Homeಕರ್ನಾಟಕಉತ್ತರ ಕನ್ನಡ: ಹೆಬ್ಬಾರ್‌ರ ಯಲ್ಲಾಪುರದಿಂದ ಸ್ಪರ್ಧೆಗೆ ದೇಶಪಾಂಡೆ ಮಗ ಸಜ್ಜು

ಉತ್ತರ ಕನ್ನಡ: ಹೆಬ್ಬಾರ್‌ರ ಯಲ್ಲಾಪುರದಿಂದ ಸ್ಪರ್ಧೆಗೆ ದೇಶಪಾಂಡೆ ಮಗ ಸಜ್ಜು

- Advertisement -
- Advertisement -

ಉತ್ತರ ಕನ್ನಡ ರಾಜಕೀಯದ ಹಳೆ ಹುಲಿ ರಘುನಾಥ್ ವಿಶ್ವನಾಥರಾವ್ ದೇಶಪಾಂಡೆಯ ಉತ್ತರಾಧಿಕಾರಿ ಎಂದೆ ಬಿಂಬಿತವಾಗಿರುವ ಅವರ ಪುತ್ರ ಪ್ರಶಾಂತ ದೇಶಪಾಂಡೆ ತಾನು ಯಲ್ಲಾಪುರದಿಂದ ಅಸೆಂಬ್ಲಿಗೆ ಸ್ಪರ್ಧಿಸಲು ಸಿದ್ಧನೆಂದು ಹೇಳಿದ್ದಾರೆ. ಈ ಮೂಲಕ ಜಿಲ್ಲೆಯ ರಾಜಕೀಯ ಪಡಸಾಲೆಯಲ್ಲಿ ನಾನಾ ನಮೂನೆಯ ಸಮೀಕರಣದ ಸಾಧ್ಯತೆಯ ಚರ್ಚೆ ಶುರುವಾಗಿಬಿಟ್ಟಿದೆ.

ಪ್ರಶಾಂತ್ ದೇಶಪಾಂಡೆ ಕಳೆದೊಂದು ವರ್ಷದಿಂದ ತುಂಬ ಆಸಕ್ತಿಯಿಂದ ಯಲ್ಲಾಪುರ-ಮುಂಡಗೋಡು ವಿಧಾನಸಭಾ ಕ್ಷೇತ್ರದಲ್ಲಿ ಓಡಾಡಿಕೊಂಡಿದ್ಧಾರೆ. ತಾನು ಕಾಂಗ್ರೆಸ್‌ನಲ್ಲಿದ್ದರೆ ದೇಶಪಾಂಡೆ ತನಗೆ ಮಂತ್ರಿಯಾಗಲು ಬಿಡುವುದಿಲ್ಲ… ತನ್ನ ಏಳ್ಗೆಗೆ ದೇಶಪಾಂಡೆ ಅಡ್ಡಗಾಲು ಹಾಕುತ್ತಾರೆಂಬ ಅರ್ಥದ ಮಾತಾಡಿ ಬಿಜೆಪಿ ಸೇರಿ ಸಚಿವರಾದ ಶಿವರಾಮ್ ಹೆಬ್ಬಾರ್ ರವರ ತವರು ಕ್ಷೇತ್ರ ಯಲ್ಲಾಪುರ. ಅಪ್ಪ ನಾಲ್ಕು ದಶಕದಿಂದ ಪ್ರತಿನಿಧಿಸುತ್ತಿರುವ ಹಳಿಯಾಳ ಬಿಟ್ಟು ಮಂತ್ರಿ ಹೆಬ್ಬಾರರ ಸ್ವಜಾತಿ ಹವ್ಯಕ ಬ್ರಾಹ್ಮಣರೆ ಹೆಚ್ಚಿರುವ ಯಲ್ಲಾಪುರದಲ್ಲೇಕೆ ಪ್ರಶಾಂತ ಆಟ ಆರಂಭಿಸಿದ್ದಾರೆಂಬ ಒಗಟು ಒಡೆಯಲಾಗದೆ ರಾಜಕೀಯ ತಂತ್ರಜ್ಞರು ತಲೆ ಕೆರೆದುಕೊಳ್ಳುವಂತಾಗಿತ್ತು!

