾಂಡೆಯ ಕೊಂಕಣಿ [ಜಿಎಸ್‌ಬಿ] ಸಮುದಾಯ ಸೂಕ್ಮದರ್ಶಕದಲ್ಲಿ ನೋಡಬೇಕಾದಷ್ಟು ಸಣ್ಣದು! ದೇಶಪಾಂಡೆಗೆ ವಯಸ್ಸಾಗಿರುವುದರಿಂದ ತನಗೆ ಕ್ಷೇತ್ರ ಬಿಟ್ಟುಕೊಡುವಂತೆ ಮರಾಠ ಜಾತಿಯ ಘೋಟನೇಕರ್ ಕೇಳುತ್ತಿದ್ದಾರೆ. ಸಂದರ್ಭ ಸಿಕ್ಕಾಗೆಲ್ಲ ದೇಶಪಾಂಡೆಯನ್ನು ಬಹಿರಂಗವಾಗೆ ಜರೆಯುತ್ತಿದ್ದಾರೆ. ಕೆಲವು ದಿನಗಳ ಹಿಂದೆ ಡಿಕೆಶಿ ಹುಬ್ಬಳ್ಳಿಯಲ್ಲಿ ಉತ್ತರ ಕನ್ನಡದ ಕಾಂಗ್ರೆಸ್ ಕಾರ್ಯಕರ್ತರ ಸಭೆ ಕರೆದಾಗ ದೇಶಪಾಂಡೆ ಎದುರೇ ಘೋಟನೇಕರ್ ಟಿಕೆಟ್ ಕ್ಲೇಮ್ ಮಾಡಿದ್ದರು.

ಶಿವರಾಮ್ ಹೆಬ್ಬಾರ್

ಸ್ಥಳೀಯ ಸಂಸ್ಥೆಯಿಂದ ಎಮ್‌ಎಲ್‌ಸಿಯಾಗಿರುವ ಘೋಟನೇಕರ್ ಈ ಬಾರಿ ಅಸೆಂಬ್ಲಿ ಸ್ಪರ್ಧೆಗೆ ಹಠದಿಂದ ಅವಕಾಶ ಕೇಳುತ್ತಿರುವುದಕ್ಕೆ ಎರಡು ಕಾರಣವಿದೆ. ಒಂದು ದೇಶಪಾಂಡೆ ಮತ್ತೆ ಪರಿಷತ್ ಸ್ಪರ್ದೆಗೆ ಟಿಕೆಟ್ ಕೊಡಿಸಲು ಪ್ರಯತ್ನಿಸುವುದಿಲ್ಲವೆಂಬುದು. ಇನ್ನೊಂದು ಸ್ಥಳೀಯ ಸಂಸ್ಥೆ ಸದಸ್ಯ ಮತದಾರರು ಕಾಂಗ್ರೆಸ್‌ಗಿಂತ ಬಿಜೆಪಿಯಲ್ಲಿ ತುಸು ಹೆಚ್ಚೇ ಇರುವುದರಿಂದ ಗೆಲ್ಲುವುದು ಕಷ್ಟವೆಂಬುದು ಅವರ ಲೆಕ್ಕಾಚಾರ. ಪರಿಷತ್ ಚುನಾವಣೆ ಬೆನ್ನಿಗೆ ವಿಧಾನಸಭೆ ಎಲೆಕ್ಷನ್ ಬರುವುದರಿಂದ ಘೋಟನೇಕರ್ ಪ್ರತಿ ಬಾರಿಯೂ ಇಂಥದೇ ಒತ್ತಡ ತಂತ್ರಗಾರಿಕೆ ನಡೆಸುತ್ತಾರೆಂದು ದೇಶಪಾಂಡೆ, ಘೋಟನೇಕರ್ “ಜಗಳ್”ಬಂದಿ ಬಲ್ಲವರು ಹೇಳುತ್ತಾರೆ. ಒಂದಂತೂ ಖರೆ ಹೈಕಮಾಂಡ್ ಮಟ್ಟದಲ್ಲಿ ಬೆಳೆದಿರುವ ದೇಶಪಾಂಡೆಗೆ ಟಿಕೆಟ್ ತಪ್ಪಿಸುವ ತಾಕತ್ತು ಘೋಟನೇಕರ್‌ಗೆ ಇಲ್ಲ. ಬಂಡಾಯವೆದ್ದು ಸ್ಪರ್ಧಿಸಿ ದೇಶಪಾಂಡೆಗೆ ನಡುಕ ಮೂಡಿಸಬಹುದಷ್ಟೆ ಎಂದು ವಿಶ್ಲೇಷಿಸಲಾಗುತ್ತಿದೆ.

