Homeಕರ್ನಾಟಕಕಿತ್ತೂರು ಕರ್ನಾಟಕಕ್ಕೆ ಉತ್ತರ ಕನ್ನಡ ಸೇರ್ಪಡೆ; ಜಿಲ್ಲೆಯಲ್ಲಿ ಗೊಂದಲ

ಕಿತ್ತೂರು ಕರ್ನಾಟಕಕ್ಕೆ ಉತ್ತರ ಕನ್ನಡ ಸೇರ್ಪಡೆ; ಜಿಲ್ಲೆಯಲ್ಲಿ ಗೊಂದಲ

- Advertisement -
- Advertisement -

ಕರಾವಳಿ ಮತ್ತು ಮಲೆನಾಡು ಗುಣ-ಧರ್ಮಗಳ ಉತ್ತರ ಕನ್ನಡ ಜಿಲ್ಲೆಯನ್ನು ಬಯಲು ಸೀಮೆಯ ಕಿತ್ತೂರು ಕರ್ನಾಟಕ ಭಾಗಕ್ಕೆ ಸರ್ಕಾರ ಈಚೆಗೆ ಸೇರಿಸಿರುವುದು, ಜಿಲ್ಲೆಯ ಜನರಲ್ಲಿ ಗೊಂದಲ ಮೂಡಿಸಿದೆ. ಮುಂಬೈ ಕರ್ನಾಟಕವೆಂದು ಕರೆಯಲ್ಪಡುತ್ತಿದ್ದ ಏಳು ಜಿಲ್ಲೆಗಳ ವ್ಯಾಪ್ತಿಯನ್ನು ಕಿತ್ತೂರು ಕರ್ನಾಟಕವೆಂದು ಮರುನಾಮಕರಣ ಮಾಡಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಕಿತ್ತೂರು ಕರ್ನಾಟಕದಲ್ಲಿ ಸೇರಿಸಲಾಗಿರುವ ಬಯಲು ನಾಡಿನ ಧಾರವಾಡ, ಗದಗ, ಹಾವೇರಿ, ಬೆಳಗಾವಿ, ಬಾಗಲಕೋಟೆ, ವಿಜಯಪುರ ಜಿಲ್ಲೆಗಳ ಮತ್ತು ಸಮುದ್ರ, ಸಹ್ಯಾದ್ರಿ ಬೆಟ್ಟ ಸಾಲಿನ ಉತ್ತರ ಕನ್ನಡದ ಬೌಗೋಳಿಕ ಮತ್ತು ಸಾಂಸ್ಕೃತಿಕ ಗುಣ-ಲಕ್ಷಣಗಳು ವಿಭಿನ್ನವಾಗಿದ್ದು, ಸರ್ಕಾರದ ಈ ತೀರ್ಮಾನ ಅಸಮರ್ಪಕವೆಂಬ ಅನಿಸಿಕೆ ವ್ಯಕ್ತವಾಗುತ್ತಿದೆ.

ಇಷ್ಟು ದಿನವೂ ಉತ್ತರ ಕನ್ನಡ ಅವಜ್ಞೆಗೆ ಒಳಪಟ್ಟಿದೆ. ಅತ್ತ ಮುಂಬೈ ಕರ್ನಾಟಕಕ್ಕೂ ಸೇರದ ಇತ್ತ ಕರಾವಳಿ ಪ್ರದೇಶಕ್ಕೂ ಸೇರದ ಅತಂತ್ರ ಸ್ಥಿತಿ ಜಿಲ್ಲೆಯದಾಗಿತ್ತು. ಹೀಗಾಗಿ ಜಿಲ್ಲೆಯ ಅಭಿವೃದ್ದಿಗೆ ದೊಡ್ಡ ಹಿನ್ನಡೆಯಾಗಿದೆ ಎಂದು ಯಾರನ್ನು ಕೇಳಿದರೂ ಹೇಳುತ್ತಾರೆ. ಕರಾವಳಿ ಭಾಗಕ್ಕೆ ಹೊಂದಿಕೊಂಡಿರುವ ಉತ್ತರ ಕನ್ನಡವನ್ನು ನ್ಯಾಯವಾಗಿ ಕರಾವಳಿ ಕರ್ನಾಟಕವೆಂದು ಗುರುತಿಸಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಜತೆಗಿಡಬೇಕಿತ್ತು. ಆದರೆ ಇಂಥ ಸರಳ ತೀರ್ಮಾನಕ್ಕೆ ಬದಲು ಭಾಷೆ ಮುಂತಾದ ಯಾವ ಸಾಮ್ಯತೆಯೂ ಇಲ್ಲದ ಕಿತ್ತೂರು ಕರ್ನಾಟಕಕ್ಕೆ ಜೋಡಿಸಿರುವುದರಿಂದ ಜಿಲ್ಲೆ ಮತ್ತಷ್ಟು ಉದಾಸೀನ-ಉಪದ್ರವಕ್ಕೆ ಈಡಾಗುವ ಸಾದ್ಯತೆಯೇ ಹೆಚ್ಚೆಂಬ ಅಸಮಾಧಾನ ಜನಮಾನಸದಲ್ಲಿ ಮೂಡಿದೆ.

