Homeಕರ್ನಾಟಕಕಿತ್ತೂರು ಕರ್ನಾಟಕಕ್ಕೆ ಉತ್ತರ ಕನ್ನಡ ಸೇರ್ಪಡೆ; ಜಿಲ್ಲೆಯಲ್ಲಿ ಗೊಂದಲ

ಕಿತ್ತೂರು ಕರ್ನಾಟಕಕ್ಕೆ ಉತ್ತರ ಕನ್ನಡ ಸೇರ್ಪಡೆ; ಜಿಲ್ಲೆಯಲ್ಲಿ ಗೊಂದಲ

- Advertisement -
- Advertisement -

ಕರಾವಳಿ ಮತ್ತು ಮಲೆನಾಡು ಗುಣ-ಧರ್ಮಗಳ ಉತ್ತರ ಕನ್ನಡ ಜಿಲ್ಲೆಯನ್ನು ಬಯಲು ಸೀಮೆಯ ಕಿತ್ತೂರು ಕರ್ನಾಟಕ ಭಾಗಕ್ಕೆ ಸರ್ಕಾರ ಈಚೆಗೆ ಸೇರಿಸಿರುವುದು, ಜಿಲ್ಲೆಯ ಜನರಲ್ಲಿ ಗೊಂದಲ ಮೂಡಿಸಿದೆ. ಮುಂಬೈ ಕರ್ನಾಟಕವೆಂದು ಕರೆಯಲ್ಪಡುತ್ತಿದ್ದ ಏಳು ಜಿಲ್ಲೆಗಳ ವ್ಯಾಪ್ತಿಯನ್ನು ಕಿತ್ತೂರು ಕರ್ನಾಟಕವೆಂದು ಮರುನಾಮಕರಣ ಮಾಡಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಕಿತ್ತೂರು ಕರ್ನಾಟಕದಲ್ಲಿ ಸೇರಿಸಲಾಗಿರುವ ಬಯಲು ನಾಡಿನ ಧಾರವಾಡ, ಗದಗ, ಹಾವೇರಿ, ಬೆಳಗಾವಿ, ಬಾಗಲಕೋಟೆ, ವಿಜಯಪುರ ಜಿಲ್ಲೆಗಳ ಮತ್ತು ಸಮುದ್ರ, ಸಹ್ಯಾದ್ರಿ ಬೆಟ್ಟ ಸಾಲಿನ ಉತ್ತರ ಕನ್ನಡದ ಬೌಗೋಳಿಕ ಮತ್ತು ಸಾಂಸ್ಕೃತಿಕ ಗುಣ-ಲಕ್ಷಣಗಳು ವಿಭಿನ್ನವಾಗಿದ್ದು, ಸರ್ಕಾರದ ಈ ತೀರ್ಮಾನ ಅಸಮರ್ಪಕವೆಂಬ ಅನಿಸಿಕೆ ವ್ಯಕ್ತವಾಗುತ್ತಿದೆ.

