Homeಕರ್ನಾಟಕಕಿತ್ತೂರು ಕರ್ನಾಟಕಕ್ಕೆ ಉತ್ತರ ಕನ್ನಡ ಸೇರ್ಪಡೆ; ಜಿಲ್ಲೆಯಲ್ಲಿ ಗೊಂದಲ

ಕಿತ್ತೂರು ಕರ್ನಾಟಕಕ್ಕೆ ಉತ್ತರ ಕನ್ನಡ ಸೇರ್ಪಡೆ; ಜಿಲ್ಲೆಯಲ್ಲಿ ಗೊಂದಲ

- Advertisement -
- Advertisement -

ಕರಾವಳಿ ಮತ್ತು ಮಲೆನಾಡು ಗುಣ-ಧರ್ಮಗಳ ಉತ್ತರ ಕನ್ನಡ ಜಿಲ್ಲೆಯನ್ನು ಬಯಲು ಸೀಮೆಯ ಕಿತ್ತೂರು ಕರ್ನಾಟಕ ಭಾಗಕ್ಕೆ ಸರ್ಕಾರ ಈಚೆಗೆ ಸೇರಿಸಿರುವುದು, ಜಿಲ್ಲೆಯ ಜನರಲ್ಲಿ ಗೊಂದಲ ಮೂಡಿಸಿದೆ. ಮುಂಬೈ ಕರ್ನಾಟಕವೆಂದು ಕರೆಯಲ್ಪಡುತ್ತಿದ್ದ ಏಳು ಜಿಲ್ಲೆಗಳ ವ್ಯಾಪ್ತಿಯನ್ನು ಕಿತ್ತೂರು ಕರ್ನಾಟಕವೆಂದು ಮರುನಾಮಕರಣ ಮಾಡಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಕಿತ್ತೂರು ಕರ್ನಾಟಕದಲ್ಲಿ ಸೇರಿಸಲಾಗಿರುವ ಬಯಲು ನಾಡಿನ ಧಾರವಾಡ, ಗದಗ, ಹಾವೇರಿ, ಬೆಳಗಾವಿ, ಬಾಗಲಕೋಟೆ, ವಿಜಯಪುರ ಜಿಲ್ಲೆಗಳ ಮತ್ತು ಸಮುದ್ರ, ಸಹ್ಯಾದ್ರಿ ಬೆಟ್ಟ ಸಾಲಿನ ಉತ್ತರ ಕನ್ನಡದ ಬೌಗೋಳಿಕ ಮತ್ತು ಸಾಂಸ್ಕೃತಿಕ ಗುಣ-ಲಕ್ಷಣಗಳು ವಿಭಿನ್ನವಾಗಿದ್ದು, ಸರ್ಕಾರದ ಈ ತೀರ್ಮಾನ ಅಸಮರ್ಪಕವೆಂಬ ಅನಿಸಿಕೆ ವ್ಯಕ್ತವಾಗುತ್ತಿದೆ.

ಇಷ್ಟು ದಿನವೂ ಉತ್ತರ ಕನ್ನಡ ಅವಜ್ಞೆಗೆ ಒಳಪಟ್ಟಿದೆ. ಅತ್ತ ಮುಂಬೈ ಕರ್ನಾಟಕಕ್ಕೂ ಸೇರದ ಇತ್ತ ಕರಾವಳಿ ಪ್ರದೇಶಕ್ಕೂ ಸೇರದ ಅತಂತ್ರ ಸ್ಥಿತಿ ಜಿಲ್ಲೆಯದಾಗಿತ್ತು. ಹೀಗಾಗಿ ಜಿಲ್ಲೆಯ ಅಭಿವೃದ್ದಿಗೆ ದೊಡ್ಡ ಹಿನ್ನಡೆಯಾಗಿದೆ ಎಂದು ಯಾರನ್ನು ಕೇಳಿದರೂ ಹೇಳುತ್ತಾರೆ. ಕರಾವಳಿ ಭಾಗಕ್ಕೆ ಹೊಂದಿಕೊಂಡಿರುವ ಉತ್ತರ ಕನ್ನಡವನ್ನು ನ್ಯಾಯವಾಗಿ ಕರಾವಳಿ ಕರ್ನಾಟಕವೆಂದು ಗುರುತಿಸಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಜತೆಗಿಡಬೇಕಿತ್ತು. ಆದರೆ ಇಂಥ ಸರಳ ತೀರ್ಮಾನಕ್ಕೆ ಬದಲು ಭಾಷೆ ಮುಂತಾದ ಯಾವ ಸಾಮ್ಯತೆಯೂ ಇಲ್ಲದ ಕಿತ್ತೂರು ಕರ್ನಾಟಕಕ್ಕೆ ಜೋಡಿಸಿರುವುದರಿಂದ ಜಿಲ್ಲೆ ಮತ್ತಷ್ಟು ಉದಾಸೀನ-ಉಪದ್ರವಕ್ಕೆ ಈಡಾಗುವ ಸಾದ್ಯತೆಯೇ ಹೆಚ್ಚೆಂಬ ಅಸಮಾಧಾನ ಜನಮಾನಸದಲ್ಲಿ ಮೂಡಿದೆ.