ಉತ್ತರ ಕನ್ನಡದ ಅಳಲು ಬೆಂಗಳೂರಿನ ವಿಧಾನಸೌಧಕ್ಕೆ ತಟ್ಟುವುದು ತೀರಾ ಅಪರೂಪ. ರೈತ-ಕಾರ್ಮಿಕ ಹೋರಾಟಗಾರ, ಕವಿ ದಿನಕರ ದೇಸಾಯಿ ನಂತರ ಇಚ್ಛಾಶಕ್ತಿಯ ನಾಯಕತ್ವ ಸಿಗದಿರುವುದರಿಂದಲೇ ಜಿಲ್ಲೆ ಹಿಂದುಳಿದಿದೆ ಎಂಬ ಮಾತಿದೆ. ಅಕ್ಕ-ಪಕ್ಕದ ಜಿಲ್ಲೆಗಳ ಅಭಿವೃದ್ಧಿಗೆ ಹೋಲಿಸಿದರೆ ಉತ್ತರ ಕನ್ನಡ ಶತಮಾನಗಳಷ್ಟು ಹಿಂದುಳಿದಿದೆ! ಉತ್ತರ ಕರ್ನಾಟಕ ಭಾಗಕ್ಕೆ ಘೋಷಣೆಯಾಗುವ ಅಭಿವೃದ್ಧಿ ಯೋಜನೆಗಳು ಉತ್ತರ ಕನ್ನಡ ಕರಾವಳಿಯೆಂಬ ಕಾರಣಕ್ಕೆ ದಕ್ಕುತ್ತಿಲ್ಲ; ಕರಾವಳಿ ಪ್ರದೇಶಕ್ಕೆಂದು ಬರುವ ಯೋಜನೆಗಳು ಉತ್ತರ ಕನ್ನಡ ಮುಂಬೈ ಕರ್ನಾಟಕವೆಂಬ ನೆಪದಿಂದ ನಿರಾಕರಿಸಲಾಗುತ್ತಿದೆ. ಈ ತಾರತಮ್ಯ ಪ್ರಶ್ನಿಸಿ ಜಿಲ್ಲೆಗೆ ನ್ಯಾಯ ಒದಗಿಸುವ ಗಟ್ಟಿ ಧ್ವನಿಯ ನಾಯಕರೇ ಜಿಲ್ಲೆಯಲ್ಲಿಲ್ಲವೆಂಬ ಆಕ್ರೋಶ ಜಿಲ್ಲೆಯಲ್ಲಿದೆ! ಈಗ ಕಿತ್ತೂರು ಕರ್ನಾಟಕಕ್ಕೆ ಸೇರಿದರೆ ಇನ್ನಷ್ಟು ತಾರತಮ್ಯ-ಗೊಂದಲ ಹೆಚ್ಚಾಗುತ್ತದೆಂಬ ಆತಂಕ ಜಿಲ್ಲೆಯಲ್ಲಿ ಮೂಡಿದೆ.

ಉತ್ತರ ಕನ್ನಡದ ಐದು ತಾಲೂಕುಗಳಲ್ಲಿ ಅರಬ್ಬೀ ಸಮುದ್ರಕ್ಕೆ ಸಮಾನಾಂತರವಾಗಿ ಪಶ್ಚಿಮ ಘಟ್ಟದ ಸಾಲು ಹಬ್ಬಿದೆ. ಘಟ್ಟದ ಮೇಲಿನ ಹಲವು ತಾಲೂಕುಗಳು ಮಲೆನಾಡಿನ ಸೆರಗಲ್ಲಿದೆ. ಹೀಗಾಗಿ ಉತ್ತರಕನ್ನಡ, ಉಡುಪಿ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಸೇರಿಸಿ ಸಹ್ಯಾದ್ರಿ ಕರ್ನಾಟಕವೆಂದು ನಾಮಕರಣ ಮಾಡಿದರೆ ಈ ಭಾಗದ ಅಭಿವೃದ್ಧಿಗೆ ಅನುಕೂಲವೆಂಬ ಕೂಗೇಳುವ ಸಾಧ್ಯತೆಯೂ ಕಾಣಲರಂಭಿಸಿದೆ. ಕಿತ್ತೂರು ಕನಾಟಕಕ್ಕೆ ಉತ್ತರ ಕನ್ನಡ ಸೇರ್ಪಡೆಯಾಗಿರುವುದರಿಂದ ಕರಾವಳಿಯನ್ನು ಉತ್ತರ ಕರ್ನಾಟಕದ ಜತೆ ಜೋಡಿಸುವ ಅಂಕೋಲಾ-ಹುಬ್ಬಳ್ಳಿ ರೈಲು ಮಾರ್ಗ ಮತ್ತು ಬೃಹತ್ ಬಂದರು ಮತ್ತಿತರ ಕಾಮಗಾರಿಗಳಿಗೆ ವೇಗದ ಚಾಲನೆ ಸಿಗಬಹುದೆಂಬ ವಾದವೂ ಇದೆ. ಒಟ್ಟಿನಲ್ಲಿ ಜಿಲ್ಲೆಯಲ್ಲಿ ಅನಾಯಕತ್ವದಿಂದ ಗೊಂದಲ ಹೆಚ್ಚಾಗುತ್ತಿದೆ.


ಇದನ್ನು ಓದಿ: ಭ್ರಷ್ಟಾಚಾರ, ಅವ್ಯವಸ್ಥೆಗಳ ಗೂಡಾಗಿರುವ ಹಂಪಿ ವಿಶ್ವವಿದ್ಯಾಲಯ: ವಿದ್ಯಾರ್ಥಿ, ಪ್ರಾಧ್ಯಾಪಕರ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...