ಇಷ್ಟು ದಿನವೂ ಉತ್ತರ ಕನ್ನಡ ಅವಜ್ಞೆಗೆ ಒಳಪಟ್ಟಿದೆ. ಅತ್ತ ಮುಂಬೈ ಕರ್ನಾಟಕಕ್ಕೂ ಸೇರದ ಇತ್ತ ಕರಾವಳಿ ಪ್ರದೇಶಕ್ಕೂ ಸೇರದ ಅತಂತ್ರ ಸ್ಥಿತಿ ಜಿಲ್ಲೆಯದಾಗಿತ್ತು. ಹೀಗಾಗಿ ಜಿಲ್ಲೆಯ ಅಭಿವೃದ್ದಿಗೆ ದೊಡ್ಡ ಹಿನ್ನಡೆಯಾಗಿದೆ ಎಂದು ಯಾರನ್ನು ಕೇಳಿದರೂ ಹೇಳುತ್ತಾರೆ. ಕರಾವಳಿ ಭಾಗಕ್ಕೆ ಹೊಂದಿಕೊಂಡಿರುವ ಉತ್ತರ ಕನ್ನಡವನ್ನು ನ್ಯಾಯವಾಗಿ ಕರಾವಳಿ ಕರ್ನಾಟಕವೆಂದು ಗುರುತಿಸಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಜತೆಗಿಡಬೇಕಿತ್ತು. ಆದರೆ ಇಂಥ ಸರಳ ತೀರ್ಮಾನಕ್ಕೆ ಬದಲು ಭಾಷೆ ಮುಂತಾದ ಯಾವ ಸಾಮ್ಯತೆಯೂ ಇಲ್ಲದ ಕಿತ್ತೂರು ಕರ್ನಾಟಕಕ್ಕೆ ಜೋಡಿಸಿರುವುದರಿಂದ ಜಿಲ್ಲೆ ಮತ್ತಷ್ಟು ಉದಾಸೀನ-ಉಪದ್ರವಕ್ಕೆ ಈಡಾಗುವ ಸಾದ್ಯತೆಯೇ ಹೆಚ್ಚೆಂಬ ಅಸಮಾಧಾನ ಜನಮಾನಸದಲ್ಲಿ ಮೂಡಿದೆ.

ಉತ್ತರ ಕನ್ನಡದ ಅಳಲು ಬೆಂಗಳೂರಿನ ವಿಧಾನಸೌಧಕ್ಕೆ ತಟ್ಟುವುದು ತೀರಾ ಅಪರೂಪ. ರೈತ-ಕಾರ್ಮಿಕ ಹೋರಾಟಗಾರ, ಕವಿ ದಿನಕರ ದೇಸಾಯಿ ನಂತರ ಇಚ್ಛಾಶಕ್ತಿಯ ನಾಯಕತ್ವ ಸಿಗದಿರುವುದರಿಂದಲೇ ಜಿಲ್ಲೆ ಹಿಂದುಳಿದಿದೆ ಎಂಬ ಮಾತಿದೆ. ಅಕ್ಕ-ಪಕ್ಕದ ಜಿಲ್ಲೆಗಳ ಅಭಿವೃದ್ಧಿಗೆ ಹೋಲಿಸಿದರೆ ಉತ್ತರ ಕನ್ನಡ ಶತಮಾನಗಳಷ್ಟು ಹಿಂದುಳಿದಿದೆ! ಉತ್ತರ ಕರ್ನಾಟಕ ಭಾಗಕ್ಕೆ ಘೋಷಣೆಯಾಗುವ ಅಭಿವೃದ್ಧಿ ಯೋಜನೆಗಳು ಉತ್ತರ ಕನ್ನಡ ಕರಾವಳಿಯೆಂಬ ಕಾರಣಕ್ಕೆ ದಕ್ಕುತ್ತಿಲ್ಲ; ಕರಾವಳಿ ಪ್ರದೇಶಕ್ಕೆಂದು ಬರುವ ಯೋಜನೆಗಳು ಉತ್ತರ ಕನ್ನಡ ಮುಂಬೈ ಕರ್ನಾಟಕವೆಂಬ ನೆಪದಿಂದ ನಿರಾಕರಿಸಲಾಗುತ್ತಿದೆ. ಈ ತಾರತಮ್ಯ ಪ್ರಶ್ನಿಸಿ ಜಿಲ್ಲೆಗೆ ನ್ಯಾಯ ಒದಗಿಸುವ ಗಟ್ಟಿ ಧ್ವನಿಯ ನಾಯಕರೇ ಜಿಲ್ಲೆಯಲ್ಲಿಲ್ಲವೆಂಬ ಆಕ್ರೋಶ ಜಿಲ್ಲೆಯಲ್ಲಿದೆ! ಈಗ ಕಿತ್ತೂರು ಕರ್ನಾಟಕಕ್ಕೆ ಸೇರಿದರೆ ಇನ್ನಷ್ಟು ತಾರತಮ್ಯ-ಗೊಂದಲ ಹೆಚ್ಚಾಗುತ್ತದೆಂಬ ಆತಂಕ ಜಿಲ್ಲೆಯಲ್ಲಿ ಮೂಡಿದೆ.