ಉತ್ತರ ಕನ್ನಡದ ಅಳಲು ಬೆಂಗಳೂರಿನ ವಿಧಾನಸೌಧಕ್ಕೆ ತಟ್ಟುವುದು ತೀರಾ ಅಪರೂಪ. ರೈತ-ಕಾರ್ಮಿಕ ಹೋರಾಟಗಾರ, ಕವಿ ದಿನಕರ ದೇಸಾಯಿ ನಂತರ ಇಚ್ಛಾಶಕ್ತಿಯ ನಾಯಕತ್ವ ಸಿಗದಿರುವುದರಿಂದಲೇ ಜಿಲ್ಲೆ ಹಿಂದುಳಿದಿದೆ ಎಂಬ ಮಾತಿದೆ. ಅಕ್ಕ-ಪಕ್ಕದ ಜಿಲ್ಲೆಗಳ ಅಭಿವೃದ್ಧಿಗೆ ಹೋಲಿಸಿದರೆ ಉತ್ತರ ಕನ್ನಡ ಶತಮಾನಗಳಷ್ಟು ಹಿಂದುಳಿದಿದೆ! ಉತ್ತರ ಕರ್ನಾಟಕ ಭಾಗಕ್ಕೆ ಘೋಷಣೆಯಾಗುವ ಅಭಿವೃದ್ಧಿ ಯೋಜನೆಗಳು ಉತ್ತರ ಕನ್ನಡ ಕರಾವಳಿಯೆಂಬ ಕಾರಣಕ್ಕೆ ದಕ್ಕುತ್ತಿಲ್ಲ; ಕರಾವಳಿ ಪ್ರದೇಶಕ್ಕೆಂದು ಬರುವ ಯೋಜನೆಗಳು ಉತ್ತರ ಕನ್ನಡ ಮುಂಬೈ ಕರ್ನಾಟಕವೆಂಬ ನೆಪದಿಂದ ನಿರಾಕರಿಸಲಾಗುತ್ತಿದೆ. ಈ ತಾರತಮ್ಯ ಪ್ರಶ್ನಿಸಿ ಜಿಲ್ಲೆಗೆ ನ್ಯಾಯ ಒದಗಿಸುವ ಗಟ್ಟಿ ಧ್ವನಿಯ ನಾಯಕರೇ ಜಿಲ್ಲೆಯಲ್ಲಿಲ್ಲವೆಂಬ ಆಕ್ರೋಶ ಜಿಲ್ಲೆಯಲ್ಲಿದೆ! ಈಗ ಕಿತ್ತೂರು ಕರ್ನಾಟಕಕ್ಕೆ ಸೇರಿದರೆ ಇನ್ನಷ್ಟು ತಾರತಮ್ಯ-ಗೊಂದಲ ಹೆಚ್ಚಾಗುತ್ತದೆಂಬ ಆತಂಕ ಜಿಲ್ಲೆಯಲ್ಲಿ ಮೂಡಿದೆ.

