Homeಕರ್ನಾಟಕಕಿತ್ತೂರು ಕರ್ನಾಟಕಕ್ಕೆ ಉತ್ತರ ಕನ್ನಡ ಸೇರ್ಪಡೆ; ಜಿಲ್ಲೆಯಲ್ಲಿ ಗೊಂದಲ

ಕಿತ್ತೂರು ಕರ್ನಾಟಕಕ್ಕೆ ಉತ್ತರ ಕನ್ನಡ ಸೇರ್ಪಡೆ; ಜಿಲ್ಲೆಯಲ್ಲಿ ಗೊಂದಲ

- Advertisement -
- Advertisement -

ಕರಾವಳಿ ಮತ್ತು ಮಲೆನಾಡು ಗುಣ-ಧರ್ಮಗಳ ಉತ್ತರ ಕನ್ನಡ ಜಿಲ್ಲೆಯನ್ನು ಬಯಲು ಸೀಮೆಯ ಕಿತ್ತೂರು ಕರ್ನಾಟಕ ಭಾಗಕ್ಕೆ ಸರ್ಕಾರ ಈಚೆಗೆ ಸೇರಿಸಿರುವುದು, ಜಿಲ್ಲೆಯ ಜನರಲ್ಲಿ ಗೊಂದಲ ಮೂಡಿಸಿದೆ. ಮುಂಬೈ ಕರ್ನಾಟಕವೆಂದು ಕರೆಯಲ್ಪಡುತ್ತಿದ್ದ ಏಳು ಜಿಲ್ಲೆಗಳ ವ್ಯಾಪ್ತಿಯನ್ನು ಕಿತ್ತೂರು ಕರ್ನಾಟಕವೆಂದು ಮರುನಾಮಕರಣ ಮಾಡಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಕಿತ್ತೂರು ಕರ್ನಾಟಕದಲ್ಲಿ ಸೇರಿಸಲಾಗಿರುವ ಬಯಲು ನಾಡಿನ ಧಾರವಾಡ, ಗದಗ, ಹಾವೇರಿ, ಬೆಳಗಾವಿ, ಬಾಗಲಕೋಟೆ, ವಿಜಯಪುರ ಜಿಲ್ಲೆಗಳ ಮತ್ತು ಸಮುದ್ರ, ಸಹ್ಯಾದ್ರಿ ಬೆಟ್ಟ ಸಾಲಿನ ಉತ್ತರ ಕನ್ನಡದ ಬೌಗೋಳಿಕ ಮತ್ತು ಸಾಂಸ್ಕೃತಿಕ ಗುಣ-ಲಕ್ಷಣಗಳು ವಿಭಿನ್ನವಾಗಿದ್ದು, ಸರ್ಕಾರದ ಈ ತೀರ್ಮಾನ ಅಸಮರ್ಪಕವೆಂಬ ಅನಿಸಿಕೆ ವ್ಯಕ್ತವಾಗುತ್ತಿದೆ.

ಇಷ್ಟು ದಿನವೂ ಉತ್ತರ ಕನ್ನಡ ಅವಜ್ಞೆಗೆ ಒಳಪಟ್ಟಿದೆ. ಅತ್ತ ಮುಂಬೈ ಕರ್ನಾಟಕಕ್ಕೂ ಸೇರದ ಇತ್ತ ಕರಾವಳಿ ಪ್ರದೇಶಕ್ಕೂ ಸೇರದ ಅತಂತ್ರ ಸ್ಥಿತಿ ಜಿಲ್ಲೆಯದಾಗಿತ್ತು. ಹೀಗಾಗಿ ಜಿಲ್ಲೆಯ ಅಭಿವೃದ್ದಿಗೆ ದೊಡ್ಡ ಹಿನ್ನಡೆಯಾಗಿದೆ ಎಂದು ಯಾರನ್ನು ಕೇಳಿದರೂ ಹೇಳುತ್ತಾರೆ. ಕರಾವಳಿ ಭಾಗಕ್ಕೆ ಹೊಂದಿಕೊಂಡಿರುವ ಉತ್ತರ ಕನ್ನಡವನ್ನು ನ್ಯಾಯವಾಗಿ ಕರಾವಳಿ ಕರ್ನಾಟಕವೆಂದು ಗುರುತಿಸಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಜತೆಗಿಡಬೇಕಿತ್ತು. ಆದರೆ ಇಂಥ ಸರಳ ತೀರ್ಮಾನಕ್ಕೆ ಬದಲು ಭಾಷೆ ಮುಂತಾದ ಯಾವ ಸಾಮ್ಯತೆಯೂ ಇಲ್ಲದ ಕಿತ್ತೂರು ಕರ್ನಾಟಕಕ್ಕೆ ಜೋಡಿಸಿರುವುದರಿಂದ ಜಿಲ್ಲೆ ಮತ್ತಷ್ಟು ಉದಾಸೀನ-ಉಪದ್ರವಕ್ಕೆ ಈಡಾಗುವ ಸಾದ್ಯತೆಯೇ ಹೆಚ್ಚೆಂಬ ಅಸಮಾಧಾನ ಜನಮಾನಸದಲ್ಲಿ ಮೂಡಿದೆ.