ಉತ್ತರ ಕನ್ನಡದ ಐದು ತಾಲೂಕುಗಳಲ್ಲಿ ಅರಬ್ಬೀ ಸಮುದ್ರಕ್ಕೆ ಸಮಾನಾಂತರವಾಗಿ ಪಶ್ಚಿಮ ಘಟ್ಟದ ಸಾಲು ಹಬ್ಬಿದೆ. ಘಟ್ಟದ ಮೇಲಿನ ಹಲವು ತಾಲೂಕುಗಳು ಮಲೆನಾಡಿನ ಸೆರಗಲ್ಲಿದೆ. ಹೀಗಾಗಿ ಉತ್ತರಕನ್ನಡ, ಉಡುಪಿ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಸೇರಿಸಿ ಸಹ್ಯಾದ್ರಿ ಕರ್ನಾಟಕವೆಂದು ನಾಮಕರಣ ಮಾಡಿದರೆ ಈ ಭಾಗದ ಅಭಿವೃದ್ಧಿಗೆ ಅನುಕೂಲವೆಂಬ ಕೂಗೇಳುವ ಸಾಧ್ಯತೆಯೂ ಕಾಣಲರಂಭಿಸಿದೆ. ಕಿತ್ತೂರು ಕನಾಟಕಕ್ಕೆ ಉತ್ತರ ಕನ್ನಡ ಸೇರ್ಪಡೆಯಾಗಿರುವುದರಿಂದ ಕರಾವಳಿಯನ್ನು ಉತ್ತರ ಕರ್ನಾಟಕದ ಜತೆ ಜೋಡಿಸುವ ಅಂಕೋಲಾ-ಹುಬ್ಬಳ್ಳಿ ರೈಲು ಮಾರ್ಗ ಮತ್ತು ಬೃಹತ್ ಬಂದರು ಮತ್ತಿತರ ಕಾಮಗಾರಿಗಳಿಗೆ ವೇಗದ ಚಾಲನೆ ಸಿಗಬಹುದೆಂಬ ವಾದವೂ ಇದೆ. ಒಟ್ಟಿನಲ್ಲಿ ಜಿಲ್ಲೆಯಲ್ಲಿ ಅನಾಯಕತ್ವದಿಂದ ಗೊಂದಲ ಹೆಚ್ಚಾಗುತ್ತಿದೆ.


ಇದನ್ನು ಓದಿ: ಭ್ರಷ್ಟಾಚಾರ, ಅವ್ಯವಸ್ಥೆಗಳ ಗೂಡಾಗಿರುವ ಹಂಪಿ ವಿಶ್ವವಿದ್ಯಾಲಯ: ವಿದ್ಯಾರ್ಥಿ, ಪ್ರಾಧ್ಯಾಪಕರ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...

ಉಪವಾಸ ಕೊನೆಗೊಳಿಸಲು ನಿರಾಕರಿಸಿದ ಸೋನಮ್ ವಾಂಗ್‌ಚುಕ್ : 19ನೇ ದಿನವೂ ಮುಂದುವರಿದ ಸತ್ಯಾಗ್ರಹ; ಇನ್ನಷ್ಟು ಹದಗೆಟ್ಟ ಆರೋಗ್ಯ

ರಾಜಕೀಯ ನಾಯಕರು, ಬೆಂಬಲಿಗರು ಮತ್ತು ಕಾನೂನು ಮಧ್ಯಸ್ಥಿಕೆಗಳ ಮೂಲಕ ಪದೇ ಪದೇ ಮನವಿ ಮಾಡಿಕೊಂಡಿದ್ದರೂ ಸಹ, ಹೋರಾಟಗಾರ ಸೋನಮ್ ವಾಂಗ್‌ಚುಕ್ ಅವರು ತಮ್ಮ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೊನೆಗೊಳಿಸಲು ನಿರಾಕರಿಸಿದ್ದಾರೆ. ಸರ್ಕಾರದ ಕಡೆಯಿಂದ...

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...