Homeಕರ್ನಾಟಕಉತ್ತರ ಕನ್ನಡ: ವಿಭಿನ್ನ ಜನ - ಜಾತಿ: ವೈವಿದ್ಯ ಭಾಷೆ

ಉತ್ತರ ಕನ್ನಡ: ವಿಭಿನ್ನ ಜನ – ಜಾತಿ: ವೈವಿದ್ಯ ಭಾಷೆ

ಬುಡಕಟ್ಟು ಹಾಲಕ್ಕಿ ಒಕ್ಕಲಿಗರ ಕನ್ನಡದಲ್ಲಿ ನೆಲಮೂಲದ ಸಂಸ್ಕೃತಿಯ ಧ್ವನಿಯಿದೆ. ಮುಗ್ಧತೆ-ನಿಯತ್ತು ಮತ್ತು ಶ್ರಮ ಸಂಸ್ಕೃತಿಯ ಈ ಜನಾಂಗ ಉತ್ತರ ಕನ್ನಡದ ಕರಾವಳಿಗುಂಟದ ಕಾಡಿನಂಚಿನಲ್ಲಿ ಹೆಚ್ಚಿದೆ.

- Advertisement -
- Advertisement -

ಭೋರ್ಗರೆವ ಅರಬ್ಬೀಸಮುದ್ರಕ್ಕೆ ಸಮಾನಾಂತರವಾಗಿ ಹಬ್ಬಿರುವ ಹಸಿರು ಸಹ್ಯಾದ್ರಿಗಿರಿ ಶ್ರೇಣಿಯ ಮಡಿಲಲ್ಲಿರುವ ಉತ್ತರಕನ್ನಡ ಅಸಂಖ್ಯ ಜನ, ಜಾತಿ ಮತ್ತು ವೈವಿಧ್ಯಮಯ ಭಾಷೆಯ ನೆಲೆವೀಡು. ಅನನ್ಯ ಪ್ರಕೃತಿ ಸೊಬಗು ಮತ್ತು ಅಪಾರ ನೈಸರ್ಗಿಕ ಸಂಪತ್ತಿನ ಈ ಜಿಲ್ಲೆ ಭೌಗೋಳಿಕವಾಗಿಯೂ ವಿಭಿನ್ನ. ಕರಾವಳಿ, ಮಲೆನಾಡು ಮತ್ತು ಅರೆಬಯಲು ಸೀಮೆ ಪ್ರದೇಶದ ಉತ್ತರ ಕನ್ನಡದಲ್ಲಿರುವಷ್ಟು ಜಾತಿ-ಜನಾಂಗ ಹಾಗೂ ಭಾಷೆ ಬಹುಶಃ ದೇಶದ ಬೇರೆಲ್ಲಿಯೂ ಕಾಣಿಸದೆಂಬ ವಾದವೂ ಇದೆ. ಬರೋಬ್ಬರಿ ನಾಲ್ಕು ಗೋವಾ ರಾಜ್ಯಕ್ಕೆ ಸಮನಾಗಿರುವ ಉತ್ತರ ಕನ್ನಡದಲ್ಲಿ ಹದಿನೈದೂವರೆ ಲಕ್ಷದಷ್ಟು ಜನಸಂಖ್ಯೆಯಿದೆ.