ದೇಶಪಾಂಡೆ

ಮಗನನ್ನು ಲೋಕಸಭಾ ಸದಸ್ಯ ಮಾಡಬೇಕೆಂಬ ದೊಡ್ಡ ಕನಸು ದೇಶಪಾಂಡೆಯವರದು. 2014ರ ಪಾರ್ಲಿಮೆಂಟ್ ಎಲೆಕ್ಷನ್‌ಗೆ ಮಗನನ್ನು ಆಖಾಡಕ್ಕಿಳಿಸಿದ್ದರು. ಆದರೆ ನಂಬಿದವರೆ ಕೈಕೊಟ್ಟು ಸೋಲಿಸಿದ್ದರು. ಹತಾಶನಾದ ಪ್ರಶಾಂತ್ ಮುಂಬೈನ ವಕೀಲಿ ವೃತ್ತಿಯಲ್ಲಿ ತೊಡಗಿಕೊಂಡು ಐದಾರು ವರ್ಷ ಜಿಲ್ಲೆಯತ್ತ ತಿರುಗಿಯೂ ನೋಡಲಿಲ್ಲ. 2019ರ ಚುನಾವಣೆ ಹುಸಾಬರಿಗೂ ಹೋಗಲಿಲ್ಲ. ಯಾವಾಗ ಹೆಬ್ಬಾರ್ ಬಿಜೆಪಿಯಿಂದ ಉಪಚುನಾವಣೆಗೆ ಸ್ಪರ್ಧಿಸಿದರೋ ಆಗ ಚುರುಕಾದ ಪ್ರಶಾಂತ್ ಹೆಚ್ಚೆಚ್ಚು ಯಲ್ಲಾಪುರ-ಮುಂಡಗೋಡಲ್ಲಿ ಕಾಣಿಸಿ ಕೊಳ್ಳತೊಡಗಿದರು. ಕೋವಿಡ್ ಸಂತ್ರಸ್ತರಿಗೆ ತನ್ನಜ್ಜನ ಹೆಸರಿನ ಟ್ರಸ್ಟ್ ವತಿಯಿಂದ ನೆರವಾಗುವ ನೆಪದಲ್ಲಿ ಹಳ್ಳಿ-ಹಳ್ಳಿ ಹೊಕ್ಕು ಹೊರಬರತೊಡಗಿದರು. ಯಲ್ಲಾಪುರದಿಂದ ಶಾಸಕನಾಗುವ ಇರಾದೆಯಿಂದಲೇ ನಿಧಾನವಾಗಿ ಕ್ಷೇತ್ರ ಹದಗೊಳಿಸಿಕೊಳ್ಳ ಹತ್ತಿದ್ದರು. ಕೇತ್ರ ಪುನರ್ ವಿಂಗಡಣೆಗೂ ಮೊದಲು ಈಗ ಯಲ್ಲಾಪುರದ ಜತೆಗಿರುವ ಮುಂಡಗೋಡು ಹಳಿಯಾಳ ಕ್ಷೇತ್ರದಲ್ಲಿತ್ತು. ಇಲ್ಲಿಂದ ದೇಶಪಾಂಡೆ ನಾಲ್ಕು ಸಲ ಆಯ್ಕೆಯಾಗಿದ್ದರು. ಹೀಗಾಗಿ ಮಂಡಗೋಡಿನಲ್ಲಿರುವ ತಂದೆಯ ಪ್ರಭಾವ ತನಗೆ ಅನುಕೂಲಕರವೆಂದು ಪ್ರಶಾಂತ ಲೆಕ್ಕಹಾಕಿದ್ದಾರೆ.

