Homeಕರ್ನಾಟಕಕಿತ್ತೂರು ಕರ್ನಾಟಕಕ್ಕೆ ಉತ್ತರ ಕನ್ನಡ ಸೇರ್ಪಡೆ; ಜಿಲ್ಲೆಯಲ್ಲಿ ಗೊಂದಲ

ಕಿತ್ತೂರು ಕರ್ನಾಟಕಕ್ಕೆ ಉತ್ತರ ಕನ್ನಡ ಸೇರ್ಪಡೆ; ಜಿಲ್ಲೆಯಲ್ಲಿ ಗೊಂದಲ

- Advertisement -
- Advertisement -

ಕರಾವಳಿ ಮತ್ತು ಮಲೆನಾಡು ಗುಣ-ಧರ್ಮಗಳ ಉತ್ತರ ಕನ್ನಡ ಜಿಲ್ಲೆಯನ್ನು ಬಯಲು ಸೀಮೆಯ ಕಿತ್ತೂರು ಕರ್ನಾಟಕ ಭಾಗಕ್ಕೆ ಸರ್ಕಾರ ಈಚೆಗೆ ಸೇರಿಸಿರುವುದು, ಜಿಲ್ಲೆಯ ಜನರಲ್ಲಿ ಗೊಂದಲ ಮೂಡಿಸಿದೆ. ಮುಂಬೈ ಕರ್ನಾಟಕವೆಂದು ಕರೆಯಲ್ಪಡುತ್ತಿದ್ದ ಏಳು ಜಿಲ್ಲೆಗಳ ವ್ಯಾಪ್ತಿಯನ್ನು ಕಿತ್ತೂರು ಕರ್ನಾಟಕವೆಂದು ಮರುನಾಮಕರಣ ಮಾಡಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಕಿತ್ತೂರು ಕರ್ನಾಟಕದಲ್ಲಿ ಸೇರಿಸಲಾಗಿರುವ ಬಯಲು ನಾಡಿನ ಧಾರವಾಡ, ಗದಗ, ಹಾವೇರಿ, ಬೆಳಗಾವಿ, ಬಾಗಲಕೋಟೆ, ವಿಜಯಪುರ ಜಿಲ್ಲೆಗಳ ಮತ್ತು ಸಮುದ್ರ, ಸಹ್ಯಾದ್ರಿ ಬೆಟ್ಟ ಸಾಲಿನ ಉತ್ತರ ಕನ್ನಡದ ಬೌಗೋಳಿಕ ಮತ್ತು ಸಾಂಸ್ಕೃತಿಕ ಗುಣ-ಲಕ್ಷಣಗಳು ವಿಭಿನ್ನವಾಗಿದ್ದು, ಸರ್ಕಾರದ ಈ ತೀರ್ಮಾನ ಅಸಮರ್ಪಕವೆಂಬ ಅನಿಸಿಕೆ ವ್ಯಕ್ತವಾಗುತ್ತಿದೆ.

ಇಷ್ಟು ದಿನವೂ ಉತ್ತರ ಕನ್ನಡ ಅವಜ್ಞೆಗೆ ಒಳಪಟ್ಟಿದೆ. ಅತ್ತ ಮುಂಬೈ ಕರ್ನಾಟಕಕ್ಕೂ ಸೇರದ ಇತ್ತ ಕರಾವಳಿ ಪ್ರದೇಶಕ್ಕೂ ಸೇರದ ಅತಂತ್ರ ಸ್ಥಿತಿ ಜಿಲ್ಲೆಯದಾಗಿತ್ತು. ಹೀಗಾಗಿ ಜಿಲ್ಲೆಯ ಅಭಿವೃದ್ದಿಗೆ ದೊಡ್ಡ ಹಿನ್ನಡೆಯಾಗಿದೆ ಎಂದು ಯಾರನ್ನು ಕೇಳಿದರೂ ಹೇಳುತ್ತಾರೆ. ಕರಾವಳಿ ಭಾಗಕ್ಕೆ ಹೊಂದಿಕೊಂಡಿರುವ ಉತ್ತರ ಕನ್ನಡವನ್ನು ನ್ಯಾಯವಾಗಿ ಕರಾವಳಿ ಕರ್ನಾಟಕವೆಂದು ಗುರುತಿಸಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಜತೆಗಿಡಬೇಕಿತ್ತು. ಆದರೆ ಇಂಥ ಸರಳ ತೀರ್ಮಾನಕ್ಕೆ ಬದಲು ಭಾಷೆ ಮುಂತಾದ ಯಾವ ಸಾಮ್ಯತೆಯೂ ಇಲ್ಲದ ಕಿತ್ತೂರು ಕರ್ನಾಟಕಕ್ಕೆ ಜೋಡಿಸಿರುವುದರಿಂದ ಜಿಲ್ಲೆ ಮತ್ತಷ್ಟು ಉದಾಸೀನ-ಉಪದ್ರವಕ್ಕೆ ಈಡಾಗುವ ಸಾದ್ಯತೆಯೇ ಹೆಚ್ಚೆಂಬ ಅಸಮಾಧಾನ ಜನಮಾನಸದಲ್ಲಿ ಮೂಡಿದೆ.