ಉತ್ತರ ಕನ್ನಡದ ಅಳಲು ಬೆಂಗಳೂರಿನ ವಿಧಾನಸೌಧಕ್ಕೆ ತಟ್ಟುವುದು ತೀರಾ ಅಪರೂಪ. ರೈತ-ಕಾರ್ಮಿಕ ಹೋರಾಟಗಾರ, ಕವಿ ದಿನಕರ ದೇಸಾಯಿ ನಂತರ ಇಚ್ಛಾಶಕ್ತಿಯ ನಾಯಕತ್ವ ಸಿಗದಿರುವುದರಿಂದಲೇ ಜಿಲ್ಲೆ ಹಿಂದುಳಿದಿದೆ ಎಂಬ ಮಾತಿದೆ. ಅಕ್ಕ-ಪಕ್ಕದ ಜಿಲ್ಲೆಗಳ ಅಭಿವೃದ್ಧಿಗೆ ಹೋಲಿಸಿದರೆ ಉತ್ತರ ಕನ್ನಡ ಶತಮಾನಗಳಷ್ಟು ಹಿಂದುಳಿದಿದೆ! ಉತ್ತರ ಕರ್ನಾಟಕ ಭಾಗಕ್ಕೆ ಘೋಷಣೆಯಾಗುವ ಅಭಿವೃದ್ಧಿ ಯೋಜನೆಗಳು ಉತ್ತರ ಕನ್ನಡ ಕರಾವಳಿಯೆಂಬ ಕಾರಣಕ್ಕೆ ದಕ್ಕುತ್ತಿಲ್ಲ; ಕರಾವಳಿ ಪ್ರದೇಶಕ್ಕೆಂದು ಬರುವ ಯೋಜನೆಗಳು ಉತ್ತರ ಕನ್ನಡ ಮುಂಬೈ ಕರ್ನಾಟಕವೆಂಬ ನೆಪದಿಂದ ನಿರಾಕರಿಸಲಾಗುತ್ತಿದೆ. ಈ ತಾರತಮ್ಯ ಪ್ರಶ್ನಿಸಿ ಜಿಲ್ಲೆಗೆ ನ್ಯಾಯ ಒದಗಿಸುವ ಗಟ್ಟಿ ಧ್ವನಿಯ ನಾಯಕರೇ ಜಿಲ್ಲೆಯಲ್ಲಿಲ್ಲವೆಂಬ ಆಕ್ರೋಶ ಜಿಲ್ಲೆಯಲ್ಲಿದೆ! ಈಗ ಕಿತ್ತೂರು ಕರ್ನಾಟಕಕ್ಕೆ ಸೇರಿದರೆ ಇನ್ನಷ್ಟು ತಾರತಮ್ಯ-ಗೊಂದಲ ಹೆಚ್ಚಾಗುತ್ತದೆಂಬ ಆತಂಕ ಜಿಲ್ಲೆಯಲ್ಲಿ ಮೂಡಿದೆ.

ಉತ್ತರ ಕನ್ನಡದ ಐದು ತಾಲೂಕುಗಳಲ್ಲಿ ಅರಬ್ಬೀ ಸಮುದ್ರಕ್ಕೆ ಸಮಾನಾಂತರವಾಗಿ ಪಶ್ಚಿಮ ಘಟ್ಟದ ಸಾಲು ಹಬ್ಬಿದೆ. ಘಟ್ಟದ ಮೇಲಿನ ಹಲವು ತಾಲೂಕುಗಳು ಮಲೆನಾಡಿನ ಸೆರಗಲ್ಲಿದೆ. ಹೀಗಾಗಿ ಉತ್ತರಕನ್ನಡ, ಉಡುಪಿ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಸೇರಿಸಿ ಸಹ್ಯಾದ್ರಿ ಕರ್ನಾಟಕವೆಂದು ನಾಮಕರಣ ಮಾಡಿದರೆ ಈ ಭಾಗದ ಅಭಿವೃದ್ಧಿಗೆ ಅನುಕೂಲವೆಂಬ ಕೂಗೇಳುವ ಸಾಧ್ಯತೆಯೂ ಕಾಣಲರಂಭಿಸಿದೆ. ಕಿತ್ತೂರು ಕನಾಟಕಕ್ಕೆ ಉತ್ತರ ಕನ್ನಡ ಸೇರ್ಪಡೆಯಾಗಿರುವುದರಿಂದ ಕರಾವಳಿಯನ್ನು ಉತ್ತರ ಕರ್ನಾಟಕದ ಜತೆ ಜೋಡಿಸುವ ಅಂಕೋಲಾ-ಹುಬ್ಬಳ್ಳಿ ರೈಲು ಮಾರ್ಗ ಮತ್ತು ಬೃಹತ್ ಬಂದರು ಮತ್ತಿತರ ಕಾಮಗಾರಿಗಳಿಗೆ ವೇಗದ ಚಾಲನೆ ಸಿಗಬಹುದೆಂಬ ವಾದವೂ ಇದೆ. ಒಟ್ಟಿನಲ್ಲಿ ಜಿಲ್ಲೆಯಲ್ಲಿ ಅನಾಯಕತ್ವದಿಂದ ಗೊಂದಲ ಹೆಚ್ಚಾಗುತ್ತಿದೆ.


ಇದನ್ನು ಓದಿ: ಭ್ರಷ್ಟಾಚಾರ, ಅವ್ಯವಸ್ಥೆಗಳ ಗೂಡಾಗಿರುವ ಹಂಪಿ ವಿಶ್ವವಿದ್ಯಾಲಯ: ವಿದ್ಯಾರ್ಥಿ, ಪ್ರಾಧ್ಯಾಪಕರ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....