ಅಪ್ಪ-ಮಗ ತಮ್ಮ ಶತ್ರು ಹೆಬ್ಬಾರ್‌ಗೆ ಪಾಠ ಕಲಿಸಲು ಪ್ಲಾನ್ ಹಾಕಿದ್ದಾರೆಂಬ ಭಾವನೆ ಸಹಜವಾಗೆ ಮೂಡಿತ್ತು. ಮಂತ್ರಿ ಹೆಬ್ಬಾರ್‌ಗೂ ಕಿರಿಕಿರಿಯಾದರೂ ದೇಶಪಾಂಡೆ ಆ ರಿಸ್ಕ್ ತೆಗೆದುಕೊಳ್ಳಲಿಕ್ಕಿಲ್ಲವೆಂಬ ಸಮಾಧಾನದಲ್ಲಿದ್ದರು. ಆದರೆ ಸ್ವಕ್ಷೆತ್ರ ಹಳಿಯಾಳದಲ್ಲಾಗತ್ತಿರುವ ರಾಜಕೀಯ ಬದಲಾವಣೆಗಳು ಮತ್ತು ಹೆಬ್ಬಾರ್ ಕಾಂಗ್ರೆಸಲ್ಲಿದ್ದಾಗ ಭಟ್ಕಳ ಶಾಸಕನಾಗಿದ್ದ ಮಂಕಾಳ್ ವೈದ್ಯ, ಕಾರವಾರದ ಸತೀಶ್ ಸೈಲ್‌ರ ಜತೆ ಸೇರಿ ಕೆಡಿಸಿಸಿ ಸಿಂಡಿಕೇಟ್ [ಇವರೆಲ್ಲ ಅಂದು ಜಿಲ್ಲಾ ಮದ್ಯವರ್ತಿ ಬ್ಯಾಂಕ್-ಕೆಡಿಸಿಸಿ ನಿರ್ದೇಶಕರಾಗಿದ್ದರು] ಕಟ್ಟಿ ಕಾಡಿದ ಸೇಡು ತೀರಿಸಿಕೊಳ್ಳುವ ಹಠದಿಂದ ದೇಶಪಾಂಡೆಗೆ ಮಗನನ್ನು ಯಲ್ಲಾಪುರದಲ್ಲಿ ಅಶ್ವಮೇಧದ ಕುದುರೆಯಾಗಿ ಬಿಡಬೇಕಾಗಿ ಬಂತು! ಬಿಜೆಪಿ ಮಂತ್ರಿಯಾಗಿದ್ದರೂ ಈಗಲೂ ಸಹ ಹೆಬ್ಬಾರ್ ಕಾಂಗ್ರೆಸ್ ರಾಜಕಾರಣದಲ್ಲಿ ಕೈಯ್ಯಾಡಿಸುತ್ತ ತನ್ನ ವಿರುದ್ದ ಸಂಚು ಮಾಡುತ್ತಿದ್ದಾರರೆಂಬ ಸಂಶಯ ಕಾಡುತ್ತಿದೆಯಂದು ಹೆಬ್ಬಾರ್ ಹಳೆ ’ಸಿಂಡಿಕೇಟ್’ ಹಿಡಿದುಕೊಂಡು ಹೊಸ ಡಿಸಿಸಿ ಅಧ್ಯಕ್ಷ ದೇಶಪಾಂಡೆ ನಿಷ್ಟನಾಗದಂತೆ ನೋಡಿಕೊಳ್ಳುತ್ತಿದ್ದಾರೆಂದು ಹೇಳಲಾಗಿದೆ.