ಉತ್ತರ ಕನ್ನಡದ ಅಳಲು ಬೆಂಗಳೂರಿನ ವಿಧಾನಸೌಧಕ್ಕೆ ತಟ್ಟುವುದು ತೀರಾ ಅಪರೂಪ. ರೈತ-ಕಾರ್ಮಿಕ ಹೋರಾಟಗಾರ, ಕವಿ ದಿನಕರ ದೇಸಾಯಿ ನಂತರ ಇಚ್ಛಾಶಕ್ತಿಯ ನಾಯಕತ್ವ ಸಿಗದಿರುವುದರಿಂದಲೇ ಜಿಲ್ಲೆ ಹಿಂದುಳಿದಿದೆ ಎಂಬ ಮಾತಿದೆ. ಅಕ್ಕ-ಪಕ್ಕದ ಜಿಲ್ಲೆಗಳ ಅಭಿವೃದ್ಧಿಗೆ ಹೋಲಿಸಿದರೆ ಉತ್ತರ ಕನ್ನಡ ಶತಮಾನಗಳಷ್ಟು ಹಿಂದುಳಿದಿದೆ! ಉತ್ತರ ಕರ್ನಾಟಕ ಭಾಗಕ್ಕೆ ಘೋಷಣೆಯಾಗುವ ಅಭಿವೃದ್ಧಿ ಯೋಜನೆಗಳು ಉತ್ತರ ಕನ್ನಡ ಕರಾವಳಿಯೆಂಬ ಕಾರಣಕ್ಕೆ ದಕ್ಕುತ್ತಿಲ್ಲ; ಕರಾವಳಿ ಪ್ರದೇಶಕ್ಕೆಂದು ಬರುವ ಯೋಜನೆಗಳು ಉತ್ತರ ಕನ್ನಡ ಮುಂಬೈ ಕರ್ನಾಟಕವೆಂಬ ನೆಪದಿಂದ ನಿರಾಕರಿಸಲಾಗುತ್ತಿದೆ. ಈ ತಾರತಮ್ಯ ಪ್ರಶ್ನಿಸಿ ಜಿಲ್ಲೆಗೆ ನ್ಯಾಯ ಒದಗಿಸುವ ಗಟ್ಟಿ ಧ್ವನಿಯ ನಾಯಕರೇ ಜಿಲ್ಲೆಯಲ್ಲಿಲ್ಲವೆಂಬ ಆಕ್ರೋಶ ಜಿಲ್ಲೆಯಲ್ಲಿದೆ! ಈಗ ಕಿತ್ತೂರು ಕರ್ನಾಟಕಕ್ಕೆ ಸೇರಿದರೆ ಇನ್ನಷ್ಟು ತಾರತಮ್ಯ-ಗೊಂದಲ ಹೆಚ್ಚಾಗುತ್ತದೆಂಬ ಆತಂಕ ಜಿಲ್ಲೆಯಲ್ಲಿ ಮೂಡಿದೆ.

ಉತ್ತರ ಕನ್ನಡದ ಐದು ತಾಲೂಕುಗಳಲ್ಲಿ ಅರಬ್ಬೀ ಸಮುದ್ರಕ್ಕೆ ಸಮಾನಾಂತರವಾಗಿ ಪಶ್ಚಿಮ ಘಟ್ಟದ ಸಾಲು ಹಬ್ಬಿದೆ. ಘಟ್ಟದ ಮೇಲಿನ ಹಲವು ತಾಲೂಕುಗಳು ಮಲೆನಾಡಿನ ಸೆರಗಲ್ಲಿದೆ. ಹೀಗಾಗಿ ಉತ್ತರಕನ್ನಡ, ಉಡುಪಿ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಸೇರಿಸಿ ಸಹ್ಯಾದ್ರಿ ಕರ್ನಾಟಕವೆಂದು ನಾಮಕರಣ ಮಾಡಿದರೆ ಈ ಭಾಗದ ಅಭಿವೃದ್ಧಿಗೆ ಅನುಕೂಲವೆಂಬ ಕೂಗೇಳುವ ಸಾಧ್ಯತೆಯೂ ಕಾಣಲರಂಭಿಸಿದೆ. ಕಿತ್ತೂರು ಕನಾಟಕಕ್ಕೆ ಉತ್ತರ ಕನ್ನಡ ಸೇರ್ಪಡೆಯಾಗಿರುವುದರಿಂದ ಕರಾವಳಿಯನ್ನು ಉತ್ತರ ಕರ್ನಾಟಕದ ಜತೆ ಜೋಡಿಸುವ ಅಂಕೋಲಾ-ಹುಬ್ಬಳ್ಳಿ ರೈಲು ಮಾರ್ಗ ಮತ್ತು ಬೃಹತ್ ಬಂದರು ಮತ್ತಿತರ ಕಾಮಗಾರಿಗಳಿಗೆ ವೇಗದ ಚಾಲನೆ ಸಿಗಬಹುದೆಂಬ ವಾದವೂ ಇದೆ. ಒಟ್ಟಿನಲ್ಲಿ ಜಿಲ್ಲೆಯಲ್ಲಿ ಅನಾಯಕತ್ವದಿಂದ ಗೊಂದಲ ಹೆಚ್ಚಾಗುತ್ತಿದೆ.


ಇದನ್ನು ಓದಿ: ಭ್ರಷ್ಟಾಚಾರ, ಅವ್ಯವಸ್ಥೆಗಳ ಗೂಡಾಗಿರುವ ಹಂಪಿ ವಿಶ್ವವಿದ್ಯಾಲಯ: ವಿದ್ಯಾರ್ಥಿ, ಪ್ರಾಧ್ಯಾಪಕರ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...