Homeಮುಖಪುಟಭೂಮಿ ಹಕ್ಕು ವಂಚಿತರಿಗೆಲ್ಲಿ ಸ್ವಾತಂತ್ರ್ಯ?: ವಿಶಿಷ್ಟ ಸ್ವಾತಂತ್ರ್ಯೋತ್ಸವಕ್ಕೆ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ನಿರ್ಧಾರ

ಭೂಮಿ ಹಕ್ಕು ವಂಚಿತರಿಗೆಲ್ಲಿ ಸ್ವಾತಂತ್ರ್ಯ?: ವಿಶಿಷ್ಟ ಸ್ವಾತಂತ್ರ್ಯೋತ್ಸವಕ್ಕೆ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ನಿರ್ಧಾರ

- Advertisement -
- Advertisement -

ಉತ್ತರ ಕನ್ನಡ ಜಿಲ್ಲಾ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ 74ನೇ  ಸ್ವಾತಂತ್ರ್ಯೋತ್ಸವವನ್ನು ವಿನೂತನವಾಗಿ ಆಚರಿಸಲು ನಿರ್ಧರಿಸಿದೆ. ಅಂದು ನಮಗೆಂದು ಭೂಮಿ? ನಮಗೆಂದು ವಸತಿ? ಭೂಮಿ ಹಕ್ಕು ವಂಚಿತರಿಗೆಲ್ಲಿ ಸ್ವಾತಂತ್ರ್ಯ? ಎಂಬ ಘೋಷಣೆಯೊಂದಿಗೆ ಶ್ರದ್ಧೆ, ಭಕ್ತಿ, ಗೌರವದೊಂದಿಗೆ ಸ್ವಾತಂತ್ರ್ಯೋತ್ಸವವನ್ನು ಅರಣ್ಯ ಭೂಮಿ ಹಕ್ಕಿಗಾಗಿ ಹೋರಡುತ್ತಿರುವ ಅರಣ್ಯವಾಸಿಗಳು ಆಚರಿಸಲ್ಲಿದ್ದಾರೆ.

ಈ ಹೋರಾಟದ ಮೂಲಕ ಭೂಮಿ ವಸತಿ ಹಕ್ಕು ವಂಚಿತರು ತಮ್ಮ ನೋವುಗಳನ್ನು ಸರ್ಕಾರದ ಗಮನಕ್ಕೆ ತರಲಿದ್ದಾರೆಂದು ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯ ಅಧ್ಯಕ್ಷ ರವೀಂದ್ರ ನಾಯ್ಕ್ ಹೇಳಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ಟಿಬೇಟಿಯನ್ ನಿರಾಶಿತರಿಗೆ ದೇಶದ 600 ಎಕರೆ ಪ್ರದೇಶದಲ್ಲಿ ನಾವು ಆಶ್ರಯ ಕೊಟ್ಟಿದ್ದೇವೆ. ಅವರನ್ನು ದೇಶದ ಪ್ರಜೆಗಳಾಗಿ ಪರಿಗಣಿಸುವ ಕಾನೂನು ಕೇಂದ್ರ ಸರಕಾರ ತಂದಿದೆ. ದುರಂತವೆಂದರೆ, ನಮ್ಮದೇ ದೇಶದ ಪ್ರಜೆಗಳನ್ನು ನಿರಾಶ್ರಿತರನ್ನಾಗಿ ಮಾಡುತ್ತಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಮೂರನೇ ಒಂದರಷ್ಟು ಮಂದಿಗೆ ಭೂಮಿಯಿಲ್ಲ. ಈ ಮಂದಿಯ ಜೀವ-ಜೀವನದ ಸಮಸ್ಯೆಯತ್ತ ಸರ್ಕಾರದ ಗಮನ ಸೆಳೆಯುವುದೇ ವಿಶಿಷ್ಟ ಸ್ವಾತಂತ್ರ್ಯ ದಿನದ ಉದ್ದೇಶ” ಎಂದು ಅವರು ಹೇಳಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ಅರಣ್ಯ ಭೂಮಿಯಲ್ಲಿ 85,000 ಕುಟುಂಬ, ಕಂದಾಯ ಭೂಮಿಯಲ್ಲಿ 11,000 ಕಟುಂಬ, ಹಾಡಿ ಪ್ರದೇಶದಲ್ಲಿ 4,500 ಕುಟುಂಬ, ಬೆಟ್ಟ ಪ್ರದೇಶದಲ್ಲಿ 6,500 ಕುಟುಂಬ, ಗಾಂವಠಾಣ, ಗೋಮಾಳ, ಪಾರಂಪೂಕ, ಡೊಂಗರ ಮುಂತಾದ ಜಮೀನುಗಳಲ್ಲಿ 10,000 ಕುಟುಂಬಗಳು ಸರ್ಕಾರದ ಭೂಮಿಯಲ್ಲಿ ವಸತಿ ಹಾಗು ಸಾಗುವಳಿ ಮಾಡುತ್ತಿವೆ. ಹೆಚ್ಚು ಕಮ್ಮಿ 1,25,000 ಸಾವಿರ ಕುಟುಂಬಗಳು ಸರಕಾರ ನಡೆಸುವವರ ಇಚ್ಛಾ ಶಕ್ತಿಯ ಕೊರತೆಯಿಂದ ಅತಂತ್ರತೆಯಲ್ಲಿ ದಿನ ಕಳೆಯುವಂತಾಗಿದೆ ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ.

ಈ ಅಸಹಾಯಕ ಮಂದಿಯ ಅಳಲು ಆಳುವವರಿಗೆ ಅರ್ಥಮಾಡಿಕೊಡುವ ಉದ್ದೇಶದಿಂದ 74ನೇ ಸ್ವಾತಂತ್ರ್ಯೋತ್ಸವವನ್ನು ಶಿರಸಿ ಜಿಲ್ಲಾ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯ ಕಾರ್ಯಾಲಯದಲ್ಲಿ “ಭೂಮಿ ಹಕ್ಕು ವಂಚಿತರಿಗೆ ಸ್ವಾತಂತ್ರ್ಯ” ಎಂಬ ಘೋಷಣೆಯೊಂದಿಗೆ ಧ್ವಜಾರೋಹಣ ಮಾಡಲಾಗುವುದೆಂದು ರವಿ ನಾಯ್ಕ್ ಹೇಳಿದ್ದಾರೆ. ಇದೇ ಸಂದರ್ಭದಲ್ಲಿ ಅವರು “ಭೂಮಿ ಹಕ್ಕು ವಂಚಿತರಿಗೆ ಸ್ವಾತಂತ್ರ್ಯ” ಲಾಂಛನ ಬಿಡುಗಡೆ ಮಾಡುವುದಾಗಿ ತಿಳಿಸಿದ್ದಾರೆ.


ಇದನ್ನೂ ಓದಿ: ಉತ್ತರ ಕನ್ನಡ ಆಳುವವರ ಅಸಡ್ಡೆ; ಬೀದಿಗೆ ಬೀಳುವ ಭಯದಲ್ಲಿ ಅರಣ್ಯ ಸಾಗುವಳಿದಾರರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...