ಮಗನಿಗಾಗಿ ದೆಶಪಾಂಡೆ ಮೊದಲ ಆಯ್ಕೆ ಹಳಿಯಾಳವೇ ಆಗಿತ್ತು. ಆದರೆ ಅಲ್ಲಿ ಮಗನನ್ನು ಉತ್ತರಾಧಿಕಾರಿಯಾಗಿ ಪ್ರತಿಷ್ಟಾಪಿಸಲು ಈಗ ವೈರಿಯಾಗಿ ಬದಲಾಗಿರುವ ಹಲವು ವರ್ಷದ ನಿಷ್ಟಾವಂತ ಶಿಷ್ಯ ಎಮ್‌ಎಲ್‌ಸಿ ಶ್ರೀಕಾಂತ ಘೋಟನೇಕರ್ ಬಿಡುತ್ತಿಲ್ಲ. ಮರಾಠರು ಪ್ರಥಮ ಬಹು ಸಂಖ್ಯಾತರಾಗಿರುವ ಹಳಿಯಾಳದಲ್ಲಿ ದೇಶಪಾಂಡೆಯ ಕೊಂಕಣಿ [ಜಿಎಸ್‌ಬಿ] ಸಮುದಾಯ ಸೂಕ್ಮದರ್ಶಕದಲ್ಲಿ ನೋಡಬೇಕಾದಷ್ಟು ಸಣ್ಣದು! ದೇಶಪಾಂಡೆಗೆ ವಯಸ್ಸಾಗಿರುವುದರಿಂದ ತನಗೆ ಕ್ಷೇತ್ರ ಬಿಟ್ಟುಕೊಡುವಂತೆ ಮರಾಠ ಜಾತಿಯ ಘೋಟನೇಕರ್ ಕೇಳುತ್ತಿದ್ದಾರೆ. ಸಂದರ್ಭ ಸಿಕ್ಕಾಗೆಲ್ಲ ದೇಶಪಾಂಡೆಯನ್ನು ಬಹಿರಂಗವಾಗೆ ಜರೆಯುತ್ತಿದ್ದಾರೆ. ಕೆಲವು ದಿನಗಳ ಹಿಂದೆ ಡಿಕೆಶಿ ಹುಬ್ಬಳ್ಳಿಯಲ್ಲಿ ಉತ್ತರ ಕನ್ನಡದ ಕಾಂಗ್ರೆಸ್ ಕಾರ್ಯಕರ್ತರ ಸಭೆ ಕರೆದಾಗ ದೇಶಪಾಂಡೆ ಎದುರೇ ಘೋಟನೇಕರ್ ಟಿಕೆಟ್ ಕ್ಲೇಮ್ ಮಾಡಿದ್ದರು.

ಶಿವರಾಮ್ ಹೆಬ್ಬಾರ್

ಸ್ಥಳೀಯ ಸಂಸ್ಥೆಯಿಂದ ಎಮ್‌ಎಲ್‌ಸಿಯಾಗಿರುವ ಘೋಟನೇಕರ್ ಈ ಬಾರಿ ಅಸೆಂಬ್ಲಿ ಸ್ಪರ್ಧೆಗೆ ಹಠದಿಂದ ಅವಕಾಶ ಕೇಳುತ್ತಿರುವುದಕ್ಕೆ ಎರಡು ಕಾರಣವಿದೆ. ಒಂದು ದೇಶಪಾಂಡೆ ಮತ್ತೆ ಪರಿಷತ್ ಸ್ಪರ್ದೆಗೆ ಟಿಕೆಟ್ ಕೊಡಿಸಲು ಪ್ರಯತ್ನಿಸುವುದಿಲ್ಲವೆಂಬುದು. ಇನ್ನೊಂದು ಸ್ಥಳೀಯ ಸಂಸ್ಥೆ ಸದಸ್ಯ ಮತದಾರರು ಕಾಂಗ್ರೆಸ್‌ಗಿಂತ ಬಿಜೆಪಿಯಲ್ಲಿ ತುಸು ಹೆಚ್ಚೇ ಇರುವುದರಿಂದ ಗೆಲ್ಲುವುದು ಕಷ್ಟವೆಂಬುದು ಅವರ ಲೆಕ್ಕಾಚಾರ. ಪರಿಷತ್ ಚುನಾವಣೆ ಬೆನ್ನಿಗೆ ವಿಧಾನಸಭೆ ಎಲೆಕ್ಷನ್ ಬರುವುದರಿಂದ ಘೋಟನೇಕರ್ ಪ್ರತಿ ಬಾರಿಯೂ ಇಂಥದೇ ಒತ್ತಡ ತಂತ್ರಗಾರಿಕೆ ನಡೆಸುತ್ತಾರೆಂದು ದೇಶಪಾಂಡೆ, ಘೋಟನೇಕರ್ “ಜಗಳ್”ಬಂದಿ ಬಲ್ಲವರು ಹೇಳುತ್ತಾರೆ. ಒಂದಂತೂ ಖರೆ ಹೈಕಮಾಂಡ್ ಮಟ್ಟದಲ್ಲಿ ಬೆಳೆದಿರುವ ದೇಶಪಾಂಡೆಗೆ ಟಿಕೆಟ್ ತಪ್ಪಿಸುವ ತಾಕತ್ತು ಘೋಟನೇಕರ್‌ಗೆ ಇಲ್ಲ. ಬಂಡಾಯವೆದ್ದು ಸ್ಪರ್ಧಿಸಿ ದೇಶಪಾಂಡೆಗೆ ನಡುಕ ಮೂಡಿಸಬಹುದಷ್ಟೆ ಎಂದು ವಿಶ್ಲೇಷಿಸಲಾಗುತ್ತಿದೆ.