ಈಗ ಬಿಜೆಪಿಯಲ್ಲಿರುವ ಮಾಜಿ ಶಾಸಕ ಸುನೀಲ್ ಹೆಗ್ಡೆ ಕಾಂಗ್ರೆಸ್‌ನಿಂದ ಹೊರಬೀಳುವಾಗ ಇಂಥದೆ ಪರಿಸ್ಥಿತಿ ಉದ್ಭವವಾಗಿತ್ತು. ಸುನೀಲ್ ತಂದೆ ವಿ.ಡಿ.ಹೆಗ್ಡೆ ಒತ್ತಡ ಹಾಕಿಯೇ ಎಮ್‌ಎಲ್‌ಸಿ ಆಗಿದ್ದರು. ಎರಡನೇ ಬಾರಿ ವಿ.ಡಿ ಹೆಗ್ಡೆಗೆ ದೇಶಪಾಂಡೆ ಅವಕಾಶ ಕೊಡಲಿಲ್ಲ. ಕೆರಳಿದ ವಿ.ಡಿ ಹೆಗ್ಡೆ ಮಗ ಸುನೀಲ್ ಸಮೇತ ಜೆಡಿಎಸ್ ಸೇರಿದ್ದರು. ದೇಶಪಾಂಡೆ ಯಾವ ಪಕ್ಷದಲ್ಲೆ ಇರಲಿ ಎಮ್‌ಎಲ್‌ಸಿಯಾಗಲು ಯಾರಿಗೂ ಎರಡನೇ ಅವಕಾಶ ಕೊಟ್ಟಿದ್ದೆ ಇಲ್ಲ. ಆದರೆ ಘೋಟನೇಕರ್ ಮಾತ್ರ ಗುರುವನ್ನು ಬಗ್ಗಿಸಿ ಎರಡನೇ ಛಾನ್ಸ್ ಗಿಟ್ಟಿಸಿದ್ದರು. ದೇಶಪಾಂಡೆ ಕ್ಷೇತ್ರದಲ್ಲಿ ದುರ್ಬಲಗೊಂಡಿದ್ದೆ ಇದಕ್ಕೆ ಕಾರಣವಾಗಿತ್ತು. ಈಗ ದೇಶಪಾಂಡೆಗೆ ಹಳೆ ಸಂದಿಗ್ಧ ಎದುರಾಗಿದೆ. ದೇಶಪಾಂಡೆ ಮಣಿಯುವರಾ? ಘೋಟನೇಕರ್ ತಿರುಗಿ ಬೀಳುವರಾ? ದೇಶಪಾಂಡೆ, ಘೋಟನೇಕರ್, ಸುನೀಲ್ ಹೆಗ್ಡೆ ಮಧ್ಯೆ ತ್ರಿಕೋನ ಕಾಳಗವಾದರೆ ಯಾರು ಬೇಕಾದರೂ ಗೆಲ್ಲಬಹುದೆಂಬ ಚರ್ಚೆ ಜಿಲ್ಲೆಯ ರಾಜಕೀಯ ಪಡಸಾಲೆಯಲ್ಲಿ ಶುರುಹತ್ತಿಕೊಂಡಿದೆ.


ಇದನ್ನೂ ಓದಿ: ನೆಹರು ಕುರಿತು ಸಿ.ಟಿ ರವಿ ಅವಹೇಳನಕಾರಿ ಹೇಳಿಕೆಗೆ ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿ ಪರೋಕ್ಷ ಖಂಡನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...