ಒಂದು ಅಂದಾಜಿನಂತೆ ಶೇಕಡಾ 55.50ರಷ್ಟು ಮಂದಿಗೆ ಕನ್ನಡ ಮಾತೃಭಾಷೆ. ಕೊಂಕಣಿಯನ್ನು ಶೇ.20ರಷ್ಟು ಜನರಾಡುತ್ತಾರೆ. ಶೇ.11.83ರಷ್ಟು ಜನರದು ಉರ್ದುದಲ್ಲಿ ಸಂವಹನ ನಡೆಸುತ್ತಾರೆ. ನವಾಯಿತಿ, ತೆಲಗು, ಲಂಬಾಣಿ, ಬ್ಯಾರಿ, ಗುಜರಾತಿ ಭಾಷೆಯವರೂ ಇಲ್ಲಿದ್ದಾರೆ. ಕನ್ನಡ ಮತ್ತು ಕೊಂಕಣಿ ಎರಡು ಪ್ರಮುಖ ಭಾಷೆ. ಈ ಎರಡೂ ಭಾಷೆಯಲ್ಲಿ ವ್ಯವಹರಿಸುವ ಒಂದೊಂದು ಜಾತಿಯದು ಒಂದೊಂದು ಧ್ವನಿ-ಶೈಲಿ. ಮೇಲ್ವರ್ಗದ ಬ್ರಾಹ್ಮಣರು ಮತ್ತು ಕೊಂಕಣಿಗರು ಬಳಸುವ ಕನ್ನಡ ಹಾಗೂ ಕೊಂಕಣಿ ಶಿಷ್ಟ ಭಾಷೆ ಎನ್ನುವವರು. ಹಿಂದುಳಿದವರು-ಬುಡಕಟ್ಟು ಜನಾಂಗದವರು ಆಡುವ ಕನ್ನಡ-ಕೊಂಕಣಿಯನ್ನು ಕಚ್ಚಾ ಅಂತಾರೆ. ಇದು ಪುರೋಹಿತಶಾಹಿ ಪರಿಕಲ್ಪನೆಯ ಕುತರ್ಕ. ಒಟ್ಟಿನಲ್ಲಿ ಉತ್ತರ ಕನ್ನಡ ನಾನಾ ನಮೂನೆಯ ಕೊಂಕಣಿ-ಕನ್ನಡಕ್ಕೆ ಅದರದೇ ಆದ ಸೊಗಡು-ಪ್ರಬಲ ಸಂವಹನ ಶಕ್ತಿಯಿದೆ! ಕುಲಶಾಸ್ತ್ರೀಯ ತತ್ವವಿದೆ!!

ಕಾರವಾರ, ಜೋಯಿಡಾ, ಹಳಿಯಾಳ ಮತ್ತು ದಾಂಡೇಲಿ ತಾಲ್ಲೂಕಲ್ಲಿ ಪಕ್ಕದ ಗೋವಾದ ಕೊಂಕಣಿ ಪ್ರಭಾವವಿದೆ. ಇವತ್ತಿಗೂ ಜಿಲ್ಲಾಕೇಂದ್ರ ಕಾರವಾರದಲ್ಲಿ ಕೊಂಕಣಿಯೇ ಪ್ರಮುಖ ವ್ಯಾವಹಾರಿಕ ಮತ್ತು ಮನೆ ಭಾಷೆ. ಕನ್ನಡ ಅರ್ಥವಾಗದವರೂ ಇಲ್ಲಿದ್ದಾರೆ. ಜೋಯಿಡಾದ ಕಾಡು-ಮೇಡುಗಳ ಬುಡಕಟ್ಟು ಗೌಳಿ-ಕಣವಿ-ಕುಂಬ್ರಿ ಮರಾಠಿಗಳಲ್ಲಿ ಕನ್ನಡದ ಪರಿಚಯ ಇಲ್ಲದವರಿದ್ದಾರೆ. ಕನ್ನಡ ಅಭಿವೃದ್ಧಿ ಮಂಡಳಿ, ಗಡಿ ಅಭಿವೃದ್ಧಿ ಮಂಡಳಿಗಳ ಪ್ರಭೃತಿಗಳಿಂದಲೂ ಇವರಿಗೆಲ್ಲಾ ಕನ್ನಡ ಕಲಿಸಲಾಗಿಲ್ಲ ಎಂಬುದು ದೊಡ್ಡ ದುರಂತ. ಕರಾವಳಿ ಮತ್ತು ಘಟ್ಟದ ಮೇಲಿನ ಹವ್ಯಕರ ಭಾಷೆಯಲ್ಲಿ ಸಣ್ಣ ವ್ಯತ್ಯಾಸವಿದೆ. ಆದರೆ ಘಟ್ಟದ ಬ್ರಾಹ್ಮಣರ ಕನ್ನಡ, ನಾಡವರ ಕನ್ನಡದಷ್ಟೇ ಕಸುವು. ಬುಡಕಟ್ಟು, ಹಾಲಕ್ಕಿ ಒಕ್ಕಲಿಗರ, ದಲಿತ ಮುಕ್ರಿಗಳ ಕನ್ನಡಕ್ಕೂ ವ್ಯತ್ಯಾಸವಿದೆ. ಘಟ್ಟದ ಕೆಳಗಿನ ಹಾಗೂ ಘಟ್ಟದ ಮೇಲಿನ ದೀವರ ಭಾಷೆಯಲ್ಲೂ ಪ್ರತ್ಯೇಕ “ಧ್ವನಿ”ಗಳಿವೆ. ಸೇರುಗಾರ, ಸೊನಗಾರ, ಭಂಡಾರಿ, ಕೊಂಕಣಿ ಮರಾಠ, ಕೋಮಾರಪಂತ… ಹೀಗೆ ಬೇರೆ ಬೇರೆ ಜಾತಿಯವರ ಕೊಂಕಣಿ ಬಳಕೆಯಲ್ಲಿ ವಿಭಿನ್ನತೆಯಿದೆ. ಶಬ್ದಗಳಲ್ಲೂ ವ್ಯತ್ಯಾಸವಿದೆ; ಆಡುವ ಶೈಲಿಯಲ್ಲಿ ಬದಲಾವಣೆಯಿದೆ.