ಈಗ ಬಿಜೆಪಿಯಲ್ಲಿರುವ ಮಾಜಿ ಶಾಸಕ ಸುನೀಲ್ ಹೆಗ್ಡೆ ಕಾಂಗ್ರೆಸ್‌ನಿಂದ ಹೊರಬೀಳುವಾಗ ಇಂಥದೆ ಪರಿಸ್ಥಿತಿ ಉದ್ಭವವಾಗಿತ್ತು. ಸುನೀಲ್ ತಂದೆ ವಿ.ಡಿ.ಹೆಗ್ಡೆ ಒತ್ತಡ ಹಾಕಿಯೇ ಎಮ್‌ಎಲ್‌ಸಿ ಆಗಿದ್ದರು. ಎರಡನೇ ಬಾರಿ ವಿ.ಡಿ ಹೆಗ್ಡೆಗೆ ದೇಶಪಾಂಡೆ ಅವಕಾಶ ಕೊಡಲಿಲ್ಲ. ಕೆರಳಿದ ವಿ.ಡಿ ಹೆಗ್ಡೆ ಮಗ ಸುನೀಲ್ ಸಮೇತ ಜೆಡಿಎಸ್ ಸೇರಿದ್ದರು. ದೇಶಪಾಂಡೆ ಯಾವ ಪಕ್ಷದಲ್ಲೆ ಇರಲಿ ಎಮ್‌ಎಲ್‌ಸಿಯಾಗಲು ಯಾರಿಗೂ ಎರಡನೇ ಅವಕಾಶ ಕೊಟ್ಟಿದ್ದೆ ಇಲ್ಲ. ಆದರೆ ಘೋಟನೇಕರ್ ಮಾತ್ರ ಗುರುವನ್ನು ಬಗ್ಗಿಸಿ ಎರಡನೇ ಛಾನ್ಸ್ ಗಿಟ್ಟಿಸಿದ್ದರು. ದೇಶಪಾಂಡೆ ಕ್ಷೇತ್ರದಲ್ಲಿ ದುರ್ಬಲಗೊಂಡಿದ್ದೆ ಇದಕ್ಕೆ ಕಾರಣವಾಗಿತ್ತು. ಈಗ ದೇಶಪಾಂಡೆಗೆ ಹಳೆ ಸಂದಿಗ್ಧ ಎದುರಾಗಿದೆ. ದೇಶಪಾಂಡೆ ಮಣಿಯುವರಾ? ಘೋಟನೇಕರ್ ತಿರುಗಿ ಬೀಳುವರಾ? ದೇಶಪಾಂಡೆ, ಘೋಟನೇಕರ್, ಸುನೀಲ್ ಹೆಗ್ಡೆ ಮಧ್ಯೆ ತ್ರಿಕೋನ ಕಾಳಗವಾದರೆ ಯಾರು ಬೇಕಾದರೂ ಗೆಲ್ಲಬಹುದೆಂಬ ಚರ್ಚೆ ಜಿಲ್ಲೆಯ ರಾಜಕೀಯ ಪಡಸಾಲೆಯಲ್ಲಿ ಶುರುಹತ್ತಿಕೊಂಡಿದೆ.


ಇದನ್ನೂ ಓದಿ: ನೆಹರು ಕುರಿತು ಸಿ.ಟಿ ರವಿ ಅವಹೇಳನಕಾರಿ ಹೇಳಿಕೆಗೆ ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿ ಪರೋಕ್ಷ ಖಂಡನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...