ಉತ್ತರ ಕನ್ನಡದ ಐದು ತಾಲೂಕುಗಳಲ್ಲಿ ಅರಬ್ಬೀ ಸಮುದ್ರಕ್ಕೆ ಸಮಾನಾಂತರವಾಗಿ ಪಶ್ಚಿಮ ಘಟ್ಟದ ಸಾಲು ಹಬ್ಬಿದೆ. ಘಟ್ಟದ ಮೇಲಿನ ಹಲವು ತಾಲೂಕುಗಳು ಮಲೆನಾಡಿನ ಸೆರಗಲ್ಲಿದೆ. ಹೀಗಾಗಿ ಉತ್ತರಕನ್ನಡ, ಉಡುಪಿ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಸೇರಿಸಿ ಸಹ್ಯಾದ್ರಿ ಕರ್ನಾಟಕವೆಂದು ನಾಮಕರಣ ಮಾಡಿದರೆ ಈ ಭಾಗದ ಅಭಿವೃದ್ಧಿಗೆ ಅನುಕೂಲವೆಂಬ ಕೂಗೇಳುವ ಸಾಧ್ಯತೆಯೂ ಕಾಣಲರಂಭಿಸಿದೆ. ಕಿತ್ತೂರು ಕನಾಟಕಕ್ಕೆ ಉತ್ತರ ಕನ್ನಡ ಸೇರ್ಪಡೆಯಾಗಿರುವುದರಿಂದ ಕರಾವಳಿಯನ್ನು ಉತ್ತರ ಕರ್ನಾಟಕದ ಜತೆ ಜೋಡಿಸುವ ಅಂಕೋಲಾ-ಹುಬ್ಬಳ್ಳಿ ರೈಲು ಮಾರ್ಗ ಮತ್ತು ಬೃಹತ್ ಬಂದರು ಮತ್ತಿತರ ಕಾಮಗಾರಿಗಳಿಗೆ ವೇಗದ ಚಾಲನೆ ಸಿಗಬಹುದೆಂಬ ವಾದವೂ ಇದೆ. ಒಟ್ಟಿನಲ್ಲಿ ಜಿಲ್ಲೆಯಲ್ಲಿ ಅನಾಯಕತ್ವದಿಂದ ಗೊಂದಲ ಹೆಚ್ಚಾಗುತ್ತಿದೆ.


ಇದನ್ನು ಓದಿ: ಭ್ರಷ್ಟಾಚಾರ, ಅವ್ಯವಸ್ಥೆಗಳ ಗೂಡಾಗಿರುವ ಹಂಪಿ ವಿಶ್ವವಿದ್ಯಾಲಯ: ವಿದ್ಯಾರ್ಥಿ, ಪ್ರಾಧ್ಯಾಪಕರ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚನ್ನರಾಯಪಟ್ಟಣ| ಭೂಸ್ವಾಧೀನ ವಿರುದ್ಧ ಗೆದ್ದ ರೈತರಿಂದ ‘ಭೂಮಿ ಹಬ್ಬ’ ಸಂಭ್ರಮ: ಹೋರಾಟದ ಒಡನಾಡಿಗಳಿಗೆ ಗೌರವ ಸಮರ್ಪಣೆ

ದೇವನಹಳ್ಳಿಯ ಚನ್ನರಾಯಪಟ್ಟಣದ ಹೋಬಳಿಯ 13 ಹಳ್ಳಿಗಳ 1,777 ಎಕರೆ ಕೃಷಿ ಭೂಮಿಯನ್ನು ಉಳಿಸಿಕೊಳ್ಳಲು ರೈತರು ನಡೆಸಿದ ಸುದೀರ್ಘ ನಾಲ್ಕು ವರ್ಷಗಳ ಸತ್ಯಾಗ್ರಹಕ್ಕೆ ಐತಿಹಾಸಿಕ ಜಯ ಲಭಿಸಿದ ಹಿನ್ನಲೆಯಲ್ಲಿ, ಭೂಸ್ವಾದೀನ ವಿರೋಧಿ ಹೋರಾಟ ಸಮಿತಿಯು...

ಅಬಕಾರಿ ಹಗರಣದಲ್ಲಿ ಕೇಜ್ರಿವಾಲ್ ಮತ್ತು ಇತರರು ಖುಲಾಸೆ: ದೆಹಲಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ ಸಿಬಿಐ

ಮದ್ಯ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರರನ್ನು ಖುಲಾಸೆಗೊಳಿಸಿದ ವಿಶೇಷ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಸಿಬಿಐ ದೆಹಲಿ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದೆ ಎಂದು...