ಕ್ರಿಶ್ಚಿಯನ್ ಕೊಂಕಣಿಯ ಛಾಪು ವಿಶಿಷ್ಟ. ಆ ಭಾಷೆ ಕೇಳಿದಾಕ್ಷಣವೇ ಕ್ರಿಶ್ಚಿಯನ್ನರನ್ನು ಗುರುತಿಸಿಬಿಡಬಹುದು. ಮುಸ್ಲಿಮರು ಉರ್ದು ಮಾತಾಡಿದರೆ, ಭಟ್ಕಳ ಮತ್ತು ಹೊನ್ನಾವರದ ಹೊಳೆಸಾಲಿನಲ್ಲಿರುವ ನವಾಯತ ಮುಸ್ಲಿಮರು “ನವಾಯಿತಿ” ಮಾತಾಡುತ್ತಾರೆ. ಇದು ಕೊಂಕಣಿಮಿಶ್ರಿತ ಭಾಷೆ. ಕೇರಳ-ಮಂಗಳೂರು ಕಡೆಯಿಂದ ವಲಸೆಬಂದ ಬ್ಯಾರಿಗಳೂ ಕರಾವಳಿಯಲ್ಲಿದ್ದಾರೆ. ಉತ್ತರ ಕನ್ನಡದಲ್ಲಿ ಬೇರೆ-ಬೇರೆ ಜನಾಂಗದವರು ವ್ಯವಹರಿಸುವ ಭಾಷೆ ಮೇಲಿಂದಲೇ ಆ ಜಾತಿ ಹೆಸರೇಳಿ ಬಿಡಲಾಗುತ್ತಿದೆ. ಉದಾ: ಗೌಡಸಾರಸ್ವತ ಬ್ರಾಹ್ಮಣ(ಜಿಎಸ್‍ಬಿ)ಗಳದು ಒಂಥರಾ ಪಾಲಿಶ್ಡ್ ಕೊಂಕಣಿಯಾದರೆ ಬುಡಕಟ್ಟು ಕುಂಬ್ರಿ ಮರಾಠಿಗಳದು ಅವರಿಗಷ್ಟೇ ಅರ್ಥವಾಗಬಲ್ಲಷ್ಟು ಸಂಕೀರ್ಣವಾಗಿದೆ.

