Homeಕರ್ನಾಟಕಕಿತ್ತೂರು ಕರ್ನಾಟಕಕ್ಕೆ ಉತ್ತರ ಕನ್ನಡ ಸೇರ್ಪಡೆ; ಜಿಲ್ಲೆಯಲ್ಲಿ ಗೊಂದಲ

ಕಿತ್ತೂರು ಕರ್ನಾಟಕಕ್ಕೆ ಉತ್ತರ ಕನ್ನಡ ಸೇರ್ಪಡೆ; ಜಿಲ್ಲೆಯಲ್ಲಿ ಗೊಂದಲ

- Advertisement -
- Advertisement -

ಕರಾವಳಿ ಮತ್ತು ಮಲೆನಾಡು ಗುಣ-ಧರ್ಮಗಳ ಉತ್ತರ ಕನ್ನಡ ಜಿಲ್ಲೆಯನ್ನು ಬಯಲು ಸೀಮೆಯ ಕಿತ್ತೂರು ಕರ್ನಾಟಕ ಭಾಗಕ್ಕೆ ಸರ್ಕಾರ ಈಚೆಗೆ ಸೇರಿಸಿರುವುದು, ಜಿಲ್ಲೆಯ ಜನರಲ್ಲಿ ಗೊಂದಲ ಮೂಡಿಸಿದೆ. ಮುಂಬೈ ಕರ್ನಾಟಕವೆಂದು ಕರೆಯಲ್ಪಡುತ್ತಿದ್ದ ಏಳು ಜಿಲ್ಲೆಗಳ ವ್ಯಾಪ್ತಿಯನ್ನು ಕಿತ್ತೂರು ಕರ್ನಾಟಕವೆಂದು ಮರುನಾಮಕರಣ ಮಾಡಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಕಿತ್ತೂರು ಕರ್ನಾಟಕದಲ್ಲಿ ಸೇರಿಸಲಾಗಿರುವ ಬಯಲು ನಾಡಿನ ಧಾರವಾಡ, ಗದಗ, ಹಾವೇರಿ, ಬೆಳಗಾವಿ, ಬಾಗಲಕೋಟೆ, ವಿಜಯಪುರ ಜಿಲ್ಲೆಗಳ ಮತ್ತು ಸಮುದ್ರ, ಸಹ್ಯಾದ್ರಿ ಬೆಟ್ಟ ಸಾಲಿನ ಉತ್ತರ ಕನ್ನಡದ ಬೌಗೋಳಿಕ ಮತ್ತು ಸಾಂಸ್ಕೃತಿಕ ಗುಣ-ಲಕ್ಷಣಗಳು ವಿಭಿನ್ನವಾಗಿದ್ದು, ಸರ್ಕಾರದ ಈ ತೀರ್ಮಾನ ಅಸಮರ್ಪಕವೆಂಬ ಅನಿಸಿಕೆ ವ್ಯಕ್ತವಾಗುತ್ತಿದೆ.

ಇಷ್ಟು ದಿನವೂ ಉತ್ತರ ಕನ್ನಡ ಅವಜ್ಞೆಗೆ ಒಳಪಟ್ಟಿದೆ. ಅತ್ತ ಮುಂಬೈ ಕರ್ನಾಟಕಕ್ಕೂ ಸೇರದ ಇತ್ತ ಕರಾವಳಿ ಪ್ರದೇಶಕ್ಕೂ ಸೇರದ ಅತಂತ್ರ ಸ್ಥಿತಿ ಜಿಲ್ಲೆಯದಾಗಿತ್ತು. ಹೀಗಾಗಿ ಜಿಲ್ಲೆಯ ಅಭಿವೃದ್ದಿಗೆ ದೊಡ್ಡ ಹಿನ್ನಡೆಯಾಗಿದೆ ಎಂದು ಯಾರನ್ನು ಕೇಳಿದರೂ ಹೇಳುತ್ತಾರೆ. ಕರಾವಳಿ ಭಾಗಕ್ಕೆ ಹೊಂದಿಕೊಂಡಿರುವ ಉತ್ತರ ಕನ್ನಡವನ್ನು ನ್ಯಾಯವಾಗಿ ಕರಾವಳಿ ಕರ್ನಾಟಕವೆಂದು ಗುರುತಿಸಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಜತೆಗಿಡಬೇಕಿತ್ತು. ಆದರೆ ಇಂಥ ಸರಳ ತೀರ್ಮಾನಕ್ಕೆ ಬದಲು ಭಾಷೆ ಮುಂತಾದ ಯಾವ ಸಾಮ್ಯತೆಯೂ ಇಲ್ಲದ ಕಿತ್ತೂರು ಕರ್ನಾಟಕಕ್ಕೆ ಜೋಡಿಸಿರುವುದರಿಂದ ಜಿಲ್ಲೆ ಮತ್ತಷ್ಟು ಉದಾಸೀನ-ಉಪದ್ರವಕ್ಕೆ ಈಡಾಗುವ ಸಾದ್ಯತೆಯೇ ಹೆಚ್ಚೆಂಬ ಅಸಮಾಧಾನ ಜನಮಾನಸದಲ್ಲಿ ಮೂಡಿದೆ.