ಕಾಂಗ್ರೆಸ್ ಶಾಸಕ ಸುಬ್ಬಾರೆಡ್ಡಿ ಚುನಾವಣೆ ರದ್ದುಗೊಳಿಸಿದ ಕರ್ನಾಟಕ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ

ನವದೆಹಲಿ: 2023ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಕ್ಷೇತ್ರದಿಂದ ಕಾಂಗ್ರೆಸ್ ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಅವರ ಆಯ್ಕೆಯನ್ನು ರದ್ದುಗೊಳಿಸಿದ ಕರ್ನಾಟಕ ಹೈಕೋರ್ಟ್‌ನ ತೀರ್ಪನ್ನು ಸುಪ್ರೀಂ ಕೋರ್ಟ್ ಶುಕ್ರವಾರ ತಡೆಹಿಡಿದಿದೆ. ಭಾರತದ ಮುಖ್ಯ...

ಹಾಜರಾತಿ ಆಧಾರದ ಮೇಲೆ ಪರೀಕ್ಷಾ ನಿಷೇಧ ವಿರೋಧಿಸಿ ಎಎಂಯು ಎಂಜಿನಿಯರಿಂಗ್ ವಿದ್ಯಾರ್ಥಿಗಳಿಂದ ಪ್ರತಿಭಟನೆ; ಬಂಧನ, ಹಲ್ಲೆ ಆರೋಪ 

ಕಡಿಮೆ ಹಾಜರಾತಿ ಕಾರಣ ಸೆಮಿಸ್ಟರ್ ಪರೀಕ್ಷೆಗಳಿಂದ ನಿಷೇಧಿಸಲ್ಪಟ್ಟಿದ್ದನ್ನು ವಿರೋಧಿಸಿ ನಡೆದ ಪ್ರತಿಭಟನೆಗಳ ನಂತರ, ವಿಶ್ವವಿದ್ಯಾಲಯದ ಪ್ರೊಕ್ಟೋರಿಯಲ್ ತಂಡವು ಹಲವಾರು ಅಂತಿಮ ವರ್ಷದ ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದಿದೆ ಎಂದು ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯದ (AMU)...

ವಿಧಾನಸಭಾ ಚುನಾವಣೆಗೂ ಮುನ್ನ ಎಐಎಡಿಎಂಕೆಯಿಂದ ಉಚ್ಚಾಟನೆಗೊಂಡ ಮಾಜಿ ಸಿಎಂ ಪನ್ನೀರ್‌ಸೆಲ್ವಂ, ಪ್ರತಿಸ್ಪರ್ಧಿ ಡಿಎಂಕೆ ಪಕ್ಷಕ್ಕೆ ಸೇರ್ಪಡೆ

ಮೂರು ಬಾರಿ ತಮಿಳುನಾಡು ಮುಖ್ಯಮಂತ್ರಿ ಮತ್ತು ಜೆ ಜಯಲಲಿತಾ ಅವರ ದೀರ್ಘಕಾಲದ ಸಹಾಯಕರಾಗಿದ್ದ ಪನ್ನೀರ್‌ಸೆಲ್ವಂ ಅವರನ್ನು ಎಡಪ್ಪಾಡಿ ಕೆ ಪಳನಿಸ್ವಾಮಿ (ಇಪಿಎಸ್) ಅವರೊಂದಿಗಿನ ತೀವ್ರ ಅಧಿಕಾರ ಹೋರಾಟದ ನಂತರ 2022 ರಲ್ಲಿ ಎಐಎಡಿಎಂಕೆಯಿಂದ...

‘ನಾನು ಭ್ರಷ್ಟನಲ್ಲ’: ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ನ್ಯಾಯಾಲಯದಿಂದ ಕ್ಲೀನ್ ಚಿಟ್; ಮಾಧ್ಯಮಗಳೆದುರು ಭಾವುಕರಾದ ಕೇಜ್ರಿವಾಲ್

ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಮತ್ತು ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ನ್ಯಾಯಾಲಯವು ಖುಲಾಸೆಗೊಳಿಸಿದ ಕೆಲವೇ ಕ್ಷಣಗಳಲ್ಲಿ, ಫೆಬ್ರವರಿ 27, ಶುಕ್ರವಾರದಂದು ಮಾಧ್ಯಮಗಳ...