ಬುಡಕಟ್ಟು ಹಾಲಕ್ಕಿ ಒಕ್ಕಲಿಗರ ಕನ್ನಡದಲ್ಲಿ ನೆಲಮೂಲದ ಸಂಸ್ಕೃತಿಯ ಧ್ವನಿಯಿದೆ. ಮುಗ್ಧತೆ-ನಿಯತ್ತು ಮತ್ತು ಶ್ರಮ ಸಂಸ್ಕೃತಿಯ ಈ ಜನಾಂಗ ಉತ್ತರ ಕನ್ನಡದ ಕರಾವಳಿಗುಂಟದ ಕಾಡಿನಂಚಿನಲ್ಲಿ ಹೆಚ್ಚಿದೆ. ಇವರ ಉಡುಗೆ-ತೊಡುಗೆ-ಸಂಪ್ರದಾಯದಂತೆಯೇ ಮಾತುಗಾರಿಕೆಯಲ್ಲೂ ವಿಶಿಷ್ಟತೆಯಿದೆ. ಜಿಲ್ಲೆಯ ಮಲೆನಾಡಿನ ಭಾಗದಲ್ಲಿರುವ ಗೌಳಿಗರು ಗೋವಾ-ಮಹಾರಾಷ್ಟ್ರ ಗಡಿಯ ರತ್ನಗಿರಿ ಮೂಲದವರು. ಹೀಗಾಗಿ ಈ ಜನಾಂಗದ ಭಾಷೆಯಲ್ಲಿ ಕೊಂಕಣಿ ಜತೆಗೆ ಮರಾಠಿ ಬೆರೆತಿದೆ. ಆದರೆ ಕುಣಬಿ, ಕುಂಬ್ರಿ ಮರಾಠಿ ಸಮುದಾಯದ್ದು ಅವರದೇ ಆದ ಕೊಂಕಣಿ. ಸಿದ್ದಿ ಜನಾಂಗವೂ ಕುಣಬಿಗಳಂತೆ ಗೋವಾ ಕಡೆಯಿಂದ ಉತ್ತರಕನ್ನಡದ ಕಾಡುಮೇಡು ಸೇರಿಕೊಂಡಿದೆ. ಈ ಸಿದ್ದಿಗಳಲ್ಲಿ ಹಿಂದೂ, ಮುಸ್ಲಿಮ್, ಕ್ರಿಶ್ಚಿಯನ್ ಎಂಬ ವರ್ಗವಿದೆ. ಹೆಚ್ಚಿನವರದು ಕೊಂಕಣಿ ಆಡುಭಾಷೆ. ಆದರೆ ಹಿಂದೂಗಳಲ್ಲಿ ಕನ್ನಡ, ಕ್ರಿಶ್ಚಿಯನ್ನರಲ್ಲಿ ಕೊಂಕಣಿ ಮತ್ತು ಮುಸ್ಲಿಮರಲ್ಲಿ ಉರ್ದು ಪ್ರಭಾವ ಜಾಸ್ತಿ.

ಕುಂಬ್ರಿ ಮರಾಠಿಗರು ವ್ಯವಸಾಯಗಾರರು. ಗೌಳಿ-ಕುಣಬಿಗಳು ಹೈನುಗಾರಿಕೆ ಮೇಲೆ ಅವಲಂಬಿಸಿದ್ದಾರೆ. ಸಿದ್ದಿಗಳು ಕೃಷಿಕ ಕೃಷಿ ಕೂಲಿಯಾಗಿ ದುಡಿಯುತ್ತಿದ್ದಾರೆ. ಅವರ ಕಸುಬು ಬದುಕಿನ ಸಂಪ್ರದಾಯವೂ ಭಾಷೆಯನ್ನು ಪ್ರಭಾವಿಸಿದೆ. ಗೋಕರ್ಣದಲ್ಲಿ ವಲಸಿಗ ಬ್ರಾಹ್ಮಣರಿದ್ದಾರೆ. ಮರಾಠೀ ಬ್ರಾಹ್ಮಣರು ಮತ್ತು ಕೋಟಬ್ರಾಹ್ಮಣರು ಗೋಕರ್ಣ ಮಹಾಬಲೇಶ್ವರನ ಪೂಜೆ-ಪೌರೋಹಿತ್ಯ ಮಾಡಿಕೊಂಡು ಬದುಕುತ್ತಿದ್ದಾರೆ. ಮರಾಠಿ ಬ್ರಾಹ್ಮಣರ ಆಡುಭಾಷೆ ಮರಾಠಿಯಾದರೆ, ಕೋಟ ಬ್ರಾಹ್ಮಣರದು ಕನ್ನಡ. ಮಹಾರಾಷ್ಟ್ರ ಮೂಲದ “ಜೋಗಳೇಕರ್” ಎಂಬ ಮರಾಠಿ ಬ್ರಾಹ್ಮಣರು ಸುಮಾರು 80 ವರ್ಷದಿಂದ ಪಾತ್ರೆ-ಪಗಡೆ ಮಾರಾಟ ಮಾಡುತ್ತ ಇಲ್ಲೇ ನೆಲೆನಿಂತಿದೆ. ಉತ್ತರ ಕನ್ನಡದಲ್ಲಿನ ಅಸಂಖ್ಯ ಜಾತಿ-ಜನಾಂಗದಂತೆ ಅದರ ಭಾಷೆ-ಸಂಸ್ಕೃತಿ ಸಂಪ್ರದಾಯವೂ ಬೆರಗು ಹುಟ್ಟಿಸುವಂತದ್ದು.


ಇದನ್ನು ಓದಿ: ಟಿವಿ ವಾಹಿನಿಗಳೇ ಲಿಂಚಿಂಗ್ ಕೇಂದ್ರಗಳಾಗಿರುವ ಕಾಲದಲ್ಲಿ… ನಾವೇನು ಮಾಡಬೇಕು?
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...