ಉತ್ತರ ಕನ್ನಡದ ಅಳಲು ಬೆಂಗಳೂರಿನ ವಿಧಾನಸೌಧಕ್ಕೆ ತಟ್ಟುವುದು ತೀರಾ ಅಪರೂಪ. ರೈತ-ಕಾರ್ಮಿಕ ಹೋರಾಟಗಾರ, ಕವಿ ದಿನಕರ ದೇಸಾಯಿ ನಂತರ ಇಚ್ಛಾಶಕ್ತಿಯ ನಾಯಕತ್ವ ಸಿಗದಿರುವುದರಿಂದಲೇ ಜಿಲ್ಲೆ ಹಿಂದುಳಿದಿದೆ ಎಂಬ ಮಾತಿದೆ. ಅಕ್ಕ-ಪಕ್ಕದ ಜಿಲ್ಲೆಗಳ ಅಭಿವೃದ್ಧಿಗೆ ಹೋಲಿಸಿದರೆ ಉತ್ತರ ಕನ್ನಡ ಶತಮಾನಗಳಷ್ಟು ಹಿಂದುಳಿದಿದೆ! ಉತ್ತರ ಕರ್ನಾಟಕ ಭಾಗಕ್ಕೆ ಘೋಷಣೆಯಾಗುವ ಅಭಿವೃದ್ಧಿ ಯೋಜನೆಗಳು ಉತ್ತರ ಕನ್ನಡ ಕರಾವಳಿಯೆಂಬ ಕಾರಣಕ್ಕೆ ದಕ್ಕುತ್ತಿಲ್ಲ; ಕರಾವಳಿ ಪ್ರದೇಶಕ್ಕೆಂದು ಬರುವ ಯೋಜನೆಗಳು ಉತ್ತರ ಕನ್ನಡ ಮುಂಬೈ ಕರ್ನಾಟಕವೆಂಬ ನೆಪದಿಂದ ನಿರಾಕರಿಸಲಾಗುತ್ತಿದೆ. ಈ ತಾರತಮ್ಯ ಪ್ರಶ್ನಿಸಿ ಜಿಲ್ಲೆಗೆ ನ್ಯಾಯ ಒದಗಿಸುವ ಗಟ್ಟಿ ಧ್ವನಿಯ ನಾಯಕರೇ ಜಿಲ್ಲೆಯಲ್ಲಿಲ್ಲವೆಂಬ ಆಕ್ರೋಶ ಜಿಲ್ಲೆಯಲ್ಲಿದೆ! ಈಗ ಕಿತ್ತೂರು ಕರ್ನಾಟಕಕ್ಕೆ ಸೇರಿದರೆ ಇನ್ನಷ್ಟು ತಾರತಮ್ಯ-ಗೊಂದಲ ಹೆಚ್ಚಾಗುತ್ತದೆಂಬ ಆತಂಕ ಜಿಲ್ಲೆಯಲ್ಲಿ ಮೂಡಿದೆ.

ಉತ್ತರ ಕನ್ನಡದ ಐದು ತಾಲೂಕುಗಳಲ್ಲಿ ಅರಬ್ಬೀ ಸಮುದ್ರಕ್ಕೆ ಸಮಾನಾಂತರವಾಗಿ ಪಶ್ಚಿಮ ಘಟ್ಟದ ಸಾಲು ಹಬ್ಬಿದೆ. ಘಟ್ಟದ ಮೇಲಿನ ಹಲವು ತಾಲೂಕುಗಳು ಮಲೆನಾಡಿನ ಸೆರಗಲ್ಲಿದೆ. ಹೀಗಾಗಿ ಉತ್ತರಕನ್ನಡ, ಉಡುಪಿ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಸೇರಿಸಿ ಸಹ್ಯಾದ್ರಿ ಕರ್ನಾಟಕವೆಂದು ನಾಮಕರಣ ಮಾಡಿದರೆ ಈ ಭಾಗದ ಅಭಿವೃದ್ಧಿಗೆ ಅನುಕೂಲವೆಂಬ ಕೂಗೇಳುವ ಸಾಧ್ಯತೆಯೂ ಕಾಣಲರಂಭಿಸಿದೆ. ಕಿತ್ತೂರು ಕನಾಟಕಕ್ಕೆ ಉತ್ತರ ಕನ್ನಡ ಸೇರ್ಪಡೆಯಾಗಿರುವುದರಿಂದ ಕರಾವಳಿಯನ್ನು ಉತ್ತರ ಕರ್ನಾಟಕದ ಜತೆ ಜೋಡಿಸುವ ಅಂಕೋಲಾ-ಹುಬ್ಬಳ್ಳಿ ರೈಲು ಮಾರ್ಗ ಮತ್ತು ಬೃಹತ್ ಬಂದರು ಮತ್ತಿತರ ಕಾಮಗಾರಿಗಳಿಗೆ ವೇಗದ ಚಾಲನೆ ಸಿಗಬಹುದೆಂಬ ವಾದವೂ ಇದೆ. ಒಟ್ಟಿನಲ್ಲಿ ಜಿಲ್ಲೆಯಲ್ಲಿ ಅನಾಯಕತ್ವದಿಂದ ಗೊಂದಲ ಹೆಚ್ಚಾಗುತ್ತಿದೆ.


ಇದನ್ನು ಓದಿ: ಭ್ರಷ್ಟಾಚಾರ, ಅವ್ಯವಸ್ಥೆಗಳ ಗೂಡಾಗಿರುವ ಹಂಪಿ ವಿಶ್ವವಿದ್ಯಾಲಯ: ವಿದ್ಯಾರ್ಥಿ, ಪ್ರಾಧ್ಯಾಪಕರ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...