‘ಮುಸ್ಲಿಮರ ವಿರುದ್ಧ ದ್ವೇಷ ಭಾಷಣ’: ಅಸ್ಸಾಂ ಸಿಎಂ ಹಿಮಂತ ಶರ್ಮಾಗೆ ನೋಟಿಸ್ ಜಾರಿ ಮಾಡಿದ ಗುವಾಹಟಿ ಹೈಕೋರ್ಟ್

ಗುವಾಹಟಿ: ಮುಸ್ಲಿಮರನ್ನು ಗುರಿಯಾಗಿಸಿಕೊಂಡು "ದ್ವೇಷ ಭಾಷಣ" ಮಾಡಿದ್ದಾರೆ ಎಂಬ ಆರೋಪದ ಮೇಲೆ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರಿಗೆ ಗುವಾಹಟಿ ಹೈಕೋರ್ಟ್ ಗುರುವಾರ ನೋಟಿಸ್ ಜಾರಿ ಮಾಡಿದೆ. ಬಂಗಾಳಿ ಮೂಲದ ಮುಸ್ಲಿಮರನ್ನು ಗುರಿಯಾಗಿಸಿಕೊಂಡು...

ಅಫ್ಘಾನಿಸ್ತಾನದೊಂದಿಗೆ ‘ಮುಕ್ತ ಯುದ್ಧ’ ಘೋಷಿಸಿದ ಪಾಕಿಸ್ತಾನ; ತಾಲಿಬಾನ್‌ ವಿರುದ್ಧ ಆಪರೇಷನ್‌ ಗಜಬ್-ಲಿಲ್‌-ಹಕ್‌ ಆರಂಭಿಸಿದ ಪಾಕ್‌ ಸೇನೆ!

ಅಫ್ಘಾನಿಸ್ತಾನದೊಂದಿಗಿನ ಉದ್ವಿಗ್ನತೆಯನ್ನು ಇಸ್ಲಾಮಾಬಾದ್ ಔಪಚಾರಿಕವಾಗಿ ಹೆಚ್ಚಿಸಿದೆ, ಹಂಚಿಕೆಯ ಗಡಿಯಲ್ಲಿ ಹೊಸ ಮತ್ತು ಮಾರಕ ಘರ್ಷಣೆಗಳ ನಂತರ ತಾಲಿಬಾನ್ ನೇತೃತ್ವದ ಸರ್ಕಾರದ ವಿರುದ್ಧ ಮುಕ್ತ ಯುದ್ಧ ಎಂದು ಘೋಷಿಸಿದೆ.  ಶುಕ್ರವಾರ ಮುಂಜಾನೆ ಕಾಬೂಲ್ ಮತ್ತು ಕಂದಹಾರ್‌ನಲ್ಲಿ...

ಎಬಿವಿಪಿ ದಾಂಧಲೆ : ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ ವಿದ್ಯಾರ್ಥಿಗಳ ವಿರುದ್ಧ ದೂರು ದಾಖಲಿಸಿದ ಅಜೀಂ ಪ್ರೇಮ್ ಜಿ ವಿವಿ

ಅಜೀಂ ಪ್ರೇಮ್‌ ಜಿ ವಿಶ್ವವಿದ್ಯಾಲಯಕ್ಕೆ (ಎಪಿಯು) ಎಬಿವಿಪಿ ಸದಸ್ಯರು ನುಗ್ಗಿ ದಾಂಧಲೆ ನಡೆಸಿದ ಬಳಿಕ, ಕ್ಯಾಂಪಸ್‌ನಲ್ಲಿ ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ 'ಸ್ಪಾರ್ಕ್ ರೀಡಿಂಗ್ ಸರ್ಕಲ್' ಎಂಬ ಸಾಮಾಜಿಕ ಮಾಧ್ಯಮ ಪುಟದ ವಿರುದ್ಧ ಕುಲಸಚಿವರು...

2019ರ ಈಸ್ಟರ್ ದಾಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಮಾಜಿ ಗುಪ್ತಚರ ಮುಖ್ಯಸ್ಥರ ಬಂಧನ

2019ರ ಈಸ್ಟರ್ ಭಾನುವಾರದ ಬಾಂಬ್ ಸ್ಫೋಟಗಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಅಪರಾಧ ತನಿಖಾಧಿಕಾರಿಗಳು ಮಾಜಿ ರಾಜ್ಯ ಗುಪ್ತಚರ ಸೇವೆ (SIS) ಮುಖ್ಯಸ್ಥ ನಿವೃತ್ತ ಮೇಜರ್ ಜನರಲ್ ಸುರೇಶ್ ಸಲ್ಲೇ ಅವರನ್ನು ಬಂಧಿಸಿದ್ದಾರೆ ಎಂದು ಪೊಲೀಸ್...